ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ತುಂಗಭದ್ರಾ ಜಲಾಶಯ ಅಚ್ಚುಕಟ್ಟು ಪ್ರದೇಶದ ಜನರಿಗೆ ಗುಡ್ನ್ಯೂಸ್: ನೀರಾವರಿ ಸಮಿತಿ ಮಹತ್ವದ ತೀರ್ಮಾನ
ಜನವರಿ 1 ರಿಂದ ಮಾರ್ಚ 31 ರವರಗೆ ಎರಡನೇ ಬೆಳೆಗೆ ನೀರು ಹಂಚಿಕೆ ಮಾಡಲಾಗುವುದು ಎಂದು ಕಳೆದ ತುಂಗಾಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾಗಿತ್ತು. ಆದರೂ ರೈತರು ಬೇಸಿಗೆ ಬೆಳೆ ಬೆಳೆದಿದ್ದರು. ಬಳಿಕ ಮಾರ್ಚ್ 31ರ ನಂತರ ನಮ್ಮ ಗತಿ ಏನು ಎಂದು ತಲೆ ಮೇಲೆ ಕೈಹೊತ್ತುಕೊಂಡು ಚಿಂತೆಗೀಡಾಗಿದ್ದರು. ಮತ್ತೊಂದೆಡೆ ಈ ಬಾರಿ ಬೇಸಿಗೆಗೆ ಕುಡಿಯಲು ಗ್ರಾಮಗಳ ಕರೆ ತುಂಬಿಸುವುದು ಒಂದು ಚಾಲೆಂಜ್. ಹೀಗಾಗಿ ಎಲ್ಲರೂ ನೀರಿನ ಬಗ್ಗೆ ಚಿಂತಿಸುತ್ತಿದ್ದವರಿಗೆ ಇದೀಗ ಗುಡ್ನ್ಯೂಸ್ ಸಿಕ್ಕಿದೆ.
- Sanjayya Chikkamath
- Updated on: Mar 21, 2025
- 9:53 pm
ಹಡೆದವ್ವ ಸಾವಿನ ನೋವಿನಲ್ಲೂ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿ..!
ಜನ್ಮ ನೀಡಿದ ಹಡೆದವ್ವ ಪ್ರೀತಿ, ಮಮತೆಗೆ ಬೆಲೆ ಕಟ್ಟಲಾಗದು. ಮಕ್ಕಳ ವಿಚಾರಕ್ಕೆ ಬಂದರೆ ಎಂಥಹ ತ್ಯಾಗಕ್ಕಾದರೂ ತಾಯಿ ಸಿದ್ಧಳಿರುತ್ತಾಳೆ. ಹೀಗಿರುವಾಗ ಇನ್ಮುಂದೆ ಆಕೆ ಕಣ್ಣು ಮುಂದೆ ಇರುವುದಿಲ್ಲ. ತಾಯಿಯನ್ನು ನೋಡಲಾಗದು, ಮುಂದೆ ಆಕೆಯೊಂದಿಗೆ ಮಾತನಾಡಲು ಸಾಧ್ಯವಿಲ್ಲ ಎಂದಾಗ ಕರುಳಿನ ಕುಡಿ ಮನಸ್ಸಿಗೆ ಹೇಗಾಗಿರಬೇಡ. ಆ ನೋವನ್ನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಆದರೂ ಸಹ ಮಗ ತಾಯಿ ಅಗಲಿಕೆಯ ನೋವಿನ ಮಧ್ಯೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾನೆ.
- Sanjayya Chikkamath
- Updated on: Mar 21, 2025
- 9:27 pm
ಈ ವೃದ್ದನಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯೇ ಮನೆ: ಇಲ್ಲಿರುವ ಸಿಬ್ಬಂದಿಗಳೇ ಸಂಬಂಧಿಕರು
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಓರ್ವ ವೃದ್ಧ ಕಳೆದ9 ತಿಂಗಳಿಂದ ಆಸ್ಪತ್ರೆಯಲ್ಲೇ ಇದ್ದಾರೆ. ವೃದ್ಧನ ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿ ಬಿಟ್ಟು ಹೋಗಿದ್ದಾರೆ. ಮಕ್ಕಳು ಮತ್ತು ಸಹೋದರ ಇದ್ದರೂ ಯಾರೂ ಅವರನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗಲು ಬಂದಿಲ್ಲ. ಸದ್ಯ ಆಸ್ಪತ್ರೆ ಸಿಬ್ಬಂದಿಗಳೆ ಅವರಿಗೆ ಸಹಾಯ ಮಾಡುತ್ತಿದ್ದಾರೆ.
- Sanjayya Chikkamath
- Updated on: Mar 17, 2025
- 7:53 pm
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: ಕೇವಲ 40 ದಿನಗಳಲ್ಲಿ ಬರೋಬ್ಬರಿ 99 ಲಕ್ಷ ರೂ. ಸಂಗ್ರಹ
ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೇವಲ 40 ದಿನಗಳಲ್ಲಿ 99.21 ಲಕ್ಷ ರೂ. ಸಂಗ್ರಹವಾಗಿರುವುದು ಗೊತ್ತಾಗಿದೆ. ಅಷ್ಟೇ ಅಲ್ಲದೆ, ಚಿನ್ನ ಹಾಗೂ ಬೆಳ್ಳಿ ಕೂಡ ಸಂಗ್ರಹವಾಗಿದೆ. ನೂರಾರು ಜನ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದರು. ಹುಂಡಿ ಎಣಿಕೆಯ ವಿಡಿಯೋ ಇಲ್ಲಿದೆ ನೋಡಿ.
- Sanjayya Chikkamath
- Updated on: Mar 13, 2025
- 7:18 am
ಕೊಪ್ಪಳ ಗ್ಯಾಂಗ್ ರೇಪ್ ಕೇಸ್: ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಪೊಲೀಸರ ದಾಳಿ
ಕೊಪ್ಪಳ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಗಂಗಾವತಿ ಮತ್ತು ಸುತ್ತಮುತ್ತಲಿನ ಹೋಂ ಸ್ಟೇ ಮತ್ತು ರೆಸಾರ್ಟ್ಗಳ ಮೇಲೆ ದಾಳಿ ನಡೆಸಿದ್ದಾರೆ. ವಿದೇಶಿಗರ ಮಾಹಿತಿಯನ್ನು ನೀಡದಿರುವುದು ಮತ್ತು ಅಕ್ರಮ ಚಟುವಟಿಕೆಗಳ ಆರೋಪದ ಮೇಲೆ ಈ ದಾಳಿ ನಡೆದಿದೆ. ಪೊಲೀಸರು ದಾಖಲೆಗಳನ್ನು ಪರಿಶೀಲಿಸಿ, ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.
- Sanjayya Chikkamath
- Updated on: Mar 11, 2025
- 8:37 am
ಕೊಪ್ಪಳ: ವಿದೇಶಿಗರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದ ರೆಸಾರ್ಟ್, ಹೋಮ್ ಸ್ಟೇ ಮಾಲೀಕರು, ಆರೋಪ
ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿನ ಅನೇಕ ರೆಸಾರ್ಟ್ಗಳು ಮತ್ತು ಹೋಮ್ಸ್ಟೇಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಕಾನೂನುಗಳನ್ನು ಉಲ್ಲಂಘಿಸುತ್ತಿವೆ. ವಿದೇಶಿ ಪ್ರವಾಸಿಗರ ಮಾಹಿತಿಯನ್ನು ಪೊಲೀಸರಿಗೆ ತಿಳಿಸದಿರುವುದು ಮತ್ತು ಅಕ್ರಮ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು ಸೇರಿದಂತೆ ಹಲವು ಆರೋಪಗಳು ಕೇಳಿಬಂದಿವೆ. ಇತ್ತೀಚಿನ ಘಟನೆಗಳ ನಂತರ, ಪೊಲೀಸರು ಕ್ರಮ ಕೈಗೊಳ್ಳಲು ಪ್ರಾರಂಭಿಸಿದ್ದಾರೆ.
- Sanjayya Chikkamath
- Updated on: Mar 10, 2025
- 2:37 pm
ಪ್ರವಾಸಿಗರ ಜೀವದ ಜೊತೆ ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಚೆಲ್ಲಾಟ ಆರೋಪ: ಎಸ್ಪಿ ಖಡಕ್ ಸೂಚನೆ
ಕೊಪ್ಪಳ ಜಿಲ್ಲೆಯಲ್ಲಿನ ಹೋಮ್ಸ್ಟೇ ಮತ್ತು ರೆಸಾರ್ಟ್ ಮಾಲೀಕರು ಅತಿಯಾದ ಹಣಕ್ಕಾಗಿ ಪ್ರವಾಸಿಗರನ್ನು ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಮತ್ತು ಹಲ್ಲೆ ಘಟನೆಯು ಈ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ರೆಸಾರ್ಟ್ ಮತ್ತು ಹೋಮ್ಸ್ಟೇ ಮಾಲೀಕರಿಗೆ ಸೂಕ್ತ ಸೂಚನೆ ನೀಡಿದ್ದಾರೆ. ಪ್ರವಾಸಿಗರು ಸುರಕ್ಷಿತವಾಗಿರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
- Sanjayya Chikkamath
- Updated on: Mar 10, 2025
- 1:19 pm
ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್: ಪರಾರಿಯಾಗಿದ್ದ ಮತ್ತೋರ್ವ ಆರೋಪಿ ತಮಿಳುನಾಡಿನಲ್ಲಿ ಅರೆಸ್ಟ್
ಕೊಪ್ಪಳದ ಸಾಣಾಪೂರದಲ್ಲಿ ವಿದೇಶಿ ಪ್ರವಾಸಿ ಮತ್ತು ಮಹಿಳಾ ರೆಸಾರ್ಟ್ ಮಾಲೀಕರ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಮಾತನಾಡಿ ಈ ಘಟನೆ ನನ್ನ ಮನಸಿಗೆ ನೋವು ತಂದಿದೆ ಎಂದು ಹೇಳಿದ್ದಾರೆ. ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
- Sanjayya Chikkamath
- Updated on: Mar 9, 2025
- 3:58 pm
ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರಿಬ್ಬರ ಮೇಲೆ ಗ್ಯಾಂಗ್ರೇಪ್: ಇಬ್ಬರ ಬಂಧನ, ಓರ್ವ ಪ್ರವಾಸಿಗ ಶವವಾಗಿ ಪತ್ತೆ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ನಡೆದ ಹಲ್ಲೆ ಮತ್ತು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ. ಈ ಘಟನೆ ಮಾರ್ಚ್ 6 ರಂದು ರಾತ್ರಿ ನಡೆದಿದೆ. ದೇಶ, ವಿದೇಶಿ ಪ್ರವಾಸಿಗರ ಪೈಕಿ ಓರ್ವ ಪ್ರವಾಸಿಗ ಶವವಾಗಿ ಪತ್ತೆಯಾಗಿದ್ದಾರೆ.
- Sanjayya Chikkamath
- Updated on: Mar 8, 2025
- 9:38 pm
ಕೊಪ್ಪಳ: ವಿದೇಶಿ, ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಓರ್ವ ಪ್ರವಾಸಿಗ ನಾಪತ್ತೆ
ಗಂಗಾವತಿ ತಾಲೂಕಿನ ಆನೆಗೊಂದಿ, ಅಂಜನಾದ್ರಿ, ನೆರೆಯ ಐತಿಹಾಸಿಕ ಹಂಪೆಯನ್ನು ನೋಡಲು ದೇಶ, ವಿದೇಶದಿಂದ ಪ್ರವಾಸಿಗರು ಬರ್ತಾರೆ. ರೆಸಾರ್ಟ್ಗಳು, ಹೋಮ್ ಸ್ಟೇ ಗಳಲ್ಲಿ ಉಳಿದು ತುಂಗಭದ್ರಾ ನದಿ, ಎದಡಂಡೆ ಕಾಲುವೆ ಸುತ್ತಮುತ್ತಲಿನ ಹತ್ತಾರು ಪ್ರವಾಸಿ ಸ್ಥಳಗಳಿಗೆ ಹೋಗಿ, ಅಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಾರೆ. ಇದೇ ರೀತಿ ರಾತ್ರಿ ಸಮಯದಲ್ಲಿ ಆಕಾಶ ನೋಡ್ತಾ, ಗಿಟಾರ್ ಬಾರಿಸುತ್ತಾ ಕೂತಿದ್ದ ದೇಶಿ ಮತ್ತು ವಿದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ.
- Sanjayya Chikkamath
- Updated on: Mar 7, 2025
- 5:01 pm
ಸಿಎಂ ಸೂಚನೆ ಪಾಲಿಸದ ಕೊಪ್ಪಳ ಜಿಲ್ಲಾಧಿಕಾರಿ: ಯಥಾಸ್ಥಿತಿ ಮುಂದುವರಿದ ಬಲ್ಡೋಟ ಫ್ಯಾಕ್ಟರಿ ಕಾಮಗಾರಿ
ಕೊಪ್ಪಳದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಉಕ್ಕು ಕಾರ್ಖಾನೆಯ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರೂ, ಜಿಲ್ಲಾಡಳಿತ ಅದನ್ನು ನಿರ್ಲಕ್ಷಿಸಿದೆ. ಹಾಗಾಗಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸಿಎಂ ಆದೇಶವನ್ನು ಉಲ್ಲಂಘಿಸಿದ ಕೊಪ್ಪಳ ಜಿಲ್ಲಾಡಳಿತದ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
- Sanjayya Chikkamath
- Updated on: Mar 5, 2025
- 2:42 pm
ಕೊಪ್ಪಳ ಜನರ ಹೋರಾಟಕ್ಕೆ ಸಂದ ಜಯ: ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿಎಂ ಸೂಚನೆ
ಕರ್ನಾಟಕದ ಎರಡನೇ ಅತಿ ದೊಡ್ಡ ಬಲ್ಡೋಟ ಸ್ಟೀಲ್ ಪ್ಯಾಕ್ಟರಿ ಕೊಪ್ಪಳದಲ್ಲಿ ಆರಂಭವಾಗುತ್ತಿದ್ದು, ಇದಕ್ಕೆ ಇದೀಗ ಆರಂಭಿಕ ವಿಘ್ನ ಎದುರಾಗಿದೆ. ಯಾವುದೇ ಕಾರಣಕ್ಕೂ ಕೊಪ್ಪಳದಲ್ಲಿ ಈ ಬಲ್ಡೋಟ ಫ್ಯಾಕ್ಟರಿ ನಿರ್ಮಾಣ ಮಾಡಬಾರದು ಎಂದು ಜಿಲ್ಲೆಯ ಜನರು ಹೋರಾಟ ನಡೆಸಿದ್ದಾರೆ. ಪಕ್ಷ-ಭೇದ- ಜಾತಿ ಧರ್ಮ ಭೇದ ಮರೆತು ಎಲ್ಲರೂ ಸೇರಿಕೊಂಡು ಬಲ್ಡೋಟ ವಿರುದ್ಧ ಹೋರಾಟ ಮಾಡಿದ್ದು, ಇದೀಗ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಿದೆ.
- Sanjayya Chikkamath
- Updated on: Mar 4, 2025
- 5:44 pm