AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಹಿರಿಯ ವರದಿಗಾರ - TV9 Kannada

sajeevakumar.pandre@tv9.com

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…

Read More
ಗದಗ ತಹಶೀಲ್ದಾರ ಕಚೇರಿಯಲ್ಲಿ ಸದಾ ಸರ್ವರ್ ಡೌನ್: ದಾಖಲೆ ಪಡೆಯಲು ದಿನವಿಡೀ ಸರ್ಕಾರಿ ಕಚೇರಿಯಲ್ಲಿ ‘ಕುಸ್ತಿ’!

ಗದಗ ತಹಶೀಲ್ದಾರ ಕಚೇರಿಯಲ್ಲಿ ಸದಾ ಸರ್ವರ್ ಡೌನ್: ದಾಖಲೆ ಪಡೆಯಲು ದಿನವಿಡೀ ಸರ್ಕಾರಿ ಕಚೇರಿಯಲ್ಲಿ ‘ಕುಸ್ತಿ’!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಹಶೀಲ್ದಾರ್ ಕಚೇರಿಯಲ್ಲಿ ನಿರಂತರ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದು, ಜಾತಿ-ಆದಾಯ ಪ್ರಮಾಣಪತ್ರ ಹಾಗೂ ಉತಾರ ಪಡೆಯಲು ದಿನವಿಡೀ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಇದರಿಂದ ಬೇಸತ್ತ ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಿತಿಮೀರಿದ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: 12 ಲಕ್ಷ ರೂ. ಸಾಲಕ್ಕೆ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಆರೋಪ!

ಮಿತಿಮೀರಿದ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: 12 ಲಕ್ಷ ರೂ. ಸಾಲಕ್ಕೆ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಆರೋಪ!

ಗದಗ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ ಮಿತಿಮೀರಿದ್ದು, 12 ಲಕ್ಷ ರೂ. ಸಾಲಕ್ಕೆ 1.5 ಕೋಟಿ ರೂ. ಮೌಲ್ಯದ 12 ಪ್ಲಾಟ್‌ಗಳನ್ನು ಕಬಳಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಬೆಟಗೇರಿ ಠಾಣೆಯಲ್ಲಿ ಏಳು ಜನರ ವಿರುದ್ಧ ದೂರು ದಾಖಲಾಗಿದ್ದರೂ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿಲ್ಲ ಎಂದು ಸಂತ್ರಸ್ತ ತಾಯಿ ಸುರೇಖಾ ಮತ್ತು ಮಗಳು ಅಂಬಿಕಾ ಕಬಾಡಿ ಕಣ್ಣೀರಿಡುತ್ತ ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ.

ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಸಂಗತಿ ಪತ್ತೆ

ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಸಂಗತಿ ಪತ್ತೆ

ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೂವತ್ತಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಗದಗದಲ್ಲಿ ಬಂಧಿಸಲಾಗಿದೆ. ವಿಜಯಪುರ ಮೂಲದ ಈರಣ್ಣ ಬಡಿಗೇರ್ ಇನ್‌ಸ್ಟಾಗ್ರಾಂ ಮೂಲಕ ವಂಚನೆ ಎಸಗಿದ್ದು, ಆತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡದ ತಾಲೂಕು ಕಚೇರಿ

ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡದ ತಾಲೂಕು ಕಚೇರಿ

ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ ಒಂಬತ್ತು ವರ್ಷಗಳೇ ಕಳೆದರೂ, ಅಗತ್ಯ ಮೂಲಸೌಕರ್ಯಗಳು ಮತ್ತು ಸರ್ಕಾರಿ ಕಚೇರಿಗಳ ಕೊರತೆಯಿಂದ ಜನರು ಪರದಾಡುತ್ತಿದ್ದಾರೆ. ತಹಶೀಲ್ದಾರ್ ಕಚೇರಿಯೂ ಹದಗೆಟ್ಟ ಸ್ಥಿತಿಯಲ್ಲಿದ್ದು, ಅಧಿಕಾರಿಗಳ ಲಭ್ಯತೆಯೂ ಕಡಿಮೆಯಾಗಿದೆ. ಮಿನಿ ವಿಧಾನಸೌಧ ನಿರ್ಮಾಣದ ಬೇಡಿಕೆ ಈಡೇರದಿದ್ದಲ್ಲಿ ಮತ್ತೆ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಕಳುವಾಗಿದ್ದ ಬಂಗಾರ, ಹಣ ರಿಕವರಿ ಮಾಡಿ ಪೊಲೀಸರಿಂದಲೇ ಲೂಟಿ?: ಖಾಕಿ ವಿರುದ್ಧವೇ ಗಂಭೀರ ಆರೋಪ!

ಕಳುವಾಗಿದ್ದ ಬಂಗಾರ, ಹಣ ರಿಕವರಿ ಮಾಡಿ ಪೊಲೀಸರಿಂದಲೇ ಲೂಟಿ?: ಖಾಕಿ ವಿರುದ್ಧವೇ ಗಂಭೀರ ಆರೋಪ!

ಗದಗದಲ್ಲಿ ನಡೆದ ಕೋಟ್ಯಂತರ ರೂಪಾಯಿ ಚಿನ್ನ, ಬೆಳ್ಳಿ, ನಗದು ಕಳ್ಳತನ ಪ್ರಕರಣದಲ್ಲಿ, ಸಿಪಿಐ ಶಿವಯೋಗಿ ಅವರು ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡರೂ ವಾಪಸ್ ನೀಡಿಲ್ಲ ಎಂದು ತುಳಜಾಬಾಯಿ ಮುಳುಗುಂದ ಆರೋಪಿಸಿದ್ದಾರೆ. ಎರಡು ವರ್ಷಗಳಿಂದ ನ್ಯಾಯ ಸಿಗದೆ, ಪೊಲೀಸ್ ಇಲಾಖೆಯ ನಡವಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತುಳಜಾಬಾಯಿ ಮುಳುಗುಂದ ಅವರು ಸಾರ್ವಜನಿಕವಾಗಿ ಹಾಲಿ ಗದಗ ಶಹರ ಠಾಣೆ ಸಿಪಿಐ ಆಗಿರುವ ಶಿವಯೋಗಿ ಅವರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭೀಕರ ಬರಕ್ಕೆ ಬೆಳೆಗಳು ಸರ್ವನಾಶ, ಕಂಗಾಲಾದ ರೈತ: ಬರಪೀಡಿತ ತಾಲೂಕು ಘೋಷಣೆಯಲ್ಲೂ ತಾರತಮ್ಯದ ಆರೋಪ

ಭೀಕರ ಬರಕ್ಕೆ ಬೆಳೆಗಳು ಸರ್ವನಾಶ, ಕಂಗಾಲಾದ ರೈತ: ಬರಪೀಡಿತ ತಾಲೂಕು ಘೋಷಣೆಯಲ್ಲೂ ತಾರತಮ್ಯದ ಆರೋಪ

Karnataka Drought Crisis: ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಬರದ ಪರಿಸ್ಥಿತಿ ತೀವ್ರವಾಗಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಗಳು ಒಣಗಿವೆ. 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದರೂ ಹಲವು ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ರೈತರ ಆಕ್ರೋಶ ವ್ಯಕ್ತವಾಗಿದೆ. ಈಮಧ್ಯೆ, ಸಿಎಂ ಡಿಕೆ ಶಿವಕುಮಾರ್ ಗದಗದಲ್ಲಿ ಬರ ಅಧ್ಯಯನ ನಡೆಸಿದ್ದಾರೆ.

ಗದಗ: ಒಂದೇ ವೇದಿಕೆಯಲ್ಲಿ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ; ಹೊಸ ಬದುಕಿಗೆ ಕಾಲಿಟ್ಟ 18 ನವಜೋಡಿ

ಗದಗ: ಒಂದೇ ವೇದಿಕೆಯಲ್ಲಿ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ; ಹೊಸ ಬದುಕಿಗೆ ಕಾಲಿಟ್ಟ 18 ನವಜೋಡಿ

Gadag Mass Marriage: ಗದಗದಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವವು ಕೋಮು ಸೌಹಾರ್ದಕ್ಕೆ ಅಡಿಪಾಯ ಹಾಕಿದೆ. ಧರ್ಮದ ಹೆಸರಿನಲ್ಲಿ ಘರ್ಷಣೆಗಳು ಹೆಚ್ಚುತ್ತಿರುವ ಈ ಕಾಲದಲ್ಲಿ, ಹಿಂದೂ ಮತ್ತು ಮುಸ್ಲಿಂ ಧರ್ಮಗುರುಗಳ ಸಾನಿಧ್ಯದಲ್ಲಿ 18 ನವಜೋಡಿಗಳು ಹೊಸ ಬಾಳಿಗೆ ಕಾಲಿಟ್ಟರು. ಇದು ಕೇವಲ ಮದುವೆಯಲ್ಲ, ಮಾನವೀಯತೆ ಮತ್ತು ಸಹಬಾಳ್ವೆಯ ಮಹತ್ವವನ್ನು ಸಾರುವ ಅನನ್ಯ ಸಂದೇಶವಾಗಿದೆ.

5 ತಿಂಗಳಿಂದ ವೃದ್ಧಾಪ್ಯ ವೇತನಕ್ಕೆ ಬ್ರೇಕ್; ಊಟ, ಔಷಧಿಗೂ ಹಣವಿಲ್ಲದೆ ಹಿರಿ ಜೀವಗಳು ಕಂಗಾಲು

5 ತಿಂಗಳಿಂದ ವೃದ್ಧಾಪ್ಯ ವೇತನಕ್ಕೆ ಬ್ರೇಕ್; ಊಟ, ಔಷಧಿಗೂ ಹಣವಿಲ್ಲದೆ ಹಿರಿ ಜೀವಗಳು ಕಂಗಾಲು

Gadag News: ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಐದು ತಿಂಗಳಿಂದ ವೃದ್ಧಾಪ್ಯ ವೇತನ ಸಿಗದೆ ಸಾವಿರಾರು ವೃದ್ಧರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆಹಾರ, ಔಷಧಕ್ಕೂ ಹಣವಿಲ್ಲದೆ ಕಚೇರಿಗಳಿಗೆ ಅಲೆದಾಡುತ್ತಿರುವ ಹಿರಿಯ ಜೀವಗಳು ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಬಾಕಿ ವೇತನ ಪಾವತಿಸಿ, ಹಿರಿಯರಿಗೆ ಆಸರೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ!

ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ!

ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೂವತ್ತಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಗದಗದಲ್ಲಿ ಬಂಧಿಸಲಾಗಿದೆ. ವಿಜಯಪುರ ಮೂಲದ ಈರಣ್ಣ ಬಡಿಗೇರ್ ಇನ್‌ಸ್ಟಾಗ್ರಾಂ ಮೂಲಕ ವಂಚನೆ ಎಸಗಿದ್ದು, ಆತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Tomato Price: ಟೊಮೆಟೋ ದರ ಕುಸಿತ: ಗದಗದಲ್ಲಿ ರೈತರ ಗೋಳು ಕೇಳುವವರೇ ಇಲ್ಲ

Tomato Price: ಟೊಮೆಟೋ ದರ ಕುಸಿತ: ಗದಗದಲ್ಲಿ ರೈತರ ಗೋಳು ಕೇಳುವವರೇ ಇಲ್ಲ

Tomato Price in Karnataka: ಗದಗ ಜಿಲ್ಲೆಯ ಲಕ್ಷ್ಮೇಶ್ವರದ ರೈತ ಚನ್ನಬಸವನಗೌಡ ಟೊಮ್ಯಾಟೋ ಬೆಳೆಯಲು ₹30-40 ಸಾವಿರ ಹೂಡಿಕೆ ಮಾಡಿದ್ದರು. ಉತ್ತಮ ಬೆಳೆ ಬಂದರೂ, ಮಾರುಕಟ್ಟೆಯಲ್ಲಿ ಒಂದು ಬಾಕ್ಸ್‌ಗೆ ಕೇವಲ ₹30-40 ದೊರೆಯುತ್ತಿದ್ದು, ಸಾರಿಗೆ ವೆಚ್ಚವೂ ದುಬಾರಿಯಾಗಿದೆ. ಇದು ರೈತರನ್ನು ತೀವ್ರ ಸಂಕಷ್ಟಕ್ಕೆ ದೂಡಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬೆಂಬಲ ಬೆಲೆ ನೀಡಲು ಆಗ್ರಹಿಸಲಾಗಿದೆ.

ಟಿವಿ9 ರಿಪೋರ್ಟ್ ಇಂಪ್ಯಾಕ್ಟ್: ಗದಗದಲ್ಲಿ 5 ದಿನಗಳಿಂದ ಬಂದ್ ಆಗಿದ್ದ ಸರ್ಕಾರಿ ಶಾಲೆ ಓಪನ್!

ಟಿವಿ9 ರಿಪೋರ್ಟ್ ಇಂಪ್ಯಾಕ್ಟ್: ಗದಗದಲ್ಲಿ 5 ದಿನಗಳಿಂದ ಬಂದ್ ಆಗಿದ್ದ ಸರ್ಕಾರಿ ಶಾಲೆ ಓಪನ್!

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಕೆಂಚಲಾಪೂರ ಸರ್ಕಾರಿ ಶಾಲೆ ಕಳೆದ ಐದು ದಿನಗಳಿಂದ ಬಂದ್ ಆಗಿದ್ದ ಪ್ರಕರಣದಲ್ಲಿ ಟಿವಿ ವರದಿ ಬಿತ್ತರವಾದ ಬೆನ್ನಲ್ಲೇ ಶಾಲೆ ಪುನಃ ಆರಂಭಗೊಂಡಿದೆ. ಇಂದು ಐದು ಮಕ್ಕಳು ಶಾಲೆಗೆ ಬಂದಿದ್ದು, ಶಿಕ್ಷಣ ಇಲಾಖೆಯ ಯಡವಟ್ಟು ಹಾಗೂ ಅಧಿಕಾರಿಗಳ ಸುಳ್ಳು ಕಥೆಗಳ ವಿರುದ್ಧ ಪೋಷಕರು ಮತ್ತು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?: ಗದಗದ ಕೆಂಚಲಾಪೂರದಲ್ಲಿ 5 ದಿನಗಳಿಂದ ಸ್ಕೂಲ್​​ ಕ್ಲೋಸ್​​!

ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?: ಗದಗದ ಕೆಂಚಲಾಪೂರದಲ್ಲಿ 5 ದಿನಗಳಿಂದ ಸ್ಕೂಲ್​​ ಕ್ಲೋಸ್​​!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಕೆಂಚಲಾಪೂರದಲ್ಲಿ ಕಡಿಮೆ ವಿದ್ಯಾರ್ಥಿಗಳ ಸಂಖ್ಯೆ ಕಾರಣ ನೀಡಿ ಸರ್ಕಾರಿ ಕನ್ನಡ ಶಾಲೆಗೆ ಏಕಾಏಕಿ ಬೀಗ ಜಡಿಯಲಾಗಿದೆ. ಪೋಷಕರು ಮತ್ತು ಎಸ್‌ಡಿಎಂಸಿ ಗಮನಕ್ಕೆ ತಾರದೆ ಶಾಲೆ ಮುಚ್ಚಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ಮಕ್ಕಳ ಸಂಖ್ಯೆ ಇಳಿದಿದೆ ಎಂದು ಆರೋಪಿಸಿ, ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.