Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವ ಕುಮಾರ್​ ಪಾಂಡ್ರೆ, ಗದಗ

Author - TV9 Kannada

sajeevakumar.pandre@tv9.com

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…

Read More
ಸುಡುವ ಬಿಸಿಲಿಗೆ ಸವಾರರು ಹೈರಾಣು: ಟ್ರಾಫಿಕ್​ ಸಿಗ್ನಲ್​​ನಲ್ಲಿ ನೆರಳಿನ ವ್ಯವಸ್ಥೆ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಸುಡುವ ಬಿಸಿಲಿಗೆ ಸವಾರರು ಹೈರಾಣು: ಟ್ರಾಫಿಕ್​ ಸಿಗ್ನಲ್​​ನಲ್ಲಿ ನೆರಳಿನ ವ್ಯವಸ್ಥೆ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಗದಗದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ದ್ವಿಚಕ್ರ ವಾಹನ ಸವಾರರು ಬಿಸಿಲಿಗೆ ತುತ್ತಾಗುತ್ತಿದ್ದಾರೆ. ಇದನ್ನು ಗಮನಿಸಿದ ಗದಗ ಪೊಲೀಸ್ ಇಲಾಖೆ ಮತ್ತು ನಗರಸಭೆ, ಮುಳಗುಂದ ನಾಕಾ, ಪುಟ್ಟರಾಜ ಸರ್ಕಲ್, ಟಿಪ್ಪು ಸುಲ್ತಾನ್ ಜಂಕ್ಷನ್‌ಗಳಲ್ಲಿ ನೆರಳಿನ ವ್ಯವಸ್ಥೆ ಮಾಡಿದೆ. ಹಸಿರು ಮ್ಯಾಟ್‌ಗಳನ್ನು ಬಳಸಿ ನಿರ್ಮಿಸಲಾದ ಈ ನೆರಳಿನ ವ್ಯವಸ್ಥೆಯಿಂದ ಸವಾರರಿಗೆ ಕೊಂಚ​ ಆರಾಮವೆನಿಸಿದೆ.

ಪೊಲೀಸ್ ಠಾಣೆಗೆ ಬೆಂಕಿ: 23 ಮಂದಿ ಅಪರಾಧಿಗಳಿಗೆ 5 ವರ್ಷ ಜೈಲು, 36 ಲಕ್ಷ ರೂ. ದಂಡ

ಪೊಲೀಸ್ ಠಾಣೆಗೆ ಬೆಂಕಿ: 23 ಮಂದಿ ಅಪರಾಧಿಗಳಿಗೆ 5 ವರ್ಷ ಜೈಲು, 36 ಲಕ್ಷ ರೂ. ದಂಡ

ಗದಗದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 23 ಜನರನ್ನು ಅಪರಾಧಿ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಅವರಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 36.87 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಪೊಲೀಸ್ ಠಾಣೆ ಹಾನಿಗೆ ಪರಿಹಾರವಾಗಿ 12.72 ಲಕ್ಷ ರೂಪಾಯಿಗಳನ್ನು ಪೊಲೀಸ್ ಇಲಾಖೆಗೆ ನೀಡಲು ಆದೇಶಿಸಲಾಗಿದೆ. ಈ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು.

ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿವೆ. ಆದರೆ ಗದಗ ಜಿಲ್ಲೆಯಲ್ಲಿ ಅಜ್ಜಿಯ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಧೈರ್ಯದಿಂದ ಪರೀಕ್ಷೆ ಬರೆದ ಘಟನೆ ನಡೆದಿದೆ. ಮತ್ತೊಂದು ಘಟನೆಯಲ್ಲಿ, ಪರೀಕ್ಷಾ ಕೇಂದ್ರದಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದ ಬಳಿಕ ಮತ್ತೆ ಪರೀಕ್ಷೆಗೆ ಹಾಜರಾದ ಘಟನೆ ನಡೆದಿದೆ.

ಪ್ರೀತ್ಸೆ ಎಂದು 19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ಅಂಕಲ್ ಕಿರುಕುಳಕ್ಕೆ ವಿದ್ಯಾರ್ಥಿನಿ  ದುರಂತ ಸಾವು

ಪ್ರೀತ್ಸೆ ಎಂದು 19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ಅಂಕಲ್ ಕಿರುಕುಳಕ್ಕೆ ವಿದ್ಯಾರ್ಥಿನಿ ದುರಂತ ಸಾವು

ಅವಳು ಸ್ಟೂಡೆಂಟ್, ಆತ 47 ವರ್ಷದ ಅಂಕಲ್. ಆದ್ರೆ, ಮಗಳ ವಯಸ್ಸಿನ ಯುವತಿಗೆ ಪ್ರೀತ್ಸೆ.. ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಅಷ್ಟೇ ಅಲ್ಲ ಮದುವೆಯಾಗುವಂತೆ ಕಿರುಕುಳ ನೀಡಿದ್ದಾನೆ. ಸಾಲದಕ್ಕೆ ಮದುವೆಗೆ ಒಪ್ಪದಿದ್ದರೆ ಇಬ್ಬರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಭಯಗೊಂಡ 9 ವರ್ಷದ ಯುವತಿ ದುರಂತ ಸಾವು ಕಂಡಿದ್ದಾಳೆ.

ಲಕ್ಷ್ಮೇಶ್ವರ: ಅಕ್ರಮ ಕಲ್ಲು ಗಣಿಗಾರಿಕೆಗೆ ನಲುಗಿದ ಆದರಹಳ್ಳಿ ಜನ, ಮನೆಗಳ ಗೋಡೆಗಳು ಬಿರುಕು

ಲಕ್ಷ್ಮೇಶ್ವರ: ಅಕ್ರಮ ಕಲ್ಲು ಗಣಿಗಾರಿಕೆಗೆ ನಲುಗಿದ ಆದರಹಳ್ಳಿ ಜನ, ಮನೆಗಳ ಗೋಡೆಗಳು ಬಿರುಕು

ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ನಿತ್ಯದ ಬ್ಲಾಸ್ಟಿಂಗ್‌ನಿಂದ ಜನರು ಆತಂಕದಲ್ಲಿದ್ದಾರೆ. ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. 50ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಇಲ್ಲಿನ ಸ್ಥಿತಿಗತಿಯನ್ನು ಗಮನಿಸಿ, ನಮ್ಮ ಸಹಾಯಕ್ಕೆ ಜಿಲ್ಲಾಧಿಕಾರಿಗಳು  ಬರಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಗದಗ: ಕಲ್ಲಂಗಡಿ ಮಾರಾಟಕ್ಕೆ ಮಾರುಕಟ್ಟೆ ಅಖಾಡಕ್ಕಿಳಿದ ರೈತರು, ದಲ್ಲಾಳಿಗಳು ಕಂಗಾಲು

ಗದಗ: ಕಲ್ಲಂಗಡಿ ಮಾರಾಟಕ್ಕೆ ಮಾರುಕಟ್ಟೆ ಅಖಾಡಕ್ಕಿಳಿದ ರೈತರು, ದಲ್ಲಾಳಿಗಳು ಕಂಗಾಲು

ಈಗ ಹೊರಗಡೆಯಿಂದ ಖರೀದಿಸಿ ಏನನ್ನೇ ಆದರೂ ತಿನ್ನಲು ಜನ ಭಯಪಡುವ ಸ್ಥಿತಿ ಇದೆ. ಇಡ್ಲಿ, ಹಣ್ಣುಗಳು ಸೇರಿ ಅನೇಕ ಪದಾರ್ಥಗಳು ಭಯ ಹುಟ್ಟಿಸಿವೆ. ಅದರಲ್ಲೂ ಮಾರುಕಟ್ಟೆಯಲ್ಲಿ ರಾಸಾಯನಿಕ ಮಿಶ್ರಿತ ಹಣ್ಣುಗಳ ಹಾವಳಿ ವರದಿಗಳ ಬೆನ್ನಲ್ಲೇ ಜನ ಆತಂಕಿತರಾಗಿದ್ದಾರೆ. ಈ ನಡುವೆ ಖುದ್ದು ರೈತರೇ ಮಾರಾಟದ ಅಖಾಡಕ್ಕೆ ಧುಮುಕಿದ್ದಾರೆ. ರಾಸಾಯನಿಕ ರಹಿತ ತಾಜಾ ಕಲ್ಲಂಗಡಿ ಹಣ್ಣುಗಳಿಗೆ ಬೇಡಿಕೆ ಹೆಚ್ಚಾಗಿದೆ. ಗ್ರಾಹಕರಿಗೂ ಕಡಿಮೆ ದರದಲ್ಲಿ ಕಲ್ಲಂಗಡಿ ಹಣ್ಣು ದೊರೆತರೆ ಮತ್ತೊಂದೆಡೆ, ರೈತರು ಭರ್ಜರಿ ಲಾಭದಲ್ಲಿದ್ದಾರೆ. ಹೀಗಾಗಿ ದಲ್ಲಾಳಿಗಳು ರೈತರ ನಿರ್ಧಾರದಿಂದ ಅಕ್ಷರಶಃ ಕಂಗಾಲಾಗಿದ್ದಾರೆ.

ಗದಗ: ಸರ್ಕಾರಿ ರತಿ-ಕಾಮಣ್ಣ ಮೂರ್ತಿಗೆ 29 ಕೆಜಿ ಚಿನ್ನದಿಂದ ಶೃಂಗಾರ

ಗದಗ: ಸರ್ಕಾರಿ ರತಿ-ಕಾಮಣ್ಣ ಮೂರ್ತಿಗೆ 29 ಕೆಜಿ ಚಿನ್ನದಿಂದ ಶೃಂಗಾರ

ಅದು ಸರ್ಕಾರಿ ರತಿ-ಕಾಮಣ್ಣ ಅಂತಲೇ ಫೇಮಸ್. ಯುವಕ, ಯವತಿಯರಿಗೆ ಕಂಕಣ ಭಾಗ್ಯ, ಮಹಿಳೆಯರಿಗೆ ಸಂತಾನಭಾಗ್ಯ, ಬೇಡಿದವರಿಗೆ ಬಯಸಿದ ಭಾಗ್ಯ ಇಡೇರಿಸುವ ಸರ್ಕಾರಿ ರತಿ-ಕಾಮಣ್ಣ. ಅರೇ ಇದೇನಪ್ಪ ಸರ್ಕಾರ ಹೊಸ ಭಾಗ್ಯಗಳೇನಾದರೂ ಘೋಷಿಸಿದೆ ಅಂದುಕೊಳ್ಳಬೇಡಿ. ಇದು ಸರ್ಕಾರದ ಭಾಗ್ಯವಲ್ಲ.‌‌‌ ನಂಬಿದ ಭಕ್ತರಿಗೆ ರತಿ-ಕಾಮಣ್ಣ ನೀಡುವ ಭಾಗ್ಯಗಳು. ಈ ರತಿ-ಕಾಮಣ್ಣಗೆ ಕೆಜಿಗಟ್ಟಲೇ ಬಂಗಾರ ಹಾಕಿ ಶೃಂಗಾರ ಮಾಡ್ತಾರೆ. ಇಲ್ಲಿದೆ ಫೋಟೋಸ್​.

ಹೋಳಿ ಸಂಭ್ರಮದಲ್ಲಿ ಘೋರ ದುರಂತ: ಮೂವರ ಮನೆಗಳಲ್ಲಿ ಸೂತಕದ ಛಾಯೆ

ಹೋಳಿ ಸಂಭ್ರಮದಲ್ಲಿ ಘೋರ ದುರಂತ: ಮೂವರ ಮನೆಗಳಲ್ಲಿ ಸೂತಕದ ಛಾಯೆ

ಕರ್ನಾಟಕದಲ್ಲಿ ಇಂದು ಹೋಳಿ ಹಬ್ಬದ ಸಂಭ್ರಮ. ಹೀಗಾಗಿ ಕಲರ್​ ಕಲರ್​​ ಬಣ್ಣದೋಕಳಿಯಲ್ಲಿ ಜನರು ಮಿಂದೆದ್ದಿದ್ದಾರೆ. ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂತಸ ಪಟ್ಟಿದ್ದಾರೆ. ಆದರೆ ಇದೇ ಕಲರ್​​ ಫುಲ್​ ಹೋಳಿ ಹಬ್ಬದಂದು ಕೆಲ ಸಾವು ನೋವುಗಳು ಸಂಭವಿಸಿವೆ. ಸಂಭ್ರಮದ ಬದಲಾಗಿ ಸೂತಕದ ಛಾಯೆ ಆವರಿಸಿದೆ.

ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದವರಿಗೆ ಕಾದಿದೆ ಶಿಕ್ಷೆ: 23 ಜನರ ವಿರುದ್ಧ ಆರೋಪ ಸಾಬೀತು

ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದವರಿಗೆ ಕಾದಿದೆ ಶಿಕ್ಷೆ: 23 ಜನರ ವಿರುದ್ಧ ಆರೋಪ ಸಾಬೀತು

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ 2017ರಲ್ಲಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರ ವಿರುದ್ಧ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಈ ಘಟನೆಯಲ್ಲಿ 112 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ 112 ಜನರಲ್ಲಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿ ಇದ್ದಾನೆ. ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಇನ್ನೂ ನಿರ್ಧರಿಸಬೇಕಿದೆ.

Ka Vem Srinivas Death: ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾವೆಂಶ್ರೀ ನಿಧನ

Ka Vem Srinivas Death: ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾವೆಂಶ್ರೀ ನಿಧನ

Kalamangi Venkatagiriyappa Srinivas:ಗದಗದ ಪ್ರಸಿದ್ಧ ಕಲಾಪೋಷಕ ಕಾವೆಂಶ್ರೀ (ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್) ಅವರು ಮಾರ್ಚ್ 10 ರಂದು ನಿಧನರಾಗಿದ್ದಾರೆ. ಅವರು 25 ವರ್ಷಗಳ ಕಾಲ ಕಲಾಚೇತನ ಸಂಸ್ಥೆಯ ಮೂಲಕ ಕಲಾ ಸೇವೆ ಸಲ್ಲಿಸಿದ್ದರು. 2023 ರಲ್ಲಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅವರ ಕೆಲಸವನ್ನು ಶ್ಲಾಘಿಸಿದ್ದರು. ಅವರ ಅಗಲಿಕೆಯಿಂದ ಕಲಾಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವು: ಅಂಥ್ರಾಕ್ಸ್ ಸೊಂಕು ಶಂಕೆ

ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವು: ಅಂಥ್ರಾಕ್ಸ್ ಸೊಂಕು ಶಂಕೆ

ಗದಗ ಜಿಲ್ಲೆಯಲ್ಲಿ ಅನೇಕ ಕುರಿಗಳು ನಿಗೂಢ ಕಾಯಿಲೆಯಿಂದ ಸಾವನ್ನಪ್ಪುತ್ತಿವೆ. ಅರ್ಧ ಗಂಟೆಯಲ್ಲಿ 20 ಕ್ಕೂ ಹೆಚ್ಚು ಕುರಿಗಳು ಸತ್ತಿರುವ ಘಟನೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಪಶು ವೈದ್ಯರು ಅಂಥ್ರಾಕ್ಸ್ ಸೋಂಕಿನ ಶಂಕೆ ವ್ಯಕ್ತಪಡಿಸಿದ್ದು, ಕುರಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಕುರಿ ಸಾಕಣೆದಾರರು ಆತಂಕಗೊಂಡಿದ್ದಾರೆ.

ಬರ್ತ್​​ಡೇ ದಿನವೇ ಸೇಹಿತರ ದುರಂತ ಅಂತ್ಯ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು

ಬರ್ತ್​​ಡೇ ದಿನವೇ ಸೇಹಿತರ ದುರಂತ ಅಂತ್ಯ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಐವರ ಪೈಕಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಅಗ್ನಿಶಾಮಕ ದಳ ಮತ್ತು ಮೀನುಗಾರರು ಹುಡುಕಾಟ ಕಾರ್ಯ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ