ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಜಿಲ್ಲೆಯಲ್ಲಿ ಸುಡುವ ಬಿಸಿಲಿಗೆ ಮನುಷ್ಯರು ಮಾತ್ರ ಅಲ್ಲ, ಪ್ರಾಣಿಗಳೂ ಬಳಲುತ್ತಿವೆ. ಸರಿಯಾದ ಹೊತ್ತಿಗೆ ನೀರು, ಆಹಾರ ಸಿಗದ ಜೀವಿಗಳು ಕಂಗೆಟ್ಟುಹೋಗಿವೆ. ಹೀಗಿರುವಾಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದ ರಸ್ತೆಯ ಹೊಂಡದಲ್ಲಿ ಸಂಗ್ರಹವಾಗಿದ್ದ ನೀರನ್ನು ಅಲ್ಲಿನ ಮಂಗಗಳು ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮನಕಲಕುವಂತಿದೆ.
- Sanjeev Pandre
- Updated on: May 7, 2026
- 12:07 pm
ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ: ಕಳಚಿ ಬಿದ್ದ ಜೋಕಾಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ಗದಗ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಬ್ರೇಕ್ಡ್ಯಾನ್ಸ್ ವ್ಹೀಲ್ ಮುರಿದು ದೊಡ್ಡ ದುರಂತ ಸಂಭವಿಸಿದೆ. ಕಳಪೆ ಗುಣಮಟ್ಟದ ಆಟಿಕೆಯಿಂದಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಕ್ಕಳು, ಮಹಿಳೆಯರು, ಪುರುಷರು ಸೇರಿ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹರ ಪೊಲೀಸರು ಭೇಟಿ ನೀಡಿದ್ದಾರೆ.
- Sanjeev Pandre
- Updated on: May 3, 2026
- 10:29 pm
ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಗದಗ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದ ವನ್ಯಜೀವಿಗಳು ಬಳಲುತ್ತಿವೆ. ಬಿಸಿಲಿನ ಬೇಗೆಯಿಂದ ಪ್ರಾಣಿಗಳನ್ನು ರಕ್ಷಿಸಲು ಮೃಗಾಲಯ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಗ್ಲುಕೋಸ್, ತಂಪು ಆಹಾರ, ಐಸ್ ನೀರು ಮತ್ತು ಸ್ಪ್ರಿಂಕ್ಲರ್ಗಳನ್ನು ಒದಗಿಸುವ ಮೂಲಕ ಪ್ರಾಣಿಗಳಿಗೆ ತಂಪಾದ ವಾತಾವರಣ ಸೃಷ್ಟಿಸಲಾಗಿದೆ. ಇಲ್ಲಿವೆ ನೋಡಿ ಫೋಟೋಸ್.
- Sanjeev Pandre
- Updated on: May 1, 2026
- 8:36 pm
ಮುಸುಕುದಾರಿ ಗ್ಯಾಂಗ್ನ ಹೆಡೆಮುರಿ ಕಟ್ಟಿದ ಖಾಕಿ: 1.26 ಕೋಟಿ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ
ಗದಗ ಮತ್ತು ಬೆಟಗೇರಿ ಅವಳಿ ನಗರದಲ್ಲಿ ಕಳೆದ ಕೆಲ ತಿಂಗಳುಗಳಿಂದ ಆತಂಕ ಮೂಡಿಸಿದ್ದ ಮುಸುಕುದಾರಿ ಕಳ್ಳರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 11 ಮಂದಿ ಕಳ್ಳರನ್ನು ಬಂಧಿಸಿದ ಪೊಲೀಸರು, ಆರೊಪಿಗಳಿಂದ 1 ಕೋಟಿ 26 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
- Sanjeev Pandre
- Updated on: Apr 30, 2026
- 4:57 pm
ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು
ಗದಗ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಬೆಲೆ ದಿಢೀರ್ ಕುಸಿತ ಕಂಡಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವಾರ 3,000 ರೂಪಾಯಿವರೆಗೆ ಮಾರಾಟವಾಗುತ್ತಿದ್ದ ಒಂದು ಟ್ರೇ ಮಾವು ಈಗ ಕೇವಲ 600-700 ರೂಪಾಯಿಗೆ ಇಳಿಕೆಯಾಗಿದೆ. ವಿದೇಶಕ್ಕೆ ರಫ್ತು ಸ್ಥಗಿತಗೊಂಡಿರುವುದು ಮತ್ತು ಮಾರುಕಟ್ಟೆಗೆ ಹೆಚ್ಚಿನ ಸರಕು ಬಂದಿರುವುದು ಬೆಲೆ ಇಳಿಕೆಗೆ ಕಾರಣವಾಗಿದ್ದು, ಬೆಳೆಗಾರರು ಸರ್ಕಾರದ ನೆರವಿಗೆ ಮೊರೆಯಿಟ್ಟಿದ್ದಾರೆ.
- Sanjeev Pandre
- Updated on: Apr 30, 2026
- 7:07 am
ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ
ಗದಗ ನಗರದ ಪುಟ್ಟರಾಜ್ ಗವಾಯಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಯ ಮೇಲೆ ಸಾರಿಗೆ ನೌಕರರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಸ್ ನಿಲ್ಲಿಸದ ಕಾರಣ ಆರಂಭವಾದ ವಾಗ್ವಾದವು ಹಲ್ಲೆಗೆ ತಿರುಗಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಿಸಿದರು, ತಪ್ಪಿತಸ್ಥ ನೌಕರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಇದರಿಂದ ಬಸ್ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.
- Sanjeev Pandre
- Updated on: Apr 23, 2026
- 4:45 pm
ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡೆ ಸಂಪುಟ ಪುನಾರಚನೆ ಕೂಗು, ಮತ್ತೊಂದೆಡೆ ಇದೀಗ ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ ಬಂದಿದೆ.
- Sanjeev Pandre
- Updated on: Apr 19, 2026
- 5:27 pm
ಟುರ್ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ
ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರು ಕುರುಬ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಅವಮಾನಕಾರಿ ಪದಗಳನ್ನು ಬಳಸಿದ್ದರು. ಇದರಿಂದ ಕುರುಬ ಸಮುದಾಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿತ್ತು. ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದ ಪಾಟೀಲ್, ಸಾರ್ವಜನಿಕ ಒತ್ತಡಕ್ಕೆ ಮಣಿದು ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.
- Sanjeev Pandre
- Updated on: Apr 18, 2026
- 6:47 pm
ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!
ಗದಗ ಜಿಲ್ಲೆಯ ಡಂಬಳದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ರೈತರು ಆಯೋಜಿಸಿದ ಈ ಕ್ರೀಡೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸಿತು. ವಿವಿಧ ಜಿಲ್ಲೆಗಳಿಂದ ಬಂದ ಎತ್ತುಗಳು ಶರವೇಗದಲ್ಲಿ ಓಡಿ ಗಮನ ಸೆಳೆದವು. ಸಾವಿರಾರು ಜನ ಸೇರಿ ಕ್ರೀಡೆಗೆ ಹುಮ್ಮಸ್ಸು ತುಂಬಿದರು. ಎತ್ತುಗಳ ಮಿಂಚಿನ ಓಟದ ಝಲಕ್ ಇಲ್ಲಿದೆ ನೋಡಿ.
- Sanjeev Pandre
- Updated on: Apr 17, 2026
- 2:35 pm
“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!
ಗದಗ ಜಿಲ್ಲೆಯಲ್ಲಿ ತಾಪಮಾನ 38-40°C ಏರಿಕೆಯಾಗಿದ್ದು, ಬಿಸಿಲಿನ ಝಳಕ್ಕೆ ಸರ್ಕಾರಿ ನೌಕರರು ಹೈರಾಣಾಗಿದ್ದಾರೆ. ಬೇಸಿಗೆಯ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು, ಕೆಲಸದಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಲಸದ ಅವಧಿಯನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1:30 ರವರೆಗೆ ಬದಲಾಯಿಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ನೌಕರರು ಗಡುವು ನೀಡಿದ್ದಾರೆ. ಉತ್ತರ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಈಗಾಗಲೇ ಸಮಯ ಬದಲಾವಣೆ ಮಾಡಲಾಗಿದೆ.
- Sanjeev Pandre
- Updated on: Apr 11, 2026
- 3:23 pm
ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ಭೀಕರ ಘಟನೆ ನಡೆದಿದೆ. ಮನೆ ಮುಂದೆ ಮಲಗಿದ್ದ ಆರು ಜನರ ಮೇಲೆ ಗ್ರಾಮದ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.
- Sanjeev Pandre
- Updated on: Apr 8, 2026
- 12:53 pm
ಗದಗದಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಬಿಂದಾಸ್ ಎಂಟ್ರಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!
ಗದಗ ನಗರದ ಪುಟ್ಟರಾಜ್ ನಗರದಲ್ಲಿ ಮುಸುಕುಧಾರಿ ಕಳ್ಳರು ಅಟ್ಟಹಾಸ ಮೆರೆದಿದ್ದು, ಮನೆಯ ಬೀಗ ಮುರಿದು 70 ಗ್ರಾಂ ಚಿನ್ನ ದೋಚಿದ್ದಾರೆ. ಮಧ್ಯರಾತ್ರಿ ಸಮಯದಲ್ಲಿ ಮಾರಕಾಸ್ತ್ರ ಹಿಡಿದು ಗಲ್ಲಿಗಳಲ್ಲಿ ಸುತ್ತಾಡುತ್ತಿರುವ ಕಳ್ಳರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಭದ್ರತೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ.
- Sanjeev Pandre
- Updated on: Apr 3, 2026
- 8:02 am