ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣ: ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ಗೆ ಪೊಲೀಸ್ ಬಲೆ
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ಬರೋಬ್ಬರಿ 8.43 ಕೋಟಿ ರೂಪಾಯಿ ಅಕ್ರಮ ವರ್ಗಾವಣೆಯಾಗಿರುವುದು ಬಯಲಾಗಿದೆ. ಅಧ್ಯಕ್ಷರಿಲ್ಲದ ಅವಧಿಯಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಕೋಟ್ಯಂತರ ಹಣ ಲೂಟಿ ಮಾಡಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
- Shivakumar Pattar
- Updated on: Aug 17, 2026
- 2:37 pm
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ: ಆಡಿಟ್ನಲ್ಲಿ ಕೋಟಿ ಕೋಟಿ ಲೂಟಿ ಬಯಲು!
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ಆಡಿಟ್ ವರದಿ ವೇಳೆ ಬರೋಬ್ಬರಿ 8.43 ಕೋಟಿ ರೂಪಾಯಿ ವಂಚನೆ ಬಯಲಾಗಿದೆ. ನಿವೇಶನ ನೀಡುವುದಾಗಿ ನಂಬಿಸಿ ನಕಲಿ ಬ್ಯಾಂಕ್ ಖಾತೆಗಳ ಮೂಲಕ ಕೋಟಿ ಕೋಟಿ ಹಣ ಲೂಟಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಈ ಮಧ್ಯೆ ಕಾಂಗ್ರೆಸ್ ಸರ್ಕಾರವನ್ನು 'ಎಟಿಎಂ' ಎಂದು ಕರೆದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
- Shivakumar Pattar
- Updated on: Aug 16, 2026
- 11:12 am
ಗುಟ್ಕಾ ನಿಷೇಧದ ಸುದ್ದಿ ಬೆನ್ನಲ್ಲೇ: ಚೀಲಗಳಲ್ಲಿ ತುಂಬಿಕೊಂಡು ಹೋದ ಜನ
ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧದ ಸುದ್ದಿ ಹೊರಬೀಳುತ್ತಿದ್ದಂತೆ ಕೊಪ್ಪಳದಲ್ಲಿ ವ್ಯಾಪಾರಿಗಳು ಹಾಗೂ ಗ್ರಾಹಕರು ಗುಟ್ಕಾ ಖರೀದಿಗೆ ಮುಗಿಬಿದ್ದಿದ್ದಾರೆ. ನಿಷೇಧ ಜಾರಿಯಾಗುವ ಮುನ್ನವೇ ಚೀಲಗಟ್ಟಲೆ ಗುಟ್ಕಾ ಸಂಗ್ರಹಿಸಿಕೊಳ್ಳಲು ಮುಂದಾಗಿದ್ದು, ಇದು ಗುಟ್ಕಾ ಸೇವನೆಯ ಗಂಭೀರ ಚಟವನ್ನು ಎತ್ತಿ ತೋರಿಸುತ್ತದೆ. ಮುಂದೆ ಸಿಗದಿರಬಹುದೆಂಬ ಭೀತಿಯಿಂದ ಜನರು ಆತುರದಿಂದ ಖರೀದಿಸುತ್ತಿದ್ದಾರೆ.
- Shivakumar Pattar
- Updated on: Aug 14, 2026
- 2:11 pm
ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ: ಕೊನೆಗೂ ಮೌನ ಮುರಿದ ಸಚಿವ ನಾಗೇಂದ್ರ ಹೇಳಿದ್ದೇನು?
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಕೋರ್ಟ್ ಜಾಮೀನು ಷರತ್ತು ಉಲ್ಲಂಘಿಸಿ ಕರ್ನಾಟಕ ಬಿಟ್ಟು ದೆಹಲಿಗೆ ಹೋಗಿದ್ದಾರೆ ಎಂದು ವಿಪಕ್ಷಗಳ ಆರೋಪಕ್ಕೆ ಸಚಿವ ಬಿ ನಾಗೇಂದ್ರ ಕೊನೆಗೂ ಮೌನ ಮುರಿದಿದ್ದು, ರಾಜ್ಯದಿಂದ ಹೊರ ಹೋದಾಗೆಲ್ಲ ಅನುಮತಿ ಪಡೆದು ಹೋಗಿದ್ದೇನೆ. ನಾನು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಈ ಕೇಸ್ನಲ್ಲಿ ನ್ಯಾಯಾಲಯ ಕೂಡ ತಡೆಯಾಜ್ಞೆ ಕೊಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.
- Shivakumar Pattar
- Updated on: Aug 11, 2026
- 6:04 pm
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್; ತಪ್ಪಿದ ಅನಾಹುತ
ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದ ಬಳಿ KSRTC ಬಸ್ನ ಟೈರ್ ಬ್ಲಾಸ್ಟ್ ಆಗಿ ಬಸ್ ಗದ್ದೆಗೆ ನುಗ್ಗಿದೆ. ಕೊಪ್ಪಳದಿಂದ ಕರ್ಕಿಹಳ್ಳಿಗೆ ತೆರಳುತ್ತಿದ್ದ ಈ ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.
- Shivakumar Pattar
- Updated on: Aug 9, 2026
- 6:13 pm
ಗೃಹಲಕ್ಷ್ಮಿ ಯೋಜನೆಯಲ್ಲಿ ‘ಗೋಲ್ಮಾಲ್’; ಗ್ಯಾರಂಟಿ ಸಮಿತಿ ಅಧ್ಯಕ್ಷರ ವಿಡಿಯೋ ವೈರಲ್!
ಕೊಪ್ಪಳ ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿ ದುರಪಯೋಗವಾಗಿರುವ ವಿಚಾರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಅಸಲಿ ಗೋಲ್ಮಾಲ್ ಒಪ್ಪಿಕೊಂಡಿದ್ದಾರೆ. ಸತ್ತವರ ಖಾತೆಯಿಂದ ಅಕ್ರಮವಾಗಿ ಹಣ ಡ್ರಾ ಮಾಡಿದವರ ವಿರುದ್ಧ ಕೇಸ್ ದಾಖಲಿಸಿ ಜೈಲಿಗಟ್ಟಲಾಗುವುದು ಮತ್ತು ಅಂತಹ ಬ್ಯಾಂಕ್ ಖಾತೆಗಳನ್ನು ತಕ್ಷಣವೇ ಸೀಜ್ ಮಾಡಲು ಸೂಚಿಸಲಾಗಿದೆ ಎಂದು ಅವರು ವಿಡಿಯೋ ಮೂಲಕ ಎಚ್ಚರಿಸಿದ್ದಾರೆ.
- Shivakumar Pattar
- Updated on: Aug 9, 2026
- 10:33 am
ಕೊಪ್ಪಳದಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಗೋಲ್ ಮಾಲ್: ಮೃತಪಟ್ಟವರ ಖಾತೆಗೆ ಹಣ, 86 ಲಕ್ಷ ರೂ. ರಿಕವರಿ
ಕೊಪ್ಪಳ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಭಾರೀ ಅಕ್ರಮ ಬಯಲಾಗಿದೆ. ಮೃತಪಟ್ಟ 7,085 ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿದ್ದು, ಇಲ್ಲಿಯವರೆಗೆ 86 ಲಕ್ಷ ವಸೂಲಿ ಮಾಡಲಾಗಿದೆ. ಸುಮಾರು 26,000 ನಕಲಿ ಹಾಗೂ ಬಹುವಿಧ ಖಾತೆಗಳು ಪತ್ತೆಯಾಗಿವೆ. 2-3 ಕೋಟಿ ರೂಪಾಯಿಗಳಷ್ಟು ಹಣದ ಗೋಲ್ ಮಾಲ್ ಅಂದಾಜಿಸಲಾಗಿದ್ದು, ಗ್ಯಾರಂಟಿ ಸಮಿತಿ ತೀವ್ರ ತನಿಖೆ ನಡೆಸುತ್ತಿದೆ.
- Shivakumar Pattar
- Updated on: Aug 8, 2026
- 9:15 am
ನೌಕರಿ ಮಾಡೋ ಕನಸು: ಆಪರೇಷನ್ ಆಗಿದ್ರೂ ಆಸ್ಪತೆಯಿಂದ ನೇರವಾಗಿ ಸಂದರ್ಶನಕ್ಕೆ ಬಂದ ಯುವಕ
Koppal News: ಉದ್ಯೋಗ ಜೀವನಕ್ಕೆ ಎಷ್ಟು ಆಸರೆ ಎನ್ನುವುದಕ್ಕೆ ಕೊಪ್ಪಳದಲ್ಲಿ ನಡೆದ ಅದೊಂದು ಘಟನೆ ಸಾಕ್ಷಿ ಆಗಿದೆ. ಬಾಗಲಕೋಟೆ ಮೂಲದ ಉದ್ಯೋಗ ಆಕಾಂಕ್ಷಿ ತನಗೆ ಆಪರೇಷನ್ ಆಗಿದ್ದರೂ ಅದನ್ನು ಲೆಕ್ಕಿಸದೆ ಇಂದು ದಾಖಲೆಗಳ ಪರಿಶೀಲನೆಗೆ ನೇರವಾಗಿ ಆಸ್ಪತ್ರೆಯಿಂದಲೇ ಆಗಮಿಸಿದ್ದ ಘಟನೆ ನಡೆದಿದೆ.
- Shivakumar Pattar
- Updated on: Aug 7, 2026
- 6:33 pm
ಕೊಪ್ಪಳ ಕಾಂಗ್ರೆಸ್ನಲ್ಲಿ ಮತ್ತೆ ಅಸಮಾಧಾನ ಸ್ಫೋಟ; ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ
ಕೊಪ್ಪಳ ಕಾಂಗ್ರೆಸ್ನಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಚಿವ ಶಿವರಾಜ್ ತಂಗಡಗಿ, ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಹಿರಂಗ ವೇದಿಕೆಗೆ ಬರುವಂತೆ ಸವಾಲು ಹಾಕಿರುವ ಅನ್ಸಾರಿ, ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರ ಬಹಿರಂಗಪಡಿಸುವುದಾಗಿ ಎಚ್ಚರಿಸಿದ್ದಾರೆ.
- Shivakumar Pattar
- Updated on: Aug 7, 2026
- 10:41 am
ಕೊಪ್ಪಳ ಉಸ್ತುವಾರಿ ಸ್ಥಾನಕ್ಕೆ ರಾಯರೆಡ್ಡಿ, ತಂಗಡಗಿ ಪೈಪೋಟಿ: ಬರ ಪರಿಶೀಲನೆ ನೆಪದಲ್ಲಿ ಸಕ್ರಿಯ
ಕೊಪ್ಪಳ ಜಿಲ್ಲಾ ಉಸ್ತುವಾರಿ ಸ್ಥಾನಕ್ಕಾಗಿ ಸಚಿವರಾದ ಬಸವರಾಜ ರಾಯರೆಡ್ಡಿ ಹಾಗೂ ಶಿವರಾಜ ತಂಗಡಗಿ ನಡುವೆ ಪೈಪೋಟಿ ಶುರುವಾಗಿದೆ ಎಂಬ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ. ಬರ ಪರಿಶೀಲನೆ ನೆಪದಲ್ಲಿ ಇಬ್ಬರೂ ನಾಯಕರು ಕೊಪ್ಪಳದಲ್ಲಿ ಸಕ್ರಿಯರಾಗಿರುವುದು ಹಾಗೂ ನೀಡಿರುವ ಹೇಳಿಕೆಗಳು ಕುತೂಹಲ ಮೂಡಿಸಿದೆ.
- Shivakumar Pattar
- Updated on: Aug 7, 2026
- 9:55 am
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ: 46 ದಿನಗಳಲ್ಲಿ 86.71 ಲಕ್ಷ ರೂ. ನಗದು ಸಂಗ್ರಹ!
ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹುಲಗಿಯ ಹುಲಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 46 ದಿನಗಳಲ್ಲಿ ಬರೋಬ್ಬರಿ 86,71,195 ರೂ. ನಗದು ಹಣ ಸಂಗ್ರಹವಾಗಿದೆ. ಕಳೆದ ಜೂನ್ 20 ರಂದು ಕೊನೆಯ ಬಾರಿಗೆ ಹುಂಡಿ ಎಣಿಕೆ ಮಾಡಲಾಗಿತ್ತು. ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದು, ಈ ಬಾರಿ ನಗದಿನೊಂದಿಗೆ 146 ಗ್ರಾಂ ಬಂಗಾರ ಹಾಗೂ 3 ಕೆಜಿ 900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಅರ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Shivakumar Pattar
- Updated on: Aug 7, 2026
- 7:48 am
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ್ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
- Shivakumar Pattar
- Updated on: Aug 5, 2026
- 8:42 am