AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ

Author - TV9 Kannada

sanjayya.chikkamath@tv9.com

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು

Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು

ದೇಗುಲದ ಎದುರೇ ನೆತ್ತರು ಹರಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿಯೋರ್ವನನ್ನು ಆತನ ಸಹೋದರ ಮತ್ತು ಭಾವ ಸೇರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯದಲ್ಲಿ ಮತ್ತೆ ಯಾರದ್ದಾದರೂ ಪಾತ್ರ ಇದೆಯಾ ಎಂಬ ಬಗ್ಗೆಯೂ ತನಿಖೆಗೆ ಮುಂದಾಗಿದ್ದಾರೆ.

Hubli: ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು; ಅಷ್ಟಕ್ಕೂ ಆಗಿದ್ದೇನು?

Hubli: ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು; ಅಷ್ಟಕ್ಕೂ ಆಗಿದ್ದೇನು?

ಹುಬ್ಬಳ್ಳಿಯ ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಂಕಿ ಮೊದಲು ಡಾಬಾದಲ್ಲಿ ಕಾಣಿಸಿಕೊಂಡು ಬಳಿಕ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ತಿಳಿದುಬಂದಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಬೆಂಕಿಯ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

ಮರ್ಯಾದೆ ಹತ್ಯೆ: ಮಾನ್ಯಾ ಜತೆ ಮಗುನೂ ಹೋಯ್ತು, ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಅಮ್ಮನೂ ಸೀರಿಯಸ್

ಮರ್ಯಾದೆ ಹತ್ಯೆ: ಮಾನ್ಯಾ ಜತೆ ಮಗುನೂ ಹೋಯ್ತು, ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಅಮ್ಮನೂ ಸೀರಿಯಸ್

ಡಿಸೆಂಬರ್ 21ರಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಎಂದು ಯೋಚಿಸದೇ ಮಗಳು ಮಾನ್ಯಗಳನ್ನ ಕೊಚ್ಚಿ ಕೊಂದಿದ್ದಾನೆ. ಅಂತರ್ಜಾತಿಯಾಗಿದ್ದರೂ ಸಹ ಮಾನ್ಯಳ ಪತಿ ವಿವೇಕಾನಂದ ಕುಟುಂಬದವರು ಚೆನ್ನಾಗಿ ನೋಡಿಕೊಂಡಿದ್ದರು. ಇದೀಗ ಮಾನ್ಯಗಳನ್ನ ಕಳೆದುಕೊಂಡು ಪತಿ ವಿವೇಕಾನಂದ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾನೆ. ಇದರ ನಡುವೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿವೇಕಾನಂದನ ತಾಯಿ ಸಹ ಜೀವನರ್ಮರಣದ ಮಧ್ಯೆ ಹೋರಾಟ ನಡೆಸಿದ್ದು. ಚಿಕಿತ್ಸೆಗೆ ಹಣವಿಲ್ಲದೆ ಕುಟುಂಬ ಕಂಗಾಲಾಗಿದೆ. ಈ ಬಗ್ಗೆ ವಿವೇಕಾನಂದ ಕಣ್ಣೀರಿಡುತ್ತಲೇ ನೋವು ಹಂಚಿಕೊಂಡಿದ್ದಾನೆ.

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು

ಹುಬ್ಬಳ್ಳಿಯ ಮಾನ್ಯಾ ಘಟನೆ ಸಂಬಂಧ, ಆಕೆಯ ಕುಟುಂಬದ ಆಸ್ಪತ್ರೆ ಬಿಲ್ ಪಾವತಿಸದ ಜಿಲ್ಲಾಡಳಿತದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ, ಸರ್ಕಾರವೇ ಆಸ್ಪತ್ರೆ ಬಿಲ್ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿಯನ್ನು ಕೊಚ್ಚಿಕೊಂದ 24 ಗಂಟೆಯಲ್ಲೇ ಹಂತಕರು ಅರೆಸ್ಟ್​

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿಯನ್ನು ಕೊಚ್ಚಿಕೊಂದ 24 ಗಂಟೆಯಲ್ಲೇ ಹಂತಕರು ಅರೆಸ್ಟ್​

ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಪೊಲೀಸರು 24 ಗಂಟೆಗಳಲ್ಲಿ ಮೃತ ಯುವತಿಯ ತಂದೆ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ನೀಡಿದ ದೂರು ಆಧರಿಸಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿಡಿಯೋ ನೋಡಿ.

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಂತಕನ ಪ್ಲಾನ್ ಏನಿತ್ತು ಗೊತ್ತಾದ್ರೆ ಬೆಚ್ಚಿಬೀಳ್ತೀರಿ!

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಂತಕನ ಪ್ಲಾನ್ ಏನಿತ್ತು ಗೊತ್ತಾದ್ರೆ ಬೆಚ್ಚಿಬೀಳ್ತೀರಿ!

ಹುಬ್ಬಳ್ಳಿ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಈಗ ಅಚ್ಚರಿಯ ತಿರುವು ಸಿಕ್ಕಿದೆ. ದಲಿತ ಯುವಕನನ್ನು ಮದುವೆಯಾಗಿದ್ದ ಆರು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅನ್ನು ತಂದೆ ಪ್ರಕಾಶ್ ಕೊಡಲಿಯಿಂದ ಕೊಚ್ಚಿ ಕೊಂದಿದ್ದ. ಆದರೆ, ಈ ಕ್ರೂರಿ ತಂದೆ ಮಗಳ ಹತ್ಯೆಗೂ ಮುನ್ನ ಅಳಿಯ ವಿವೇಕಾನಂದನ ಇಡೀ ಕುಟುಂಬವನ್ನೇ ನಿರ್ನಾಮ ಮಾಡಲು ಸಂಚು ರೂಪಿಸಿದ್ದ ಎಂಬ ಆಘಾತಕಾರಿ ಮಾಹಿತಿ ಈಗ ಎಫ್‌ಐಆರ್‌ನಿಂದ ಹೊರಬಿದ್ದಿದೆ.

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಹುಬ್ಬಳ್ಳಿಯ (Hubballi) ಮಾನ್ಯ ಹಾಗೂ ವಿವೇಕಾನಂದ ಇವರಿಬ್ಬರು ಜಾತಿ ಗಡಿ ಮೀರಿ ಪ್ರೀತಿ ಮಾಡಿದ್ರು.. ಹೆತ್ತವರನ್ನ ಎದುರುಹಾಕಿಕೊಂಡು ಮದುವೆಯನ್ನೂ ಮಾಡಿಕೊಂಡಿದ್ರು. ಮದುವೆಯಾಗಿ 7 ತಿಂಗಳು ಕಳೆದಿತ್ತು. ಯುವತಿ ಸಹ 6 ತಿಂಗಳ ಗರ್ಭಿಣಿಯಾಗಿದ್ಳು. ಆದ್ರೆ ಜಾತಿ ಅಮಲು ತಲೆಗೇರಿಸಿಕೊಂಡಿದ್ದ ಯುವತಿ ತಂದೆ, ಗರ್ಭಿಣಿ ಮಗಳನ್ನೇ ಬಡಿದುಕೊಂದಿದ್ದಾನೆ. ಈ ಮರ್ಯಾದೆಗೇಡು ಹತ್ಯೆಗೆ ಹುಬ್ಬಳ್ಳಿ( Hubballi Honor Killing) ಬೆಚ್ಚಿಬಿದ್ದಿದೆ.

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಕೊನೆ ಸಲ ಮಗಳ ಮುಖ ನೋಡಲು ಬಾರದ ಪೋಷಕರು, ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಕೊನೆ ಸಲ ಮಗಳ ಮುಖ ನೋಡಲು ಬಾರದ ಪೋಷಕರು, ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ

ಬಿಗಿ ಪೊಲೀಸ್ ಬಂದೋಬಸ್ತ್​​​ ನಲ್ಲೇ ಇನಾಮ್‌ ವೀರಾಪುರ ಗ್ರಾಮದ ಹಳ್ಳದಲ್ಲಿ ಮಾನ್ಯಾಳ ಅಂತ್ಯಕ್ರಿಯೆ ಆಗಿದ್ದು, ಹುಟ್ಟಿಸಿ ಬೆಳೆಸಿದ್ದ ಮಗಳ ಅಂತಿಮದರ್ಶನಕ್ಕೂ ಮಾನ್ಯಾ ಪೋಷಕರು ಬಂದಿಲ್ಲ. ಹೀಗಾಗಿ ಹತ್ಯೆಯಾದ ವಿವೇಕಾನಂದ ಕುಟುಂಬಸ್ಥರೇ ಮಾನ್ಯಾಳ ಶವಸಂಸ್ಕಾರ ನೆರವೇರಿಸಿದ್ದಾರೆ. ಪತಿ ವಿವೇಕಾನಂದ ದೊಡ್ಮನಿ ಮಾನ್ಯಾಳ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಗೋಳಾಡಿದ್ದು, ಪತಿ ವಿವೇಕಾನಂದ ಮಾನ್ಯಾಳನ್ನು ಪ್ರೀತಿಸಿ ಕೊನೆಯವರೆಗೂ ಕೈಬಿಟ್ಟಿಲ್ಲ. ಈ ಸನ್ನಿವೇಶ ನೆರೆದವರ ಕಣ್ಣಲ್ಲಿ ನೀರು ತರಿಸಿದೆ.

ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ಮಗಳು ಬೇರೆ ಜಾತಿ ಮದುವೆಯಾಗಿದ್ದು ತಪ್ಪಾಯ್ತಾ: ಯುವಕ ಪ್ರಶ್ನೆ

ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ಮಗಳು ಬೇರೆ ಜಾತಿ ಮದುವೆಯಾಗಿದ್ದು ತಪ್ಪಾಯ್ತಾ: ಯುವಕ ಪ್ರಶ್ನೆ

ಹುಬ್ಬಳ್ಳಿಯಲ್ಲಿ ನಡೆದ ಮಾನ್ಯಾ ಮರ್ಯಾದೆ ಹತ್ಯೆ ಪ್ರಕರಣದಲ್ಲಿ, ಮೃತಳ ಪತಿ ವಿವೇಕಾನಂದ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಏಳು ತಿಂಗಳ ಗರ್ಭಿಣಿಯಾಗಿದ್ದ ಪತ್ನಿಯನ್ನು ಆಕೆಯ ತಂದೆಯೇ ಕೊಲೆ ಮಾಡಿರುವುದಾಗಿ ಆರೋಪಿಸಿ, ಆರೋಪಿಗೆ ಗಲ್ಲು ಶಿಕ್ಷೆ ಆಗ್ರಹಿಸಿದ್ದಾರೆ. ತಮ್ಮ ಪತ್ನಿಯ ತಂದೆ ಹಿಂದೆ ಮುಸ್ಲಿಂ ಹುಡುಗಿಯನ್ನು ಪ್ರೀತಿಸಿರುವುದನ್ನು ಉಲ್ಲೇಖಿಸಿ, ಈಗ ಮಗಳ ಅಂತರ್ಜಾತಿ ವಿವಾಹವನ್ನು ವಿರೋಧಿಸುತ್ತಿರುವುದರ ಬಗ್ಗೆ ಪ್ರಶ್ನಿಸಿದ್ದಾರೆ.

ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು

ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು

ಹುಬ್ಬಳ್ಳಿಯಲ್ಲಿ ನಡೆದ ಭೀಕರ ಮರ್ಯಾದಾ ಹತ್ಯೆ ಸಂಚಲನ ಮೂಡಿಸಿದ್ದು, ಅಂತರಜಾತಿ ವಿವಾಹವಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾಳನ್ನು ಆಕೆಯ ತಂದೆಯೇ ಕೊಲೆ ಮಾಡಿದ್ದಾರೆ. ಇದೀಗ ಪತಿ ವಿವೇಕಾನಂದ ನಡೆದ ಘಟನೆ ಬಗ್ಗೆ ವಿವರಿಸಿದ್ದು, ಮನೆಗೆ ನುಗ್ಗಿ ಹಲ್ಲೆ ಮಾಡುತ್ತಿದ್ದಾಗಲೂ ಯಾರೂ ನೆರವಿಗೆ ಬರಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

ಹೆತ್ತ ತಂದೆಯಿಂದಲೇ ಗರ್ಭಿಣಿ ಮಗಳ ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ

ಹೆತ್ತ ತಂದೆಯಿಂದಲೇ ಗರ್ಭಿಣಿ ಮಗಳ ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ

ಹುಬ್ಬಳ್ಳಿಯಲ್ಲಿ 7 ತಿಂಗಳ ಗರ್ಭಿಣಿ ಮಾನ್ಯ ಪಾಟೀಲ್ ಅವರ ಮೇಲೆ ತಂದೆ ಪ್ರಕಾಶ್ ಮತ್ತು ಇಬ್ಬರು ಸಂಬಂಧಿಕರು ಭೀಕರವಾಗಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಮಾನ್ಯ ಸಾವನ್ನಪ್ಪಿದ್ದಾರೆ. ಅಂತರಜಾತಿ ವಿವಾಹವೇ ಈ ಹಲ್ಲೆಗೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ಬಗ್ಗೆ ಎಸ್​ಪಿ ನೀಡಿದ ಮಾಹಿತಿ ಇಲ್ಲಿದೆ.

‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ

‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ

ಹುಬ್ಬಳ್ಳಿಯಲ್ಲಿ ನಡೆದ ಭೀಕರ ಘಟನೆಯಲ್ಲಿ, ಅನ್ಯಜಾತಿ ಯುವಕನನ್ನು ಮದುವೆಯಾಗಿದ್ದ 7 ತಿಂಗಳ ಗರ್ಭಿಣಿ ಮಗಳನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದಾನೆ. ಸಂತ್ರಸ್ತರ ಕುಟುಂಬದವರು ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದು, ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ. ಹತ್ಯೆಯ ಭಯಾನಕತೆಯನ್ನು ಯುವಕನ ದೊಡ್ಡಮ್ಮ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.