ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತ: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು
ಕೊಪ್ಪಳದ ಹಿರೇಬಗನಾಳ ಗ್ರಾಮದ ರೈತರು ಕಾರ್ಖಾನೆಗಳ ಹೊಗೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳು ಕಪ್ಪಾಗಿ, ಜಾನುವಾರುಗಳಿಗೆ ತಿನ್ನಲು ಯೋಗ್ಯವಲ್ಲದ ಸ್ಥಿತಿಗೆ ತಲುಪಿವೆ. ಅಧಿಕಾರಿಗಳ ಭರವಸೆಗಳ ಹೊರತಾಗಿಯೂ ಮಾಲಿನ್ಯ ಮುಂದುವರಿದಿದ್ದು, 80 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ನ್ಯಾಯಕ್ಕಾಗಿ ಗವಿಸಿದ್ದಪ್ಪನ ಮೊರೆ ಹೋಗಲು ಸಿದ್ಧರಾಗಿದ್ದಾರೆ.
- Shivakumar Pattar
- Updated on: Jan 20, 2026
- 8:51 pm
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ ಪ್ರಸಾದ
ಕೊಪ್ಪಳದ ಗವಿಮಠ ಜಾತ್ರೆಯ ಮಹಾದಾಸೋಹದ ಅಂತಿಮ ದಿನದಂದು ಭಕ್ತರಿಗಾಗಿ 85 ಕ್ವಿಂಟಾಲ್ ಗೋಧಿ ಹುಗ್ಗಿ ಪ್ರಸಾದ ಸಿದ್ಧಪಡಿಸಲಾಗಿತ್ತು. 18 ದಿನಗಳ ಕಾಲ ನಡೆದ ಈ ದಾಸೋಹದಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವಿಸಿದ್ದು, ಕೊನೆಯ ದಿನ 50 ಕ್ವಿಂಟಾಲ್ ಬೆಲ್ಲ ಮತ್ತು 25 ಕ್ವಿಂಟಾಲ್ ಗೋಧಿ ಬಳಸಿ ಗೋಧಿ ಹುಗ್ಗಿ ತಯಾರಿಸಲಾಗಿದೆ.
- Shivakumar Pattar
- Updated on: Jan 18, 2026
- 5:10 pm
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉತ್ಖನನ ಅಂತ್ಯವಾಗಿದೆ. ಸುಮಾರು 20 ಕಾರ್ಮಿಕರಿಂದ ದೇಗುಲ ಬಳಿ ಉತ್ಖನನ ನಡೆದಿದ್ದು, 10 ರಿಂದ 12 ಇಂಚಿನಷ್ಟು ಮಣ್ಣು ಅಗೆದು ಜಾಗವನ್ನು ಸ್ವಚಗೊಳಿಸಲಾಗಿದೆ. ಇನ್ನು ಮೊದಲ ದಿನ ಉತ್ಖನನ ಹೇಗಿತ್ತು? ಮುಂದೇನು ಎನ್ನುವುದನ್ನು ತಹಶೀಲ್ದಾರ್ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.
- Shivakumar Pattar
- Updated on: Jan 16, 2026
- 7:34 pm
ಕುಟುಂಬಕ್ಕೆ ಸಂಕಷ್ಟ ತಂದಿಟ್ಟ ವೈರಲ್ ವಿಡಿಯೋ: ಕೊಪ್ಪಳ ಗವಿಮಠ ಜಾತ್ರೆಯಲ್ಲಿ ಅವಳಲ್ಲ ಅವನಾದ ಕಥೆ
ಅಲೆಮಾರಿ ಕುಟುಂಬವೊಂದು ಜಾತ್ರೆ ಜಾತ್ರೆ ಅಲೆದಾಡಿ ಸಾಹಸ ಪ್ರದರ್ಶನಗಳನ್ನ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿತ್ತು.ಸಾಹಸ ಪ್ರದರ್ಶನಕ್ಕೆ ಆ ಕುಟುಂಬ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಳ್ಳುತ್ತಿತ್ತು.10 ವರ್ಷದ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿತ್ತು.ಆ ಪುಟ್ಟ ಬಾಲಕಿಯ ಸಾಹಸ ದೃಶ್ಯಗಳನ್ನ ನೋಡಿ ಅದೆಷ್ಟೋ ಜನ ಬೆರಗಾಗಿದ್ರು.ಸಾಮಾಜಿಕ ಜಾಲತಾಣದಲ್ಲಿ ಆ ಪುಟ್ಟ ಬಾಲಕಿ ವಿಡಿಯೋಗೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.ಇದೀಗ ಆ ವಿಡಿಯೋ ಆ ಬಾಲಕಿ ಹಾಗೂ ಕುಟುಂಬಕ್ಕೆ ಸಂಕಷ್ಟ ತಂದಿಟ್ಟಿದೆ.ಆ ವಿಡಿಯೋ ವೈರಲ್ ಬಳಿಕ ವಿಡಿಯೋದಲ್ಲಿರೋದು ಅವಳಲ್ಲ,ಅವನು ಎನ್ನುವ ಸತ್ಯ ಬಯಲಾಗಿದೆ.ಅರೇ ಇದೇನಿದು ಅವಳಲ್ಲ ಅವನಾದ ಕಥೆ ಅಂತೀರಾ ಈ ಸ್ಟೋರಿ ಓದಿ.
- Shivakumar Pattar
- Updated on: Jan 13, 2026
- 9:05 pm
ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?
ತುಂಗಭದ್ರಾ ಜಲಾಶಯದ ಬಹುನಿರೀಕ್ಷಿತ ಗೇಟ್ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. 54 ಕೋಟಿ ರೂ ವೆಚ್ಚದಲ್ಲಿ 33 ಗೇಟ್ಗಳ ಬದಲಾವಣೆಗೆ ಮುಂದಾದ ಸರ್ಕಾರ, ಇದೀಗ 18ನೇ ಗೇಟ್ ಯಶಸ್ವಿಯಾಗಿ ಅಳವಡಿಸಲಾಗಿದೆ. ಮೇ ಅಂತ್ಯದೊಳಗೆ ಸಂಪೂರ್ಣ ಕೆಲಸ ಮುಗಿಯುವ ನಿರೀಕ್ಷೆ ಇದೆ.
- Shivakumar Pattar
- Updated on: Jan 11, 2026
- 8:13 pm
ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ!
ಭಕ್ತರ ಅಚಲ ನಂಬಿಕೆ ಹಾಗೂ ಶ್ರದ್ಧೆ ಹುಲಿಗೆಮ್ಮ ದೇವಿಗೆ ನಿರಂತರವಾಗಿ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರವಾಗಿದೆ. ಹುಂಡಿ ಎಣಿಕೆ ವೇಳೆ ಇದು ತಿಳಿದುಬಂದಿದ್ದು, 90 ಗ್ರಾಂ ಚಿನ್ನ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ದೇವಿಗೆ ಸಮರ್ಪಣೆಯಾಗಿವೆ.
- Shivakumar Pattar
- Updated on: Jan 9, 2026
- 9:17 am
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಮಹಾ ದಾಸೋಹದಲ್ಲಿ ಹೊಸ ದಾಖಲೆ, ಲಕ್ಷಲಕ್ಷ ರೊಟ್ಟಿ ಸಂಗ್ರಹ!
ಗವಿ ಮಠದ ಮಹಾದಾಸೋಹದಲ್ಲಿ ಈಗಾಗಲೇ 6 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವನೆ ಮಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಗವಿ ಮಠಕ್ಕೆ ಆಗಮಿಸುತ್ತಿದ್ದು, ದಾಸೋಹದ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಭಕ್ತರ ಅಪಾರ ಸಹಕಾರ, ದಾನಿಗಳ ಉದಾರ ಮನಸ್ಸು ಹಾಗೂ ಮಠದ ವ್ಯವಸ್ಥಿತ ನಿರ್ವಹಣೆಯಿಂದಾಗಿ ಗವಿ ಮಠದ ದಾಸೋಹ ಈ ಬಾರಿ ದಾಖಲೆ ನಿರ್ಮಿಸಿದ್ದು, ಅನ್ನದಾನವೇ ಮಹಾದಾನ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ.
- Shivakumar Pattar
- Updated on: Jan 8, 2026
- 10:36 am
ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ
ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ದಾಸೋಹದ ಬಳಿ ಜನಸಂದಣಿ ಹೆಚ್ಚಾಗಿತ್ತು. ಇದನ್ನು ನಿಯಂತ್ರಿಸಲು ಕೊಪ್ಪಳ ಎಸ್ಪಿ ಸ್ವತಃ ಚೇರ್ ಮೇಲೆ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡಿದರು. ದಾಖಲೆಗಳಿಗೆ ಸಹಿ ಹಾಕುತ್ತಾ, ಪೊಲೀಸರೊಂದಿಗೆ ಬ್ಯಾರಿಕೇಡ್ ಬಳಸಿ ಸುವ್ಯವಸ್ಥೆ ಕಾಪಾಡಿದರು.
- Shivakumar Pattar
- Updated on: Jan 7, 2026
- 9:37 am
ಭಕ್ತಿ, ಜನಸಂಖ್ಯೆ, ದಾಸೋಹದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ
Koppal Gavisiddeshwara Rathtsava: ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಕೊಪ್ಪಳದ ಗವಿಸಿದ್ದೇಶ್ವರ ಮಹೋತ್ಸವ 2026 ಅದ್ದೂರಿಯಾಗಿ ನೆರವೇರಿತು. ಲಕ್ಷಾಂತರ ಭಕ್ತರು, ಮೈಸೂರು ಪಾಕ್ ಪ್ರಸಾದದ ಘಮಲು, 'ಗವಿಸಿದ್ದೇಶ್ವರ ಮಹಾರಾಜ್ ಕೀ ಜೈ' ಘೋಷಣೆಗಳು ಮುಗಿಲುಮುಟ್ಟಿದವು. 25 ಲಕ್ಷ ರೊಟ್ಟಿ, 20 ಲಕ್ಷ ಮೈಸೂರು ಪಾಕ್ ಸಹಿತ ದಾಖಲೆ ದಾಸೋಹ ನಡೆಯಿತು.
- Shivakumar Pattar
- Updated on: Jan 5, 2026
- 9:34 pm
ಅದ್ಧೂರಿಯಾಗಿ ನಡೆದ ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ ಭಕ್ತರು
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ 2026ರ ಮಹಾರಥೋತ್ಸವಕ್ಕೆ ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಚಾಲನೆ ನೀಡಿದರು. ಐದು ಲಕ್ಷಕ್ಕೂ ಅಧಿಕ ಭಕ್ತರು, ಜನಪ್ರತಿನಿಧಿಗಳು ಮತ್ತು ಎನ್.ಸಿ.ಸಿ. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭವ್ಯ ರಥೋತ್ಸವ ಜರುಗಿತು. ಭಕ್ತರು ಉತ್ತುತ್ತಿ ಎಸೆದು ಭಕ್ತಿ ಸಮರ್ಪಿಸಿದರು, ಇರುವೆಗಳಂತೆ ಭಕ್ತಸಾಗರ ಕಂಗೊಳಿಸಿತು.
- Shivakumar Pattar
- Updated on: Jan 5, 2026
- 6:52 pm
ಶಿಷ್ಟಾಚಾರ ಉಲ್ಲಂಘನೆ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ವಾಗ್ವಾದ
ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಶಿಷ್ಟಾಚಾರ ಪಾಲಿಸದ ಕಾರಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಎದುರೇ ಸಚಿವ ಶಿವರಾಜ್ ತಂಗಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟಿಸಿದ್ದಾರೆ.
- Shivakumar Pattar
- Updated on: Jan 5, 2026
- 3:31 pm
ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು!
ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದೆ. ಶಿಷ್ಟಾಚಾರ ಉಲ್ಲಂಘನೆ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಎದುರೇ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 27 ಕೋಟಿ ರೂ. ವೆಚ್ಚದ ಈ ಕಾಮಗಾರಿಯು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಣದಲ್ಲಿ ನಡೆಯಲಿದೆ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.
- Shivakumar Pattar
- Updated on: Jan 5, 2026
- 2:58 pm