ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ, ರಾತ್ರಿಯಿಡೀ ಕಾಯೋ ಸ್ಥಿತಿ
ಕೊಪ್ಪಳ ಜಿಲ್ಲೆಯ ಯರೇ ಹಂಚಿನಾಳ ಗ್ರಾಮವು ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಗ್ರಾಮದ ಕೆರೆ ಬಹುತೇಕ ಬರಿದಾಗಿದ್ದು, ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಅವಲಂಬಿತರಾಗಿದ್ದಾರೆ. ಶುದ್ಧ ನೀರಿಗಾಗಿ ಕ್ಯಾನ್ಗಳನ್ನು ಹಿಡಿದುಕೊಂಡು ಗಂಟೆಗಟ್ಟಲೆ ರಾತ್ರಿಯಿಡೀ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
- Shivakumar Pattar
- Updated on: Jun 20, 2026
- 9:25 am
ರೈತರಿಗೆ ಖುಷಿ ಸುದ್ದಿ: ಜೂ 25ಕ್ಕೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ
ತುಂಗಭದ್ರಾ ಜಲಾಶಯದ ಕ್ರಷ್ಟ್ ಗೇಟ್ ವೈಫಲ್ಯದ ಬಳಿಕ, 51 ಕೋಟಿ ರೂ ವೆಚ್ಚದಲ್ಲಿ 33 ಹೊಸ ಗೇಟ್ಗಳನ್ನು ಅಳವಡಿಸಲಾಗಿದ್ದು, ಅವು 55 ರಿಂದ 60 ವರ್ಷಗಳ ಬಾಳಿಕೆ ಬರಲಿವೆ. ಜೂನ್ 25ರಂದು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಗೇಟ್ಗಳನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಮೂರು ರಾಜ್ಯಗಳ ನಡುವೆ ಜಲ ಹಂಚಿಕೆ ಹಾಗೂ ನೀರಾವರಿ ಯೋಜನೆಗಳ ಕುರಿತು ಮಹತ್ವ ಚರ್ಚೆ ಕೂಡ ನಡೆಯಲಿದೆ.
- Shivakumar Pattar
- Updated on: Jun 19, 2026
- 4:14 pm
ಕೊಪ್ಪಳದಲ್ಲಿ ಹೊಸ ನಾಂದಿ ಹಾಡಿದ ಉತ್ಸವಗಳ ವಾರ್: ರಾಜಕೀಯ ನಾಯಕರ ಜಿದ್ದಾಜಿದ್ದಿ
ಕೊಪ್ಪಳ ಜಿಲ್ಲೆಯಲ್ಲಿ ಉತ್ಸವಗಳ ರಾಜಕೀಯ ಬಿರುಸಾಗಿದೆ. ಶಾಸಕ ಜನಾರ್ದನ ರೆಡ್ಡಿ ಜಿಲ್ಲಾಡಳಿತಕ್ಕೂ ಮೊದಲೇ ಆನೆಗೊಂದಿ ಉತ್ಸವ ದಿನಾಂಕ ಘೋಷಿಸಿ ಸಂಚಲನ ಮೂಡಿಸಿದ್ದಾರೆ. ಮತ್ತೊಂದೆಡೆ, ಸಿಎಂ ಬದಲಾವಣೆ ನೆಪದಲ್ಲಿ ಕನಕಗಿರಿ ಉತ್ಸವ ಮುಂದೂಡಲ್ಪಟ್ಟಿದ್ದು, ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ. ಕೂಡಲೇ ಉತ್ಸವಗಳನ್ನು ನಡೆಸಲು ಜನ ಒತ್ತಾಯಿಸುತ್ತಿದ್ದಾರೆ.
- Shivakumar Pattar
- Updated on: Jun 17, 2026
- 3:09 pm
ಕೊಪ್ಪಳದಲ್ಲಿ ಪತ್ತೆಯಾದ ಶಿವಲಿಂಗಕ್ಕೂ ಸಿಎಂ ಡಿಕೆ ಶಿವಕುಮಾರ್ಗೂ ಲಿಂಕ್: ಉದ್ಯಮಿ ಕನಸಲ್ಲಿ ಕಂಡಿದ್ದೇನು?
ಕೊಪ್ಪಳದಲ್ಲಿ ಉದ್ಯಮಿಯೊಬ್ಬರ ಜಮೀನಿನಲ್ಲಿ ಪವಾಡಸದೃಶ ಶಿವಲಿಂಗ ಪತ್ತೆಯಾಗಿದೆ. ಕನಸು ಬಿದ್ದ ಮರುದಿನವೇ ಜಮೀನಿನಲ್ಲಿ ಶಿವಲಿಂಗ ಪತ್ತೆ ಆಗಿರುವುದು ಸದ್ಯ ಜಿಲ್ಲೆಯ ಜನರ ಅಚ್ಚರಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಶಿವನ ಆಜ್ಞೆಯಂತೆ ರಾಜ್ಯ ನೂತನ ಸಿಎಂ ಡಿಕೆ ಶಿವಕುಮಾರ್ಗೆ ಈ ದೈವಿಕ ಶಿವಲಿಂಗ ಹಸ್ತಾಂತರಿಸಲು ಉದ್ಯಮಿ ಮುಂದಾಗಿದ್ದಾರೆ.
- Shivakumar Pattar
- Updated on: Jun 15, 2026
- 4:47 pm
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದ್ದು, ಕೇವಲ 9 ಟಿಎಂಸಿ ನೀರು ಸಂಗ್ರಹ ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 24 ಟಿಎಂಸಿ ನೀರಿತ್ತು. ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾದ ಈ ಜಲಾಶಯದ ಕುಸಿತದಿಂದ ಕುಡಿಯುವ ನೀರು ಹಾಗೂ ಕೃಷಿಗೆ ತೀವ್ರ ತೊಂದರೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ.
- Shivakumar Pattar
- Updated on: Jun 12, 2026
- 9:49 am
ಕೊಪ್ಪಳ: ಗ್ಯಾಸ್ ಕಟರ್ ಬಳಸಿ ಎಸ್ಬಿಐ ಎಟಿಎಂ ದರೋಡೆಗೆ ಯತ್ನ, ಬೆಂಕಿ ಹೊತ್ತಿಕೊಂಡಿದ್ದರಿಂದ ಕಂಗಾಲಾಗಿ ಕಾಲ್ಕಿತ್ತ ಖದೀಮರು
ಕೊಪ್ಪಳದ ಹೊಸಪೇಟೆ ರಸ್ತೆಯ ಎಸ್ಬಿಐ ಎಟಿಎಂ ಕಳವು ಮಾಡಲು ಯತ್ನಿಸಿದ ಖದೀಮರು, ಗ್ಯಾಸ್ ಕಟರ್ ಮೂಲಕ ಕಟ್ ಮಾಡಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ, ಯಂತ್ರಕ್ಕೆ ಬೆಂಕಿ ಹೊತ್ತಿಕೊಂಡ ಕಾರಣ ಹಣ ಸಿಗದೆ ಪರಾರಿಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Shivakumar Pattar
- Updated on: Jun 10, 2026
- 9:29 am
ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
- Shivakumar Pattar
- Updated on: May 23, 2026
- 9:11 am
ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ!
ಕಾರ್ಖಾನೆಗಳ ಹೊಗೆಯಿಂದ ನಲುಗಿದ್ದ ಕೊಪ್ಪಳ ಜಿಲ್ಲೆಯ ಜನರಿಗೆ ಇದೀಗ ತುಸು ನೆಮ್ಮದಿ ಸಿಕ್ಕಿದೆ. ಏಕೆಂದರೆ ತಾಲೂಕಿನಲ್ಲಿದ್ದ ಎರಡು ಕಾರ್ಖಾನೆಗಳನ್ನು ಜಿಲ್ಲಾಡಳಿತ ಸೀಜ್ ಮಾಡಿದೆ. ಟಿವಿ9 ನಿರಂತರ ವರದಿ ಬಳಿಕ ಎರಡು ಕಾರ್ಖಾನೆಗಳಿಗೆ ಬೀಗ ಬಿದ್ದಿದೆ. ಈ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಮಾಹಿತಿ ನೀಡಿದ್ದಾರೆ.
- Shivakumar Pattar
- Updated on: May 21, 2026
- 9:38 pm
ರಾಜಧನ ವಂಚಿಸಿದ ಕ್ವಾರಿಗಳಿಗೆ ಕೋಟ್ಯಂತರ ರೂ ದಂಡ: ರಾಜಕೀಯ ಪ್ರಭಾವಿಗಳಿಗೂ ಶಾಕ್!
ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜಧನ ಪಾವತಿಸದ ಕಲ್ಲು ಕ್ವಾರಿಗಳ ವಿರುದ್ಧ ಕಠಿಣ ಕ್ರಮಕೈಗೊಂಡಿದೆ. ಮುಖ್ಯವಾಗಿ ಕೊಪ್ಪಳ ಜಿಲ್ಲೆಯಲ್ಲಿ, ಪರವಾನಿಗೆ ಹೊಂದಿದ್ದರೂ ರಾಜಧನ ವಂಚನೆ ಮಾಡಿದ 60 ಕ್ವಾರಿಗಳಿಗೆ 110 ಕೋಟಿ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ವಾರಿಗಳೂ ಸೇರಿವೆ.
- Shivakumar Pattar
- Updated on: May 20, 2026
- 7:22 pm
ಯತ್ನಾಳ್ ಹೇಳಿಕೆಗೆ ಬೆಂಬಲವಿದೆ ಎಂದ ಜನಾರ್ದನ ರೆಡ್ಡಿ: ಖಡಕ್ ರಿಯಾಕ್ಷನ್ ಕೊಟ್ಟ ಗಂಗಾವತಿ ಶಾಸಕ
ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ "ಯೆಸ್ ಸರ್" ಬದಲು "ಜೈ ಶ್ರೀರಾಮ್" ಹೇಳಬೇಕೆಂಬ ಕರೆಯನ್ನು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಬೆಂಬಲಿಸಿದ್ದಾರೆ. ಹಾಜರಾತಿ ವೇಳೆ ಈ ಘೋಷಣೆ ಇರಬೇಕು. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ನಿರತವಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ. ಹಿಜಾಬ್ ವಿಷಯದಲ್ಲಿ ನ್ಯಾಯಾಲಯದ ಆದೇಶಗಳಿದ್ದರೂ ಸರ್ಕಾರ ಆದೇಶ ಹೊರಡಿಸಿರುವುದನ್ನು ಅವರು ಟೀಕಿಸಿದ್ದಾರೆ.
- Shivakumar Pattar
- Updated on: May 19, 2026
- 3:08 pm
ಕೊಪ್ಪಳದಲ್ಲಿ ಗಾಳಿ ಮಳೆಯಬ್ಬರ: ಬೇರು ಸಮೇತ ನೆಲಕ್ಕುರುಳಿದ ಮರಗಳು, ಕ್ರೇನ್ ಧರಾಶಾಹಿ
ಕರ್ನಾಟಕದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಭಾರಿ ಅವಾಂತರಗಳು ನಡೆದಿವೆ. ಕೊಪ್ಪಳದ ಕುಷ್ಟಗಿಯಲ್ಲಿ ಬೃಹತ್ ಮರಗಳು ರಸ್ತೆಗಳಿಗೆ ಅಡ್ಡಲಾಗಿ ಉರುಳಿದ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿದೆ. ಇದೇ ವೇಳೆ, ತಾವರಗೇರಾದಲ್ಲಿ ಗಾಳಿಗೆ ಕ್ರೇನ್ ಪತನಗೊಂಡಿದ್ದು, ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗದಗ, ಹಾವೇರಿ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಮುಂದುವರಿದಿದೆ.
- Shivakumar Pattar
- Updated on: May 18, 2026
- 11:57 am
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಆಗುವ ಅರ್ಹತೆ ಇರುವುದು ಮಲ್ಲಿಕಾರ್ಜುನ ಖರ್ಗೆಗೆ ಮಾತ್ರ: ಬಸವರಾಜ ರಾಯರೆಡ್ಡಿ
ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಎರಡು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರ ಆಡಳಿತ ಉತ್ತಮವಾಗಿದ್ದು, ಭ್ರಷ್ಟಾಚಾರದ ಆರೋಪಗಳಿಲ್ಲ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಅಗತ್ಯ ಎದುರಾದರೆ, ಮಲ್ಲಿಕಾರ್ಜುನ ಖರ್ಗೆ ಮಾತ್ರ ಸಿದ್ದರಾಮಯ್ಯರ ಮಟ್ಟದ ಅನುಭವ ಹೊಂದಿದ್ದಾರೆ ಎಂದು ರಾಯರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
- Shivakumar Pattar
- Updated on: May 16, 2026
- 2:47 pm