ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! ಅಸಲಿಗೆ ಆಗಿದ್ದೇನು ಗೊತ್ತೇ?
ಬೀದಿ ನಾಯಿಗಳ ಉಪಟಳದಿಂದ ಜನ ಕಂಗಾಲಾಗಿರುವುದನ್ನು ಕೇಳಿದ್ದೇವೆ. ಆದರೆ, ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ ಸಾಕು ನಾಯಿಗಳ ಬಗ್ಗೆಯೇ ಆತಂಕ ಉಂಟಾಗಿದ್ದು, ಸಂಬಂಧಿತ ಜಗಳವೊಂದು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ! ಹಾಗಾದರೆ ಏನಿದು ಪ್ರಕರಣ? ಇಲ್ಲಿದೆ ವರದಿ.
- Sanjayya Chikkamath
- Updated on: Jan 16, 2026
- 12:33 pm
ಹುಡುಗಾಟವಲ್ಲ! ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳೇ ಸಹಪಾಠಿಯನ್ನು ಬರ್ಬರವಾಗಿ ಕೊಲೆ ಮಾಡಿದ ದಾರುಣ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಎಸ್ಎಸ್ಎಲ್ಸಿ ವಿದ್ಯಾರ್ಥಿ ನಿಂಗರಾಜ್ ಅವಾರಿ (16) ಪ್ರಾಣ ತೆಗೆಯುವ ಮಟ್ಟಕ್ಕೆ ಹೋಗಿದೆ. ಸದ್ಯ ಅಪ್ರಾಪ್ತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
- Sanjayya Chikkamath
- Updated on: Jan 15, 2026
- 9:50 am
ರಸ್ತೆ ಮಧ್ಯೆಯೇ ಕೆಟ್ಟು ನಿಲ್ತಿವೆ ಕೋಟಿ ಕೋಟಿ ಕೊಟ್ಟು ತಂದ ಬಸ್ಗಳು: ಚಿಗರಿ ನಿರ್ವಹಣೆಯೇ ಈಗ ಸವಾಲು!
ಹುಬ್ಬಳ್ಳಿ-ಧಾರವಾಡ ನಡುವೆ ತ್ವರಿತ ಸಂಪರ್ಕಕ್ಕಾಗಿ ಆರಂಭವಾದ ಐಷಾರಾಮಿ ಚಿಗರಿ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರೋದು ನಿರ್ವಹಣೆಯ ಹೊಣೆ ಹೊತ್ತ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ತಲೆನೋವಾಗಿದೆ. ಬಿಡಿಭಾಗಗಳ ಕೊರತೆ ಮತ್ತು ವೋಲ್ವೋ ಸಂಸ್ಥೆಯ ಸ್ಪಂದನೆ ಇಲ್ಲದಿರುವುದು ಸಮಸ್ಯೆಯನ್ನು ಉಲ್ಬಣಿಸಿದೆ. ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು, ಕೋಟಿಗಟ್ಟಲೆ ಹಣದಲ್ಲಿ ಖರೀದಿಸಿದ ಬಸ್ಗಳ ದುರಸ್ತಿಯೇ ಈಗ ಸವಾಲಾಗಿದೆ.
- Sanjayya Chikkamath
- Updated on: Jan 14, 2026
- 3:39 pm
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ ಕಾರ್ಮಿಕರು
ಹುಬ್ಬಳ್ಳಿ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವ್ಯಕ್ತಿಯೋರ್ವನ ಕೊಲೆಯಾಗಿದೆ. ಮೂಲತ ವಿಜಯಪುರ ಜಿಲ್ಲೆಯ ಅರಕೇರಾ ತಾಂಡಾ ನಿವಾಸಿಯಾಗಿದ್ದ ಆರವತ್ತು ವರ್ಷದ ವಿಠ್ಠಲ್ ರಾಠೋಡ್ ಕೊಲೆಯಾದ ವ್ಯಕ್ತಿ. ಈತ ಕಾನೂನು ವಿವಿಯ ಆಡಳಿತಾತ್ಮಕ ಕಟ್ಟಡ ನಿರ್ಮಾಣ ಕಾಮಗಾರಿಯ ಉಪ ಗುತ್ತಿಗೆಯನ್ನು ಪಡೆದಿದ್ದ. ಆದ್ರೆ ಜನವರಿ 10 ರಂದು ರಾತ್ರಿ ಸಮಯದಲ್ಲಿ ಕ್ಯಾಂಪಸ್ ನಲ್ಲಿಯೇ ಬಿದ್ದಿದ್ದ. ಆರಂಭದಲ್ಲಿ ವಿಠ್ಠಲ್ ಕುಡಿದು ಬಿದ್ದಿದ್ದ ಅಂತ ಕಾರ್ಮಿಕ ಕುಟುಂಬವೊಂದು ಹೇಳಿತ್ತು. ಹೀಗಾಗಿ ಕುಟುಂಬದ ಮಾತು ಕೇಳಿ ಪೊಲೀಸರು ಅಸಹಜವಾದ ಸಾವು ಅಂತಲೇ ಅಂದುಕೊಂಡಿದ್ದರು.
- Sanjayya Chikkamath
- Updated on: Jan 12, 2026
- 6:00 pm
Hubli: ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್!
ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಎಂಜಿನಿಯರ್ ಓರ್ವರು ಅನೈತಿಕ ಸಂಬಂಧದ ಕಾರಣಕ್ಕೆ ಹತ್ಯೆಯಾಗಿದ್ದಾರೆ. ಮಹಿಳೆಯ ಕುಟುಂಬಸ್ಥರ ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿಗಳು ಮೊದಲು ನಾಟಕವಾಡಿ ಹಲ್ಲೆ ವಿಚಾರವನ್ನು ಮರೆಮಾಚಲು ಯತ್ನಿಸಿದ್ದರು. ಆದರೆ ಪೊಲೀಸ್ ತನಿಖೆ ವೇಳೆ ರಹಸ್ಯ ಬಯಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
- Sanjayya Chikkamath
- Updated on: Jan 12, 2026
- 2:46 pm
ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್
ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಆರೋಪಿಗಳಿಗೆ ಹಲ್ಲೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದ ನಾಲ್ವರು ಸ್ಥಳೀಯರ ವಿರುದ್ಧವೂ ಪ್ರಕರಣ ದಾಖಲಾಗಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಸಾರ್ವಜನಿಕರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದು, ಆರೋಪಿಗಳಿಗೆ ಥಳಿಸಿದವರ ಮೇಲಿನ ಕೇಸ್ ರದ್ದುಪಡಿಸುವಂತೆ ಆಗ್ರಹಿಸಿದ್ದಾರೆ.
- Sanjayya Chikkamath
- Updated on: Jan 11, 2026
- 12:42 pm
ಬೆಂಗಳೂರು ರೈಲು ಪ್ರಯಾಣಿಕರು ಗಮನಿಸಿ: KSR ಟರ್ಮಿನಲ್ ಬದಲಾವಣೆ, ಹೊಸ ನಿಲ್ದಾಣಗಳು ಇಲ್ಲಿವೆ
ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಪಿಟ್ ಲೈನ್ ಕಾಮಗಾರಿ ನಡೆಯುತ್ತಿರುವ ಕಾರಣ, ಜ.16ರಿಂದ ಮಾ.11ರವರೆಗೆ ಕೆಲವು ರೈಲುಗಳ ಟರ್ಮಿನಲ್ ನಿಲ್ದಾಣಗಳಲ್ಲಿ ಬದಲಾವಣೆ ಮಾಡಲಾಗಿದೆ. ಎರ್ನಾಕುಲಂ, ಹಜೂರ್ ಸಾಹಿಬ್ ನಾಂದೇಡ್, ಕಣ್ಣೂರು ರೈಲುಗಳು ಬೆಂಗಳೂರು ಕಂಟೋನ್ಮೆಂಟ್, ಯಶವಂತಪುರ, ಎಸ್ಎಂವಿಟಿ ನಿಲ್ದಾಣಗಳಲ್ಲಿ ಕೊನೆಗೊಳ್ಳಲಿವೆ ಅಥವಾ ಅಲ್ಲಿಂದಲೇ ಹೊರಡಲಿವೆ. ಪ್ರಯಾಣಿಕರು ಗಮನಿಸಿ ಸಹಕರಿಸಬೇಕು.
- Sanjayya Chikkamath
- Updated on: Jan 10, 2026
- 2:41 pm
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್: ದೃಶ್ಯ ನೋಡಿದ್ರೆ ಬೆಚ್ಚಿ ಬೀಳ್ತೀರ
ತನ್ನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಹಾಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯೇ ವ್ಯಕ್ತಿಯೋರ್ವನನ್ನು ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್ ಸಹಯೋಗದಲ್ಲಿದ್ದಾಗಲೇ ಇದು ನಡೆದಿದೆ. ಮೊನ್ನೆ ನಡೆದ ಘಟನೆ ಖಂಡಿಸಿ ಮಾತ್ರ ನಾವು ಹೋರಾಟ ಮಾಡ್ತಿದ್ದೇವೆ ಎಂದಿದ್ದಾರೆ.
- Sanjayya Chikkamath
- Updated on: Jan 9, 2026
- 11:45 am
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲೆ ಕೇಸ್: ಕೇಶ್ವಾಪುರ ಠಾಣೆ ಪಿಐ ಕಾರ್ಯಸ್ಥಳ ಬದಲಾವಣೆ
ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಮೇಲಿನ ಹಲ್ಲೆ ಆರೋಪ ಪ್ರಕರಣದಲ್ಲಿ ಕೇಶ್ವಾಪುರ ಠಾಣೆ ಪಿಐ ಕೆ.ಎಸ್. ಹಟ್ಟಿ ಅವರನ್ನು ಕರ್ತವ್ಯದಿಂದ ತೆರವುಗೊಳಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶದ ಮೇರೆಗೆ, ತನಿಖೆ ಪೂರ್ಣಗೊಳ್ಳುವವರೆಗೆ ಪಿಐ ಕಚೇರಿಯಲ್ಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ.
- Sanjayya Chikkamath
- Updated on: Jan 8, 2026
- 10:56 pm
ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್ ವಶಕ್ಕೆ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಮತ್ತು ಬಟ್ಟೆ ಬಿಚ್ಚಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣಾ ಕಲಕುಂಟ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯುವ ವೇಳೆ ಕಲಕುಂಟ್ಲಾ ಕುಸಿದುಬಿದ್ದಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ನೋಡಿ.
- Sanjayya Chikkamath
- Updated on: Jan 8, 2026
- 6:10 pm
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಕೇಸ್
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿ ಅರೆನಗ್ನಗೊಳಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣಾ ಕಲಕುಂಟ್ಲಾ ಸೇರಿ 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ ಗಂಭೀರ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯ ನಂತರ ಕೇಶ್ವಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Sanjayya Chikkamath
- Updated on: Jan 8, 2026
- 7:40 am
BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ?
ಯಾರದ್ದಾದ್ರೂ ಮೇಲೆ ಆರೋಪ ಬಂದ್ರೆ, ಕೇಸ್ ದಾಖಲಾದ್ರೆ ಅವರನ್ನ ಬಂಧಿಸುವುದು ಪೊಲೀಸರ ಕರ್ತವ್ಯ. ಇದೇ ರೀತಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣವೊಂದರಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನ ಬಂಧಿಸಲು ಹೋಗಿದ್ರು. ಬಂಧಿಸಿ ಬಸ್ ಹತ್ತಿಸೋವರೆಗೂ ಎಲ್ಲವೂ ಚೆನ್ನಾಗೇ ಇತ್ತು. ಬಸ್ ಹತ್ತಿದ ಮೇಲೆ, ಅದೂ ಕೂಡಾ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೇ ಆಕೆ ಅರೆಬೆತ್ತಲಾಗಿದ್ದಳು. ಇದೇ ವಿವಸ್ತ್ರ ಪ್ರಕರಣ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ಬಿಜೆಪಿ ಮಧ್ಯೆ ಮತ್ತೆ ಜಟಾಪಟಿಗೆ ಕಾರಣವಾಗಿದೆ. ಅಷ್ಟಕ್ಕೂ BJP ಕಾರ್ಯಕರ್ತೆಯ ವಿವಸ್ತ್ರಗೊಳಿಸಿದ್ದು ಯಾರು? ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ?
- Sanjayya Chikkamath
- Updated on: Jan 7, 2026
- 9:22 pm