AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಪತ್ತಾರ್

Author - TV9 Kannada

shivakumar.pattar@tv9.com

ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ

ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ

ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ರೈತ ನಾಗರಾಜ್ ಗೊಂದಿ ವಿಂಡ್ ಪವರ್ ಕಂಪನಿಯ ದೌರ್ಜನ್ಯ ಖಂಡಿಸಿ 400 ಮೀಟರ್ ಎತ್ತರದ ಕಂಬ ಏರಿ ಪ್ರತಿಭಟಿಸುತ್ತಿದ್ದಾರೆ. ಕಂಪನಿಯ ಸಿಬ್ಬಂದಿ ರೈತನ ಅನುಮತಿಯಿಲ್ಲದೆ ಶೇಂಗಾ ಬೆಳೆ ನಾಶಪಡಿಸಿ, ಪರಿಹಾರ ಕೇಳಿದಾಗ ದೌರ್ಜನ್ಯ ಎಸಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆ ಇರುವ ರೈತನ ಜೀವಕ್ಕೆ ಅಪಾಯವಿದ್ದರೂ ಅಧಿಕಾರಿಗಳು ಸ್ಪಂದಿಸದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ರಾಜಕೀಯ ಸ್ವರೂಪ ಪಡೆದುಕೊಂಡ ಕೊಪ್ಪಳ ಲವ್ ಜಿಹಾದ್ ಪ್ರಕರಣ​: ಎಸ್ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ

ರಾಜಕೀಯ ಸ್ವರೂಪ ಪಡೆದುಕೊಂಡ ಕೊಪ್ಪಳ ಲವ್ ಜಿಹಾದ್ ಪ್ರಕರಣ​: ಎಸ್ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ

ಕೊಪ್ಪಳದಲ್ಲಿ ಮುಸ್ತಫಾ ಖಾದ್ರಿ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಆತನ ಫೋನ್‌ನಲ್ಲಿ 16 ಯುವತಿಯರ ಸಾವಿರಾರು ವಿಡಿಯೋಗಳು ಪತ್ತೆಯಾಗಿವೆ. ಪೊಲೀಸರ ವಿಳಂಬ ಧೋರಣೆ ಖಂಡಿಸಿ ಬಿಜೆಪಿ ನಿಯೋಗ ಎಸ್‌ಪಿ ಕಚೇರಿಗೆ ಭೇಟಿ ನೀಡಿ, ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಮತಾಂತರ ಪ್ರಯತ್ನ, ಮಟ್ಕಾ-ಗಾಂಜಾ ದಂಧೆಯ ಆರೋಪಗಳಿದ್ದು, ಕೂಡಲೇ ಬಂಧಿಸದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದೆ.

ಹನುಮನ ಭಕ್ತರ ಗಮನಕ್ಕೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ

ಹನುಮನ ಭಕ್ತರ ಗಮನಕ್ಕೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ

ಈ ಬಾರಿ ಕಲ್ಯಾಣ ಕರ್ನಾಟದ ಭಾಗದಲ್ಲಿ ಬೇಸಿಗೆಯ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಅದರಂತೆ ಆಂಜನೇಯನ ಜನ್ಮಸ್ಥಳ ಕೊಪ್ಪಳದ ಅಂಜನಾದ್ರಿಯಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟಕ್ಕೆ ಬರುವ ಭಕ್ತರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಆಂಜನೇಯನ ದರ್ಶನಕ್ಕೆ ಸಮಯದ ಮಿತಿ ನಿಗದಿಪಡಿಸಿದೆ. ಇದರಿಂದ ಯಾವಾಗ ಬೇಕಾದರೂ ಹೋದರೇ ಹನುಮನ ದರ್ಶನ ಸಿಗಲ್ಲ.

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್

ಕೊಪ್ಪಳದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಡಿಯೋ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಮತ್ತು ಮದುವೆಯಾಗಲು ಪೀಡಿಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ತನ್ನ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‌ಮೇಲ್ ಮಾಡುವ ಸಂಚು ಮುಸ್ತಫಾನ ಅಸಲಿ ಮುಖವಾಡವನ್ನು ಬಯಲು ಮಾಡಿದೆ. ಸಾವಿರಾರು ಸಾಕ್ಷ್ಯಗಳಿದ್ದರೂ ಪೊಲೀಸರ ನಿಷ್ಕ್ರಿಯತೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ

ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ

ಕೊಪ್ಪಳ ಲವ್ ಜಿಹಾದ್ ಆರೋಪಿ ಮುಸ್ತಫಾ ಖಾದ್ರಿ ಮೊಬೈಲ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳಿದ್ದರೂ ಪೊಲೀಸರು ಆತನನ್ನು ಬಂಧಿಸಲು ಹಿಂಜರಿಯುತ್ತಿದ್ದಾರೆ. ಗಾಂಜಾ ಸೇವನೆಯ ವಿಡಿಯೋಗಳು ವೈರಲ್ ಆಗಿದ್ದರೂ ನೋಟಿಸ್‌ಗೆ ಸೀಮಿತ. ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್ ಕಾಂಗ್ರೆಸ್ ಸರ್ಕಾರದ ಕೈವಾಡ ಆರೋಪಿಸಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ನಿಷ್ಕ್ರಿಯತೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಒಟ್ಟಿಗೆ ಓಡಾಡಿಕೊಂಡಿದ್ದವರು ಜತೆಯಲ್ಲೇ ಹೆಣವಾದರು; ಸ್ನೇಹಿತರ ಸಾವಿನ ಹತ್ತಾರು ಅನುಮಾನ

ಒಟ್ಟಿಗೆ ಓಡಾಡಿಕೊಂಡಿದ್ದವರು ಜತೆಯಲ್ಲೇ ಹೆಣವಾದರು; ಸ್ನೇಹಿತರ ಸಾವಿನ ಹತ್ತಾರು ಅನುಮಾನ

ಇವರಿಬ್ಬರು ದೋಸ್ತರು..ಮೇಲಾಗಿ ಇಬ್ಬರು ಒಂದೇ ಕಡೆಯಲ್ಲಿ ಕೆಲಸ ಮಾಡತ್ತಿದ್ದು. ಕಳೆದ ಕೆಲ ವರ್ಷಗಳಿಂದ ಕೋಳಿ ಫಾರಂನಲ್ಲಿ ಇಬ್ಬರು ಕೆಲಸ ಮಾಡಿಕೊಂಡಿದ್ದು, ಇಬ್ಬರು ಮನೆಗೆ ಆಧಾರ ಸ್ತಂಭವಾಗಿದ್ದರು. ಆದರೆ, ನಾಲ್ಕೈದು ದಿನಗಳ ಹಿಂದೆ ಮನೆಯಿಂದ ಕೆಲಸಕ್ಕೆಂದು ಹೋದವರು ಹೆಣವಾಗಿದ್ದಾರೆ. ಒಟ್ಟಿಗೆ ಓಡಾಡಿಕೊಂಡಿದ್ದ ಗೆಳೆಯರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಇವರಿಬ್ಬರ ಸಾವಿನ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಆರೋಪಿ ಮುಸ್ತಾಫಾಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಆರೋಪಿ ಮುಸ್ತಾಫಾಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್

ಕೊಪ್ಪಳದ ಲವ್ ಜಿಹಾದ್ ಆರೋಪಿ ಮುಸ್ತಾಫಾ ಖಾದ್ರಿಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ನಂಟು ಇರುವುದು ಬಯಲಾಗಿದೆ. ಮುಂಬೈ ಮತ್ತು ಗೋವಾ ಬುಕ್ಕಿಗಳಿಂದ ಸಿಗುತ್ತಿದ್ದ ಹಣದ ನೆರವಿನಿಂದಲೇ ಈತ ಐಷಾರಾಮಿ ಜೀವನ ನಡೆಸುತ್ತಿದ್ದ ಎನ್ನಲಾಗಿದ್ದು, ಈತನ ಮೊಬೈಲ್‌ನಲ್ಲಿ ಪತ್ತೆಯಾಗಿರುವ ಅಶ್ಲೀಲ ವಿಡಿಯೋಗಳ ಬಗ್ಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣ ಮಹತ್ವದ ತಿರುವು ಪಡೆದಿದೆ. ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ ತಮ್ಮ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ 8-10 ಅಪರಿಚಿತರ ವಿರುದ್ಧ ಪೊಲೀಸ ಠಾಣೆಗೆ ದೂರು ನೀಡಿದ್ದಾಳೆ. ಇನ್ನೊಂದೆಡೆ ವಿಎಚ್‌ಪಿ ಮುಖಂಡರು ಮುಸ್ತಫಾ ಖಾದ್ರಿ ವಿರುದ್ಧ ಐಟಿ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳದಲ್ಲಿ ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅನ್ಯಕೋಮಿನ ಯುವಕನ ವಿರುದ್ಧ ಹಿಂದೂ ಯುವತಿಯನ್ನು ಪುಸಲಾಯಿಸಿದ ಆರೋಪ ಕೇಳಿಬಂದಿದೆ. ಇನ್ನು ಯುವಕನ ಮೊಬೈಲ್ ಪರಿಶೀಲಿಸಿದಾಗ ಹಲವು ಯುವತಿಯರ ಅಶ್ಲೀಲ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ. ಸದ್ಯ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿವೆ.

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಇದೊಂಥರಾ ಯಾವ ಸಿನಿಮಾ ಕಥೆಗೂ ಕಮ್ಮಿ ಇಲ್ಲ ಎನ್ನಬಹುದು! ಅವರಿಬ್ಬರಿಗೆ ಪರಿಚಯವಾಗಿದ್ದು ಬಸ್ ಪ್ರಯಾಣದ ವೇಳೆ. ನಂತರ ಅದು ಪ್ರೀತಿ-ಪ್ರೇಮಕ್ಕೆ ತಿರುಗಿತು. ಇಂತಿಪ್ಪ ಕೊಪ್ಪಳದ ಕೇಶವ್ ಮತ್ತು ತಸ್ಲೀಮಾ ಜೋಡಿ ಕುಟುಂಬದವರ ವಿರೋಧದ ನಡುವೆಯೇ ದೇವಸ್ಥಾನದಲ್ಲಿ ಮದುವೆಯಾಗಿದೆ. ಕುಟುಂಬದವರಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ, ಈ ನವಜೋಡಿ ಇದೀಗ ರಕ್ಷಣೆ ಕೋರಿ ಎಸ್ಪಿ ಕಚೇರಿ ಮೆಟ್ಟಿಲೇರಿದ್ದಾರೆ. ಎಲ್ಲೆಡೆ ಲವ್ ಜಿಹಾದ್ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಈ ವಿವಾಹ ನೆರವರಿರುವುದು ಈಗ ಭಾರಿ ಸದ್ದು ಮಾಡುತ್ತಿದೆ.

ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಕೊಪ್ಪಳದ ನವವಿವಾಹಿತೆ ನಾಪತ್ತೆ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಮದುವೆಯಾದ ಎರಡು ತಿಂಗಳಲ್ಲಿ ನಾಪತ್ತೆಯಾಗಿದ್ದ ಯುವತಿ, ಮುಸ್ಲಿಂ ಯುವಕನ ಜೊತೆ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾಳೆ. ಪೊಲೀಸ್​​ ಠಾಣೆಯಲ್ಲಿ ಕುಟುಂಬಸ್ಥರ ಎದುರೇ ಯುವತಿ ಪ್ರಿಯತಮನ ಜೊತೆ ಹೋಗುವುದಾಗಿ ಹಠ ಹಿಡಿದಿದ್ದರೆ, ಘಟನೆಯಿಂದ ಮನೆಯಲ್ಲಿ ಒಂದು ಸಾವಾಗಿದೆ. ಹೀಗಾಗಿ ನಮಗೆ ಪರಿಹಾರ ಬೇಕು ಎಂದು ಪತಿ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ

ಕುಷ್ಟಗಿ ತಾಲೂಕಿನ ಕಬ್ಬರಗಿ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ಶರಣಪ್ಪ ಗೊಲ್ಲರ 120 ಅಡಿ ಎತ್ತರದ ಹಾಲುಗಂಬ ಏರಿ ಅದ್ಭುತ ಸಾಹಸ ಮೆರೆದಿದ್ದಾರೆ. ಎಣ್ಣೆ ಸವರಿದ ಕಂಬವನ್ನು ಲೀಲಾಜಾಲವಾಗಿ ಏರಿದ ಇವರ ಸಾಹಸಕ್ಕೆ ಸಾವಿರಾರು ಜನ ಬೆರಗಾಗಿದ್ದಾರೆ. ಅವರು ಕಂಬ ಏರುತ್ತಿರುವ ವಿಡಿಯೋ ಇಲ್ಲಿದೆ ನೋಡಿ.