ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
ನೀರಿಲ್ಲಂತ ಮನೀಗೆ ಬೀಗರು ಬರುತ್ತಿಲ್ಲರಿ, ಗದಗ-ಬೆಟಗೇರಿ ಮಹಿಳೆಯರ ಅಳಲು
ಗದಗ-ಬೆಟಗೇರಿ ಅವಳಿ ನಗರದಲ್ಲಿ ಎರಡು ತಿಂಗಳಿಂದ ನೀರಿನ ತೀವ್ರ ಕೊರತೆ ಉಂಟಾಗಿದೆ. ನಗರಸಭೆಯಿಂದ ನೀರು ಪೂರೈಕೆ ನಿಂತಿದ್ದು, ರೊಚ್ಚಿಗೆದ್ದ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮುಂದಿನ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ.
- Sanjeev Pandre
- Updated on: Apr 27, 2025
- 3:43 pm
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?
ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಓರ್ವ ವ್ಯಕ್ತಿ 25 ಲಕ್ಷ ರೂ ನೀಡಿ ಯಾಮಾರಿರುವಂತಹ ಘಟನೆ ಗದಗಿನಲ್ಲಿ ನಡೆದಿದೆ. ಈ ವಿಚಾರವಾಗಿ ದೂರು ನೀಡಲು ಹೋದ ವ್ಯಕ್ತಿಗೆ ರೋಣ ಸಿಪಿಐ ಬೆದರಿಕೆ ಹಾಕಿ 15 ಲಕ್ಷ ರೂ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.
- Sanjeev Pandre
- Updated on: Apr 27, 2025
- 11:32 am
ಗದಗ: ಮಾಜಿ ಪ್ರೇಮಿಯಿಂದ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ
ಗದಗ ತಾಲೂಕಿನ ಅಸುಂಡಿ ಗ್ರಾಮದ 29 ವರ್ಷದ ಯುವತಿ ಮದುವೆಗೆ ಕೆಲವೇ ದಿನಗಳ ಮುನ್ನ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಹಳೆ ಪ್ರೇಮಿಯಿಂದ ಬ್ಲ್ಯಾಕ್ಮೇಲ್ ಆರೋಪ ಕೇಳಿಬಂದಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಮಗಳನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕಿದ್ದಾರೆ.
- Sanjeev Pandre
- Updated on: Apr 21, 2025
- 2:26 pm
ಕಪ್ಪಗಿದ್ದೀಯಾ ಅಂತ ಅತ್ತೆ, ಭಾವನಿಂದ ಸೂಸೆಗೆ ಕಿರುಕುಳ: ಮನನೊಂದು ನವವಿವಾಹಿತೆ ಆತ್ಮಹತ್ಯೆ
ಗದಗಿನಲ್ಲಿ ನವವಿವಾಹಿತೆಯೊಬ್ಬರು ತನ್ನ ಅತ್ತೆ ಮತ್ತು ಭಾವನ ವರ್ಣಭೇದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರುವಂತಹ ಘಟನೆ ನಡೆದಿದೆ. ಮದುವೆಯಾದ ಕೇವಲ ನಾಲ್ಕು ತಿಂಗಳಲ್ಲಿ ಈ ದುರ್ಘಟನೆ ಸಂಭವಿಸಿದೆ. ಸದ್ಯ ಅತ್ತೆ ಮತ್ತು ಭಾವನನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳ ಕುಟುಂಬಸ್ಥರು ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ.
- Sanjeev Pandre
- Updated on: Apr 19, 2025
- 3:06 pm
ಮಗಳ ಮೇಲೆ ಲೈಂಗಿಕ ದಾಹ ತೀರಿಸಿಕೊಂಡ ಪಾಪಿ ಅಪ್ಪ: ಗರ್ಭಿಣಿಯಾದ 16 ವರ್ಷದ ಬಾಲಕಿ
ತಂದೆ ಮಗಳ ಸಂಬಂಧ ಎನ್ನುವಂತಹದ್ದು ಒಂದು ಪವಿತ್ರವಾದ ಬಂಧ. ಆದ್ರೆ ಇಲ್ಲೊಬ್ಬ ತಂದೆ ಮಗಳ ಮೇಲೆಯೇ ಅತ್ಯಾಚಾರ ಸಗಿ ನೀಚ ಕೃತ್ಯ ಎಸಗಿದ್ದಾನೆ. ಹೌದು...ಯುವತಿ ತನ್ನ ತಂದೆಯೇ ಮಗಳ ಮೇಲೆ ತನ್ನ ಕಾಮದ ತೀಟೆ ತೀರಿಸಿಕೊಂಡು ಅಪ್ಪನ ಎನ್ನುವ ಪದಕ್ಕೆ ಕಳಂಕ ತರುವಂತಹ ಕೆಲಸ ಮಾಡಿದ್ದಾನೆ. ಅಪ್ಪನ ವಿಕೃತ ಕಾಮಕ್ಕೆ ಇದೀಗ ಮಗಳು ಗರ್ಭಿಣಿಯಾಗಿದ್ದಾಳೆ.
- Sanjeev Pandre
- Updated on: Apr 9, 2025
- 9:24 pm
Tomato Price: ಏಕಾಏಕಿ ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು, ಸರ್ಕಾರ, ಎಪಿಎಂಸಿ ಅಧಿಕಾರಿಗಳ ವಿರುದ್ಧ ಕಿಡಿ
ಕರ್ನಾಟಕ ಟೊಮೆಟೊ ದರ ಕುಸಿತ: ಗದಗದ ಎಪಿಎಂಸಿಯಲ್ಲಿ ಟೊಮೆಟೊ ದರ ಭಾರೀ ಕುಸಿತದಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೆಜಿ ಟ್ರೇ ಕೇವಲ 50 ರೂ.ಗೆ ಮಾರಾಟವಾಗುತ್ತಿದೆ. ಬೆಳೆಗೆ ಹೆಚ್ಚಿನ ವೆಚ್ಚವಾಗಿದ್ದರೂ, ಕಡಿಮೆ ದರದಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಬದನೆಕಾಯಿ ಮತ್ತು ನುಗ್ಗೆಕಾಯಿ ದರಗಳೂ ಕುಸಿದಿವೆ. ಸರ್ಕಾರದ ವಿರುದ್ಧ ರೈತರು ಕಿಡಿಕಾರಿದ್ದಾರೆ.
- Sanjeev Pandre
- Updated on: Apr 7, 2025
- 10:42 am
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದ ಬಳಿ ಮೋಸ್ಟ್ ವಾಟೆಂಡ್ ನಟೋರಿಯಸ್ ದರೋಡೆಕೋರನ ಮೇಲೆ ಗದಗ ಪೊಲೀಸರಿಂದ ಫೈರಿಂಗ್ ಮಾಡಿ, ಬಂಧಿಸಿರುವಂತಹ ಘಟನೆ ನಡೆದಿದೆ. ತಪ್ಪುಸಿಕೊಂಡು ಓಡಾಡುತ್ತಿದ್ದವನನ್ನು ನಿನ್ನೆ ಬಂಧಿಸಿ ಠಾಣೆಗೆ ಕರೆದುಕೊಂಡು ಬರುವಾದ ದಾರಿ ಮಧ್ಯೆ ತಪ್ಪಿಸಿಕೊಳ್ಳು ಯತ್ನಿಸಿದ್ದಾಗ ಫೈರ್ ಮಾಡಲಾಗಿದೆ.
- Sanjeev Pandre
- Updated on: Mar 31, 2025
- 1:13 pm
ಸುಡುವ ಬಿಸಿಲಿಗೆ ಸವಾರರು ಹೈರಾಣು: ಟ್ರಾಫಿಕ್ ಸಿಗ್ನಲ್ನಲ್ಲಿ ನೆರಳಿನ ವ್ಯವಸ್ಥೆ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಗದಗದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ದ್ವಿಚಕ್ರ ವಾಹನ ಸವಾರರು ಬಿಸಿಲಿಗೆ ತುತ್ತಾಗುತ್ತಿದ್ದಾರೆ. ಇದನ್ನು ಗಮನಿಸಿದ ಗದಗ ಪೊಲೀಸ್ ಇಲಾಖೆ ಮತ್ತು ನಗರಸಭೆ, ಮುಳಗುಂದ ನಾಕಾ, ಪುಟ್ಟರಾಜ ಸರ್ಕಲ್, ಟಿಪ್ಪು ಸುಲ್ತಾನ್ ಜಂಕ್ಷನ್ಗಳಲ್ಲಿ ನೆರಳಿನ ವ್ಯವಸ್ಥೆ ಮಾಡಿದೆ. ಹಸಿರು ಮ್ಯಾಟ್ಗಳನ್ನು ಬಳಸಿ ನಿರ್ಮಿಸಲಾದ ಈ ನೆರಳಿನ ವ್ಯವಸ್ಥೆಯಿಂದ ಸವಾರರಿಗೆ ಕೊಂಚ ಆರಾಮವೆನಿಸಿದೆ.
- Sanjeev Pandre
- Updated on: Mar 26, 2025
- 2:52 pm
ಪೊಲೀಸ್ ಠಾಣೆಗೆ ಬೆಂಕಿ: 23 ಮಂದಿ ಅಪರಾಧಿಗಳಿಗೆ 5 ವರ್ಷ ಜೈಲು, 36 ಲಕ್ಷ ರೂ. ದಂಡ
ಗದಗದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 23 ಜನರನ್ನು ಅಪರಾಧಿ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಅವರಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 36.87 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಪೊಲೀಸ್ ಠಾಣೆ ಹಾನಿಗೆ ಪರಿಹಾರವಾಗಿ 12.72 ಲಕ್ಷ ರೂಪಾಯಿಗಳನ್ನು ಪೊಲೀಸ್ ಇಲಾಖೆಗೆ ನೀಡಲು ಆದೇಶಿಸಲಾಗಿದೆ. ಈ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು.
- Sanjeev Pandre
- Updated on: Mar 25, 2025
- 7:42 am
ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ
ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿವೆ. ಆದರೆ ಗದಗ ಜಿಲ್ಲೆಯಲ್ಲಿ ಅಜ್ಜಿಯ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಧೈರ್ಯದಿಂದ ಪರೀಕ್ಷೆ ಬರೆದ ಘಟನೆ ನಡೆದಿದೆ. ಮತ್ತೊಂದು ಘಟನೆಯಲ್ಲಿ, ಪರೀಕ್ಷಾ ಕೇಂದ್ರದಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದ ಬಳಿಕ ಮತ್ತೆ ಪರೀಕ್ಷೆಗೆ ಹಾಜರಾದ ಘಟನೆ ನಡೆದಿದೆ.
- Sanjeev Pandre
- Updated on: Mar 21, 2025
- 6:04 pm
ಪ್ರೀತ್ಸೆ ಎಂದು 19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ಅಂಕಲ್ ಕಿರುಕುಳಕ್ಕೆ ವಿದ್ಯಾರ್ಥಿನಿ ದುರಂತ ಸಾವು
ಅವಳು ಸ್ಟೂಡೆಂಟ್, ಆತ 47 ವರ್ಷದ ಅಂಕಲ್. ಆದ್ರೆ, ಮಗಳ ವಯಸ್ಸಿನ ಯುವತಿಗೆ ಪ್ರೀತ್ಸೆ.. ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಅಷ್ಟೇ ಅಲ್ಲ ಮದುವೆಯಾಗುವಂತೆ ಕಿರುಕುಳ ನೀಡಿದ್ದಾನೆ. ಸಾಲದಕ್ಕೆ ಮದುವೆಗೆ ಒಪ್ಪದಿದ್ದರೆ ಇಬ್ಬರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಭಯಗೊಂಡ 9 ವರ್ಷದ ಯುವತಿ ದುರಂತ ಸಾವು ಕಂಡಿದ್ದಾಳೆ.
- Sanjeev Pandre
- Updated on: Mar 21, 2025
- 4:06 pm
ಲಕ್ಷ್ಮೇಶ್ವರ: ಅಕ್ರಮ ಕಲ್ಲು ಗಣಿಗಾರಿಕೆಗೆ ನಲುಗಿದ ಆದರಹಳ್ಳಿ ಜನ, ಮನೆಗಳ ಗೋಡೆಗಳು ಬಿರುಕು
ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ನಿತ್ಯದ ಬ್ಲಾಸ್ಟಿಂಗ್ನಿಂದ ಜನರು ಆತಂಕದಲ್ಲಿದ್ದಾರೆ. ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. 50ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಇಲ್ಲಿನ ಸ್ಥಿತಿಗತಿಯನ್ನು ಗಮನಿಸಿ, ನಮ್ಮ ಸಹಾಯಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
- Sanjeev Pandre
- Updated on: Mar 19, 2025
- 2:42 pm