AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಮೂರ್ತಿ

ಶಾಂತಮೂರ್ತಿ

Bengaluru Metro Reporter - TV9 Kannada

Shanthamurthy@tv9.com
ಅತ್ತ 5 ಹುಲಿಗಳು ಸಾವು… ಇತ್ತ ಬೆಂಗಳೂರಿನಲ್ಲಿ ನರಳಿ ನರಳಿ ಸತ್ತ ಐದು ನಾಯಿಗಳು

ಅತ್ತ 5 ಹುಲಿಗಳು ಸಾವು… ಇತ್ತ ಬೆಂಗಳೂರಿನಲ್ಲಿ ನರಳಿ ನರಳಿ ಸತ್ತ ಐದು ನಾಯಿಗಳು

ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಐದು ಬೀದಿ ನಾಯಿಗಳು ರಕ್ತ ವಾಂತಿ ಮಾಡಿಕೊಂಡು ಮೃತಪಟ್ಟಿವೆ. ಗುರುವಾರ ರಾತ್ರಿ ಆರು ಬೀದಿ ನಾಯಿಗಳು ರಕ್ತ ವಾಂತಿ ಮಾಡಿದ್ದು, ಐದು ನಾಯಿಗಳು ಮೃತಪಟ್ಟಿವೆ. ಬಿಬಿಎಂಪಿಯು ಕೆ ಆರ್​ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಕೊಬ್ಬರಿಗೆ ಬೇಡಿಕೆ ಗಣನೀಯ ಹೆಚ್ಚಳ

ಬೆಂಗಳೂರಿನಲ್ಲಿ ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಕೊಬ್ಬರಿಗೆ ಬೇಡಿಕೆ ಗಣನೀಯ ಹೆಚ್ಚಳ

Coconut Oil Price Hike: ಕೇರಳದ ಆಹಾರಪದಾರ್ಥಗಳಿಂದ ಹಿಡಿದು ರಾಜ್ಯದ ಜನರ ತಲೆಯ ಆರೋಗ್ಯದ ತನಕ ಕೊಬ್ಬರಿ ಎಣ್ಣೆ ಬೇಕೆ ಬೇಕು ಎಂಬ ಸ್ಥಿತಿ ಇದೆ. ಇದೀಗ ಕೊಬ್ಬರಿ ಎಣ್ಣೆ ದರ ಲೀಟರ್​ಗೆ 400 ರೂ. ದಾಟಿ ಮುನ್ನುಗ್ಗುತ್ತಿದೆ. ಬೇಸಿಗೆ ವೇಳೆ ಎಳನೀರಿನ ಆಸೆಗೆ ತೆಂಗಿನ ಮರಗಳನ್ನು ಬರಿದು ಮಾಡಿದ್ದರ ಪರಿಣಾಮ ಇದೀಗ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆಯ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಕೊಬ್ಬರಿ ಬೆಲೆ ದುಪ್ಪಟ್ಟಾಗಿದೆ.

ನಂದಿನಿ ಹಾಲಿಗೆ ಪರಿಸರಸ್ನೇಹಿ ಪ್ಯಾಕಿಂಗ್: ಇನ್ನು ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಹಾಲಿನ ಪ್ಯಾಕೆಟ್!

ನಂದಿನಿ ಹಾಲಿಗೆ ಪರಿಸರಸ್ನೇಹಿ ಪ್ಯಾಕಿಂಗ್: ಇನ್ನು ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಹಾಲಿನ ಪ್ಯಾಕೆಟ್!

ಕರ್ನಾಟಕದಲ್ಲಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲೂ ಜನರ ಮೆಚ್ಚುಗೆ ಗಳಿಸಿರುವ ನಂದಿನಿ ಹಾಲಿಗೆ ಇನ್ಮುಂದೆ ಹೊಸ ರೂಪ ಬರುವ ಸೂಚನೆ ಸಿಕ್ಕಿದೆ. ಈಗ ಪಾಲಿಥಿನ್ ಕವರ್​​​ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರಸ್ನೇಹಿ ಟಚ್ ಕೊಡಲು ಬಮೂಲ್ ಮುಂದಾಗಿದೆ. ಅಲ್ಲದೆ, ದೇಶದಲ್ಲೇ ಮೊದಲ ಬಾರಿಗೆ ವಿಭಿನ್ನ ತಂತ್ರಜ್ಞಾನ ಬಳಸಿ ಪ್ಯಾಕ್ ಮಾಡುವ ಸುಳಿವು ನೀಡಿದೆ.

ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ

ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ

ಬೆಂಗಳೂರು ಹಾಲು ಒಕ್ಕೂಟ (ಬಮೂಲ್)ದ ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಆಯ್ಕೆ ಆಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ವಿಶ್ರಾಂತಿಯಲ್ಲಿದ್ದ ಡಿ.ಕೆ.ಸುರೇಶ್​ ಇದೀಗ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದಾರೆ. ಡಿ.ಕೆ.ಸುರೇಶ್ ಆಯ್ಕೆ ಹಿನ್ನೆಲೆ ಬಮೂಲ್ ಕಚೇರಿ ಬಳಿ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು

ಬೆಂಗಳೂರಿನ ಯಲಹಂಕ ವಲಯದಲ್ಲಿ ಬಿಬಿಎಂಪಿ ಅಧಿಕಾರಿಗಳು ನಕ್ಷೆ ಉಲ್ಲಂಘನೆ ಮಾಡಿದ 13 ಕಟ್ಟಡಗಳನ್ನು ತೆರವುಗೊಳಿಸಿದ್ದಾರೆ. ಹಲವಾರು ಬಾರಿ ನೋಟಿಸ್ ನೀಡಿದ್ದರೂ ಕ್ಯಾರೆ ಎನ್ನದ ಕಟ್ಟಡ ಮಾಲೀಕರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರಪ್ಪ ಲೇಔಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ಮಾಡಲಾಗಿದೆ.

ಲಾಲ್ ಬಾಗ್ ಸುತ್ತೋದು ಇನ್ನಷ್ಟು ಸುಲಭ! ಕಾಲ್ನಡಿಗೆ ಕಷ್ಟ ಆಗುವವರಿಗೆ ಸಿಗಲಿದೆ ಇ ಸ್ಕೂಟರ್ ಸೌಲಭ್ಯ

ಲಾಲ್ ಬಾಗ್ ಸುತ್ತೋದು ಇನ್ನಷ್ಟು ಸುಲಭ! ಕಾಲ್ನಡಿಗೆ ಕಷ್ಟ ಆಗುವವರಿಗೆ ಸಿಗಲಿದೆ ಇ ಸ್ಕೂಟರ್ ಸೌಲಭ್ಯ

ವಾರಾಂತ್ಯ ಬಂತು ಅಂದರೆ ಬೆಂಗಳೂರು ಸುತ್ತಲು ಒಂದೊಳ್ಳೆ ಜಾಗ ಅಂದರೆ ಅದು ಲಾಲ್ ಬಾಗ್. ನಗರದ ಮಾಲಿನ್ಯ ಜಂಜಾಟದ ನಡುವೆ ಸ್ವಲ್ಪ ರಿಲಾಕ್ಸ್ ಮೂಡ್​ಗೆ ಜಾರುವುದಕ್ಕೆ ಇದೊಳ್ಳೆ ತಾಣ. ಲಾಲ್​ ಬಾಗ್​ನಲ್ಲಿ ನಡೆಯಲು ಕಷ್ಟ ಎನ್ನುವವರಿಗೆ ಅನುಕೂಲ ಮಾಡಿಕೊಡಲು ತೋಟಗಾರಿಕಾ ಇಲಾಖೆ ಇದೀಗ ಹೊಸದೊಂದು ಯೋಜನೆಗೆ ಮುಂದಾಗಿದೆ.

ಕೆಎಸ್​​ಸಿಎಗೆ ಮತ್ತೊಂದು ಸಂಕಷ್ಟ: 10 ಕೋಟಿ ರೂ ಜಾಹೀರಾತು ತೆರಿಗೆ ಬಾಕಿ, ವಸೂಲಿಗೆ ಮುಂದಾದ ಬಿಬಿಎಂಪಿ

ಕೆಎಸ್​​ಸಿಎಗೆ ಮತ್ತೊಂದು ಸಂಕಷ್ಟ: 10 ಕೋಟಿ ರೂ ಜಾಹೀರಾತು ತೆರಿಗೆ ಬಾಕಿ, ವಸೂಲಿಗೆ ಮುಂದಾದ ಬಿಬಿಎಂಪಿ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ಈಗಾಗಲೇ ಕೆಎಸ್​​ಸಿಎ ಸಿಐಡಿ ತನಿಖೆ ಎದುರಿಸುತ್ತಿದೆ. ಈ ಮಧ್ಯೆ ಬಿಬಿಎಂಪಿಯಿಂದ ಮತ್ತೊಂದು ಶಾಕ್ ಎದುರಾಗಿದೆ. ಅದೇನೆಂದರೆ ಬಾಕಿ ತೆರಿಗೆ ವಸೂಲಿಗೆ ಪಾಲಿಕೆ ಮುಂದಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸುಮಾರು 10 ಕೋಟಿ ರೂ ಜಾಹೀರಾತು ತೆರಿಗೆ ಬಾಕಿ ಉಳಿಸಿಕೊಂಡಿದೆ.

ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಜೀವಂತ ಸಾಕ್ಷಿಯಾದ ರಾಶಿ ರಾಶಿ ಚಪ್ಪಲಿಗಳು

ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಜೀವಂತ ಸಾಕ್ಷಿಯಾದ ರಾಶಿ ರಾಶಿ ಚಪ್ಪಲಿಗಳು

ಕ್ರಿಕೆಟ್ ಪಂದ್ಯಗಳ ಸಂದರ್ಭಗಳಲ್ಲಿ ಜನರಿಂದ ಹರ್ಷೋದ್ಘಾರದ, ಸಂಭ್ರಮದ ಕೇಕೆಗಳ ಧ್ವನಿ ಕೇಳಿಸುತ್ತಿದ್ದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಈಗ ಅಕ್ಷರಶಃ ಸ್ಮಶಾನವಾಗಿಬಿಟ್ಟಿದೆ. ಬುಧವಾರವಂತೂ ಕಾಲ್ತುಳಿತದಿಂದ ಜನರ ಆಕ್ರಂದನ ಮುಗಿಲುಮುಟ್ಟಿತ್ತು. ಇದೀಗ ಅನಾಥವಾಗಿ ರಾಶಿ ಬಿದ್ದಿರುವ ಚಪ್ಪಲಿಗಳು ದುರಂತದ ತೀವ್ರತೆ ಹೇಗಿದ್ದಿರಬಹುದು ಎಂಬುದನ್ನು ಸಾರಿ ಹೇಳುತ್ತಿವೆ.

ಬಕ್ರೀದ್: ಚಾಮರಾಜಪೇಟೆ ಮೈದಾನದಲ್ಲಿ ಕುರಿ ಮಾರಾಟ ಜೋರು; ಪಂಜಾಬಿ, ಮಧುರೈ ತಳಿಗಳಿಗೆ ಹೆಚ್ಚಿದ ಬೇಡಿಕೆ

ಬಕ್ರೀದ್: ಚಾಮರಾಜಪೇಟೆ ಮೈದಾನದಲ್ಲಿ ಕುರಿ ಮಾರಾಟ ಜೋರು; ಪಂಜಾಬಿ, ಮಧುರೈ ತಳಿಗಳಿಗೆ ಹೆಚ್ಚಿದ ಬೇಡಿಕೆ

ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್​ಗೆ ಕ್ಷಣಗಣನೆ ಶುರುವಾಗಿದೆ. ಇತ್ತ ಬಕ್ರೀದ್​​ಗೆ ಇನ್ನೂ ಐದು ದಿನಗಳು ಇರುವಾಗಲೇ ಬೆಂಗಳೂರಿನಲ್ಲಿ ಮೇಕೆ, ಕುರಿಗಳ ವ್ಯಾಪಾರ ಗರಿಗೆದರಿದೆ. ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಬೇರೆ ಬೇರೆ ಭಾಗಗಳಿಂದ ಆಗಮಿಸಿರುವ ವ್ಯಾಪಾರಿಗಳು ಕುರಿ, ಮೇಕೆ ವ್ಯಾಪಾರದಲ್ಲಿ ವ್ಯಸ್ತರಾಗಿದ್ದರೆ, ಇತ್ತ ಮಾರುಕಟ್ಟೆಯಲ್ಲಿ ಡ್ರೈ ಫ್ರೂಟ್ಸ್​ಗೂ ಬೇಡಿಕೆ ಹೆಚ್ಚಾಗಿದೆ.

ಬೆಂಗಳೂರು: ಈಜಿಪುರದಲ್ಲಿ ಇಂದು 108 ಅಡಿ ಎತ್ತರದ ವಿಷ್ಣು ವಿಗ್ರಹ ಪ್ರತಿಷ್ಠಾಪನೆ

ಬೆಂಗಳೂರು: ಈಜಿಪುರದಲ್ಲಿ ಇಂದು 108 ಅಡಿ ಎತ್ತರದ ವಿಷ್ಣು ವಿಗ್ರಹ ಪ್ರತಿಷ್ಠಾಪನೆ

ಬೆಂಗಳೂರಿನ ಈಜಿಪುರದಲ್ಲಿ 108 ಅಡಿ ಎತ್ತರದ ಏಕಶಿಲಾ ವಿಷ್ಣು ಪ್ರತಿಮೆಯ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದಿದೆ. ಇದು ವಿಶ್ವದ ಅತಿ ಎತ್ತರದ ಏಕಶಿಲಾ ವಿಷ್ಣು ಪ್ರತಿಮೆಯಾಗಿದ್ದು, 300 ಟನ್ ತೂಕ ಹೊಂದಿದೆ. 2.60 ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದೆ. ವಿಷ್ಣು ಪ್ರತಿಮೆ ನೋಡಲು ಭಕ್ತರು ಈಜಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಮಳೆ ಹಾನಿ ಪ್ರದೇಶಗಳ ಮೇಲೆ ನಿಗಾ ಇಡಲು ಡ್ರೋನ್ ಮೊರೆ ಹೋದ ಬಿಬಿಎಂಪಿ!

ಮಳೆ ಹಾನಿ ಪ್ರದೇಶಗಳ ಮೇಲೆ ನಿಗಾ ಇಡಲು ಡ್ರೋನ್ ಮೊರೆ ಹೋದ ಬಿಬಿಎಂಪಿ!

ಮುಂಗಾರು ಮಳೆಯ ಅಬ್ಬರ ಅವಧಿಗೂ ಮುನ್ನವೇ ಜೋರಾಗಿದೆ. ಇತ್ತ ಮಳೆಗಾಲದಲ್ಲಿ ಸಾಲು ಸಾಲು ಅವಾಂತರ ಸೃಷ್ಟಿಯಾಗುವ ಬೆಂಗಳೂರಿನ ಸ್ಥಿತಿಗತಿಗಳನ್ನ ಪರಿಶೀಲಿಸಬೇಕಿದ್ದ ಪಾಲಿಕೆ, ಇದೀಗ ದಿನಕ್ಕೊಂದು ಹೊಸ ಯೋಜನೆ ಬಗ್ಗೆ ಚಿಂತನೆ ಮಾಡುತ್ತಿದೆ. ಆ ಮೂಲಕ ಮಳೆಯ ಅವಾಂತರಗಳನ್ನು ನಿಯಂತ್ರಿಸಲು ಕಸರತ್ತು ನಡೆಸುತ್ತಿದೆ. ಶುಕ್ರವಾರವಷ್ಟೇ ಬೋಟ್ ಖರೀದಿಗೆ ಟೆಂಡರ್ ಕರೆದಿದ್ದ ಪಾಲಿಕೆ ಇದೀಗ ರಾಜಧಾನಿಯ ಮಳೆ ಹಾನಿ ಪ್ರದೇಶಗಳ ಮೇಲೆ ನಿಗಾ ಇಡಲು ಡ್ರೋನ್ ಹಾರಿಸಲು ಸಜ್ಜಾಗಿದೆ!

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ

ಮಳೆಗೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳು ಜಲಾವೃತಗೊಂಡಿದ್ದವು. ಸಾಯಿಲೇಔಟ್, ಯಲಹಂಕ, ಕೋರಮಂಗಲ ಸುತ್ತಮುತ್ತ ಇಡೀ ಏರಿಯಾ ನೀರಿನಿಂದ ಆವರಿಸಿಬಿಟ್ಟಿತ್ತು. ಇತ್ತ, ಮುಂಗಾರು ಮಳೆ ಆರಂಭವಾಗುತ್ತಿರುವ ಹೊತ್ತಿನಲ್ಲೇ ಪಾಲಿಕೆ ಸಮಸ್ಯೆಗೆ ಪರಿಹಾರ ಹುಡುಕುತ್ತೆ ಅಂತ ಜನರು ಕಾದುಕುಳಿತಿದ್ದಾರೆ. ಆದರೆ, ಪಾಲಿಕೆ ಮಾತ್ರ ಜನರಿಗೆ ಬೋಟ್ ಭಾಗ್ಯ ನೀಡಲು ತೀರ್ಮಾನಿಸಿದೆ. ಏನಿದು ಬೋಟ್​ ಭಾಗ್ಯ? ಇಲ್ಲಿದೆ ವಿವರ