ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು
ಗದಗದಲ್ಲಿ ಮಗಳ ಮದುವೆ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 47 ವರ್ಷದ ಗಿರೀಶಪ್ಪ ಆಲೂರು ತಮ್ಮ ಮಗಳ ಮದುವೆ ಆಯ್ಕೆ ವಿಚಾರದಲ್ಲಿ ಸಹೋದರರಾದ ಈರಣ್ಣ ಮತ್ತು ಶಿವಕುಮಾರ್ನಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದರು. ಫೆಬ್ರವರಿ 27 ರಂದು ನಡೆದ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶಪ್ಪ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
- Sanjeev Pandre
- Updated on: Mar 15, 2026
- 3:22 pm
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು
ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ ನಿಧಿ ಸಿಕ್ಕ ಪ್ರಜ್ವಲ್ ಕುಟುಂಬ ಈಗ 8 ಕೋಟಿ ರೂಪಾಯಿಯಲ್ಲಿ ಪಾಲು ಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದೆ.
- Sanjeev Pandre
- Updated on: Mar 12, 2026
- 3:52 pm
ಲಕ್ಕುಂಡಿ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ರಿತ್ತಿ ಕುಟುಂಬದಿಂದ ಹೊಸ ಡಿಮ್ಯಾಂಡ್
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಅಡಿಪಾಯ ಅಗೆಯುವಾಗ 470 ಗ್ರಾಂ ಚಿನ್ನದ ನಿಧಿ ಪತ್ತೆಯಾಗಿತ್ತು. ಪ್ರಜ್ವಲ್ ರಿತ್ತಿ ಕುಟುಂಬವು ಪ್ರಾಮಾಣಿಕವಾಗಿ ಅದನ್ನು ಸರ್ಕಾರಕ್ಕೆ ಒಪ್ಪಿಸಿತು. ಈಗ, ಪುರಾತತ್ವ ತಜ್ಞರು ಇದರ ಪ್ರಾಚೀನ ಮೌಲ್ಯ 8 ಕೋಟಿ ಎಂದು ಅಂದಾಜಿಸಿದ್ದು, ಕುಟುಂಬವು ಈ ಮೊತ್ತದಲ್ಲಿ ಐದರಲ್ಲಿ ಒಂದು ಭಾಗ ಪಾಲನ್ನು ಸರ್ಕಾರದಿಂದ ಬೇಡಿಕೆ ಇಟ್ಟಿದೆ. ಪ್ರಾಮಾಣಿಕತೆಗೆ ಪ್ರತಿಫಲವಾಗಿ ಸೂಕ್ತ ಪರಿಹಾರ ನಿರೀಕ್ಷಿಸಲಾಗಿದೆ.
- Sanjeev Pandre
- Updated on: Mar 12, 2026
- 6:54 am
ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್ ಆಗುವುದು ಗ್ಯಾರಂಟಿ!
ಲಕ್ಕುಂಡಿಯಲ್ಲಿ ಪತ್ತೆಯಾದ 500-600 ವರ್ಷಗಳ ಹಳೆಯ ಚಿನ್ನದ ನಿಧಿಯು ಚಾಲುಕ್ಯ-ವಿಜಯನಗರ ಕಾಲದ ಅಪೂರ್ವ ದಾಖಲೆಯಾಗಿದೆ. ಇದು ಸಾಮಾನ್ಯ ಆಭರಣವಲ್ಲ, ಬದಲಿಗೆ ದೇವತೆಗಳಿಗೆ ಅರ್ಪಿಸಲಾಗಿದ್ದ 465 ಗ್ರಾಂ ಚಿನ್ನ, ರತ್ನಖಚಿತ ಒಡವೆಗಳಾಗಿವೆ. ಇದರ 'ಆ್ಯಂಟಿಕ್' ಮೌಲ್ಯ ಸುಮಾರು 8 ಕೋಟಿ ರೂಪಾಯಿ ಎಂದು ಪುರಾತತ್ವ ಶಾಸ್ತ್ರಜ್ಞರು ದೃಢಪಡಿಸಿದ್ದಾರೆ. ಇದು ಗದಗ ಇತಿಹಾಸಕ್ಕೆ ಹೊಸ ಆಯಾಮ ನೀಡಿದೆ.
- Sanjeev Pandre
- Updated on: Mar 11, 2026
- 10:13 am
ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸ್ನಲ್ಲಿ ಜನರ ಸಾಗಾಟ! ಕುರಿಗಳಂತೆ ಜನ ತುಂಬಿ ಕರೆದೊಯ್ಯುತ್ತಿರುವ ವಿಡಿಯೋ ವೈರಲ್
ಗದಗ ಜಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ನಲ್ಲಿ ಜನರನ್ನು ಸಾಗಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಇದು ಭಾರಿ ಚರ್ಚೆಗೆ ಕಾರಣವಾಗಿದ್ದು, ಜಿಮ್ಸ್ ಆಸ್ಪತ್ರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಇದೆಯೇ? ಅಥವಾ ಸಿಬ್ಬಂದಿಯ ಕಳ್ಳಾಟವೇ? ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ರೋಗಿಗಳ ಸೇವೆಗೆ ಮೀಸಲಾಗಿರುವ ಆ್ಯಂಬುಲೆನ್ಸ್ನಲ್ಲಿ ಜನರ ಸಾಗಾಟ ಮಾಡುತ್ತಿರುವ ಆರೋಪಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
- Sanjeev Pandre
- Updated on: Mar 9, 2026
- 9:25 am
ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ,ಬೆಡ್ಶೀಟ್ ಅಧಿಕಾರಿ ಮನೆಯಲ್ಲಿ: ಲೋಕಾಯುಕ್ತ ಶಾಕ್
ಕರ್ನಾಟಕದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಮೊನ್ನೆ ಅಷ್ಟೇ ಅಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗದಗ, ಧಾರವಾಡ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿ,ಪಾಸ್ತಿ ದಾಖಲೆಗಳು ಪತ್ತೆಯಾಗಿವೆ. ಇನ್ನೂ ಅಧಿಕಾರಿಯೊಬ್ಬರ ಮನೆಯಲ್ಲಿ ಮಕ್ಕಳಿಗೆ ನೀಡಬೇಕಿದ್ದ ಹಾಸಿಗೆ,ಬೆಡ್ಶೀಟ್ ಪತ್ತೆಯಾಗಿವೆ. ಅಲ್ಲದೇ ಹಾಸ್ಟೆಲ್ ನಲ್ಲಿ ಅಡುಗೆಗೆ ಬಳಸುವ ಹೊಸ ದೊಡ್ಡ ದೊಡ್ಡ ಪಾತ್ರೆಗಳು ಸಿಕ್ಕಿವೆ. ಇದನ್ನು ಕಂಡು ಲೋಕಾಯುಕ್ತರೇ ಶಾಕ್ ಆಗಿದ್ದಾರೆ.
- Sanjeev Pandre
- Updated on: Mar 7, 2026
- 4:18 pm
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ
ಗದಗದಲ್ಲಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದಂದು 19 ಜೋಡಿಗಳು ಸಾಮೂಹಿಕ ವಿವಾಹವಾದರು. ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಶುಭವೆಂಬ ನಂಬಿಕೆಗೆ ಸವಾಲೆಸೆದು, ಗಣ್ಯರು ಹಾಗೂ ಮಠಾಧೀಶರ ಸಮ್ಮುಖದಲ್ಲಿ ಸರ್ವಧರ್ಮದ ಜೋಡಿಗಳು ಸಪ್ತಪದಿ ತುಳಿದು, ಗ್ರಹಣವು ನೈಸರ್ಗಿಕ ವಿದ್ಯಮಾನ, ಶುಭ ಕಾರ್ಯಕ್ಕೆ ಅಡ್ಡಿಯಲ್ಲ ಎಂಬ ಸಂದೇಶ ಸಾರಿದರು.
- Sanjeev Pandre
- Updated on: Mar 3, 2026
- 7:32 pm
ಫಾರೂಕ್ ಸನದಿ ಕೊಲೆ ರಹಸ್ಯ ಬಯಲು: ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ
ಯುವಕನ ಕತ್ತು ಕೊಯ್ದು ಭೀಕರ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಜಮೀನೊಂದರಲ್ಲಿ ನಡೆದಿದ್ದು, ಈ ಘಟನೆ ಗ್ರಾಮಸ್ಥರನ್ನು ಬಿಚ್ಚಿಬೀಳಿಸಿದೆ. ಹೊಸ ಬಾಳಿಗೆ ಕಾಲುಡುತ್ತಿದ್ದ ಫಾರೂಕ್ ಸನದಿ ಎನ್ನುವ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಕೊಲೆ ರಹಸ್ಯ ಬಯಲಿಗೆ ಬಂದಿದೆ. ಹಾಗಾದ್ರೆ, ಫಾರೂಕ್ ಸನದಿಯನ್ನು ಕೊಲೆ ಮಾಡಿದ್ಯಾರು? ಕಾರಣವೇನು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
- Sanjeev Pandre
- Updated on: Mar 1, 2026
- 5:59 pm
ದೇವಸ್ಥಾನ ನಿರ್ಮಾಣಕ್ಕೆ ಟೊಂಕ ಕಟ್ಟಿದ ಗೃಹಲಕ್ಷ್ಮಿಯರು: ಗ್ಯಾರಂಟಿ ಹಣ ದೇಣಿಗೆ ನೀಡಿದ ಮಹಿಳೆಯರು
ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ 850 ಫಲಾನುಭವಿ ಮಹಿಳೆಯರು ವಿಶಿಷ್ಟ ಕಾರ್ಯ ಮಾಡಿದ್ದಾರೆ. ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2000 ಹಣವನ್ನು ಸ್ವಯಂಪ್ರೇರಣೆಯಿಂದ ದೇಣಿಗೆ ನೀಡಿದ್ದಾರೆ. ಹಣಕಾಸಿನ ಕೊರತೆಯಿಂದ ನಿಂತಿದ್ದ ದೇವಾಲಯ ಕಾರ್ಯಕ್ಕೆ ಮಹಿಳೆಯರು ಆರ್ಥಿಕ ನೆರವು ಒದಗಿಸಿದ್ದಾರೆ.
- Sanjeev Pandre
- Updated on: Feb 28, 2026
- 9:35 pm
ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್
ಗದಗ ತಾಲೂಕಿನ ಚಿಂಚಲಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಮೂವರ ಪೈಕಿ ಒಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ. ಅಗ್ನಿಶಾಮಕ ದಳ ತಡವಾಗಿ ಬಂದಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Sanjeev Pandre
- Updated on: Feb 28, 2026
- 8:36 pm
ಬಿಜೆಪಿ ಶಾಸಕ ಬೆನ್ನಲ್ಲೇ ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ
ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇದೀಗ ಜೈಲು ಪಾಲಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯಲ್ಲಿ ಐದು ಲಕ್ಷ ರೂ. ಪಡೆಯುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಇದೀಗ ಬೆನ್ನಲ್ಲೇ ಇದೀಗ ಗದಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬೇಟಿ ಮುಂದುವರೆದಿದ್ದು, ಇದೀಗ ಎಎಸ್ಐ ಸಹ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.
- Sanjeev Pandre
- Updated on: Feb 25, 2026
- 7:10 pm
ಬಿಜೆಪಿ ಶಾಸಕ ವಿರುದ್ಧದ ಲಂಚ ಕೇಸ್: ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋ ರಿಲೀಸ್
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಇದರ ನಡುವೆ ಇದೀಗ ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋವನ್ನು ಸಹ ಗುತ್ತಿಗೆದಾರ ಸೋನು ಲಮಾಣಿ ಬಿಡುಗಡೆ ಮಾಡಿದ್ದಾರೆ. ಆಡಿಯೋದಲ್ಲಿ ಏನಿದೆ? ಈ ಆಡಿಯೋ ಬಗ್ಗೆ ಸೋನು ಲಮಾಣಿ ಹೇಳಿದ್ದೇನು ಎನ್ನುವುದನ್ನು ಕೇಳಿ.
- Sanjeev Pandre
- Updated on: Feb 25, 2026
- 2:21 pm