AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ

Author - TV9 Kannada

sanjayya.chikkamath@tv9.com

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು?

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು?

ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ (ಫೆಬ್ರವರಿ 28) ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡಕ್ಕೆ ಚೇರಪ್ ಮಾಡಲಿದ್ದಾರೆ.

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ

ಕರ್ನಾಟಕದಲ್ಲಿ ಉದ್ಯೋಗ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಥತೆ ಹೆಚ್ಚಿದೆ. ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಶಾಸಕ ಅರವಿಂದ ಬೆಲ್ಲದ್ ಅವರು ಪ್ರಧಾನಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ 2.86 ಲಕ್ಷ ಖಾಲಿ ಹುದ್ದೆ ಭರ್ತಿ ಮಾಡುವ ಭರವಸೆ ನೀಡಿದರೂ, ಕೇವಲ 8,157 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿ ವಿಫಲವಾಗಿದೆ ಎಂದು ಬೆಲ್ಲದ್ ಆರೋಪಿಸಿದ್ದಾರೆ.

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎನ್ನುವ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊಲೆಗಾರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಎಸ್ಪಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ

ಕೋಟ್ಯಂತರ ರೂ ನಷ್ಟದಲ್ಲಿ ಹುಬ್ಬಳ್ಳಿ ಹೆಸ್ಕಾಂ: ಗ್ರಾಹಕರಿಗೆ ಹೊಡೆಯುತ್ತಾ ಕರೆಂಟ್​ ಶಾಕ್​?

ಕೋಟ್ಯಂತರ ರೂ ನಷ್ಟದಲ್ಲಿ ಹುಬ್ಬಳ್ಳಿ ಹೆಸ್ಕಾಂ: ಗ್ರಾಹಕರಿಗೆ ಹೊಡೆಯುತ್ತಾ ಕರೆಂಟ್​ ಶಾಕ್​?

ಹುಬ್ಬಳ್ಳಿಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸಾರ್ವಜನಿಕ ಸಭೆ ಮಾಡಿದೆ. ಈ ವೇಳೆ ಹೆಸ್ಕಾಂ ವಿರುದ್ಧ ಗ್ರಾಹಕರಿಂದ ದೂರುಗಳ ಸುರಿಮಳೆಗೈಯಲಾಗಿದೆ. ಹೆಸ್ಕಾಂ 188 ಕೋಟಿ ರೂ ನಷ್ಟ ಅನುಭವಿಸಿದ್ದು, ಅದನ್ನು ಸರಿದೂಗಿಸಲು ಅವಕಾಶ ಕೋರಿತ್ತು. ಆದರೆ, ವಿದ್ಯುತ್ ಬಿಲ್ ಹೆಚ್ಚಳ ಮಾಡದಂತೆ ಸಭೆಯಲ್ಲಿ ಗ್ರಾಹಕರಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು.

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?

ಯುವಕನ್ನು ಹತ್ಯೆಗೈದು ಹುಬ್ಬಳ್ಳಿಯ ಗದಗ ಹೆದ್ದಾರಿಯಲ್ಲಿ ಶವವನ್ನು ದುಷ್ಕರ್ಮಿಗಳು ಎಸೆದು ಹೋಗಿರುವಂತಹ ಘಟನೆ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದವರು ನೀಡಿದ ಮಾಹಿತಿ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ

ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.

ಧಾರವಾಡದಲ್ಲಿ ಯುವಕರ ಉಗ್ರ ಹೋರಾಟ ಡ್ರೋನ್​​ನಲ್ಲಿ ಕಂಡಿದ್ದು ಹೀಗೆ

ಧಾರವಾಡದಲ್ಲಿ ಯುವಕರ ಉಗ್ರ ಹೋರಾಟ ಡ್ರೋನ್​​ನಲ್ಲಿ ಕಂಡಿದ್ದು ಹೀಗೆ

ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು...ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಸಿಡಿದೆದ್ದಿದ್ದಾರೆ.

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು?

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು?

ಹುಬ್ಬಳ್ಳಿಯಲ್ಲಿ ನಡೆಯಲಿರುವ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯವು ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳಿಗೆ ಬಹಳ ಮುಖ್ಯ ಪಂದ್ಯವಾಗಿದೆ. ಕರ್ನಾಟಕ 11 ವರ್ಷಗಳ ನಂತರ ಫೈನಲ್ ತಲುಪಿದರೆ, ಜಮ್ಮು ಕಾಶ್ಮೀರ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಪಂದ್ಯ ವೀಕ್ಷಣೆಗೆ ಟಿಕೆಟ್ ದರ ಸೇರಿದಂತೆ ಇತರೆ ಮಾಹಿತಿ ಇಲ್ಲಿದೆ.

ಹುಬ್ಬಳ್ಳಿ: ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ ರೈಲ್ವೆ ಇಲಾಖೆ ಕಚೇರಿ ಜಪ್ತಿ

ಹುಬ್ಬಳ್ಳಿ: ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ ರೈಲ್ವೆ ಇಲಾಖೆ ಕಚೇರಿ ಜಪ್ತಿ

ಹುಬ್ಬಳ್ಳಿಯಲ್ಲಿ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್​ ಎಂಜಿನಿಯರ್ ಕಚೇರಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. 16 ರೈತರಿಂದ ಸ್ವಾಧೀನಪಡಿಸಿಕೊಂಡ 12.5 ಎಕರೆ ಭೂಮಿಗೆ ಸೂಕ್ತ ಪರಿಹಾರ ನೀಡಲು ರೈಲ್ವೆ ಇಲಾಖೆ ವಿಫಲವಾದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಹುಬ್ಬಳ್ಳಿ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆದೇಶದ ಹಿನ್ನೆಲೆ ಕಚೇರಿಯಲ್ಲಿನ ಟೇಬಲ್, ಕಂಪ್ಯೂಟರ್ ಸೇರಿ ಅನೇಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿ ಬಂದಿದ್ದು ವಾಷಿಂಗ್​ ಪೌಡರ್​!

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿ ಬಂದಿದ್ದು ವಾಷಿಂಗ್​ ಪೌಡರ್​!

ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರು ಅಮೆಜಾನ್‌ನಲ್ಲಿ 60,990 ರೂ. ಬೆಲೆಯ ಕ್ಯಾಮರಾ ಆರ್ಡರ್ ಮಾಡಿದ್ದರು. ಆದರೆ ಡೆಲಿವರಿ ಆಗಿದ್ದು ಮಾತ್ರ ವಾಷಿಂಗ್ ಪೌಡರ್ ಪ್ಯಾಕೇಟ್‌ಗಳು. ಆನ್‌ಲೈನ್ ವಂಚನೆಯಿಂದ ಶಾಕ್ ಆಗಿರುವ ಉದ್ಯಮಿ ಈ ಬಗ್ಗೆ ಅಮೆಜಾನ್‌ಗೆ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್

ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಉಪ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ 3 ದಿನ ಹಿಂದಷ್ಟೇ ಭೇಟಿ ನೀಡಿದ್ದರು. ಜೈಲ್ ಕಾರ್ಯವೈಖರಿ ಪರಿಶೀಲನೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಕೈದಿಗಳು ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ದೊರೆಯುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ.

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ

ಹುಬ್ಬಳ್ಳಿಯಲ್ಲಿರುವ ವೆಕ್ಸಾನ್ ಬಿಗ್ ವೆಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ಚೈನ್ ಲಿಂಕ್ ವಂಚನೆಯ ಆರೋಪ ಕೇಳಿಬಂದಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರನ್ನು ಟಾರ್ಗೆಟ್ ಮಾಡಿ, ಹಣ ಹೂಡಿಕೆ ಮಾಡಿಸಿ ವಸ್ತುಗಳ ಮಾರಾಟದ ನೆಪದಲ್ಲಿ ವಂಚನೆ ನಡೆಸುತ್ತಿದೆ ಎಂದು ಕನ್ನಡಪರ ಹೋರಾಟಗಾರರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.