ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಬಂಗಾರದ ಬೆಲೆ ಗಗನಕ್ಕೇರಿದರೂ ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ದೇಣಿಗೆ ನೀಡಿದ್ದಾರೆ. ಎಎಂಆರ್ (AMR) ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ನೇತೃತ್ವದಲ್ಲಿ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆ ಅರ್ಪಣೆ ಮಾಡಲಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಸಹ ಈ ವೇಳೆ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
- Shivakumar Pattar
- Updated on: May 8, 2026
- 11:35 am
ಮದುವೆಯಾಗೋದಾಗಿ ನಂಬಿಸಿ ಗರ್ಭಿಣಿ ಮಾಡಿ ಯುವತಿಗೆ ಕೈಕೊಟ್ಟ ವಿವಾಹಿತ: ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ
ಯುವತಿಗೆ ಮದುವೆ ಭರವಸೆ ನೀಡಿ, ಆಕೆಯನ್ನು ಗರ್ಭಿಣಿಯಾಗಿಸಿ ಬಳಿಕ ವಂಚನೆ ಮಾಡಿರುವ ಆರೋಪ ವಿವಾಹಿತ ವ್ಯಕ್ತಿಯೋರ್ವನ ಮೇಲೆ ಕೊಪ್ಪಳದ ಹೊಸೂರಿನಲ್ಲಿ ಕೇಳಿಬಂದಿದೆ. ಸಂತ್ರಸ್ತೆ ಗರ್ಭಿಣಿಯಾದ ಬಳಿಕ ಆರೋಪಿ ಕೈಕೊಟ್ಟಿದ್ದು, ಯುವತಿ ಮಹಿಳಾ ಠಾಣೆ ಮೆಟ್ಟಿಲೇರಿದ್ದಾರೆ. ಹುಟ್ಟುವ ಮಗುವಿಗೆ ತಂದೆಯ ಅಗತ್ಯವಿದ್ದು, ಕುಟುಂಬಸ್ಥರು ಕೂಡ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
- Shivakumar Pattar
- Updated on: May 2, 2026
- 7:12 am
ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಆರು ಜನ ಹಂತಕರಿಗೆ ಗಲ್ಲು ಶಿಕ್ಷೆ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಗಾವತಿಯ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಜನರಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ.
- Shivakumar Pattar
- Updated on: Apr 30, 2026
- 3:38 pm
ಕೊಪ್ಪಳ: 21 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ಕೈಗೆ ಸಿಕ್ಕಿಬಿದ್ದ ಎಸ್ಡಿಎ ರಂಜಿತ್
ಕೊಪ್ಪಳದಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹಕ್ಕೆ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾದೇಶಿಕ ಸಾರಿಗೆ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಂಜಿತ್ ಶೋರೂಮ್ ಟ್ರೇಡ್ ಲೈಸೆನ್ಸ್ ನೀಡಲು 21,000 ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದೂರುದಾರ ನಯೀಮ್ ಅವರ ದೂರಿನನ್ವಯ ಈ ದಾಳಿ ನಡೆದಿದೆ. ರಾಯಚೂರು ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರಂಜಿತ್ ಮತ್ತು ವಿನಯ್ ಬಂಧಿತರಾಗಿದ್ದು, ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
- Shivakumar Pattar
- Updated on: Apr 29, 2026
- 4:35 pm
SSLC ಫಲಿತಾಂಶದಲ್ಲಿ ಮತ್ತೊಂದು ಎಡವಟ್ಟು: ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಕೊಪ್ಪಳ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ದೊಡ್ಡ ಎಡವಟ್ಟು ಸಂಭವಿಸಿದೆ. ವಿದ್ಯಾರ್ಥಿನಿಗೆ ಉತ್ತಮ ಅಂಕ ಬಂದಿದ್ದರೂ ಅಂಕಪಟ್ಟಿಯಲ್ಲಿ ದಾಖಲಾಗಿದ್ದು ಮಾತ್ರ ಕಡಿಮೆ. ಈ ತಪ್ಪು ನಮೂದಿನಿಂದ ತೀವ್ರ ಮಾನಸಿಕ ಕುಸಿತಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು, ಪೋಷಕರ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾಳೆ. ಇಲಾಖೆಯ ಈ ಲೋಪಕ್ಕೆ ಆಕ್ರೋಶ ವ್ಯಕ್ತವಾಗಿದೆ.
- Shivakumar Pattar
- Updated on: Apr 27, 2026
- 9:35 pm
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ!
ಕೊಪ್ಪಳದ ದದೇಗಲ್ ಬಳಿ ಅಕ್ರಮವಾಗಿ ಟ್ರ್ಯಾಕ್ಟರ್ನಲ್ಲಿ ಸಾಗಿಸುತ್ತಿದ್ದ ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ಗ್ರಾಮೀಣ ಪೊಲೀಸರು ಭಾನುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸರಣಿಯಾಗಿ ನಡೆಯುತ್ತಿರುವ ಅಕ್ಕಿ ದಂಧೆ ತಡೆಯಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ ಇಂಥ ಕೃತ್ಯಗಳು ನಡೆಯುತ್ತಲೇ ಇವೆ. ಸದ್ಯ ಪೊಲೀಸರು ಅಕ್ಕಿ ವಶಪಡಿಸಿಕೊಂಡಿರುವ ವಿಡಿಯೋ ಇಲ್ಲಿದೆ.
- Shivakumar Pattar
- Updated on: Apr 27, 2026
- 10:32 am
ಬರಿದಾದ ಹಿರೇಹಳ್ಳ ಜಲಾಶಯ: ಖಾಲಿ ಡ್ಯಾಂ ಮಕ್ಕಳಿಗೀಗ ಕ್ರಿಕೆಟ್ ಮೈದಾನ!
ಬಿಸಿಲ ಬೇಗೆಗೆ ಕೊಪ್ಪಳದ ಹಿರೇಹಳ್ಳ ಜಲಾಶಯ ಬರಿದಾಗಿದ್ದು, ಮಕ್ಕಳು ಮತ್ತು ಯುವಕರಿಗೆ ಕ್ರಿಕೆಟ್ ಮೈದಾನವಾಗಿ ಮಾರ್ಪಟ್ಟಿದೆ. 10 ವರ್ಷಗಳ ಬಳಿಕ ನೀರಿನ ಮಟ್ಟ ದಾಖಲೆ ರೀತಿ ಕುಸಿದು, ಕೇವಲ ಶೇ.20 ನೀರು ಉಳಿದಿದೆ. ಇನ್ನೊಂದು ತಿಂಗಳು ಕಳೆದರೆ ಹನಿ ನೀರು ಕೂಡ ಜಲಾಶಯದಲ್ಲಿ ಸಿಗದ ಸ್ಥಿತಿ ತಲುಪಲಿದೆ ಎನ್ನಲಾಗಿದೆ.
- Shivakumar Pattar
- Updated on: Apr 26, 2026
- 11:09 am
ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್ ಖುಷ್
ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕೆಲಸ ಅವಧಿಗೂ ಮುನ್ನ ಪೂರ್ಣಗೊಂಡಿದೆ. 33 ಗೇಟ್ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದೆ. ಡ್ಯಾಂನ 12 ಗೇಟ್ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್ಗಳ ಪರೀಕ್ಷೆ ಮಾಡಬೇಕಿದೆ. ಅವಧಿಗೂ ಮೊದಲೇ ಕಾಮಗಾರಿ ಮುಗಿದಿದ್ದರಿಂದ ರೈತರು ಸಂತಸಗೊಂಡಿದ್ದಾರೆ.
- Shivakumar Pattar
- Updated on: Apr 26, 2026
- 9:24 am
ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ.
- Shivakumar Pattar
- Updated on: Apr 25, 2026
- 8:43 pm
ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜತೆ ಸಂಸಾರ: ಇದೇನಿದು ವಿದ್ಯೆ ಕಲಿಸುವ ಗುರುವಿನ ಆಟ?
ಶಿಕ್ಷಕ ವೃತ್ತಿ ಸಮಾಜದಲ್ಲಿ ಅತ್ಯಂತ ಪವಿತ್ರವಾಗಿದ್ದು, ಶಿಕ್ಷಕ ಹುದ್ದೆ ಸಮಾಜವನ್ನು ಪರಿವರ್ತಿಸುವ ಶಕ್ತಿ ಹೊಂದಿದೆ. ಶಿಕ್ಷಕರು ವಿದ್ಯಾರ್ಥಿಗಳ ಮೂಲಕ ಸಮಾಜದ ದಿಕ್ಕನ್ನು ಬದಲಿಸುವ ಸಾಮರ್ಥ್ಯ ಹೊಂದಿರುತ್ತಾರೆ. ವೃತ್ತಿಯಲ್ಲಿನ ಪ್ರಾಮಾಣಿಕತೆಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂಬ ಪರಿಕಲ್ಪನೆ ಇದೆ. ಹೀಗಾಗಿ ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ. ಆದ್ರೆ, ಇಲ್ಲೋರ್ವ ಕೊಪ್ಪಳದಲ್ಲಿ ಸರ್ಕಾರಿ ಶಿಕ್ಷಕ ಮನೆಹಾಳ ಕೆಲಸ ಮಾಡಿದ್ದು, ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದಾನೆ.
- Shivakumar Pattar
- Updated on: Apr 25, 2026
- 3:04 pm
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು?
ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ.
- Shivakumar Pattar
- Updated on: Apr 24, 2026
- 2:34 pm
ಬಡವರಿಗೆ ಸೇರಬೇಕಿದ್ದ ಅನ್ನಭಾಗ್ಯ ಅಕ್ಕಿ ದಂಧೆಕೋರರ ಪಾಲು: 2,000ಕ್ಕೂ ಹೆಚ್ಚು ಮೂಟೆಗಳು ವಶಕ್ಕೆ
ಕೊಪ್ಪಳದ ಕೂಕನಪಳ್ಳಿ ಹೊರವಲಯದಲ್ಲಿ ಅನ್ನಭಾಗ್ಯ ಯೋಜನೆಯ 2,000ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಮುನಿರಾಬಾದ್ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿ ವಲಯ ಐಜಿಪಿ ಸೂಚನೆ ಮೇರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 150 ಟನ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
- Shivakumar Pattar
- Updated on: Apr 24, 2026
- 1:59 pm