ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ನಡೆಯುತ್ತಾ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾದ ನಂತರ, ಪುರಾತತ್ವ ಇಲಾಖೆ ಈ ಸ್ಥಳದ ಸೂಕ್ಷ್ಮ ಅಧ್ಯಯನಕ್ಕೆ ಮುಂದಾಗಿದೆ. ಪ್ರಾಚೀನ ಟಂಕಶಾಲೆ ಹಾಗೂ ರಾಜವಂಶಗಳ ಅವಶೇಷಗಳನ್ನು ಹೊಂದಿರುವ ಲಕ್ಕುಂಡಿಯಲ್ಲಿ, ರಾಜ್ಯ ಸರ್ಕಾರದಿಂದ ಮತ್ತಷ್ಟು ಉತ್ಖನನ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಅನುಮತಿಯಿಲ್ಲದೆ ನಿರ್ಮಾಣ ಕಾರ್ಯ ಮಾಡದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
- Sanjeev Pandre
- Updated on: Jan 11, 2026
- 2:40 pm
ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ?
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಡಿಪಾಯ ಅಗೆಯುವಾಗ ಸುಮಾರು ಒಂದು ಕೆಜಿ ತೂಕದ ಹಳೆಯ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಅವರ ಮನೆ ಜಾಗದಲ್ಲಿ ತಂಬಿಗೆಯಲ್ಲಿ ಚಿನ್ನಾಭರಣಗಳು ದೊರೆತಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪುರಾತತ್ವ ಇಲಾಖೆ ತಜ್ಞರಿಂದ ಪರಿಶೀಲನೆ ನಡೆಯುತ್ತಿದೆ. ಈ ಚಿನ್ನಾಭರಣಗಳು ಯಾವ ಕಾಲಕ್ಕೆ ಸೇರಿವೆ ಎಂಬುದರ ಬಗ್ಗೆ ತನಿಖೆ ಆರಂಭವಾಗಿದೆ. ನೂರಾರು ಜನ ಇದನ್ನು ನೋಡಲು ಸೇರಿದ್ದಾರೆ.
- Sanjeev Pandre
- Updated on: Jan 10, 2026
- 5:28 pm
ಗದಗ: ಬಸ್ಗಳಿಗೆ ಕ್ಲಚ್ ಇಲ್ಲ, ಬ್ರೇಕ್ ಇಲ್ಲ, ಕಂಡೀಷನ್ ಇಲ್ಲ: ಪ್ರಯಾಣಿಕರ ಜೀವಕ್ಕೆ ದೇವರೇ ಗತಿ
ಟಿವಿ9 ನಿರಂತರವಾಗಿ ನಡೆಸುತ್ತಿರುವ ಡಕೋಟಾ ಬಸ್ ರಿಯಾಲಿಟಿ ಚೆಕ್ ಭಾಗವಾಗಿ, ಗದಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳ ಸ್ಥಿತಿಗತಿ ದಯನೀಯವಾಗಿದೆ. ಗದಗ ನಗರದ ಬಸ್ ನಿಲ್ದಾಣದಲ್ಲಿ ಪರೀಕ್ಷಿಸಿದ ಬಸ್ಗಳ ಶಾಕ್ ಅಬ್ಸಾರ್ಬರ್ಗಳು ಕಿತ್ತುಕೊಂಡಿದ್ದು, ಸಪೋರ್ಟಿವ್ ಭಾಗಗಳು ಸಂಪೂರ್ಣ ಹೊರಬಂದಿವೆ. ಹಿಂಭಾಗದ ಶಾಕ್ ಅಬ್ಸಾರ್ಬರ್ಗಳೂ ಇದೇ ಸ್ಥಿತಿಯಲ್ಲಿವೆ. ಸಾರಿಗೆ ಇಲಾಖೆಯು ಇವುಗಳ ದುರಸ್ತಿ ಬಗ್ಗೆ ಗಮನಹರಿಸದಿರುವುದು ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಗದಗ ವಿಭಾಗದಲ್ಲಿ ಬಹುತೇಕ ಬಸ್ಗಳು ಇದೇ ರೀತಿಯ ಡಕೋಟಾ ಸ್ಥಿತಿಯಲ್ಲಿವೆ. ಸೀಟ್ಗಳು ಕಿತ್ತುಹೋಗಿದ್ದು, ಚಾಲಕರ ಪ್ರಕಾರ ಹಲವು ಬಸ್ಗಳಿಗೆ ಕ್ಲಚ್, ಬ್ರೇಕ್, ಕಂಡೀಷನ್ ಇಲ್ಲ. ಜನರು ತಮ್ಮ ಜೀವ ಕೈಯಲ್ಲಿ ಹಿಡಿದು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
- Sanjeev Pandre
- Updated on: Jan 8, 2026
- 12:44 pm
ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ: ಮುದ್ದಾದ ಚಿತ್ರಗಳು ಇಲ್ಲಿವೆ
ಗದಗ ಜಿಲ್ಲೆಯ ರಾಮಗಿರಿ ಗ್ರಾಮದ ರೈತರೊಬ್ಬರು ಅವಳಿ ಆಕಳು ಕರುಗಳಿಗೆ ಅದ್ಧೂರಿ ತೊಟ್ಟಿಲು ಶಾಸ್ತ್ರ ನೆರವೇರಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೂವು, ತಳಿರು ತೋರಣಗಳಿಂದ ಅಲಂಕೃತಗೊಂಡ ಮನೆಯಲ್ಲಿ, ಮಠಾಧೀಶರ ಸಮ್ಮುಖದಲ್ಲಿ ಕರುಗಳಿಗೆ ಶಿವ-ಬಸವ ಎಂದು ನಾಮಕರಣ ಮಾಡಲಾಯಿತು. ರೈತರ ಕುಟುಂಬದ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
- Sanjeev Pandre
- Updated on: Jan 6, 2026
- 1:26 pm
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಅದೇ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೈತ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿಯಲ್ಲಿ ದುಷ್ಕರ್ಮಿಗಳು ಸುಮಾರು 60 ಲಕ್ಷ ರೂ ಮೌಲ್ಯದ 100 ಎಕರೆ ಮೆಕ್ಕೆಜೋಳ ಬೆಳೆ ರಾಶಿಗೆ ಡಿಸೇಲ್, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಸಾಲ ಮಾಡಿ ಬೆಳೆದಿದ್ದ ಬೆಳೆ ನಾಶವಾಗಿ ರೈತ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದು, ಗ್ರಾಮಸ್ಥರು ರಕ್ಷಿಸಿದ್ದಾರೆ.
- Sanjeev Pandre
- Updated on: Jan 2, 2026
- 4:20 pm
ಗದಗ: ಮಕ್ಕಳ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯರು ಎಂದು ಭಾವಿಸಿ ಧಾರವಾಡ ಮೂಲದ ಏಳು ಮಹಿಳೆಯರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೇರ್ ಪಿನ್ ಮಾರಾಟ ಮಾಡುತ್ತಿದ್ದ ಇವರು ಅಮಾಯಕರು ಎಂದು ತಿಳಿದುಬಂದಿದೆ. ಸ್ಥಳೀಯರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದು, ಮುಂಡರಗಿ ಠಾಣೆಯಲ್ಲಿ ದೂರು ದಾಖಲಾಗಿದೆ. ವದಂತಿಗಳಿಂದ ಉಂಟಾದ ಹಿಂಸಾಚಾರದ ಭೀಕರ ಘಟನೆ ಇದು.
- Sanjeev Pandre
- Updated on: Dec 27, 2025
- 10:58 am
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವೊಂದು ಕಡೆ ಹೀಗೆಲ್ಲ ಮಾಡ್ತಾರೆ ನೋಡಿ!
ಗದಗ ಜಿಲ್ಲೆಯ ಉಣಚಗೆರೆ ಗ್ರಾಮದಲ್ಲಿರುವ ಕೋಳಿ ಫಾರಂ ಅತಿಯಾದ ಗಲೀನಿಂದ ಕೂಡಿರುವುದು ಟಿವಿ9 ರಿಯಾಲಿಟಿ ಚೆಕ್ನಲ್ಲಿ ಕಂಡುಬಂದಿದೆ. ಇದರಿಂದ ಮಾರಾಟವಾಗುವ ಮೊಟ್ಟೆ ಮತ್ತು ಕೋಳಿಗಳಿಂದ ಜನರ ಆರೋಗ್ಯಕ್ಕೆ ಗಂಭೀರ ಅಪಾಯವಿದೆ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
- Sanjeev Pandre
- Updated on: Dec 26, 2025
- 9:13 am
ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್
ಕರ್ನಾಟಕ ಕಾನೂನು ಸಚಿವ ಎಚ್.ಕೆ. ಪಾಟೀಲ್ಗೆ ಫೇಸ್ಬುಕ್ ಮೂಲಕ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ವೀರಣ್ಣ ಬೀಳಗಿ ಎಂಬಾತ ಸಚಿವರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ದೂರಿನ ಆಧಾರದ ಮೇಲೆ ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿದ್ದು, ಆತನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ಗಳಿಗೆ ಕಾನೂನು ಕ್ರಮ ಅನಿವಾರ್ಯ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
- Sanjeev Pandre
- Updated on: Dec 20, 2025
- 1:16 pm
ಆಯುಷ್ ಔಷಧಿ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸರ್ಕಾರಿ ಅಧಿಕಾರಿ ಕಮಿಷನ್ ಕೇಳುತ್ತಿರುವ ಸ್ಫೋಟಕ ಆಡಿಯೋ ಇಲ್ಲಿದೆ
ಗದಗ ಜಿಲ್ಲಾ ಆಯುಷ್ ಇಲಾಖೆಯ ಔಷಧಿ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಔಷಧಿ ಖರೀದಿಯಲ್ಲಿ ದೊಡ್ಡ ಪ್ರಮಾಣದ ಕಮಿಷನ್ಗೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ. ಟೆಂಡರ್ ಹಾಕಿದ ಕಂಪನಿ ಪ್ರತಿನಿಧಿಯೊಂದಿಗೆ ಜಿಲ್ಲಾ ಆಯುಷ್ ಇಲಾಖೆ ಆಫೀಸರ್ ಡೀಲಿಂಗ್ ಮಾಡಿರುವ ಆಡಿಯೋ ‘ಟಿವಿ9’ಗೆ ಲಭ್ಯವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಆಯುಷ್ ಇಲಾಖೆಯಲ್ಲೂ ಭಾರಿ ಭ್ರಷ್ಟಾಚರ ನಡೆದಿರುವ ಬಗ್ಗೆ ಕಂಪನಿ ಪ್ರತಿನಿಧಿ ಸಂಭಾಷಣೆಯಲ್ಲಿ ಬಾಯಿ ಬಿಟ್ಟಿದ್ದಾನೆ.
- Sanjeev Pandre
- Updated on: Dec 19, 2025
- 2:40 pm
ಗದಗ, ಮಂಗಳೂರಿನ ಸರ್ಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ
ರಾಜ್ಯದಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ರವಾನೆ ಹೆಚ್ಚಾಗಿವೆ. ಇತ್ತೀಚೆಗೆ ಕೋಲಾರ ಮತ್ತು ಬೀದರ್ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇದೀಗ ಅದೇ ರೀತಿಯಾಗಿ ಗದಗ ಮತ್ತು ಮಂಗಳೂರಿನ ಸರ್ಕಾರಿ ಕಚೇರಿಯನ್ನು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದಾರೆ.
- Sanjeev Pandre
- Updated on: Dec 15, 2025
- 3:47 pm
ಲಿಕ್ಕರ್ ಪ್ರಮೋಟ್ ಮಾಡುವ ರೀತಿಯಲ್ಲಿ ಸರ್ಕಾರಿ ಅಧಿಕಾರಿ ರೀಲ್ಸ್; ಇನ್ಸ್ಟಾಗ್ರಾಮ್ನಲ್ಲಿ ವೀಡಿಯೋ ವೈರಲ್!
ಗದಗ ಜಿಲ್ಲೆಯ ಆಹಾರ ಸುರಕ್ಷತಾ ಅಧಿಕಾರಿಯೊಬ್ಬರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಜೊತೆ ಸೇರಿ ಮದ್ಯಪಾನ ಉತ್ತೇಜಿಸುವ ರೀಲ್ಸ್ಗಳನ್ನು ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಇದು ಕರ್ನಾಟಕ ಸಿವಿಲ್ ಸರ್ವಿಸ್ ನಿಯಮಗಳ ಉಲ್ಲಂಘನೆಯಾಗಿದ್ದು, ಸಾರ್ವಜನಿಕರು ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮದ್ಯಪಾನ ಪ್ರಚಾರ ತಡೆಗೆ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ.
- Sanjeev Pandre
- Updated on: Dec 13, 2025
- 12:54 pm
ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಕಾಲೇಜ್ ವಿರುದ್ಧ ಕೊಲೆ, ಸಾಕ್ಷಿ ನಾಶ ಆರೋಪ
ಗದಗ ಜಿಲ್ಲೆಯ ಮುಂಡರಗಿ ಪಟ್ಟಣ ಮೆಡಿಕಲ್ ಕಾಲೇಜ್ ಹಾಸ್ಟೆಲ್ನಲ್ಲಿ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾದ ಘಟನೆ ನಡೆದಿದೆ. ಆ ಮೂಲಕ ಈ ಕಾಲೇಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಮೂರನೇ ವಿದ್ಯಾರ್ಥಿ ಎನ್ನಲಾಗುತ್ತಿದೆ. ಕಾಲೇಜ್ ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ.
- Sanjeev Pandre
- Updated on: Dec 11, 2025
- 3:33 pm