ಟನಲ್ ರಸ್ತೆಯಿಂದ ಅಪಾಯ ಇಲ್ಲ, ಸುರಂಗ ರಸ್ತೆ ನಿರ್ಮಾಣದಿಂದಲೇ ಟ್ರಾಫಿಕ್ಗೆ ಕಡಿವಾಣ: ವರದಿ ಸಲ್ಲಿಸಿದ ಎಂಜಿನಿಯರ್ಸ್
ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕಾಗಿ ನಿರ್ಮಾಣ ಮಾಡಲು ಹೊರಟಿದ್ದ ಟನಲ್ ರಸ್ತೆಗೆ ಸಾಲು ಸಾಲು ವಿರೋಧ ವ್ಯಕ್ತವಾಗಿತ್ತು. ಇತ್ತ ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಕೂಡ ಲಾಲ್ ಬಾಗ್, ಸ್ಯಾಂಕಿ ಕೆರೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಎಂಜಿನಿಯರ್ಸ್ ಅಸೋಸಿಯೇಷನ್, ಟನಲ್ ರಸ್ತೆ ನಿರ್ಮಾಣಕ್ಕೆ ಬಲ ತುಂಬಲು ಹೊರಟಿದೆ. ಟನಲ್ ರಸ್ತೆಯಿಂದ ಯಾವುದೇ ಸಮಸ್ಯೆಯಿಲ್ಲ ಎಂದು ವರದಿ ಸಿದ್ಧಪಡಿಸಿರುವ ಎಂಜಿನಿಯರ್ಸ್ ತಂಡ, ಆದಷ್ಟು ಬೇಗ ಟನಲ್ ರಸ್ತೆ ಆರಂಭಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
- Shanthamurthy
- Updated on: Nov 21, 2025
- 9:22 am
ಗ್ರೇಟರ್ ಬೆಂಗಳೂರು ಅಥಾರಿಟಿಯ 5 ಪಾಲಿಕೆಗಳ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ
ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಬಳಿಕ ಜಿಬಿಎ ಚುನಾವಣೆಯ ಚರ್ಚೆ ನಡೆಯುತ್ತಿರೋ ಹೊತ್ತಲ್ಲೇ ಬೆಂಗಳೂರಿನ ಐದು ಪಾಲಿಕೆಗಳ ಹೊಸ ವಾರ್ಡ್ ರಚನೆ ಅಂತಿಮಗೊಳಿಸಿರೋ ಸರ್ಕಾರ, ಇದೀಗ ಅಂತಿಮ ವಾರ್ಡ್ ಪಟ್ಟಿ ರಿಲೀಸ್ ಮಾಡಿದೆ. ಸದ್ಯ ಜಿಬಿಎ ವ್ಯಾಪ್ತಿಯಲ್ಲಿ 369 ವಾರ್ಡ್ ರಚನೆ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದೆ. ಇತ್ತ ಜಿಬಿಎ ಚುನಾವಣೆಯ ಚರ್ಚೆ ಹೊತ್ತಲ್ಲೇ ವಾರ್ಡ್ ಪುನರ್ ವಿಂಗಡನೆ ಮಾಡಿರೋದು ಜಿಬಿಎ ವ್ಯಾಪ್ತಿಯಲ್ಲಿ ಕುತೂಹಲ ಕೆರಳಿಸಿದೆ.
- Shanthamurthy
- Updated on: Nov 20, 2025
- 10:44 pm
ಆಸ್ತಿ ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿಮಾಲ್ಗೆ ಮತ್ತೆ ಬೀಗ
ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮತ್ತೆ ಬೀಗ ಜಡಿದಿದೆ. 30 ಕೋಟಿಗೂ ಅಧಿಕ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಹಲವಾರು ಬಾರಿ ತೆರಿಗೆ ಪಾವತಿಸದೆ ಮಾಲ್ ಸೀಜ್ ಆಗಿತ್ತು. ತೆರಿಗೆ ಕಟ್ಟದ ಕಾರಣ ಮಾಲ್ ಸಿಬ್ಬಂದಿ ಹಾಗೂ ಮಾಲೀಕರು ಕಂಗಾಲಾಗಿದ್ದು, ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
- Shanthamurthy
- Updated on: Nov 19, 2025
- 11:32 am
Kadalekai Parishe: ಇಂದಿನಿಂದ ಶುರು ಐತಿಹಾಸಿಕ ಕಡಲೆಕಾಯಿ ಪರಿಷೆ; ಬಡವರ ಬಾದಾಮಿ ಸವಿಯಲು ಸಜ್ಜಾಗಿರುವ ಸಿಟಿ ಮಂದಿ!
ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಇಂದಿನ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಆರಂಭವಾಗಲಿದ್ದು, ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಚಾಲನೆ ಪಡೆಯಲಿದೆ. ಈ ವರ್ಷ ಐದು ದಿನಗಳ ಕಾಲ ನಡೆಯಲಿರುವ ಈ ಜಾತ್ರೆಯು ಪ್ಲಾಸ್ಟಿಕ್ ಮುಕ್ತವಾಗಿದ್ದು, ಲಕ್ಷಾಂತರ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ನೆರೆ ರಾಜ್ಯಗಳಿಂದಲೂ ವ್ಯಾಪಾರಿಗಳು ಆಗಮಿಸಿದ್ದು, ಬಸವನಗುಡಿ ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿದೆ.
- Shanthamurthy
- Updated on: Nov 17, 2025
- 8:27 am
ಸಾಲು ಸಾಲು ವಿರೋಧದ ಮಧ್ಯೆ ಬೆಂಗಳೂರಿನಲ್ಲಿ ಟನಲ್ ರಸ್ತೆ ಗುದ್ದಲಿ ಪೂಜೆಗೆ ಮುಹೂರ್ತ ಫಿಕ್ಸ್
ಸಾಲು ಸಾಲು ವಿರೋಧದ ಮಧ್ಯೆ ಕೂಡ ಐಟಿಸಿಟಿಯಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ಸರ್ಕಾರ ಸಜ್ಜಾಗಿನಿಂತಿದೆ. ಟನಲ್ ರಸ್ತೆಯಿಂದ ಸೂಕ್ಷ್ಮ ಪ್ರದೇಶಗಳಿಗೆ ಹಾನಿಯಾಗುತ್ತೆ, ಎಕ್ಸಿಟ್ ಜಾಗಗಳಲ್ಲಿ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತೆ ಅಂತಾ ಸಾಲು ಸಾಲು ಅಪಸ್ವರ ಕೇಳಿಬಂದಿದ್ರೂ ತಲೆಕೆಡಿಸಿಕೊಳ್ಳದ ಸರ್ಕಾರ ಇದೀಗ ಹೊಸ ವರ್ಷದಲ್ಲೇ ಟನಲ್ ರಸ್ತೆಗೆ ಭೂಮಿ ಪೂಜೆ ನಡೆಸೋಕೆ ಸಜ್ಜಾಗ್ತಿದೆ. ಇತ್ತ ಟನಲ್ ರಸ್ತೆಯಿಂದ ಜಲಮೂಲಗಳಿಗೆ ಕಂಟಕ ಎದುರಾಗುತ್ತೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರೆ, ಇತ್ತ ಸ್ಯಾಂಕಿ ಕೆರೆ ಅಂಗಳಕ್ಕೂ ಕಂಟಕ ಎದುರಾಗುತ್ತೆ ಎಂದು ಆರೋಪಿಸಿರೋ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟಿಸಲು ಸಜ್ಜಾಗಿದೆ.
- Shanthamurthy
- Updated on: Nov 14, 2025
- 10:23 pm
ಬೆಂಗಳೂರು ಆಸ್ತಿ ಮಾಲೀಕರಿಗೆ ಜಿಬಿಎ ಗುಡ್ನ್ಯೂಸ್: ಫೇಸ್ಲೆಸ್, ಕಾಂಟ್ಯಾಕ್ಟ್ ಲೆಸ್, ಆನ್ಲೈನ್ ಇ-ಖಾತಾ ಜಾರಿ
ಬೃಹತ್ ಬೆಂಗಳೂರು ಪ್ರಾಧಿಕಾರವು ಆಸ್ತಿ ಮಾಲೀಕರಿಗೆ ಇ-ಖಾತಾ ನೋಂದಣಿ ಸಮಸ್ಯೆಗಳನ್ನು ನಿವಾರಿಸಲು ಫೇಸ್ಲೆಸ್, ಕಾಂಟ್ಯಾಕ್ಟ್ ಲೆಸ್, ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದ್ದು, ದಾಖಲೆ ಪರಿಶೀಲನೆ ಸುಲಭವಾಗಲಿದೆ. ಆಸ್ತಿ ಮಾಲೀಕರು ಸುಲಭವಾಗಿ ಮತ್ತು ತ್ವರಿತವಾಗಿ ಇ-ಖಾತಾ ಪಡೆಯಲು ಇದು ಸಹಾಯಕವಾಗಲಿದೆ.
- Shanthamurthy
- Updated on: Nov 12, 2025
- 9:25 pm
ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ! ಎಲ್ಲೆಲ್ಲ ಇವೆ ಗೊತ್ತೇ?
ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಪಾಕಿಸ್ತಾನ ಮತ್ತು ಚೀನಾ ಪ್ರಜೆಗಳ ಸ್ಥಿರ ಆಸ್ತಿಗಳು ಪತ್ತೆಯಾಗಿವೆ. ಎನಿಮಿ ಪ್ರಾಪರ್ಟೀಸ್ ಕಾಯ್ದೆ ಅಡಿ ಇವುಗಳನ್ನು ಗುರುತಿಸಲಾಗಿದ್ದು, ರಾಜಭವನ ರಸ್ತೆ ಸೇರಿ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಈ ಆಸ್ತಿಗಳಿವೆ. ಸರ್ಕಾರವು ಇವುಗಳ ಮೌಲ್ಯಮಾಪನ ಪೂರ್ಣಗೊಳಿಸಿ, ಹರಾಜು ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಿದೆ.
- Shanthamurthy
- Updated on: Nov 12, 2025
- 3:03 pm
ಒಂದೂವರೆ ಗಂಟೆಯಿಂದ ಆಗಸದಲ್ಲೇ ಸುತ್ತಾಡಿದ ವಿಮಾನ: ಮುಂದೇನಾಯ್ತು?
ಬೆಂಗಳೂರಿನಲ್ಲಿ ಏರ್ ಇಂಡಿಯಾ ವಿಮಾನ ಒಂದೂವರೆ ಗಂಟೆಗೂ ಹೆಚ್ಚು ಕಾಲ ಆಗಸದಲ್ಲೇ ಸುತ್ತಾಡಿದೆ. ಜೆಪಿ ನಗರ ಸುತ್ತ ಹತ್ತಕ್ಕೂ ಹೆಚ್ಚು ಬಾರಿ ವಿಮಾನ ರೌಂಡ್ಸ್ ಹೊಡೆದಿದ್ದು, ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿತ್ತು. ಓರ್ವ ಯುವಕ ವಿಮಾನ ಸುತ್ತಾಟದ ವಿಡಿಯೋ ಮಾಡಿದ್ದಾರೆ. ವಿಡಿಯೋ ನೋಡಿ.
- Shanthamurthy
- Updated on: Nov 8, 2025
- 6:33 pm
Nandini Ghee Price: ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್
ನಂದಿನಿ ತುಪ್ಪದ ದರ ಏರಿಕೆ: ಕರ್ನಾಟಕ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ದಿಢೀರ್ ಆಗಿ ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಜಿಎಸ್ಟಿ ಪರಿಷ್ಕರಣೆ ನಂತರ ದರದಲ್ಲಿ ತುಸು ಇಳಿಕೆ ಮಾಡಿದ್ದ ಕೆಎಂಎಫ್, ಇದೀಗ ಮತ್ತೆ ದರ ಏರಿಕೆ ಮಾಡಿ ಜನತೆಗೆ ಶಾಕ್ ನೀಡಿದೆ.
- Shanthamurthy
- Updated on: Nov 5, 2025
- 1:57 pm
ಬೆಂಗಳೂರು: ನಾಯಿಮರಿಯನ್ನು ಎತ್ತಿ ನೆಲಕ್ಕೆ ಬಡಿದು ಕೊಲೆ, ಮನೆ ಕೆಲಸದಾಕೆಯಿಂದಲೇ ರಾಕ್ಷಸೀ ಕೃತ್ಯ
ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಮನೆಕೆಲಸದಾಕೆ ಪುಟ್ಟ ನಾಯಿಮರಿಯೊಂದನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಚಿಹೋವಾ ತಳಿಯ ಗೂಫಿ ಎಂಬ ನಾಯಿಯನ್ನು ವಾಕಿಂಗ್ಗೆ ಕರೆದೊಯ್ದು ವಾಪಸ್ ಕರೆದುಕೊಂಡು ಬರುವಾಗ ನೆಲಕ್ಕೆ ಬಡಿದು ಕೊಲ್ಲಲಾಗಿದೆ. ಈ ಕ್ರೂರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಪುಷ್ಪಲತಾಳನ್ನು ಪೊಲೀಸರು ಬಂಧಿಸಿದ್ದಾರೆ.
- Shanthamurthy
- Updated on: Nov 3, 2025
- 2:45 pm
ದಂಡ ವಿಧಿಸಿದ್ರೂ ಬೆಂಗಳೂರಿನಲ್ಲಿ ಕಸ ಎಸೆಯುವುದು ನಿಲ್ಲುತ್ತಿಲ್ಲ: ವಿಲೇವಾರಿಯಲ್ಲೂ ನಿರ್ಲಕ್ಷ್ಯ
ಬೆಂಗಳೂರಿನಲ್ಲಿ ಕಸ ಎಸೆಯುವವರ ವಿರುದ್ಧ ಜಿಬಿಎ ವಿಶೇಷ ಅಭಿಯಾನ ನಡೆಸಿ 30 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಆದರೂ ರಸ್ತೆ ಬದಿ ಕಸ ಎಸೆಯುವುದು ನಿಂತಿಲ್ಲ. ಜಿಬಿಎ ದಂಡ ವಿಧಿಸುತ್ತಿದ್ದರೂ, ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರುತ್ತಿದ್ದು, ನಗರದಲ್ಲಿ ಕಸದ ರಾಶಿಗಳು ಹೆಚ್ಚುತ್ತಿವೆ. ಸಾರ್ವಜನಿಕರು ಈ ಬಗ್ಗೆ ಜಿಬಿಎ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Shanthamurthy
- Updated on: Nov 2, 2025
- 7:23 pm
218 ಮನೆಗಳ ಮುಂದೆ ಕಸ ಸುರಿದ ಜಿಬಿಎ! ಒಂದೇ ದಿನ 2.80 ಲಕ್ಷ ರೂ. ದಂಡ ವಸೂಲಿ
ಎಷ್ಟೇ ದಂಡ ಹಾಕಿದರೂ, ಎಚ್ಚರಿಕೆ ನೀಡಿದರೂ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಬೆಂಗಳೂರಿನ ಜನ ನಿಲ್ಲಿಸುತ್ತಿಲ್ಲ. ಬೆಂಗಳೂರಿನ ಕಸದ ಸಮಸ್ಯೆ ದೇಶ-ವಿದೇಶ ಮಟ್ಟದಲ್ಲಿ ಸುದ್ದಿಯಾಗಿ ನಗರದ ಮನ ಹರಾಜಾಗುತ್ತಿದೆ. ಇದರಿಂದಾಗಿ ಎಚ್ಚೆತ್ತುಕೊಂಡಿರುವ ಜಿಪಿಎ ಅಧಿಕಾರಿಗಳು, ಹೊಸ ಕೆಲಸ ಆರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಅದನ್ನು ಮತ್ತೆ ಅವರ ಮನೆ ಮುಂದೆಯೇ ಸುರಿಯುವುದಲ್ಲದೆ, ದಂಡ ವಿಧಿಸಲು ಆರಂಭಿಸಿದ್ದಾರೆ.
- Shanthamurthy
- Updated on: Oct 31, 2025
- 6:55 am