AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವ ಕುಮಾರ್​ ಪಾಂಡ್ರೆ, ಗದಗ

Author - TV9 Kannada

sajeevakumar.pandre@tv9.com

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ…

Read More
ಶಾಲಾ ಮಕ್ಕಳ ಮೇಲೆ ಲಕ್ಕುಂಡಿ ಉತ್ಖನನದ ಎಫೆಕ್ಟ್​​: ಧೂಳಿನ ಅಬ್ಬರಕ್ಕೆ ಪುಟಾಣಿಗಳು ಹೈರಾಣು

ಶಾಲಾ ಮಕ್ಕಳ ಮೇಲೆ ಲಕ್ಕುಂಡಿ ಉತ್ಖನನದ ಎಫೆಕ್ಟ್​​: ಧೂಳಿನ ಅಬ್ಬರಕ್ಕೆ ಪುಟಾಣಿಗಳು ಹೈರಾಣು

ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ ಶಾಲಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಉತ್ಖನನದಿಂದ ಉಂಟಾಗುವ ಧೂಳು ವಿವೇಕಾನಂದ ಶಾಲೆಯ ಪುಟಾಣಿ ಮಕ್ಕಳಲ್ಲಿ ಡಸ್ಟ್ ಅಲರ್ಜಿ, ಜ್ವರ, ಕೆಮ್ಮಿಗೆ ಕಾರಣವಾಗುತ್ತಿದ್ದು, ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳ ಆರೋಗ್ಯ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹಾಜರಾತಿಯೂ ಕುಸಿಯುತ್ತಿದೆ.

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ

ಗದಗ ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಉತ್ಖನನದಲ್ಲಿ ಚಿನ್ನದ ನಾಣ್ಯಗಳು, ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಸಮಗ್ರ ಉತ್ಖನನಕ್ಕೆ ತಜ್ಞರ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಉತ್ಖನನ ಧೂಳಿನಿಂದ ಶಾಲಾ ಮಕ್ಕಳಿಗೆ ಕೆಮ್ಮು, ನೆಗಡಿ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅಧಿಕಾರಿಗಳು ಮತ್ತು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನೀರು ಸಿಂಪಡಣೆ ಮೂಲಕ ಮಕ್ಕಳ ಆರೋಗ್ಯ ಸುರಕ್ಷತೆಗೆ ತುರ್ತು ಕ್ರಮ ಕೈಗೊಂಡಿದ್ದಾರೆ.

ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!

ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!

ಗದಗ, ಜನವರಿ 30: ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯದಲ್ಲಿ ಹಾವು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಕಳೆದ 13 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಉತ್ಖನನದಲ್ಲಿ ಈವರೆಗೆ 45ಕ್ಕೂ ಹೆಚ್ಚು ಪ್ರಾಚ್ಯಾವಶೇಷ ವಸ್ತುಗಳು, ನಿರ್ದಿಷ್ಟವಾಗಿ ಮೂರು ನಾಗರಶಿಲೆಗಳು ಪತ್ತೆಯಾಗಿದ್ದವು. ನಿನ್ನೆ ಮೂರು ಹೆಡೆಯ ಸರ್ಪ ಶಿಲೆ ದೊರೆತ ಬೆನ್ನಲ್ಲೇ, ಇಂದು ಬೆಳಗ್ಗೆ ಉತ್ಖನನ ಸ್ಥಳದ ಎ ಬ್ಲಾಕ್‌ನಲ್ಲಿ ಸುಮಾರು 2-2.5 ಅಡಿ ಉದ್ದದ ಹಾವು ಪ್ರತ್ಯಕ್ಷವಾಗಿದೆ. ಈ ಘಟನೆ ಲಕ್ಕುಂಡಿಯ ನಿಧಿಗಳನ್ನು ಸರ್ಪಗಳು ಕಾಯುತ್ತವೆ ಎಂಬ ಸ್ಥಳೀಯರ ನಂಬಿಕೆ ಮತ್ತು ಚರ್ಚೆಗಳಿಗೆ ಹೊಸ ಆಯಾಮ ನೀಡಿದೆ. ಬೆಳಗ್ಗೆ 8:30ರ ಸುಮಾರಿಗೆ ಹಾವು ಕಾಣಿಸಿಕೊಂಡಿದ್ದು, ಸ್ಥಳೀಯ ಸೆಕ್ಯೂರಿಟಿ ಗಾರ್ಡ್‌ಗಳು ಮತ್ತು ನಿವಾಸಿಗಳು ಇದನ್ನು ಕಣ್ಣಾರೆ ಕಂಡಿದ್ದಾರೆ ಹಾಗೂ ವಿಡಿಯೋ ಸಹ ಸೆರೆಹಿಡಿದಿದ್ದಾರೆ.

ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ,ಮತ್ತೆ ಘಟ ಸರ್ಪದ ಆತಂಕ

ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ,ಮತ್ತೆ ಘಟ ಸರ್ಪದ ಆತಂಕ

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಮುಂದುವರೆದಿದ್ದು, ದಿನಕ್ಕೆ ಒಂದಲ್ಲ ಒಂದು ಪ್ರಾಚೀನ ಕಾಲದ ಹಳೇ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅಪರೂಪದ ಕಲಾಕೃತಿಗಳು, ಪುಟ್ಟ ಶಿವಲಿಂಗ ಹಾಗೂ ನಾಗಮಣಿಯೊಂದಿಗೆ ಕೆತ್ತಿದ ನಾಗರ ಹಾವಿನ ಹೆಡೆಯ ಶಿಲಾಕೃತಿ ಪತ್ತೆಯಾಗಿದ್ದವು. ಇದೀಗ ಇಂದು (ಜನವರಿ 29) ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 12ನೇ ದಿನ ಉತ್ಖನನ ಕಾರ್ಯದಲ್ಲಿ ಮತ್ತೊಂದು ‌ ಮೂರು ಹೆಡೆಯ ಘಟ ಸರ್ಪ ಶಿಲೆ ಪತ್ತೆಯಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಲಕ್ಕುಂಡಿ ಉತ್ಖನನ ಕಾರ್ಯ ಅಪಾಯದ ಹಂತಕ್ಕೆ: ಅಧಿಕಾರಿ, ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಲಕ್ಕುಂಡಿ ಉತ್ಖನನ ಕಾರ್ಯ ಅಪಾಯದ ಹಂತಕ್ಕೆ: ಅಧಿಕಾರಿ, ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯ ಸದ್ಯ ಅಪಾಯದ ಹಂತದಲ್ಲಿದೆ. ಉತ್ಖನನ ಸ್ಥಳದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಇನ್ನು ಟಿವಿ9 ವರದಿ ಬೆನ್ನಲ್ಲೇ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.

10ನೇ ದಿನ ಉತ್ಖನನ ವೇಳೆ ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!

10ನೇ ದಿನ ಉತ್ಖನನ ವೇಳೆ ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್‌ಗಳಲ್ಲಿ ಉತ್ಖನನ ನಡೆಯುತ್ತಿದ್ದು, 10ನೇ ದಿನವಾದ ಇಂದು (ಜನವರಿ 27) ಉತ್ಖನನ ವೇಳೆ ಪ್ರಾಚ್ಯಾವಶೇಷ ಪತ್ತೆಯಾಗಿದೆ. ಹೌದು..ದೇವಕೋಷ್ಠದ ಮೇಲಿನ ಶಿಖರದ ಪ್ರಾಚ್ಯಾವಶೇಷ ಪತ್ತೆಯಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಏಳು ಹೆಡೆ ಸರ್ಪದ ಕಾವಲು?

ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಏಳು ಹೆಡೆ ಸರ್ಪದ ಕಾವಲು?

ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ನಂತರ ಬೆಟಗೇರಿಯಲ್ಲೂ ನಿಧಿ ವದಂತಿಗಳು ಹರಡಿವೆ. ಬೆಟಗೇರಿಯ ನಿಗೂಢ ಗವಿಯೊಳಗೆ ನಿಧಿ ಅಡಗಿದೆ ಎಂದು ಗ್ರಾಮಸ್ಥರು ನಂಬಿದ್ದಾರೆ. ಏಳು ಹೆಡೆ ಸರ್ಪ ನಿಧಿಯನ್ನು ಕಾಯುತ್ತಿದ್ದು, ಹೊರಬಂದಾಗ ಸಾಂಬ್ರಾಣಿ ವಾಸನೆ ಬರುತ್ತದೆ ಎನ್ನುತ್ತಾರೆ. ಸ್ಥಳೀಯರ ಪ್ರಕಾರ, ದೊಡ್ಡ ಹಾವುಗಳು ಕಾಣಿಸಿಕೊಳ್ಳುತ್ತವೆ ಹಾಗೂ ಗವಿಯಿಂದ ಶಿವಾನಂದ ಮಠ ಮತ್ತು ಕೆರಂಬನಕಲ್ಲ ದೇವಸ್ಥಾನಕ್ಕೆ ದಾರಿ ಇದೆ ಎಂಬ ಮಾತುಗಳು ಕೇಳಿಬಂದಿವೆ.

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಹಚ್ಚಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ರಾಜ್ಯ ಸರ್ಕಾರ ಗಣರಾಜ್ಯೋತ್ಸವದ ದಿನ ಬಂಪರ್ ಉಡುಗೊರೆ ಘೋಷಿಸಿದೆ. ಪ್ರಾಮಾಣಿಕವಾಗಿ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಕ್ಕೆ ಗೌರವಿಸಿ, 30x40 ನಿವೇಶನ, 5 ಲಕ್ಷ ರೂ. ನಗದು, ಹಾಗೂ ತಾಯಿಗೆ ಸರ್ಕಾರಿ ಕೆಲಸ ನೀಡಲಾಗಿದೆ. ಸಚಿವ ಎಚ್​.ಕೆ. ಪಾಟೀಲ್ ಈ ಘೋಷಣೆ ಮಾಡಿದರು.

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಹಳೆಯ ಮನೆ ಮತ್ತು ತೋಟದ ಮನೆಗಳ ಗೋಡೆಗಳಲ್ಲಿ ಚಾಲುಕ್ಯ ಹಾಗೂ ರಾಷ್ಟ್ರಕೂಟರ ಕಾಲದ ಅನೇಕ ಪ್ರಾಚೀನ ಶಿಲೆಗಳು ಪತ್ತೆಯಾಗಿವೆ. ಸರಸ್ವತಿ/ಲಕ್ಷ್ಮಿ ಮೂರ್ತಿ, ದ್ವಾರಪಾಲಕ, ದಾನ ಶಿಲೆ, ಗಣಪತಿ ಮೂರ್ತಿ ಮತ್ತು ದೇವಾಲಯಗಳ ಅಲಂಕಾರಿಕ ಶಿಲ್ಪಗಳು ಈ ಆಶ್ಚರ್ಯಕರ ಆವಿಷ್ಕಾರಗಳಲ್ಲಿ ಸೇರಿವೆ.

8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ

8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ

ಚಿನ್ನದ ನಿಧಿ ಸಿಕ್ಕಿದ್ದೇ ಸಿಕ್ಕಿದ್ದು ಲಕ್ಕುಂಡಿಯಲ್ಲಿ (Lakkundi) ಪುರಾತತ್ವ ಇಲಾಖೆ ಬೀಡುಬಿಟ್ಟಿದ್ದು, ಉತ್ಖನನ ಕಾರ್ಯ ನಡೆಸಿದೆ. ಕಳೆದ ಏಳು ದಿನಗಳಲ್ಲಿ ಒಂದಲ್ಲ ಒಂದು ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅದರಂತೆ 8ನೇ ದಿನವಾದ ಇಂದು (ಜನವರಿ 23) ಪ್ರಾಚೀನ ಕಾಲದ ಪಚ್ಚೆ ಕಲ್ಲು ಪತ್ತೆಯಾಗಿದೆ. ಈ ಅಪರೂಪದ ಅಮೂಲ್ಯದ ಪಚ್ಚೆ ಕಲ್ಲು ಚಿನ್ನದ ಆಭರಣದಲ್ಲಿ ಹಾಕಲಾಗುತ್ತಿತ್ತು ಎನ್ನಲಾಗಿದೆ. ಹೀಗಾಗಿ ಇದು ತೀವ್ರ ಕುತೂಹಲ‌ಕ್ಕೆ ಕಾರಣವಾಗಿದ್ದು, ಲಕ್ಕುಂಡಿ ನೈಜ ಗತವೈಭವ ಇನ್ಮುಂದೆ ಆರಂಭ ಎಂದು ಜನ ಮಾತನಾಡುತ್ತಿದ್ದಾರೆ. ಹಾಗಾದ್ರೆ, ಪಚ್ಚೆ ಕಲ್ಲು ಹೇಗಿದೆ? ಯಾವುದಕ್ಕೆ ಬಳಸಲಾಗಿತ್ತು ಎನ್ನುವುದನ್ನು ನಮ್ಮ ಪ್ರತಿನಿಧಿ ವಿವರಿಸಿದ್ದಾರೆ.

Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ!

Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ!

ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್‌ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.

Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಬಳಿಕ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಈ ವೇಳೆ ಶಿವಲಿಂಗ, ಪಾಣಿ ಪೀಠ, ಪುರಾತನ ಮಡಿಕೆ, ಮೂಳೆಗಳು ಸೇರಿ ವೈವಿಧ್ಯಮಯ ವಸ್ತುಗಳು ಸಿಗುತ್ತಿವೆ. ಲಕ್ಕುಂಡಿ ಈಗ ದೇಶ-ವಿದೇಶಗಳಲ್ಲಿಯೂ ಸುದ್ದಿಯಾಗಿರುವ ಹಿನ್ನೆಲೆ ಉತ್ಖನನ ನೋಡಲು ವಿದೇಶಿ ಪ್ರವಾಸಿಗರೂ ಗ್ರಾಮಕ್ಕೆ ಬರುತ್ತಿರೋದು ಗಮನಾರ್ಹವಾಗಿದೆ.