ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್
ಕರ್ನಾಟಕ ಕಾನೂನು ಸಚಿವ ಎಚ್.ಕೆ. ಪಾಟೀಲ್ಗೆ ಫೇಸ್ಬುಕ್ ಮೂಲಕ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ವೀರಣ್ಣ ಬೀಳಗಿ ಎಂಬಾತ ಸಚಿವರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ದೂರಿನ ಆಧಾರದ ಮೇಲೆ ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿದ್ದು, ಆತನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ಗಳಿಗೆ ಕಾನೂನು ಕ್ರಮ ಅನಿವಾರ್ಯ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
- Sanjeev Pandre
- Updated on: Dec 20, 2025
- 1:16 pm
ಆಯುಷ್ ಔಷಧಿ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸರ್ಕಾರಿ ಅಧಿಕಾರಿ ಕಮಿಷನ್ ಕೇಳುತ್ತಿರುವ ಸ್ಫೋಟಕ ಆಡಿಯೋ ಇಲ್ಲಿದೆ
ಗದಗ ಜಿಲ್ಲಾ ಆಯುಷ್ ಇಲಾಖೆಯ ಔಷಧಿ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಔಷಧಿ ಖರೀದಿಯಲ್ಲಿ ದೊಡ್ಡ ಪ್ರಮಾಣದ ಕಮಿಷನ್ಗೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ. ಟೆಂಡರ್ ಹಾಕಿದ ಕಂಪನಿ ಪ್ರತಿನಿಧಿಯೊಂದಿಗೆ ಜಿಲ್ಲಾ ಆಯುಷ್ ಇಲಾಖೆ ಆಫೀಸರ್ ಡೀಲಿಂಗ್ ಮಾಡಿರುವ ಆಡಿಯೋ ‘ಟಿವಿ9’ಗೆ ಲಭ್ಯವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಆಯುಷ್ ಇಲಾಖೆಯಲ್ಲೂ ಭಾರಿ ಭ್ರಷ್ಟಾಚರ ನಡೆದಿರುವ ಬಗ್ಗೆ ಕಂಪನಿ ಪ್ರತಿನಿಧಿ ಸಂಭಾಷಣೆಯಲ್ಲಿ ಬಾಯಿ ಬಿಟ್ಟಿದ್ದಾನೆ.
- Sanjeev Pandre
- Updated on: Dec 19, 2025
- 2:40 pm
ಗದಗ, ಮಂಗಳೂರಿನ ಸರ್ಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ
ರಾಜ್ಯದಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ರವಾನೆ ಹೆಚ್ಚಾಗಿವೆ. ಇತ್ತೀಚೆಗೆ ಕೋಲಾರ ಮತ್ತು ಬೀದರ್ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇದೀಗ ಅದೇ ರೀತಿಯಾಗಿ ಗದಗ ಮತ್ತು ಮಂಗಳೂರಿನ ಸರ್ಕಾರಿ ಕಚೇರಿಯನ್ನು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದಾರೆ.
- Sanjeev Pandre
- Updated on: Dec 15, 2025
- 3:47 pm
ಲಿಕ್ಕರ್ ಪ್ರಮೋಟ್ ಮಾಡುವ ರೀತಿಯಲ್ಲಿ ಸರ್ಕಾರಿ ಅಧಿಕಾರಿ ರೀಲ್ಸ್; ಇನ್ಸ್ಟಾಗ್ರಾಮ್ನಲ್ಲಿ ವೀಡಿಯೋ ವೈರಲ್!
ಗದಗ ಜಿಲ್ಲೆಯ ಆಹಾರ ಸುರಕ್ಷತಾ ಅಧಿಕಾರಿಯೊಬ್ಬರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಜೊತೆ ಸೇರಿ ಮದ್ಯಪಾನ ಉತ್ತೇಜಿಸುವ ರೀಲ್ಸ್ಗಳನ್ನು ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಇದು ಕರ್ನಾಟಕ ಸಿವಿಲ್ ಸರ್ವಿಸ್ ನಿಯಮಗಳ ಉಲ್ಲಂಘನೆಯಾಗಿದ್ದು, ಸಾರ್ವಜನಿಕರು ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮದ್ಯಪಾನ ಪ್ರಚಾರ ತಡೆಗೆ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ.
- Sanjeev Pandre
- Updated on: Dec 13, 2025
- 12:54 pm
ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಕಾಲೇಜ್ ವಿರುದ್ಧ ಕೊಲೆ, ಸಾಕ್ಷಿ ನಾಶ ಆರೋಪ
ಗದಗ ಜಿಲ್ಲೆಯ ಮುಂಡರಗಿ ಪಟ್ಟಣ ಮೆಡಿಕಲ್ ಕಾಲೇಜ್ ಹಾಸ್ಟೆಲ್ನಲ್ಲಿ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾದ ಘಟನೆ ನಡೆದಿದೆ. ಆ ಮೂಲಕ ಈ ಕಾಲೇಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಮೂರನೇ ವಿದ್ಯಾರ್ಥಿ ಎನ್ನಲಾಗುತ್ತಿದೆ. ಕಾಲೇಜ್ ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ.
- Sanjeev Pandre
- Updated on: Dec 11, 2025
- 3:33 pm
ಗದಗ ಚಿನ್ನದಂಗಡಿ ದೋಚಿ ಬಸ್ ಸ್ಟ್ಯಾಂಡ್ನಲ್ಲಿ ಹಾಲು ಕುಡಿದಿದ್ದ; ಇಲ್ಲಿದೆ ಸಿಸಿಟಿವಿ ದೃಶ್ಯ
ಗದಗದ ಚಿನ್ನದಂಗಡಿ ದೋಚಿದ್ದ ಗುಜರಾತ್ ಮೂಲದ ಕಳ್ಳ ಕೊನೆಗೂ ಸೆರೆಸಿಕ್ಕಿದ್ದಾನೆ. ಕಳ್ಳತನ ನಡೆದ 6 ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಅಂತಾರಾಜ್ಯ ಕಳ್ಳನನ್ನು ಸದ್ಯ ಗದಗ ಜಿಲ್ಲಾ ಪೊಲೀಸ ಬಂಧಿಸಿದ್ದಾರೆ. ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಕಳ್ಳನ ಚಲನವನಲದ ದೃಶ್ಯ ಸೆರೆಯಾಗಿತ್ತು. ವಿಡಿಯೋ ನೋಡಿ.
- Sanjeev Pandre
- Updated on: Dec 4, 2025
- 10:41 pm
ಗದಗದಲ್ಲಿ ಚಿನ್ನದಂಗಡಿ ಲೂಟಿ: ಕಳ್ಳರ ಕೈಚಳಕ ಕಂಡು ಪೊಲೀಸರೇ ಶಾಕ್!
ರಾಜ್ಯದಲ್ಲಿ ಮೇಲಿಂದ ಮೇಲೆ ವರದಿಯಾಗುತ್ತಿರುವ ದರೋಡೆ ಪ್ರಕರಣಗಳ ನಡುವೆ ಮುದ್ರಣಕಾಶಿ ಗದಗದಲ್ಲಿ ವ್ಯಾಪಾರಸ್ಥರು ಬೆಚ್ಚಿಬೀಳುವ ರೀತಿಯ ರಾಬರಿ ನಡೆದಿದೆ. ಅಂಗಡಿಯ ಬಾಗಿಲು ಮುರಿಯದೆ ಒಳ ನುಗ್ಗಿರುವ ಗ್ಯಾಂಗ್ ಬಂಗಾರದ ಅಂಗಡಿ ದೋಚಿ ಎಸ್ಕೇಪ್ ಆಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.
- Sanjeev Pandre
- Updated on: Dec 4, 2025
- 2:08 pm
ಶಿರಚ್ಛೇದ ಮಾಡಿದ ರೀತಿಯಲ್ಲಿ ಹಸುವಿನ ಕರು ಪತ್ತೆ: ಚಿರತೆ ದಾಳಿಯೋ? ದುಷ್ಕೃತ್ಯವೋ?
ಗದಗ ನಗರದ ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಹಸು ಕರುವಿನ ಮೃತದೇಹ ಪತ್ತೆಯಾಗಿದೆ. ಶಿರಚ್ಛೇದ ಮಾಡಿರುವ ರೀತಿಯಲ್ಲಿ ಕರು ಪತ್ತೆಯಾಗಿದ್ದು, ಘಟನೆ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಚಿರತೆ ದಾಳಿಯಿಂದ ಹಸು ಮೃತಪಟ್ಟಿದೆಯೋ? ಅಥವಾ ದುಷ್ಟರು ನಡೆಸಿರುವ ಅಟ್ಟಹಾಸವೋ? ಎಂಬ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.
- Sanjeev Pandre
- Updated on: Dec 1, 2025
- 3:43 pm
ರಾತ್ರಿ 1.30ಕ್ಕೆ ಹೊರ ಹೋಗಿದ್ದ ಯುವತಿಯ ಮೃತದೇಹ ಕೆರೆಯಲ್ಲಿ ಪತ್ತೆ: ಆಗಿದ್ದೇನು?
ಅವಳು ಎಸ್ಎಸ್ಎಲ್ಸಿಯಲ್ಲಿ ಊರಿಗೇ ಫಸ್ಟ್ ಬಂದಿದ್ಲು. ಸಿಇಟಿಯಲ್ಲೂ ಉತ್ತಮ ಱಂಕ್ ಪಡೆದು, ಸರ್ಕಾರಿ ಕೋಟಾದಡಿ ಇಂಜಿನಿಯರ್ ಸೀಟ್ ಗಿಟ್ಟಿಸಿಕೊಂಡಿದ್ಳು. ಅಣ್ಣನ ಪಾಲಿನ ಮುದ್ದಿನ ತಂಗಿ ದುಡುಕಿನ ನಿರ್ಧಾರದಿಂದ ಉಸಿರು ಚೆಲ್ಲಿದ್ದಾಳೆ. ಮಧ್ಯರಾತ್ರಿ 1.30ಕ್ಕೆ ಎದ್ದು ಹೊರಗೆ ಹೋದ ಯುವತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಅಷ್ಟಕ್ಕೂ ಆಗಿದ್ದೇನು? ಎನ್ನುವ ವಿವರ ಇಲ್ಲಿದೆ.
- Sanjeev Pandre
- Updated on: Nov 30, 2025
- 10:28 pm
ಗದಗ: ತಲ್ವಾರ್, ಚಾಕುವಿನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಭಯಾನಕ ಘಟನೆಯ ವಿಡಿಯೋ ವೈರಲ್
ಸಿನಿಮೀಯ ರೀತಿಯ ತಲ್ವಾರ್ ದಾಳಿಗೆ ಗದಗ-ಬೆಟಗೇರಿ ಅವಳಿ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ, ಘಟನೆಯ ವಿಡಿಯೋ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೈರಲ್ ಆಗುತ್ತಿದೆ. ಯುವಕನೊಬ್ಬನನ್ನು ಹತ್ತಾರು ಜನರ ಸಮ್ಮುಖದಲ್ಲೇ ಯುವಕರ ಗುಂಪು ತಲ್ವಾರ್, ಬಿಯರ್ ಬಾಟಲ್, ಚಾಕುವಿನಿಂದ ಇರಿದು ಹಲ್ಲೆ ಮಾಡಿದೆ. ಭಯಾನಕ ಘಟನೆಗೆ ಜನ ಆಘಾತಕ್ಕೊಳಗಾಗಿದ್ದಾರೆ.
- Sanjeev Pandre
- Updated on: Nov 27, 2025
- 6:46 am
ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ: ಡಿಕೆಶಿಗೆ ಇದ್ಯಾ ಸಿಎಂ ಯೋಗ?
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಗದಗದಲ್ಲಿ ಹುಲಿಗೆಮ್ಮ ದೇವಿ ಜೋಗತಿ ಬೈಲಮ್ಮ ಎಂಬವರು ಸ್ಫೋಟಕ ಭಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿರುವಾಗಲೇ ಈ ಭವಿಷ್ಯ ಕುತೂಹಲ ಮೂಡಿಸಿದೆ. ಡಿಕೆಶಿ ಸೇರಿ ಕೆಲ ನಾಯಕರ ಹೆಸರೂ ಸಿಎಂ ರೇಸ್ನಲ್ಲಿ ಕೇಳಿ ಬರುತ್ತಿದ್ದು, ಆ ಬಗ್ಗೆಯೂ ಜೋಗತಿ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಇರುವ ಬಾಂಧವ್ಯ ಎಂತಹದ್ದು ಎಂಬುದನ್ನೂ ಉಲ್ಲೇಖಿಸಿದ್ದಾರೆ.
- Sanjeev Pandre
- Updated on: Nov 24, 2025
- 5:43 pm
ಗದಗ: ಫೋಟೋ ಸ್ಟುಡಿಯೋದಲ್ಲೇ ನಡೆಯುತ್ತಿತ್ತು ನಕಲಿ ಸರ್ಟಿಫಿಕೇಟ್ ದಂಧೆ!
ಗದಗ ನಗರದ ಫೋಟೋ ಸ್ಟುಡಿಯೋವೊಂದರಲ್ಲಿ ಪ್ಯಾನ್, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ನಕಲಿ ದಾಖಲೆಗಳನ್ನು ತಯಾರಿಸುತ್ತಿದ್ದ ಜಾಲವನ್ನು ಬೆಟಗೇರಿ ಪೊಲೀಸರು ಭೇದಿಸಿದ್ದಾರೆ. ಆರೋಪಿ ರಾಘವೇಂದ್ರ ಕಬಾಡಿಯನ್ನು ಬಂಧಿಸಲಾಗಿದ್ದು, ಕಂಪ್ಯೂಟರ್, ಪ್ರಿಂಟರ್ ವಶಕ್ಕೆ ಪಡೆಯಲಾಗಿದೆ. ನಕಲಿ ದಾಖಲೆ ಪಡೆದವರ ಪತ್ತೆಗೆ ತನಿಖೆ ಮುಂದುವರಿದಿದೆ.
- Sanjeev Pandre
- Updated on: Nov 24, 2025
- 10:09 am