ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…
‘ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ; ಕಾಂಗ್ರೆಸ್ನ ಒಂದು ದಂಡೇ ಬಿಜೆಪಿ ಸೇರಲಿದೆ’: ಮುರುಗೇಶ್ ನಿರಾಣಿ
ಸದ್ಯ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನಿರ್ಣಾಯಕ ಘಟ್ಟ ತಲುಪಿದೆ. ಹೀಗಿರುವಾಗ ಸಚಿವ ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ, ರಾಜ್ಯ ಕಾಂಗ್ರೆಸ್ನಲ್ಲಿ ಭಿನ್ನಮತದ ಬಿರುಗಾಳಿ ಏಳಲಿದೆ. ಅಸಮಾಧಾನಿತರ ಕಾಂಗ್ರೆಸ್ ತಂಡ ಬಿಜೆಪಿಗೆ ಬರಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
- Sanjeev Pandre
- Updated on: Aug 1, 2026
- 7:55 pm
ಗದಗ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತಾರಾಜ್ಯ ಕಳ್ಳರ ಬಂಧನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ
Gadag News: ಗದಗ ಪೊಲೀಸರು ಮೂವರು ಅಂತಾರಾಜ್ಯ ಮಾಸ್ಕ್ ಗ್ಯಾಂಗ್ ಕಳ್ಳರನ್ನು ಬಂಧಿಸುವ ಮೂಲಕ ಮನೆ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಬಂಧಿತರಿಂದ 42.73 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಾಗೂ ಎರಡು ಕಾರುಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತಾಗಿ ಎಸ್ಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.
- Sanjeev Pandre
- Updated on: Jul 25, 2026
- 2:48 pm
ಗದಗದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಜಪ್ತಿ
Gadag News: ಅನ್ನಭಾಗ್ಯ ಯೋಜನೆಯ 32 ಟನ್ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಮತ್ತು ಪೊಲೀಸರು ಗದಗದಲ್ಲಿ ಭೇದಿಸಿದ್ದಾರೆ. ಬಿಂಕದಕಟ್ಟೆ ಗ್ರಾಮದಲ್ಲಿ ಲಾರಿ ವಶಪಡಿಸಿಕೊಂಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಾವೇರಿ ಎಪಿಎಂಸಿ ಹೆಸರಲ್ಲಿ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು ಎಂಬುದು ಗೊತ್ತಾಗಿದೆ. ಪ್ರಕರಣ ಸಂಬಂಧ ಚಾಲಕ ಮತ್ತು ಕ್ಲೀನರ್ನನ್ನು ಬಂಧಿಸಲಾಗಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Sanjeev Pandre
- Updated on: Jul 16, 2026
- 2:36 pm
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ.
- Sanjeev Pandre
- Updated on: Jul 15, 2026
- 10:22 am
ಒನ್ ನೇಷನ್ ಒನ್ ಎಲೆಕ್ಷನ್ನಿಂದ ರಾಜ್ಯಗಳ ಅಧಿಕಾರ ಕಸಿಯಲ್ಲ: ಇಂದಿರಾ ಗಾಂಧಿ ಕಾಲದ ಅಸಹಿಷ್ಣುತೆ ನೆನಪಿಸಿದ ಸಚಿವ ಪ್ರಹ್ಲಾದ್ ಜೋಶಿ
ಗದಗದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು 'ಒಂದೇ ದೇಶ, ಒಂದೇ ಚುನಾವಣೆ' ಕುರಿತು ಮಾತನಾಡಿದ್ದಾರೆ. ಈ ಯೋಜನೆ ಜಾರಿಗೆ ಬಂದರೆ ದೇಶದ ಒಕ್ಕೂಟ ವ್ಯವಸ್ಥೆ ಹಾಳಾಗುತ್ತದೆ ಎಂಬ ಕಾಂಗ್ರೆಸ್ ಪಕ್ಷದ ಮತ್ತು ರಾಹುಲ್ ಗಾಂಧಿಯವರ ಆರೋಪಗಳು ಅರ್ಥಹೀನ ಎಂದರು. ರಾಜ್ಯಗಳ ಅಧಿಕಾರಕ್ಕೆ ಧಕ್ಕೆಯಾಗುವುದಿಲ್ಲ, ಇದು ಕಾಂಗ್ರೆಸ್ನ ಸುಳ್ಳು ಪ್ರಚಾರ ಎಂದು ಅವರು ತೀವ್ರವಾಗಿ ಟೀಕಿಸಿದರು. ಯೋಜನೆಯ ಜಾರಿ ಪ್ರಕ್ರಿಯೆಯನ್ನೂ ವಿವರಿಸಿದರು.
- Sanjeev Pandre
- Updated on: Jul 11, 2026
- 4:40 pm
ಚಲಿಸುತ್ತಿರುವಾಗಲೇ ಬಸ್ನ ಬ್ರೇಕ್ ಫೇಲ್: ಗದಗ ಹೊಸ ಬಸ್ ನಿಲ್ದಾಣದ ಬಳಿ ತಪ್ಪಿದ ಭಾರಿ ದುರಂತ
Gadag News: ಗದಗ ಹಳೆ ಬಸ್ ನಿಲ್ದಾಣದಿಂದ ಹೊಸ ಸ್ಟ್ಯಾಂಡ್ಗೆ ತೆರಳುತ್ತಿದ್ದ ಸಾರಿಗೆ ಬಸ್ನ ಬ್ರೇಕ್ ಫೇಲ್ ಆಗಿ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏಕಾಏಕಿ ರಿವರ್ಸ್ ಬಂದ ಬಸ್ ಅಡಿ ಸಿಲುಕಿದ್ದ ವೃದ್ಧ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ ಸವಾರರು ಕೂಡ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಘಟನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Sanjeev Pandre
- Updated on: Jul 8, 2026
- 4:58 pm
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಕರ್ನಾಟಕದ ಪಕ್ಕದ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲದೇ ನಮ್ಮ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಆದ್ರೆ, ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ವರುಣ ಕೃಪೆ ತೋರಿಸುತ್ತಿಲ್ಲ. ಗದನಲ್ಲೂ ಸಹ ಮುಂಗಾರು ಮಳೆ ಕೈಕೊಟ್ಟಿದ್ದು, ಹೆಸರು, ಗೋವಿನ ಜೋಳ, ಮೆಣಸಿನಕಾಯಿ ಸೇರಿ ಬಿತ್ತಿದ ಹಲವು ಬೆಳೆಗಳ ಒಣಗುತ್ತಿವೆ. ಇದರಿಂದ ರೈತರೊಬ್ಬರು ಮಂಡಿಯೂರಿ ಕಣ್ಣೀರಿಟ್ಟಿರುವ ದೃಶ್ಯ ಮನಕಲಕುವಂತಿದೆ. ಮಳೆ ಇವತ್ತು ಬರುತ್ತೆ ನಾಳೆ ಎಂದು ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ಸಂಜೀವ ಪಾಂಡ್ರೆ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ.
- Sanjeev Pandre
- Updated on: Jul 7, 2026
- 4:55 pm
ಅನ್ನ ನೀರಿಲ್ಲದೆ 33 ದಿನ ಬಳಿಕ ಶಿವಯೋಗ ಸಮಾಧಿಯಿಂದ ಹೊರಬಂದು ದರ್ಶನ: ವಿಜ್ಞಾನ-ತಂತ್ರಜ್ಞಾನಕ್ಕೆ ಸವಾಲೊಡ್ಡಿ ಆಧ್ಯಾತ್ಮಿಕ ಶಕ್ತಿ ತೋರಿಸಿದ ಶ್ರೀಗಳು
ಗದಗ ಜಿಲ್ಲೆಯ ರಾಚೋಟೇಶ್ವರ ಸ್ವಾಮೀಜಿಗಳು 33 ದಿನಗಳ ಕಠಿಣ ಶಿವಯೋಗ ಸಮಾಧಿ ಹಾಗೂ ಮೌನ ಅನುಷ್ಠಾನವನ್ನು ಪೂರ್ಣಗೊಳಿಸಿದ್ದಾರೆ. ಬೆಳಕು, ಗಾಳಿ, ನೀರು, ಆಹಾರವಿಲ್ಲದೆ ಲೋಕ ಕಲ್ಯಾಣಕ್ಕಾಗಿ ಕೈಗೊಂಡ ಈ ಪವಾಡ ಸದೃಶ ವ್ರತ ಇಂದು ಅಂತ್ಯಗೊಂಡಿದ್ದು, ಲಕ್ಷಾಂತರ ಭಕ್ತರಿಗೆ ದರ್ಶನ ನೀಡಿದ್ದಾರೆ. ಇಂದು ಗದಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
- Sanjeev Pandre
- Updated on: Jul 5, 2026
- 5:59 pm
ಡಾ. ಚಂದ್ರು ಲಮಾಣಿ ಕಾರು ಚಾಲಕನ ಆತ್ಮಹತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್: ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರಿಂದ ಗಂಭೀರ ಆರೋಪ
ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕರಿಂದಲೇ ಜೀವ ಬೆದರಿಕೆ ಇತ್ತು ಎಂದು ಮೃತನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 2025 ಜನವರಿ 9ರಂದು ನೇಣು ಬಿಗಿದುಕೊಂಡು ಚಾಲಕ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಅನುಮಾನ ವ್ಯಕ್ತವಾಗಿತ್ತಾದರೂ ನಿಖರ ಕಾರಣ ತಿಳಿದುಬಂದಿರಲಿಲ್ಲ.
- Sanjeev Pandre
- Updated on: Jul 2, 2026
- 10:12 am
ಮಳೆಗಾಗಿ ಕಠಿಣ ನಿರ್ಧಾರ ಕೈಗೊಂಡ ಅನ್ನದಾತ: ಕೃಪೆ ತೋರುವನೇ ವರುಣ ದೇವ?
ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದೆ. ಎಲ್ಲೆಡೆ ಬರದ ಛಾಯೆ ಆವರಿಸುತ್ತಿದೆ. ಮಳೆಗಾಗಿ ಜನರು ಪೂಜೆ, ಪುರಸ್ಕಾರ ಅಂತಾ ದೇವರ ಮೊರೆ ಹೋಗುತ್ತಿದ್ದಾರೆ. ಈ ಮಧ್ಯೆ ಗದಗ ಜಿಲ್ಲೆಯ ಓರ್ವ ರೈತರ ಅದೊಂದು ಕಠಿಣ ನಿರ್ಧಾರ ಇದೀಗ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಹಾಗಾದರೆ ಮಳೆಗಾಗಿ ಆ ರೈತ ಕೈಗೊಂಡಿರುವ ಆ ನಿರ್ಧಾರವಾದರೂ ಏನು ಎಂಬ ಮಾಹಿತಿ ಇಲ್ಲಿದೆ.
- Sanjeev Pandre
- Updated on: Jul 1, 2026
- 4:20 pm
ಗದಗ ಮಠದಲ್ಲಿ ಹೈಡ್ರಾಮಾ: ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್ ಟ್ವಿಸ್ಟ್!
ಗದಗ ನಗರದ ಪ್ರಸಿದ್ಧ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಮೂವರು ಟ್ರಸ್ಟಿಗಳಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಮಾಡಿದ ಆರೋಪವನ್ನು ಟ್ರಸ್ಟಿಗಳು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ತಾವು ರೌಡಿಗಳಲ್ಲ, ಮಠದ ಭಕ್ತರು ಎಂದು ಸ್ಪಷ್ಟಪಡಿಸಿರುವ ಟ್ರಸ್ಟಿಗಳು, ಶ್ರೀಗಳ ವಿರುದ್ಧವೇ ಮಠದ ಬೆಲೆಬಾಳುವ ಜಮೀನು ಮಾರಾಟ ಹಾಗೂ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರ್ಥಿಕ ಅಕ್ರಮದ ಕೌಂಟರ್ ಆರೋಪ ಮಾಡಿದ್ದಾರೆ.
- Sanjeev Pandre
- Updated on: Jun 27, 2026
- 10:14 am
ಗದಗ: ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್ ಬಡ್ಡಿ ದಂಧೆಕೋರರು, ಎಸ್ಪಿ ಕಚೇರಿ ಎದುರು ಸಂತ್ರಸ್ತೆಯರ ಕಣ್ಣೀರು
ಗದಗ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ ಮುಂದುವರಿದಿದೆ. ಸಾಲದ ಬಡ್ಡಿ ಹಣಕ್ಕಾಗಿ ಇಬ್ಬರು ಮಹಿಳೆಯರನ್ನು ಮನೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಆರೋಪ ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಕೇಳಿಬಂದಿದೆ. ಘಟನೆ ಬಗ್ಗೆ ಸ್ಥಳೀಯ ಪೊಲೀಸರು ದೂರು ಸ್ವೀಕರಿಸದ ಕಾರಣ ನೊಂದ ಮಹಿಳೆಯರು ಗದಗ ಎಸ್ಪಿ ಕಚೇರಿ ಎದುರು ಕಣ್ಣೀರಿಡುತ್ತಾ ನ್ಯಾಯಕ್ಕಾಗಿ ಧರಣಿ ನಡೆಸಿದ್ದಾರೆ.
- Sanjeev Pandre
- Updated on: Jun 27, 2026
- 9:08 am