ವರ್ಷವಾದ್ರೂ ಬದಲಾಗದ ಇಂದಿರಾ ಕ್ಯಾಂಟೀನ್ ಮೆನು: ಅದೇ ಅನ್ನ ಸಾರು, ಮುದ್ದೆ, ಚಪಾತಿ ಮಾಯ!
ಇಂದಿರಾ ಕ್ಯಾಂಟೀನ್ಗಳಲ್ಲಿ ಮೆನು ಬದಲಾವಣೆ ವಿಳಂಬವಾಗುತ್ತಿರುವುದು ಜನರಲ್ಲಿ ನಿರಾಶೆ ಮೂಡಿಸಿದೆ. ಕಳೆದ ವರ್ಷ ಘೋಷಿಸಿದ ಹೊಸ ಮೆನು ಇನ್ನೂ ಜಾರಿಯಾಗಿಲ್ಲ. ಅನ್ನ-ಸಾಂಬಾರ್ಗೆ ಸೀಮಿತವಾಗಿರುವ ಆಹಾರದಿಂದ ಜನರು ಬೇಸತ್ತಿದ್ದಾರೆ. ಹೊಸ ಮೆನುವಿನಲ್ಲಿ ಮುದ್ದೆ, ಚಪಾತಿ ಸೇರಿದಂತೆ ಹಲವು ಆಯ್ಕೆಗಳನ್ನು ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಕ್ಯಾಂಟೀನ್ಗಳ ನಿರ್ವಹಣೆಯಲ್ಲಿಯೂ ಸಮಸ್ಯೆಗಳಿವೆ ಎಂಬ ಆರೋಪಗಳಿವೆ.
- Shanthamurthy
- Updated on: Apr 30, 2025
- 9:32 pm
ಅಕ್ಷಯ ತೃತೀಯದಂದು ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್: ತೆರಿಗೆ ಪಾವತಿಸಲು ಮೇ 30ರವರೆಗೆ ಅವಕಾಶ
ಬೆಂಗಳೂರಿನ ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಶೇ.5ರಷ್ಟು ವಿನಾಯಿತಿ ಜೊತೆ ಆಸ್ತಿ ತೆರಿಗೆ ಪಾವತಿಸಲು ಮೇ 30ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಏಪ್ರಿಲ್ ಅಂತ್ಯದೊಳಗೆ 5% ವಿನಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾವತಿಸಲು ಬಿಬಿಎಂಪಿ ಅವಕಾಶ ನೀಡಿತ್ತು.
- Shanthamurthy
- Updated on: Apr 30, 2025
- 10:34 am
ಬಿಬಿಎಂಪಿಯ ಈಜುಕೊಳ ಪ್ರವೇಶ ದರ ಏರಿಕೆ: ಬೆಂಗಳೂರಿನ ಜನರಿಗೆ ಮತ್ತೊಂದು ಶಾಕ್
ಬೆಂಗಳೂರಿನ ಬಿಬಿಎಂಪಿ ಈಜುಕೊಳಗಳಲ್ಲಿ ದರ ಏರಿಕೆಯಿಂದ ಪೋಷಕರು ಆಕ್ರೋಶಗೊಂಡಿದ್ದಾರೆ. ಮಕ್ಕಳಿಗೂ ವಯಸ್ಕರಿಗೂ ಒಂದೇ ದರ ವಿಧಿಸುತ್ತಿರುವುದು ಮತ್ತು ಬೋರ್ಡ್ನಲ್ಲಿರುವ ದರಕ್ಕಿಂತ ಹೆಚ್ಚು ವಸೂಲಿ ಮಾಡುತ್ತಿರುವುದು ಪ್ರಮುಖ ಆಕ್ಷೇಪಕ್ಕೆ ಕಾರಣವಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಈಜುಕೊಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿರುವುದನ್ನು ಬಂಡವಾಳ ಮಾಡಿಕೊಂಡು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
- Shanthamurthy
- Updated on: Apr 27, 2025
- 9:58 pm
ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ: ಸಿಎಂ ಸಿದ್ದರಾಮಯ್ಯ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಭಯೋತ್ಪಾದನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ದೇಶದಲ್ಲಿ ಉಗ್ರರನ್ನು ಸಂಪೂರ್ಣ ಮಟ್ಟಹಾಕಬೇಕಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಎಲ್ಲ ರೀತಿಯ ಬೆಂಬಲ, ಸಹಕಾರ ನೀಡಲಿದ್ದೇವೆ ಎಂದರು.
- Shanthamurthy
- Updated on: Apr 24, 2025
- 9:19 am
BBMP Property tax: ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ಬರೋಬ್ಬರಿ ಸಾವಿರ ಕೋಟಿ ರೂ. ಹೆಚ್ಚಳ
ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ: ಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಈ ಬಾರಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಅಂಕಿ ಅಂಶ ಬಿಡುಗಡೆ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಆಸ್ತಿ ತೆರಿಗೆ ಸಂಗ್ರಹ ಬರೋಬ್ಬರಿ ಸಾವಿರ ಕೋಟಿ ರೂಪಾಯಿ ಹೆಚ್ಚಾಗಿದೆ.
- Shanthamurthy
- Updated on: Apr 14, 2025
- 2:29 pm
ಬೆಂಗಳೂರು ಕರಗ ಶಕ್ತ್ಯೋತ್ಸವ ವೇಳೆ ಗಲಾಟೆ: ಯುವಕರಿಗೆ ಥಳಿತ
ಬೆಂಗಳೂರು ಕರಗ ಶಕ್ತ್ಯೋತ್ಸವದ ಮುನ್ನ ಧರ್ಮರಾಯ ಸ್ವಾಮಿ ದೇಗುಲದ ಬಳಿ ಕೆಲ ಯುವಕರ ನಡುವೆ ಗಲಾಟೆ ನಡೆಯಿತು. ವೀರಕುಮಾರರು ಗಲಾಟೆ ನಿಲ್ಲಿಸಲು ಪ್ರಯತ್ನಿಸಿದಾಗ, ಯುವಕರನ್ನು ಥಳಿಸಿ ಬುದ್ಧಿ ಕಲಿಸಿದರು. ಈ ಘಟನೆಯಿಂದ ಕರಗೋತ್ಸವದ ವಾತಾವರಣ ಕೆಲಕಾಲ ಅಶಾಂತವಾಗಿತ್ತು. ಈ ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Shanthamurthy
- Updated on: Apr 13, 2025
- 9:12 am
ಐತಿಹಾಸಿಕ ಬೆಂಗಳೂರು ಕರಗಕ್ಕೆ ಚಾಲನೆ: ಗೋವಿಂದ, ಗೋವಿಂದ ಜೈಕಾರ
Bengaluru Karaga: ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಶಕ್ತೋತ್ಸವ ಆರಂಭವಾಗಿದೆ. ಚೈತ್ರಮಾಸದ ಚೈತ್ರ ಪೌರ್ಣಿಮೆಯ ಚಂದ್ರನ ಬೆಳಕಿನಲ್ಲಿ ಕರಗ ಉತ್ಸವ ನಡೆಯುತ್ತಿದೆ. ಬೆಂಗಳೂರು ಕರಗವನ್ನು ಕಣ್ತುಂಬಿಕೊಳ್ಳಲು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಭಕ್ತರು ಕರಗದ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರು ಕರಗ ಉತ್ಸವ ಸಾಗುವ ಮಾರ್ಗದ ಉದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
- Shanthamurthy
- Updated on: Apr 13, 2025
- 2:57 am
ಬೆಂಗಳೂರು: ಅಪಾರ್ಟ್ಮೆಂಟ್ ವಿರುದ್ಧ ರೋಡಿಗಿಳಿದ ಜನರು, ಕಂಪ್ಲೇಂಟ್ ಕೊಟ್ಟರೂ ಕಣ್ಮುಚ್ಚಿ ಕುಳಿತ ಪಾಲಿಕೆ
ಬೆಂಗಳೂರಿನ ಚಿಕ್ಕಲ್ಲಸಂದ್ರದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣದಿಂದ ಆ ನಗರದ ಜನರಿಗೆ ಸಮಸ್ಯೆ ಉಂಟಾಗಿದೆ. ಕಿರಿದಾದ ರಸ್ತೆಯನ್ನು ಆಕ್ರಮಿಸಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದರಿಂದ ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ ಬಿಬಿಎಂಪಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.
- Shanthamurthy
- Updated on: Apr 12, 2025
- 10:45 am
ಇನ್ಮುಂದೆ ರೆವಿನ್ಯೂ ಸ್ವತ್ತುಗಳಿಗೂ ದೊರೆಯಲಿದೆ ನಕ್ಷೆ ಮಂಜೂರಾತಿ ಭಾಗ್ಯ: ಇಲ್ಲಿದೆ ಮಾಹಿತಿ
ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇದೀಗ ಬಿಬಿಎಂಪಿಗೆ ರೆವಿನ್ಯೂ ಆಸ್ತಿಗಳ ಯೋಜನೆ ಅನುಮೋದನೆಯ ಅಧಿಕಾರ ನೀಡಲಾಗಿದೆ. ಮೊದಲು ಬಿಡಿಎ ಹೊಂದಿದ್ದ ಈ ಅಧಿಕಾರವನ್ನು ಬಿಬಿಎಂಪಿಗೆ ವರ್ಗಾಯಿಸಲಾಗಿದೆ. ಇದರಿಂದ ಬಿ ಖಾತಾ ಆಸ್ತಿಗಳ ಮಾಲೀಕರಿಗೆ ನಕ್ಷೆ ಅನುಮೋದನೆ ಸುಲಭವಾಗಲಿದೆ.
- Shanthamurthy
- Updated on: Apr 10, 2025
- 1:00 pm
ಬೆಂಗಳೂರಿನ ರಸ್ತೆಗಳಿಗೆ ಕೊನೆಗೂ ಡಾಂಬರ್ ಭಾಗ್ಯ: ಡಾಂಬರೀಕರಣ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ಗುದ್ದಲಿ ಪೂಜೆ
Bangalore Roads: ಅದೆಷ್ಟೋ ಡೆಡ್ಲೈನ್ ಕೊಟ್ಟಿದ್ದಾಯ್ತು. ರಾತ್ರೋ ರಾತ್ರಿ ತೇಪೆ ಹಚ್ಚುವ ಕೆಲಸ ಮಾಡಿದ್ದೂ ಆಯ್ತು. ಆದರೂ ಮುಗಿಯದ ಕತೆಯಾಗಿದ್ದ ರಾಜಧಾನಿಯ ರಸ್ತೆಗುಂಡಿಗಳನ್ನು ಮುಚ್ಚಿಸಲು ಕೊನೆಗೂ ಸರ್ಕಾರ ಅಲರ್ಟ್ ಆಗಿದೆ. ರಸ್ತೆ ಕಾಮಗಾರಿಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮವಾರ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ್ದಾರೆ.
- Shanthamurthy
- Updated on: Apr 8, 2025
- 8:30 am
ಅನಧಿಕೃತವಾಗಿ ಕಟ್ಟಡ ನಿರ್ಮಿಸಿದವರಿಗೆ ಶಾಕ್ ಕೊಟ್ಟ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಕ್ರಮ ಕಟ್ಟಡ ನಿರ್ಮಾಣಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸುಪ್ರೀಂ ಕೋರ್ಟ್ ಆದೇಶದಂತೆ, ಅನಧಿಕೃತ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಬೆಸ್ಕಾಂಗೆ ಸೂಚನೆ ನೀಡಿದೆ. ಬಿಬಿಎಂಪಿ ಕಾಯ್ದೆ 2020ರ ಕಲಂ 248(3) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಸುತ್ತೋಲೆಯಲ್ಲಿ ತಿಳಿಸಿದೆ.
- Shanthamurthy
- Updated on: Apr 5, 2025
- 10:14 pm
ಯತ್ನಾಳ್ ಪರ- ವಿರೋಧ: ಪಂಚಮಸಾಲಿ ಸಮುದಾಯದಲ್ಲೇ ಭಿನ್ನಮತ ಸ್ಫೋಟ
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿದಕ್ಕೆ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ಹೋರಾಟ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ಸ್ವತಃ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ವಿರೋಧ ವ್ಯಕ್ತಪಡಿಸಿದೆ. ಏನಿದು ಲಿಂಗಾಯತ ಪಂಚಮಸಾಲಿ ಸಮುದಾಯದಲ್ಲೇ ಏನಿದು ಬಿನ್ನಮತ? ಇಲ್ಲಿದೆ ವಿವರ
- Shanthamurthy
- Updated on: Apr 5, 2025
- 5:50 pm