AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವ ಕುಮಾರ್​ ಪಾಂಡ್ರೆ, ಗದಗ

Author - TV9 Kannada

sajeevakumar.pandre@tv9.com

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…

Read More
ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ

ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ

ಗದಗ ನಗರದ ಪುಟ್ಟರಾಜ್ ಗವಾಯಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಯ ಮೇಲೆ ಸಾರಿಗೆ ನೌಕರರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಸ್‌ ನಿಲ್ಲಿಸದ ಕಾರಣ ಆರಂಭವಾದ ವಾಗ್ವಾದವು ಹಲ್ಲೆಗೆ ತಿರುಗಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಿಸಿದರು, ತಪ್ಪಿತಸ್ಥ ನೌಕರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಇದರಿಂದ ಬಸ್ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ

ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡೆ ಸಂಪುಟ ಪುನಾರಚನೆ ಕೂಗು, ಮತ್ತೊಂದೆಡೆ ಇದೀಗ ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ ಬಂದಿದೆ.

ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ

ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ

ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರು ಕುರುಬ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಅವಮಾನಕಾರಿ ಪದಗಳನ್ನು ಬಳಸಿದ್ದರು. ಇದರಿಂದ ಕುರುಬ ಸಮುದಾಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿತ್ತು. ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದ ಪಾಟೀಲ್, ಸಾರ್ವಜನಿಕ ಒತ್ತಡಕ್ಕೆ ಮಣಿದು ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಡಂಬಳದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ರೈತರು ಆಯೋಜಿಸಿದ ಈ ಕ್ರೀಡೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸಿತು. ವಿವಿಧ ಜಿಲ್ಲೆಗಳಿಂದ ಬಂದ ಎತ್ತುಗಳು ಶರವೇಗದಲ್ಲಿ ಓಡಿ ಗಮನ ಸೆಳೆದವು. ಸಾವಿರಾರು ಜನ ಸೇರಿ ಕ್ರೀಡೆಗೆ ಹುಮ್ಮಸ್ಸು ತುಂಬಿದರು. ಎತ್ತುಗಳ ಮಿಂಚಿನ ಓಟದ ಝಲಕ್ ಇಲ್ಲಿದೆ ನೋಡಿ.

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ ಜಿಲ್ಲೆಯಲ್ಲಿ ತಾಪಮಾನ 38-40°C ಏರಿಕೆಯಾಗಿದ್ದು, ಬಿಸಿಲಿನ ಝಳಕ್ಕೆ ಸರ್ಕಾರಿ ನೌಕರರು ಹೈರಾಣಾಗಿದ್ದಾರೆ. ಬೇಸಿಗೆಯ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು, ಕೆಲಸದಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಲಸದ ಅವಧಿಯನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1:30 ರವರೆಗೆ ಬದಲಾಯಿಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ನೌಕರರು ಗಡುವು ನೀಡಿದ್ದಾರೆ. ಉತ್ತರ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಈಗಾಗಲೇ ಸಮಯ ಬದಲಾವಣೆ ಮಾಡಲಾಗಿದೆ.

ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ

ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ಭೀಕರ ಘಟನೆ ನಡೆದಿದೆ. ಮನೆ ಮುಂದೆ ಮಲಗಿದ್ದ ಆರು ಜನರ ಮೇಲೆ ಗ್ರಾಮದ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.

ಗದಗದಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಬಿಂದಾಸ್ ಎಂಟ್ರಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಗದಗದಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಬಿಂದಾಸ್ ಎಂಟ್ರಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಗದಗ ನಗರದ ಪುಟ್ಟರಾಜ್ ನಗರದಲ್ಲಿ ಮುಸುಕುಧಾರಿ ಕಳ್ಳರು ಅಟ್ಟಹಾಸ ಮೆರೆದಿದ್ದು, ಮನೆಯ ಬೀಗ ಮುರಿದು 70 ಗ್ರಾಂ ಚಿನ್ನ ದೋಚಿದ್ದಾರೆ. ಮಧ್ಯರಾತ್ರಿ ಸಮಯದಲ್ಲಿ ಮಾರಕಾಸ್ತ್ರ ಹಿಡಿದು ಗಲ್ಲಿಗಳಲ್ಲಿ ಸುತ್ತಾಡುತ್ತಿರುವ ಕಳ್ಳರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಭದ್ರತೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ.

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!

ಗದಗದ ಚಂದ್ರು ಕುರಿ ಕೊಲೆ ಪ್ರಕರಣವನ್ನು 48 ಗಂಟೆಗಳಲ್ಲಿ ಭೇದಿಸಿರುವ ಪೊಲೀಸರು, ಪ್ರೇಯಸಿ ರತ್ನಾ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ರತ್ನಾಳ ಪತಿ ಮತ್ತು ಸಹೋದರ ಸೇರಿ ಚಂದ್ರುನನ್ನು ಬ್ರಿಡ್ಜ್ ಕೆಳಗೆ ಕರೆದೊಯ್ದು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಕ್ಕೆ ಶವವನ್ನು ಸುಟ್ಟು ಹಾಕಿದ್ದರು ಎಂಬುದು ಇದೀಗ ಬಯಲಾಗಿದೆ.

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಮತ್ತು ಶಿರೋಳ ಗ್ರಾಮಗಳಲ್ಲಿ ಅಕ್ರಮ ಮರಳು ದಂಧೆ ಮಿತಿಮೀರಿದೆ. ಸಕ್ರಮದ ಪರವಾನಗಿ ಬಳಸಿ ಓವರ್‌ಲೋಡ್ ಸಾಗಾಟದ ಮೂಲಕ ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಲಾಗುತ್ತಿದೆ. ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರು ಕಿಡಿಕಾರಿದ್ದು, ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತು ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?

ಕಾಂಗ್ರೆಸ್​​ನ ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ ಸಿದ್ದರಾಮಯ್ಯ ವಿರದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ.

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಗದಗದ ಹುಯಿಲಗೋಳದಲ್ಲಿ ಯುವಕನೋರ್ವನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಎದುರು ಮನೆಯವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಹಳೆಯ ದ್ವೇಷವೇ ಕೃತ್ಯಕ್ಕೆ ಕಾರಣ ಎಂದು ಹೇಳಿದ್ದಾರೆ. ಮಗನ ಸಾವಿಗೆ ಸೇಡು ತೀರಿಸಿಕೊಳ್ಳುವುದಾಗಿ ಯುವಕನ ತಂದೆ ಪ್ರತಿಜ್ಞೆ ಮಾಡಿದ್ದು, ಪೊಲೀಸರ ತನಿಖೆಯಿಂದ ಘಟನೆಗೆ ಕಾರಣ ಏನೆಂಬ ಅಸಲಿ ಸತ್ಯ ಹೊರಬೀಳಬೇಕಿದೆ.

ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್