AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಪತ್ತಾರ್

Author - TV9 Kannada

shivakumar.pattar@tv9.com

ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!

ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!

ಕೊಪ್ಪಳ ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ ಅವರ ಅಮಾನತು ಕೇವಲ 10 ದಿನಗಳಲ್ಲಿ ಹಿಂಪಡೆಯಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸುಮಾರು 10 ಕೋಟಿ ರೂ. ಅಕ್ರಮ ಆರೋಪದ ಮೇಲೆ ಲೋಕಾಯುಕ್ತ ತನಿಖೆಯಲ್ಲಿ ಅವ್ಯವಹಾರಗಳು ಬಯಲಾಗಿದ್ದವು. ಆದರೆ, ಸೋಮಲಿಂಗಪ್ಪ ಹೈಕೋರ್ಟ್ ತಡೆಯಾಜ್ಞೆ ಪಡೆದ ಕಾರಣ, ಪೌರಾಡಳಿತ ಇಲಾಖೆ ಆದೇಶ ಹಿಂಪಡೆದಿದೆ. ಈ ತ್ವರಿತ ಕ್ರಮ ಸಾರ್ವಜನಿಕರಲ್ಲಿ ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ.

ತುಂಗಭದ್ರಾ ಡ್ಯಾಂ ಬಗ್ಗೆ ಸರ್ಕಾರದಿಂದ ಬಿಗ್ ಅಪ್​ಡೇಟ್: ರೈತರು ಫುಲ್ ಖುಷ್

ತುಂಗಭದ್ರಾ ಡ್ಯಾಂ ಬಗ್ಗೆ ಸರ್ಕಾರದಿಂದ ಬಿಗ್ ಅಪ್​ಡೇಟ್: ರೈತರು ಫುಲ್ ಖುಷ್

ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ, ಈಗ 33 ಗೇಟ್‌ಗಳ ಜೊತೆಗೆ ಹಳೆಯ ಚೈನ್‌ಗಳನ್ನೂ ಬದಲಾಯಿಸಲು ನಿರ್ಧರಿಸಿದೆ. ರೈತರ ಒತ್ತಾಯಕ್ಕೆ ಮಣಿದು 5.5 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಮೇ ಅಂತ್ಯದೊಳಗೆ ಹೊಸ ಗೇಟ್ ಮತ್ತು ಚೈನ್ ಅಳವಡಿಕೆ ಪೂರ್ಣಗೊಳ್ಳಲಿದೆ.

ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಕೊಪ್ಪಳದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ನವವಿವಾಹಿತೆ ಪತಿಯನ್ನು ಬಿಟ್ಟು ನಾಪತ್ತೆಯಾಗಿದ್ದಾರೆ. ಈ ವಿಷಯ ತಿಳಿದ ಯುವತಿಯ ಮಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆಯಾಗಿ ಕೇವಲ ಒಂದು ತಿಂಗಳೊಳಗೆ ನಡೆದ ಈ ದುರಂತ ಕುಟುಂಬದಲ್ಲಿ ತೀವ್ರ ಆಘಾತ ಮೂಡಿಸಿದೆ. ಪತ್ನಿಗಾಗಿ ಪತಿ ಹುಡುಕಾಟ ನಡೆಸುತ್ತಿದ್ದು, ಈ ಬಗ್ಗೆ ಪೊಲೀಸ್​​ ದೂರು ಕೂಡ ದಾಖಲಾಗಿದೆ.

ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ನಾಲ್ಕೈದು ಜಿಲ್ಲೆಗಳಿಗೆ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಒಡೆದಿದೆ. ಪರಿಣಾಮ ಭತ್ತದ ಬೆಳೆ ನಾಶವಾಗಿ, ರಾಯಚೂರಿಗೆ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿತ್ತು. ದುರಸ್ತಿ ಕಾರ್ಯಕ್ಕೆ ಮುಂದಾದಾಗ ಪರಿಹಾರ ನೀಡುವವರೆಗೂ ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು. ಜನಪ್ರತಿನಿಧಿಗಳು ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾತ್ಕಾಲಿಕ ದುರಸ್ತಿ ಕಾರ್ಯ ಆರಂಭವಾಗಿದೆ.

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದ ಅವರು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯಕ್ಕೆ ಜನಮನ್ನಣೆ ಗಳಿಸಿದ್ದರು. ಅವರ ಅಗಲಿಕೆಗೆ ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.

ನಿರ್ಬಂಧದ ನಡುವೆಯೂ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

ನಿರ್ಬಂಧದ ನಡುವೆಯೂ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಸಲುವಾಗಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ಪುನೀತ್ ಕೆರಹಳ್ಳಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿ, ನಿಷೇಧ ಆದೇಶವನ್ನು ನಕಲಿ ಎಂದು ವಾದಿಸಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಹಿಂದಿನ ವಿವಾದಾತ್ಮಕ ಭಾಷಣಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಅಂತಿಮವಾಗಿ ಕೆರಹಳ್ಳಿ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ್ದಾರೆ.

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ ಬೃಹತ್ ಮೀನು ಬಿದ್ದಿದೆ. ಸುಮಾರು 15ರಿಂದ 20 ಕೆಜಿ ತೂಕದ ಮೀನು ಸಿಕ್ಕಿದ್ದು, ಫುಲ್ ಖುಷ್ ಆಗಿದ್ದಾರೆ.

ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?

ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?

ಕೊಪ್ಪಳದ ಗವಿಮಠವು ಎಲ್‌ಪಿಜಿ ಬಿಕ್ಕಟ್ಟಿನ ನಡುವೆಯೂ ರಾಜ್ಯಕ್ಕೆ ಮಾದರಿಯಾಗಿದೆ. ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸುವುದರಿಂದ, ಮಠದ ಅನ್ನಪ್ರಸಾದ ಸೇವೆಗೆ ಯಾವುದೇ ಅಡ್ಡಿಯಾಗಿಲ್ಲ. ಪ್ರತೀ ತಿಂಗಳು 10-12 ಟ್ರ್ಯಾಕ್ಟರ್ ಸೌದೆಯನ್ನು ಬಳಸಿ, ಉಪಾಹಾರ, ಊಟ ಸಿದ್ಧಪಡಿಸಲಾಗುತ್ತಿದೆ. ಇದರಿಂದ ಭಕ್ತರಿಗೆ ನಿತ್ಯ ಅನ್ನಪ್ರಸಾದ ದೊರೆಯುತ್ತಿದೆ.

ಫ್ಯಾನ್ಸಿ ಸ್ಟೋರ್‌ನಲ್ಲಿ ನಶೆ ಮಾತ್ರೆಗಳ ಅಕ್ರಮ ಮಾರಾಟ: ಕಿಕ್​ಗಾಗಿ ಮಾತ್ರೆ, ಇಂಜೆಕ್ಷನ್ ಮೊರೆ ಹೋಗ್ತಿರುವ ಯುವಕರು!

ಫ್ಯಾನ್ಸಿ ಸ್ಟೋರ್‌ನಲ್ಲಿ ನಶೆ ಮಾತ್ರೆಗಳ ಅಕ್ರಮ ಮಾರಾಟ: ಕಿಕ್​ಗಾಗಿ ಮಾತ್ರೆ, ಇಂಜೆಕ್ಷನ್ ಮೊರೆ ಹೋಗ್ತಿರುವ ಯುವಕರು!

ಅದೊಂದು ಫ್ಯಾನ್ಸಿ ಸ್ಟೋರ್. ಆದರೆ ಅಲ್ಲಿ ಮಾರಾಟ ಮಾಡುತ್ತಿದ್ದುದು ಮಾತ್ರೆಗಳನ್ನು! ನಶೆಗಾಗಿ ಅದನ್ನು ತೆಗೆದುಕೊಳ್ಳುತ್ತಿದ್ದ ಕೆಲವು ಯುವಕರು ಮತ್ತೆ ಮತ್ತೆ ಅಲ್ಲಿಗೆ ಹೋಗುತ್ತಿದ್ದರು. ಅಲ್ಲದೆ, ಮಾತ್ರೆಯನ್ನು ಪುಡಿ ಮಾಡಿ ಇಂಜೆಕ್ಷನ್ ಮೂಲಕ ನೇರ ನರಕ್ಕೇ ಚುಚ್ಚಿಸಿಕೊಳ್ಳುತ್ತಿದ್ದರು. ಯುವಕನೊಬ್ಬ ಅಸ್ವಸ್ಥಗೊಂಡಿದ್ದರಿಂದ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಫ್ಯಾನ್ಸಿ ಸ್ಟೋರ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಗಂಗಾವತಿ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳನ್ನು ಮತ್ತೆ ಒಂದುಗೂಡಿಸಿದೆ. ದಾಂಪತ್ಯದಲ್ಲಿನ ಮನಸ್ತಾಪ ಮರೆತು, ನ್ಯಾಯಾಧೀಶರ ಸಮ್ಮುಖದಲ್ಲಿ ಈ ದಂಪತಿಗಳು ಮರುಮದುವೆಯಾಗುವ ಮೂಲಕ ಪುನರ್ಮಿಲನ ಸಾಧಿಸಿದರು. ಇದು ಕುಟುಂಬ ಸಂಬಂಧಗಳನ್ನು ಬಲಪಡಿಸುವಲ್ಲಿ ನ್ಯಾಯಾಂಗದ ಪಾತ್ರ ಮತ್ತು ಲೋಕ ಅದಾಲತ್‌ನ ಯಶಸ್ಸನ್ನು ಎತ್ತಿ ತೋರಿಸುತ್ತದೆ.

ಸಿದ್ದರಾಮಯ್ಯ ಬೆನ್ನಲ್ಲೇ ಈಗ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ಹುಬ್ಲೋಟ್‌ ವಾಚ್‌

ಸಿದ್ದರಾಮಯ್ಯ ಬೆನ್ನಲ್ಲೇ ಈಗ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ಹುಬ್ಲೋಟ್‌ ವಾಚ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅಲ್ಲದೇ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು ಕೊಪ್ಪಳ ಕಾಂಗ್ರೆಸ್ ಶಾಸಕ ಶಾಸಕ ರಾಘವೇಂದ್ರ ಹಿಟ್ನಾಳ್ 18 ಲಕ್ಷ ರೂಪಾಯಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಧರಿಸಿರುವುದು ಕಂಡುಬಂದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ ಬ್ಯಾಗ್ ಕದ್ದುಕೊಂಡು ಹೋದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.