ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ: ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
ಕೊಪ್ಪಳ ಜಿಲ್ಲೆಯಲ್ಲಿ ಹಸಮಣೆ ಏರಬೇಕಾಗಿದ್ದ ಜೋಡಿ ಫೋಟೋ ಶೂಟ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತದಲ್ಲಿ ದುರಂತ ಅಂತ್ಯಕಂಡಿತ್ತು. ಈ ಸುದ್ದಿ ಕೇಳಿ ಕೊಪ್ಪಳ ಜಿಲ್ಲೆ ಜನರ ಕಣ್ಣಂಚಲ್ಲಿ ನೀರು ತಿರಿಸಿತ್ತು. ಇದರ ಮಧ್ಯೆ ಇನ್ನೊಂದು ಜೋಡಿ ವಾರದ ಹಿಂದಷ್ಟೇ ಮದುವೆಯಾಗಿದ್ದ ಜೋಡಿಯನ್ನು ಜೋಡಿಯನ್ನು ಯುವತಿಯ ಪೋಷಕರು ಅಗಲಿಸಿದ್ದಾರೆ. ಹೀಗಾಗಿ ಯುವಕ ಹೆಂಡ್ತಿ ಬೇಕೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಅಷ್ಟಕ್ಕೂ ಏನಿದು,ನವ ಜೋಡಿ,ಜಾತಿ ವ್ಯವಸ್ಥೆ ಅಂತೀರಾ ಈ ಸ್ಟೋರಿ ಓದಿ.
- Shivakumar Pattar
- Updated on: Dec 9, 2025
- 8:22 pm
ಮದುವೆಗೂ ಮುನ್ನ ಮಸಣ ಸೇರಿದ ಜೋಡಿ: ಅಪಘಾತಕ್ಕೂ ಮೊದಲು ನಡೆದಿತ್ತು ಫೋಟೋ ಶೂಟ್
ಭೀಕರ ಅಪಘಾತದಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸುಕೊಂಡು ಬರುವ ವೇಳೆ ನಡೆದ ಬೈಕ್ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣಬಿಟ್ಟಿದ್ದಾನೆ. ಹೀಗಾಗಿ ಮದುವೆ ಸಂಭ್ರಮದಲ್ಲಿದ್ದ ಮನೆಗೆ ಭರಸಿಡಿಲು ಬಡಿದಂತಾಗಿದೆ.
- Shivakumar Pattar
- Updated on: Dec 8, 2025
- 4:14 pm
ಮತ್ತೆ ಮುನ್ನಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು
ಬಲ್ಡೋಟಾ ಕಾರ್ಖಾನೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಕಾರ್ಖಾನೆ ಬೇಕೇಬೇಕೆಂದು ಕೊಪ್ಪಳ ಜಿಲ್ಲಾಡಳಿತ ಕಚೇರಿ ಮುಂದೆ ರೈತರು ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಬಲ್ಡೋಟಾ ಕಾರ್ಖಾನೆ ಕುರಿತಾಗಿ ಕೊಪ್ಪಳದಲ್ಲಿ ಪರ-ವಿರೋಧ ಹೋರಾಟ ಶುರುವಾಗಿದೆ. ಸದ್ಯ ಈ ಹೋರಾಟ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.
- Shivakumar Pattar
- Updated on: Dec 5, 2025
- 4:26 pm
ಭರತನಾಟ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವೇರಿದ ಯುವತಿ: ಇಲ್ಲಿದೆ ಮನಮೋಹಕ ನೃತ್ಯ ವಿಡಿಯೋ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿಯಿರುವ ಅಂಜನಾದ್ರಿ ಬೆಟ್ಟವನ್ನು ಓರ್ವ ಯುವತಿ ಭರತನಾಟ್ಯ ಮಾಡುತ್ತಾ ಏರಿದ್ದಾರೆ. 575 ಮೆಟ್ಟಿಲುಗಳನ್ನು 8 ನಿಮಿಷ 54 ಸೆಕೆಂಡ್ನಲ್ಲಿ ಭರತನಾಟ್ಯ ಮಾಡುತ್ತಾ ಏರುವ ಮೂಲಕ ಸಾಧನೆ ಮಾಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
- Shivakumar Pattar
- Updated on: Dec 4, 2025
- 3:57 pm
ಅಂಜನಾದ್ರಿಯಲ್ಲೂ ಲಾರೆನ್ಸ್ ಬಿಷ್ಣೋಯಿ ಫೊಟೋ ಪ್ರತ್ಯಕ್ಷ! ತಾನು ಗ್ಯಾಂಗ್ಸ್ಟರ್ ಅಭಿಮಾನಿ ಎಂದ ಹನುಮ ಭಕ್ತ
ಕೊಪ್ಪಳದ ಅಂಜನಾದ್ರಿಯಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಹನುಮ ಮಾಲೆ ಧರಿಸಿ ಬಂದ ಬೆಳಗಾವಿ ಜಿಲ್ಲೆಯ ಭಕ್ತನೊಬ್ಬ ಲಾರೆನ್ಸ್ ಬಿಷ್ಣೋಯಿ ಫೋಟೊ ಹಿಡಿದುಕೊಂಡು ಬಂದಿದ್ದು, ತಾನು ಆತನ ಅಭಿಮಾನಿ ಎಂದು ಹೇಳಿಕೊಂಡಿದ್ದಾನೆ. ಸದ್ಯ ಆ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.
- Shivakumar Pattar
- Updated on: Dec 3, 2025
- 1:59 pm
Koppal: ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ?
ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯಲಿರುವ ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ದೇಗುಲಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ನವ ನದಿ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಪವನ ಹೋಮ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರ ಅನುಕೂಲಕ್ಕೆ ಕುಡಿಯುವ ನೀರು, ಊಟ, ವೈದ್ಯಕೀಯ ಸೇವೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
- Shivakumar Pattar
- Updated on: Dec 2, 2025
- 6:20 pm
ಅಂಜನಾದ್ರಿಯಲ್ಲಿ ಹನುಮ ಮಾಲೆ ವಿಸರ್ಜನೆಗೂ ಕಾರ್ಖಾನೆಗಳ ಸಹಯೋಗ? ಭುಗಿಲೆದ್ದ ಆಕ್ರೋಶ
ಅಂಜನಾದ್ರಿ ಹನುಮ ಹುಟ್ಟಿದ ಸ್ಥಳವೆಂದೇ ಪ್ರಖ್ಯಾತಿ ಪಡೆದುಕೊಂಡಿದೆ. ಪ್ರತಿ ವರ್ಷದಂತೆ ಈ ಭಾರಿ ಕೂಡ ಇದೇ ಡಿಸೆಂಬರ್ 3ರಂದು ಅಂಜನಾದ್ರಿಯಲ್ಲಿ ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಈ ಮಧ್ಯೆ ಅದೊಂದು ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ.
- Shivakumar Pattar
- Updated on: Dec 1, 2025
- 7:28 pm
ಶಿಕ್ಷಕರ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ
ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಭಿನಂದನಾ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರೋರ್ವರ ಪ್ರಶ್ನೆಗೆ ಉತ್ತರಿಸುವ ವೇಳೆ ರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶ ಕೇಳಿಬಂದಿದೆ.
- Shivakumar Pattar
- Updated on: Dec 1, 2025
- 6:39 pm
ವಿದ್ಯಾರ್ಥಿನಿಲಯದಲ್ಲೇ ಬಾಲಕಿ ಹೆರಿಗೆ ಕೇಸ್ಗೆ ಎಂಟ್ರಿಕೊಟ್ಟ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ: ಡಿಸಿ, ಎಸ್ಪಿಗೆ ಪತ್ರ
ಕೊಪ್ಪಳದ ಕುಕನೂರು ವಿದ್ಯಾರ್ಥಿನಿಲಯದಲ್ಲಿ ಅಪ್ರಾಪ್ತ ಬಾಲಕಿ ಹೆರಿಗೆ ಪ್ರಕರಣವನ್ನು ಮಕ್ಕಳ ಹಕ್ಕುಗಳ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿ, ಜಿಲ್ಲಾಧಿಕಾರಿ ಮತ್ತು ಎಸ್ಪಿಗೆ ಮೂರು ದಿನಗಳಲ್ಲಿ ಮಾಹಿತಿ ನೀಡುವಂತೆ ಸೂಚಿಸಿದೆ. ಘಟನೆಗೆ ಸಂಬಂಧಿಸಿ ಪೊಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಹಾಗೂ ವಾರ್ಡನ್ ಅಮಾನತುಗೊಂಡಿದ್ದಾರೆ.
- Shivakumar Pattar
- Updated on: Nov 26, 2025
- 5:52 pm
Koppal: ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ
Former MLA Shivasharanappa: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ಅನಾರೋಗ್ಯದಿಂದ ನಿಧನರಾಗಿದ್ದಾರೆ. 1999-2004ರ ಅವಧಿಯಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿ, ರೈತರ ಪರ ಧ್ವನಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಸ್ವಗ್ರಾಮ ಹುಣಿಸ್ಯಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
- Shivakumar Pattar
- Updated on: Nov 26, 2025
- 2:25 pm
ಕೊಪ್ಪಳ: ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಕೊಪ್ಪಳದ ಕುಕನೂರು ವಸತಿನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಹೆರಿಗೆಯಾದ ಘಟನೆ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ಕುಕನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಸುರಕ್ಷತೆ ಮತ್ತು ವಸತಿನಿಲಯಗಳ ಮೇಲ್ವಿಚಾರಣೆ ಕುರಿತು ಗಂಭೀರ ಪ್ರಶ್ನೆಗಳು ಎದುರಾಗಿವೆ.
- Shivakumar Pattar
- Updated on: Nov 26, 2025
- 1:20 pm
ಆನೆಗೊಂದಿ: ತಡರಾತ್ರಿ ಮನೆಗೇ ಬಂತು ಮೊಸಳೆ! ವಿಡಿಯೋ ನೋಡಿ
ತುಂಗಭದ್ರಾ ನದಿಯಿಂದ ಮೊಸಳೆಯೊಂದು ಮನೆಗೆ ಬಂದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಚ್ಚಿಬಿದ್ದ ಮನೆಯವರು ಹಾಗೂ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆಯನ್ನು ರಕ್ಷಿಸಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.
- Shivakumar Pattar
- Updated on: Nov 22, 2025
- 12:06 pm