ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ: ಹಣ ನೀಡುವಂತೆ ಮಾನಸಿಕ ಹಿಂಸೆ?
Kallayyajja Swamiji, Veereshwara Punyashram, Life Threats, Gadag, Trustees Financial Dispute, Gadag News, ಕಲ್ಲಯ್ಯಜ್ಜ ಶ್ರೀಗಳು, ವೀರೇಶ್ವರ ಪುಣ್ಯಾಶ್ರಮ, ಜೀವಬೆದರಿಕೆ, ಗದಗ, tv9 kannada, tv9 kannada live, kannada news, tv9 kannada news, tv9 kannada news live, tv 9 kannada, tv 9 kannada live, today news kannada, tv9kannada, tv9 kannada live news, breaking news kannada, tv9 news kannada live, todays news in kannada, tv9 live kannada, tv9 kannada live streaming, tv9 kannada web, kannada breaking news, tv9 news live kannada, tv9 kannada live today, tv9 kannada live news today
- Sanjeev Pandre
- Updated on: Jun 25, 2026
- 11:58 am
ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಖಾಕಿ ಸಮರ: ಕಂತೆ ಕಂತೆ ಹಣ, ಚಿನ್ನಾಭರಣ ಕಂಡು ಶಾಕ್!
Gadag News: ಗದಗ ಪೊಲೀಸರು ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ್ದಾರೆ. ಬೆಟಗೇರಿ ಪ್ರದೇಶದಲ್ಲಿ ನಡೆದ ಭರ್ಜರಿ ದಾಳಿಯಲ್ಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಖಾಲಿ ಚೆಕ್ ಮತ್ತು ಬಾಂಡ್ಗಳನ್ನು ವಶಪಡಿಸಿಕೊಂಡಿದ್ದಾರೆ. ಮನೋಹರ್ ಕಟ್ಟಿಮಣಿ ಸೇರಿ ಅಕ್ರಮ ಹಣಕಾಸು ವ್ಯವಹಾರ ನಡೆಸುತ್ತಿದ್ದವರ ವಿರುದ್ಧ ಮೈಕ್ರೋಫೈನಾನ್ಸ್ ಮತ್ತು ಬಿಎನ್ಎಸ್ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.
- Sanjeev Pandre
- Updated on: Jun 24, 2026
- 8:32 pm
ಗದಗದಲ್ಲಿ ಬಡ್ಡಿ ಬಕಾಸುರರ ಅಟ್ಟಹಾಸ: 17 ಲಕ್ಷ ರೂ. ಸಾಲ ಕೊಟ್ಟು ರೈತನ 5 ಎಕರೆ ಜಮೀನು ನುಂಗಿದ ರೌಡಿಶೀಟರ್ ಗ್ಯಾಂಗ್
ಗದಗ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ ಮುಂದುವರಿದಿದ್ದು, ಕೇವಲ 17 ಲಕ್ಷ ರೂಪಾಯಿ ಸಾಲ ನೀಡಿ ರೈತನ ಕೋಟ್ಯಂತರ ರೂಪಾಯಿ ಮೌಲ್ಯದ 5 ಎಕರೆ ಜಮೀನನ್ನು ನಕಲಿ ದಾಖಲೆಗಳ ಮೂಲಕ ವಸೂಲಿ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಸದ್ಯ, ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
- Sanjeev Pandre
- Updated on: Jun 22, 2026
- 11:33 am
ಗದಗದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ
ಗದಗ ಜಿಲ್ಲೆಯ ನರೇಗಲ್ನಲ್ಲಿ 2 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೈಟೆಕ್ ಆಸ್ಪತ್ರೆ ಇದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ. 30 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ಸದ್ಯ ಕೇವಲ ಒಬ್ಬರೇ ದಂತ ವೈದ್ಯರಿದ್ದಾರೆ. ಹೀಗಾಗಿ ಉಳಿದ ರೋಗಿಗಳು ಚಿಕಿತ್ಸೆಗೆ ಸಂಕಷ್ಟ ಪಡುವಂತಾಗಿದೆ. ಸಿಬ್ಬಂದಿ ಕೊರತೆಯೂ ಇರುವ ಕಾರಣ ಕಟ್ಟಡ ಪಾಳು ಬೀಳುತ್ತಿದ್ದರೆ, ಯಂತ್ರೋಪಕರಣಗಳು ಧೂಳು ಹಿಡಿಯುತ್ತಿವೆ.
- Sanjeev Pandre
- Updated on: Jun 16, 2026
- 9:22 am
ಅಣ್ಣನ ಕಣ್ಣೆದುರೇ ತಮ್ಮ ಸಿಡಿಲಿಗೆ ಬಲಿ: ಮೃತದೇಹವನ್ನ ಹೆಗಲ ಮೇಲೆ ಹೊತ್ತು ತಂದ ಸಹೋದರ
ಗದಗ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಸಿಡಿಲು ಬಡಿದು ಅಣ್ಣನ ಕಣ್ಣೆದುರೇ ತಮ್ಮ ಸಾವನ್ನಪ್ಪಿದ್ದಾನೆ. ಕೂದಲೆಳೆ ಅಂತರದಲ್ಲಿ ಬಚಾವ್ ಆದ ಅಣ್ಣ ಬಳಿಕ ತನ್ನ ತಮ್ಮನ ಶವವನ್ನು ಹೊತ್ತು ಮನೆಗೆ ಬಂದಿದ್ದಾರೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗಜೇಂದ್ರಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Sanjeev Pandre
- Updated on: Jun 5, 2026
- 8:29 pm
ಗದಗ: 33 ದಿನ ಅನ್ನ, ನೀರಿಲ್ಲದೇ ಸ್ವಾಮೀಜಿಯಿಂದ ಶಿವಯೋಗ ಸಮಾಧಿ; ಇಟ್ಟಿಗೆಯಿಂದ ಗರ್ಭಗುಡಿ ಬಂದ್
ಗದಗ ತಾಲೂಕಿನ ಸ್ವಾಮೀಜಿಗಳೊಬ್ಬರು ಲೋಕ ಕಲ್ಯಾಣಕ್ಕಾಗಿ 33 ದಿನಗಳ ಕಠಿಣ ಶಿವಯೋಗ ಸಮಾಧಿ ಅನುಷ್ಠಾನ ಕೈಗೊಂಡಿದ್ದಾರೆ. ಬೆಳಕು, ಗಾಳಿ, ನೀರು, ಆಹಾರವಿಲ್ಲದೆ ಗರ್ಭಗುಡಿ ತಪಸ್ಸು ಕುಳಿತಿದ್ದಾರೆ. ಇಂದಿನ ವಿಜ್ಞಾನದ ಯುಗದಲ್ಲಿ ಸ್ವಾಮೀಜಿ ಒಬ್ಬರ ಈ ಆಧ್ಯಾತ್ಮಿಕ ನಡೆ ಭಕ್ತರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
- Sanjeev Pandre
- Updated on: Jun 5, 2026
- 4:14 pm
TV9 ಬಿಗ್ ಇಂಪ್ಯಾಕ್ಟ್: ಮುಚ್ಚಿದ್ದ ಕಾಳಜಿ ಕೇಂದ್ರ 24 ಗಂಟೆಯಲ್ಲೇ ರೀ-ಓಪನ್!
TV9 ವರದಿಯ ಪರಿಣಾಮವಾಗಿ ಗದಗ ಗಂಗಿಮಡಿ ಸಂತ್ರಸ್ತರ ಕಾಳಜಿ ಕೇಂದ್ರ ಪುನರಾರಂಭಗೊಂಡಿದೆ. ದಿಢೀರ್ ಮುಚ್ಚಲ್ಪಟ್ಟಿದ್ದ ಕೇಂದ್ರವನ್ನು ವರದಿ ಪ್ರಸಾರವಾದ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಪುನಃ ತೆರೆದಿದೆ. ಸಂತ್ರಸ್ತರು ಇದೀಗ ಅನ್ನ, ಆಸರೆ ಪಡೆದಿದ್ದು, ಮಾಧ್ಯಮಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಗೆ ಕ್ರಮದ ಭರವಸೆ ನೀಡಲಾಗಿದ್ದು, ಸಾರ್ವಜನಿಕ ವಲಯದಲ್ಲಿ TV9 ವರದಿಗಾರಿಕೆಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
- Sanjeev Pandre
- Updated on: May 23, 2026
- 5:08 pm
ಗದಗ ಜಿಲ್ಲೆಯಲ್ಲಿ ಮಳೆ ಆರ್ಭಟ: ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಜಲಾವೃತ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾರೀ ಮಳೆಯ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಗೆ ಕೆಂಚಲಾಪುರ ಓಣಿ ಮತ್ತು ಬನಶಂಕರಿ ದೇಗುಲ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮಳೆಯ ಜೊತೆಗೆ ಗಾಳಿಯ ವೇಗ ಹೆಚ್ಚಾಗಿದ್ದರಿಂದ ಹಲವೆಡೆ ಮರಗಳು ನೆಲಕ್ಕುರುಳಿವೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
- Sanjeev Pandre
- Updated on: May 18, 2026
- 9:34 am
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಜಿಲ್ಲೆಯಲ್ಲಿ ಸುಡುವ ಬಿಸಿಲಿಗೆ ಮನುಷ್ಯರು ಮಾತ್ರ ಅಲ್ಲ, ಪ್ರಾಣಿಗಳೂ ಬಳಲುತ್ತಿವೆ. ಸರಿಯಾದ ಹೊತ್ತಿಗೆ ನೀರು, ಆಹಾರ ಸಿಗದ ಜೀವಿಗಳು ಕಂಗೆಟ್ಟುಹೋಗಿವೆ. ಹೀಗಿರುವಾಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದ ರಸ್ತೆಯ ಹೊಂಡದಲ್ಲಿ ಸಂಗ್ರಹವಾಗಿದ್ದ ನೀರನ್ನು ಅಲ್ಲಿನ ಮಂಗಗಳು ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮನಕಲಕುವಂತಿದೆ.
- Sanjeev Pandre
- Updated on: May 7, 2026
- 12:07 pm
ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ: ಕಳಚಿ ಬಿದ್ದ ಜೋಕಾಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ಗದಗ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಬ್ರೇಕ್ಡ್ಯಾನ್ಸ್ ವ್ಹೀಲ್ ಮುರಿದು ದೊಡ್ಡ ದುರಂತ ಸಂಭವಿಸಿದೆ. ಕಳಪೆ ಗುಣಮಟ್ಟದ ಆಟಿಕೆಯಿಂದಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಕ್ಕಳು, ಮಹಿಳೆಯರು, ಪುರುಷರು ಸೇರಿ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹರ ಪೊಲೀಸರು ಭೇಟಿ ನೀಡಿದ್ದಾರೆ.
- Sanjeev Pandre
- Updated on: May 3, 2026
- 10:29 pm
ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಗದಗ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದ ವನ್ಯಜೀವಿಗಳು ಬಳಲುತ್ತಿವೆ. ಬಿಸಿಲಿನ ಬೇಗೆಯಿಂದ ಪ್ರಾಣಿಗಳನ್ನು ರಕ್ಷಿಸಲು ಮೃಗಾಲಯ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಗ್ಲುಕೋಸ್, ತಂಪು ಆಹಾರ, ಐಸ್ ನೀರು ಮತ್ತು ಸ್ಪ್ರಿಂಕ್ಲರ್ಗಳನ್ನು ಒದಗಿಸುವ ಮೂಲಕ ಪ್ರಾಣಿಗಳಿಗೆ ತಂಪಾದ ವಾತಾವರಣ ಸೃಷ್ಟಿಸಲಾಗಿದೆ. ಇಲ್ಲಿವೆ ನೋಡಿ ಫೋಟೋಸ್.
- Sanjeev Pandre
- Updated on: May 1, 2026
- 8:36 pm
ಮುಸುಕುದಾರಿ ಗ್ಯಾಂಗ್ನ ಹೆಡೆಮುರಿ ಕಟ್ಟಿದ ಖಾಕಿ: 1.26 ಕೋಟಿ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ
ಗದಗ ಮತ್ತು ಬೆಟಗೇರಿ ಅವಳಿ ನಗರದಲ್ಲಿ ಕಳೆದ ಕೆಲ ತಿಂಗಳುಗಳಿಂದ ಆತಂಕ ಮೂಡಿಸಿದ್ದ ಮುಸುಕುದಾರಿ ಕಳ್ಳರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 11 ಮಂದಿ ಕಳ್ಳರನ್ನು ಬಂಧಿಸಿದ ಪೊಲೀಸರು, ಆರೊಪಿಗಳಿಂದ 1 ಕೋಟಿ 26 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
- Sanjeev Pandre
- Updated on: Apr 30, 2026
- 4:57 pm