ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಗದಗ ಜಿಲ್ಲೆಯ ಜೀವನಾಡಿ ತುಂಗಭದ್ರಾ ನದಿಯು ಅಂತರಗಂಗೆಯಿಂದ ಕಲುಷಿತಗೊಂಡಿದೆ. ಮುಂಡರಗಿ ತಾಲೂಕಿನ ಹಮ್ಮಿಗಿ ಬಳಿ ಬೆಳೆದಿರುವ ಈ ಕಳೆ, ಗದಗ-ಬೆಟಗೇರಿ ಸೇರಿದಂತೆ ನೂರಾರು ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆಗೆ ಧಕ್ಕೆ ಉಂಟುಮಾಡಿದೆ. ಇದು ಜಲಚರಗಳ ಬದುಕಿಗೂ ಆತಂಕ ತಂದಿದ್ದು, ಕೂಡಲೇ ನದಿ ಸ್ವಚ್ಛಗೊಳಿಸಲು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
- Sanjeev Pandre
- Updated on: Aug 24, 2026
- 2:27 pm
ಕಾರ್ಮಿಕರ ಜೀವಕ್ಕಿಲ್ವಾ ಬೆಲೆ?: ಸರ್ಕಾರಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲೇ ನಿಯಮ ಗಾಳಿಗೆ ತೂರಿ ಕೆಲಸ
ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಾಮಗಾರಿಯಲ್ಲಿ ಕಾರ್ಮಿಕರ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಲಾಗಿರುವ ಆರೋಪ ಕೇಳಿಬಂದಿದೆ. ಹೆಲ್ಮೆಟ್, ಸೇಫ್ಟಿ ಬೆಲ್ಟ್ ಇಲ್ಲದೆ ಅಪಾಯಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಜೀವ ಕೈಯಲ್ಲಿ ಹಿಡಿದು ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಮೊದಲು ರಕ್ಷಣೆ ಕೊಡಿ. ಆಮೇಲೆ ಕಟ್ಟಡ ಕಟ್ಟಿಸಿ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
- Sanjeev Pandre
- Updated on: Aug 23, 2026
- 11:03 am
Gadag: ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಗದಗ ಜಿಲ್ಲೆಯ ಹರ್ತಿ ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಆಧಾರ್, ವೋಟರ್ ಐಡಿ ಪಶ್ಚಿಮ ಬಂಗಾಳದ್ದಾಗಿದ್ದರೂ, ಅವರ ಮೂಲ ಬಾಂಗ್ಲಾದೇಶದವರು ಎಂದು ಜನನ ಪ್ರಮಾಣಪತ್ರಗಳ ಮೂಲಕ ಖಚಿತಪಡಿಸಲಾಗಿದೆ. ಕಾನೂನು ಪ್ರಕ್ರಿಯೆಗಳ ಬಳಿಕ ಅವರನ್ನು ವಾಪಸ್ ಕಳುಹಿಸಲು ಸಿದ್ಧತೆ ನಡೆದಿದೆ.
- Sanjeev Pandre
- Updated on: Aug 22, 2026
- 1:52 pm
ಹೊಳೆ ಆಲೂರು – ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ; 20 ಅಡಿ ಆಳಕ್ಕೆ ಬೀಳುವ ಭೀತಿಯಲ್ಲಿ ಗ್ರಾಮಸ್ಥರ ನಿತ್ಯ ಸಂಚಾರ
ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು-ಅಮರಗೋಳ ರಸ್ತೆ ಅತ್ಯಂತ ದುಸ್ಥಿತಿಯಲ್ಲಿದೆ. ಮಲಪ್ರಭಾ ನದಿಯ ಪ್ರವಾಹದಿಂದ ಪ್ರತಿ ವರ್ಷವೂ ಹದಗೆಡುವ ಈ ರಸ್ತೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಧಕ್ಕೆಯಾಗಿದ್ದು, ಜನರು ಜೀವಭಯದಲ್ಲೇ ನಿತ್ಯ ಸಂಚಾರ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Sanjeev Pandre
- Updated on: Aug 20, 2026
- 2:34 pm
ಗದಗನ ಐತಿಹಾಸಿಕ ಭೀಷ್ಮ ಕೆರೆಗೆ ಕಲುಷಿತ ನೀರು: ಮೀನುಗಳ ಮಾರಣಹೋಮ; ಕೆಟ್ಟ ವಾಸನೆಯಿಂದ ಪ್ರವಾಸಿಗರು ಪರದಾಟ
Gadag Bhishma Kere pollution: ಗದಗನ ಐತಿಹಾಸಿಕ ಭೀಷ್ಮ ಕೆರೆಗೆ ಚರಂಡಿ ನೀರು ಸೇರಿ ಸಂಪೂರ್ಣ ಕಲುಷಿತಗೊಂಡಿದೆ. ಬೃಹತ್ ಬಸವಣ್ಣನ ಮೂರ್ತಿ ಮತ್ತು ಬೋಟಿಂಗ್ನಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಈ ಕೆರೆಯಲ್ಲಿ ಈಗ ನೂರಾರು ಮೀನುಗಳು ಸಾವನ್ನಪ್ಪುತ್ತಿವೆ. ದುರ್ವಾಸನೆಯಿಂದ ಪ್ರವಾಸಿಗರ ಸಂಖ್ಯೆ ಕೂಡ ಕಡಿಮೆ ಆಗುತ್ತಿದೆ.
- Sanjeev Pandre
- Updated on: Aug 18, 2026
- 6:34 pm
ಅನುದಾನ ಕೊರತೆಯೋ, ಅಧಿಕಾರಿಗಳ ಬೇಜವಾಬ್ದಾರಿಯೋ? ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಖಾಲಿ ಖಾಲಿ
Gadag hospital medicine shortage: ಗದಗ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅದರಲ್ಲೂ ರೋಣ ತಾಲೂಕಿನ ಹೊಳೆಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಔಷಧಗಳ ತೀವ್ರ ಕೊರತೆ ಎದುರಾಗಿದೆ. ಕಳೆದ ಮೂರು ತಿಂಗಳಿಂದ ಅಗತ್ಯ ಔಷಧಿಗಳು ಸಿಗದೆ ಬಡ ರೋಗಿಗಳು ತೀವ್ರವಾಗಿ ಪರದಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಔಷಧಿ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
- Sanjeev Pandre
- Updated on: Aug 16, 2026
- 4:47 pm
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು; 7 ಜನರ ಬಂಧನ
Gadag News: ಗದಗಿನಲ್ಲಿ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅತ್ಯಾಚಾರವೆಸಗಿದವರು ಇಬ್ಬರಲ್ಲ ಬದಲಿಗೆ ನಾಲ್ವರು ಎನ್ನುವ ರಹಸ್ಯ ಬಯಲಾಗಿದೆ. ಸದ್ಯ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಸೇರಿದಂತೆ ಒಟ್ಟು 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
- Sanjeev Pandre
- Updated on: Aug 15, 2026
- 6:19 pm
ಎರಟು ದಶಕ ಕಳೆದರೂ ಸಿಗದ ಪರಿಹಾರ: ಗದಗ ಡಿಸಿ ಕಾರನ್ನೇ ಕೊಂಡೊಯ್ದ ರೈತರು
Gadag DC Car Seized: ಗದಗ ಜಿಲ್ಲೆಯ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತರಿಗೆ ಎರಡು ದಶಕಗಳಿಂದ ಪರಿಹಾರ ಸಿಕ್ಕಿಲ್ಲ. ಇದರಿಂದ ನೊಂದ ರೈತರು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯವು ಜಿಲ್ಲಾಧಿಕಾರಿಗಳ ಕಾರನ್ನು ಜಪ್ತಿ ಮಾಡಲು ಆದೇಶಿಸಿದೆ. ಆ ಬೆನ್ನಲ್ಲೇ ರೈತರು ಡಿಸಿ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ.
- Sanjeev Pandre
- Updated on: Aug 14, 2026
- 8:50 pm
Gadag Government Hostel Raid: ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
ಜಿಲ್ಲೆಯ ಸರ್ಕಾರಿ ಹಾಸ್ಟೆಲ್ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದ್ದು, ನೂರಾರು ಬಡ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದರು. ಟಿವಿ9 ಕನ್ನಡ ವಾಹಿನಿಯು ಈ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಬೆನ್ನಲ್ಲೇ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಗದಗ ನಗರದ ಸೂರ್ಯ ನಗರದಲ್ಲಿರುವ ಈ ಸರ್ಕಾರಿ ಹಾಸ್ಟೆಲ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- Sanjeev Pandre
- Updated on: Aug 8, 2026
- 12:50 pm
ಗದಗ: ಹುಳು ಬಿದ್ದ ಆಹಾರ ಸರಬರಾಜು; ರಕ್ತ ಹೀರುವ ತಿಗಣೆ ಕಾಟಕ್ಕೆ ವಿದ್ಯಾರ್ಥಿಗಳು ವಿಲವಿಲ
ಗದಗ ಸೂರ್ಯ ನಗರದ ಸರ್ಕಾರಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ತೀವ್ರ ಅವ್ಯವಸ್ಥೆ ಎದುರಿಸುತ್ತಿದ್ದಾರೆ. ತಿಗಣೆಗಳ ಕಾಟ, ಹುಳು ಬಿದ್ದ ಕಳಪೆ ಆಹಾರ ಹಾಗೂ ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಾಯುಕ್ತರ ಭೇಟಿ ವೇಳೆ ಮಾತ್ರ ನಾಟಕೀಯ ಸ್ವಚ್ಛತೆ ತೋರುವ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಮೂಲಭೂತ ಸೌಕರ್ಯಗಳನ್ನು ಸರಿಪಡಿಸಲು ಆಗ್ರಹಿಸಿದ್ದಾರೆ.
- Sanjeev Pandre
- Updated on: Aug 7, 2026
- 11:17 am
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ಲಕ್ಷಾಂತರ ರೂ. ಮೌಲ್ಯದ ಕಂಪ್ಯೂಟರ್, AC ಮಾಯ: ಅಧಿಕಾರಿಗಳೇ ಲೂಟಿ ಮಾಡಿದ್ರಾ?
ಗದಗ ಸೂರ್ಯ ನಗರದ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಿಂದ ಲಕ್ಷಾಂತರ ಮೌಲ್ಯದ 20ಕ್ಕೂ ಹೆಚ್ಚು ಕಂಪ್ಯೂಟರ್ಗಳು ಮತ್ತು 6 ACಗಳು ನಾಪತ್ತೆಯಾಗಿವೆ. ಅಧಿಕಾರಿಗಳೇ ಇವುಗಳನ್ನು ಲೂಟಿ ಮಾಡಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಬಡ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕೆ ತೀವ್ರ ಅಡಚಣೆಯಾಗಿದೆ. ಕೂಡಲೇ ತನಿಖೆ ನಡೆಸಿ, ಸ್ವತ್ತುಗಳನ್ನು ಮರಳಿ ತರುವಂತೆ ಆಗ್ರಹಿಸಲಾಗಿದೆ.
- Sanjeev Pandre
- Updated on: Aug 6, 2026
- 7:55 am
‘ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ; ಕಾಂಗ್ರೆಸ್ನ ಒಂದು ದಂಡೇ ಬಿಜೆಪಿ ಸೇರಲಿದೆ’: ಮುರುಗೇಶ್ ನಿರಾಣಿ
ಸದ್ಯ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನಿರ್ಣಾಯಕ ಘಟ್ಟ ತಲುಪಿದೆ. ಹೀಗಿರುವಾಗ ಸಚಿವ ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ, ರಾಜ್ಯ ಕಾಂಗ್ರೆಸ್ನಲ್ಲಿ ಭಿನ್ನಮತದ ಬಿರುಗಾಳಿ ಏಳಲಿದೆ. ಅಸಮಾಧಾನಿತರ ಕಾಂಗ್ರೆಸ್ ತಂಡ ಬಿಜೆಪಿಗೆ ಬರಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
- Sanjeev Pandre
- Updated on: Aug 1, 2026
- 7:55 pm