ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡ್ತೇನೆ ಎಂದ ಸಚಿವ ರಾಯರೆಡ್ಡಿ!
ಕೊಪ್ಪಳದ ಯಲಬುರ್ಗಾದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆಡಳಿತ ವಿಚಾರದಲ್ಲಿ ಖಡಕ್ ಹೇಳಿಕೆ ನೀಡಿದ್ದಾರೆ. ಮಾತು ಕೇಳದ ಅಧಿಕಾರಿಗಳನ್ನು ವಜಾ ಮಾಡುವುದಾಗಿ ಎಚ್ಚರಿಸಿದ ಅವರು, ತಹಶೀಲ್ದಾರ್ಗೆ ತಮ್ಮ ಪಿಆರ್ಒ ರೀತಿ ಕೆಲಸ ಮಾಡಲು ಸೂಚಿಸಿದರು. ಇತ್ತೀಚಿನ ಅವರ ವಿವಾದಾತ್ಮಕ ಹೇಳಿಕೆಗಳ ನಡುವೆಯೇ ಈ ಆಡಳಿತಾತ್ಮಕ ಸೂಚನೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.
- Shivakumar Pattar
- Updated on: Sep 8, 2026
- 1:29 pm
ಹುಲಿ ಬಂದಿದೆ ಎಂದು ಎಐ ವಿಡಿಯೋ ಹರಿಬಿಟ್ಟ ಯುವಕ! ಅರಣ್ಯ ಸಿಬ್ಬಂದಿ ಮಾಡಿದ್ದೇನು ಗೊತ್ತಾ?
ಕೊಪ್ಪಳ ತಾಲೂಕಿನ ಕವಳಿ ಗ್ರಾಮದಲ್ಲಿ ಮನೆಯಲ್ಲಿ ಕೆಲಸ ತಪ್ಪಿಸಿಕೊಳ್ಳಲು ಎಐ (AI) ತಂತ್ರಜ್ಞಾನ ಬಳಸಿ ಹುಲಿ ಬಂದಿದೆ ಎಂದು ನಕಲಿ ವಿಡಿಯೋ ಹರಿಬಿಟ್ಟು ಆತಂಕ ಸೃಷ್ಟಿಸಿದ್ದ ಈರಣ್ಣ ಎಂಬ ಯುವಕನಿಗೆ ಅರಣ್ಯಾಧಿಕಾರಿಗಳು ತಕ್ಕ ಶಾಸ್ತಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಈತನಿಗೆ ಸ್ಥಳದಲ್ಲೇ 50 ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
- Shivakumar Pattar
- Updated on: Sep 6, 2026
- 10:21 am
ಬೈಕ್ ರೈಡಿಂಗ್ ಹುಚ್ಚಿಗಾಗಿ ಕಳ್ಳತನ: 20 ವರ್ಷದ ಯುವಕನಿಂದ 16 ಬೈಕ್ಗಳ ಕಳವು!
ಬೈಕ್ ರೈಡಿಂಗ್ ಹಾಗೂ ಶೋಕಿ ಜೀವನದ ಹುಚ್ಚಿಗಾಗಿ ಬರೋಬ್ಬರಿ 16 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ 20 ವರ್ಷದ ಮೆಕ್ಯಾನಿಕ್ನನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 12 ಲಕ್ಷ ರೂ. ಮೌಲ್ಯದ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಕ್ಗಳನ್ನು ಕದ್ದು ಬಿಡಿ ಭಾಗಗಳನ್ನು ಮಾರಾಟ ಮಾಡಿ ಹಣ ಗಳಿಸುತ್ತಿದ್ದ ಆರೋಪಿ ಅದರಿಂದ ಶೋಕಿ ಮಾಡುತ್ತಿದ್ದ ಎನ್ನಲಾಗಿದೆ.
- Shivakumar Pattar
- Updated on: Sep 4, 2026
- 2:54 pm
3 ಪೋಸ್ಟ್ಗೆ 7 ಮಂದಿ ಭರ್ತಿ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೇಮಕಾತಿಯಲ್ಲಿ ಗೋಲ್ಮಾಲ್, ಆಡಿಟ್ನಲ್ಲಿ ಬಯಲು
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳ ಸರಣಿ ಒಂದರ ಮೇಲೊಂದರಂತೆ ಬಯಲಾಗುತ್ತಿದ್ದು, ಪ್ರಾಧಿಕಾರ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ನಿವೇಶನ ಹಂಚಿಕೆ ಹಗರಣದ ಕಾವು ಆರುವ ಮುನ್ನವೇ, ಸರ್ಕಾರದ ಅನುಮೋದನೆ ಪಡೆಯದೆ ಹಾಗೂ ಯಾವುದೇ ಅಧಿಕೃತ ಟೆಂಡರ್ ಪ್ರಕ್ರಿಯೆ ನಡೆಸದೆ ಬೇಕಾಬಿಟ್ಟಿ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಂಡಿರುವ ಗಂಭೀರ ಗೋಲ್ಮಾಲ್ ಪ್ರಕರಣ ಇದೀಗ ಲೆಕ್ಕಪರಿಶೋಧನಾ ವರದಿಯಲ್ಲಿ ಬೆಳಕಿಗೆ ಬಂದಿದೆ.
- Shivakumar Pattar
- Updated on: Sep 3, 2026
- 8:15 pm
ಕರ್ನಾಟಕದಲ್ಲಿ ಬ್ಯಾಂಕ್ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ, ಕನ್ನಡದಲ್ಲೇ ವ್ಯವಹರಿಸಿ: ಸಚಿವ ತಂಗಡಗಿ
ಬ್ಯಾಂಕ್ ಆಫ್ ಬರೋಡಾದ ರೀತಿಯಲ್ಲೇ ಕರ್ನಾಟಕದ ಇತರ ಬ್ಯಾಂಕ್ಗಳಲ್ಲಿ ಕೂಡ ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದ್ದಾರೆ. ಬ್ಯಾಂಕ್ಗಳು ಕನ್ನಡಿಗರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು. ಕನ್ನಡದಲ್ಲಿ ಸೇವೆ ಪಡೆಯುವುದು ಭಾಷಾ ಹಕ್ಕು ಹಾಗೂ ಆತ್ಮಗೌರವದ ಪ್ರಶ್ನೆ ಎಂದಿದ್ದಾರೆ.
- Shivakumar Pattar
- Updated on: Sep 2, 2026
- 10:44 am
ಧರ್ಮ ಸಂಕಟ ಎದುರಾಗುತ್ತಿದ್ದಂತೆಯೇ ರಾಯರೆಡ್ಡಿ ಟೆಂಪಲ್ ರನ್, ಹಿಂದೂಗಳಿಗೊಂದು ಸವಾಲ್
ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ. ನಾನು ಮಠ ಮಾನ್ಯಗಳಿಗೆ ಹೋಗಲ್ಲ ಎಂಬ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ರಾಯರೆಡ್ಡಿ ಹೇಳಿಕೆಗೆ ಟೀಕೆ, ವ್ಯಂಗ್ಯವಾಡುತ್ತಿವೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಬಸವರಾಜ್ ರಾಯರೆಡ್ಡಿ ಟೆಂಪಲ್ ರನ್ ನಡೆಸಿದ್ದಾರೆ.
- Shivakumar Pattar
- Updated on: Aug 31, 2026
- 3:11 pm
ಬಸವರಾಜ ರಾಯರೆಡ್ಡಿ ಯೂಟರ್ನ್: ‘ಶರಣ ತತ್ವ ಈಸ್ ದಿ ಬೆಸ್ಟ್’! ಇಸ್ಲಾಂ ಧರ್ಮ ಕುರಿತ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೇ ಸ್ಪಷ್ಟನೆ
Basavaraj Rayareddy Controversy: ಇಸ್ಲಾಂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸಚಿವ ಬಸವರಾಜ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಎಲ್ಲ ಧರ್ಮಗಳೂ ಶ್ರೇಷ್ಠ, ಇಸ್ಲಾಂನಲ್ಲಿರುವ ಉತ್ತಮ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ ಎಂದ ಅವರು, ಯಾವುದೇ ಧರ್ಮವನ್ನು ಕೀಳು ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Shivakumar Pattar
- Updated on: Aug 31, 2026
- 10:53 am
ಬೇರೆ ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮ ಶ್ರೇಷ್ಠ: ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ರಾಯರೆಡ್ಡಿ
ಈ ಹಿಂದೆ ಸಿಎಂ ಅಧಿಕಾರ ಹಸ್ತಾಂತರ ಸಂಬಂಧ ಸಚಿವ ಬಸವರಾಜ ರಾಯರೆಡ್ಡಿ, ಸಿದ್ದರಾಮಯ್ಯನವರ ಪರ ಬ್ಯಾಟಿಂಗ್ ಮಾಡಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿದ್ದರು. ಇದೀಗ ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಸಚಿವರಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ರಾಜಕೀಯ ಬಿಟ್ಟು ಧರ್ಮದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿ ಗಮನಸೆಳೆದಿದ್ದಾರೆ.
- Shivakumar Pattar
- Updated on: Aug 30, 2026
- 6:52 pm
ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಪಲ್ಸರ್ ಬೈಕ್ ಡಿಕ್ಕಿ: ಮೂವರು ದಾರುಣ ಸಾವು
ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಬಳಿ ನಿಂತಿದ್ದ ಟಾಟಾ ಏಸ್ಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪಳಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಮೃತರು ನರಗುಂದ ಮೂಲದವರು ಎನ್ನಲಾಗಿದೆ. ಇತ್ತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಿಟ್ ಆ್ಯಂಡ್ ರನ್ಗೆ ಬೈಕ್ ಸವಾರ ದಾರುಣ ಅಂತ್ಯ ಕಂಡಿದ್ದಾನೆ.
- Shivakumar Pattar
- Updated on: Aug 26, 2026
- 7:39 pm
295 ದಿನಗಳ ಹೋರಾಟದ ನಡುವೆ ಬಲ್ಡೋಟಾ ಪರ ಭೂಸಂತ್ರಸ್ತರ ರ್ಯಾಲಿ: “ಕಾರ್ಖಾನೆ ಮಾಡಿ, ಇಲ್ಲವೇ ಸರ್ಕಾರಿ ಕೆಲಸ ಕೊಡಿ”
ಕೊಪ್ಪಳದ ಬಸಾಪೂರ ಬಳಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ವಿಸ್ತರಣೆ ವಿಚಾರ ತೀವ್ರ ಸ್ವರೂಪ ಪಡೆದಿದೆ. ಪರಿಸರ ಮಾಲಿನ್ಯದ ಭೀತಿಯಿಂದ "ಜಿಲ್ಲಾ ಬಚಾವೋ ಆಂದೋಲನ ಸಮಿತಿ" 295 ದಿನಗಳಿಂದ ಹೋರಾಟ ನಡೆಸುತ್ತಿದೆ. ಇತ್ತ, 20 ವರ್ಷಗಳ ಹಿಂದೆ ಭೂಮಿ ನೀಡಿದ ರೈತರು ತಕ್ಷಣ ಕಾರ್ಖಾನೆ ಸ್ಥಾಪಿಸುವಂತೆ ಅಥವಾ ಉದ್ಯೋಗ ನೀಡುವಂತೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಕಾರ್ಖಾನೆ ಸಿಬ್ಬಂದಿ ಸಹ ರೈತರ ಹೋರಾಟಕ್ಕೆ ಬೆಂಬಲ ನೀಡಿದೆ.
- Shivakumar Pattar
- Updated on: Aug 25, 2026
- 5:30 pm
ಕೊಪ್ಪಳ ಕುಡಾ 8.43 ಕೋಟಿ ಹಗರಣ: ಕಿಂಗ್ಪಿನ್ ಸಹೋದರನ ಬಂಧನ; ಆರೋಪಿ ಸಿಕ್ಕಿದ್ದೇ ರೋಚಕ!
Koppal News: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ರವೀಂದ್ರ ಕುಮಾರ್ ಸಹೋದರ ಅನಿಲ್ ಕುಮಾರ್ನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಅನಿಲ್ ಕುಮಾರ್ ಹೆಸರಿಗೆ ಒಂದು ಕೋಟಿಗೂ ಅಧಿಕ ಹಣ ವರ್ಗಾವಣೆ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ.
- Shivakumar Pattar
- Updated on: Aug 24, 2026
- 9:22 pm
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ: ಗುಡ್ಡಗಾಡು ಪ್ರದೇಶಕ್ಕೆ ಹೋಗದಂತೆ ಜನರಲ್ಲಿ ಮನವಿ
ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಪ್ರತ್ಯಕ್ಷವಾಗಿದೆ. ಗಂಗಾವತಿ ತಾಲೂಕಿನ ತೇಂಬ ಮತ್ತು ಕೊಪ್ಪಳ ತಾಲೂಕಿನ ಬಸಾಪುರ ಬಳಿ ಅರಣ್ಯ ಸಿಬ್ಬಂದಿ ಕ್ಯಾಮರಾದಲ್ಲಿ ಹುಲಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಗುಡ್ಡಗಾಡು ಪ್ರದೇಶಗಳಿಗೆ ಹೋಗದಂತೆ ಮನವಿ ಮಾಡಲಾಗಿದೆ. ಇದು ಜಿಲ್ಲೆಯಲ್ಲಿ ವನ್ಯಜೀವಿಗಳ ಹೊಸ ಉಪಸ್ಥಿತಿಯನ್ನು ಸೂಚಿಸುತ್ತದೆ.
- Shivakumar Pattar
- Updated on: Aug 23, 2026
- 10:43 pm