AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಪತ್ತಾರ್

Author - TV9 Kannada

shivakumar.pattar@tv9.com

ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ನಾವು ಹೋಗಲು ಬಿಡಲ್ಲ’: ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

‘ನಾವು ಹೋಗಲು ಬಿಡಲ್ಲ’: ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

ಕರ್ನಾಟಕದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ಭಾವುಕ ಪ್ರತಿಭಟನೆ ನಡೆಸಿದ್ದಾರೆ. ಶಾಲಾ ಗೇಟ್‌ ಬಂದ್‌ ಮಾಡಿದ ಮಕ್ಕಳು, ಶಿಕ್ಷಕರನ್ನು ಕಳುಹಿಸಬಾರದೆಂದು ಕಣ್ಣೀರಿಟ್ಟು ಬೇಡಿಕೊಂಡರು. ವೀರಪ್ಪ ಸರ್ ಬೇಕೇ ಬೇಕು ಎಂದು ಪಟ್ಟು ಹಿಡಿದು ನಿಂತಿದ್ದು, ತಮ್ಮ ಗುರುಗಳ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು.

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್!

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್!

ಕೊಪ್ಪಳದಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಯಲಬುರ್ಗಾ ತಾಲೂಕು ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಾಕ್ಷಿ ನಾಶಪಡಿಸಿ ಆರೋಪಿಗಳನ್ನು ರಕ್ಷಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಸಂಗ್ರಹಿಸಿದ್ದ ವಸ್ತುಗಳ ಮೇಲೆ ಸಿಬ್ಬಂದಿಯಿಂದ ಸಹಿ ಮಾಡಿಸಿ, ಡಿಎನ್‌ಎ ಸಾಕ್ಷ್ಯ ಸಿಗದಂತೆ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ.

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ಕೊಪ್ಪಳ ತಾಲೂಕಿನ ಗಿಣಗೇರಾ ಬಳಿ 2025ರ ವರ್ಷದ ಕೊನೆಯ ಸೂರ್ಯಾಸ್ತದ ನಯನ ಮನೋಹರ ದೃಶ್ಯವನ್ನು ಟಿವಿ9 ಕನ್ನಡ ಕ್ಯಾಮೆರಾ ಸೆರೆಹಿಡಿದಿದೆ. ಕ್ಯಾಮೆರಾಮ್ಯಾನ್ ಮಾರುತಿ ಕಟ್ಟೀಮನಿ ಅವರು ಈ ಅದ್ಭುತ ಕ್ಷಣವನ್ನು ತಮ್ಮ ಕ್ಯಾಮೆರಾದಲ್ಲಿ ಅಚ್ಚುಕಟ್ಟಾಗಿ ಸೆರೆ ಹಿಡಿದಿದ್ದಾರೆ. ಈ ದೃಶ್ಯಗಳು ವೀಕ್ಷಕರ ಮನಸೂರೆಗೊಂಡಿವೆ.

ದೇವಿ ದೇವಾಲಯದ ಮುಂದೆ ಅಮಾನವೀಯ ಘಟನೆ: ಮುಳ್ಳಿನ ಪೊದೆಯಲ್ಲಿ ಒದ್ದಾಡಿದ ಒಂದು ದಿನದ ಹೆಣ್ಣು ಮಗು

ದೇವಿ ದೇವಾಲಯದ ಮುಂದೆ ಅಮಾನವೀಯ ಘಟನೆ: ಮುಳ್ಳಿನ ಪೊದೆಯಲ್ಲಿ ಒದ್ದಾಡಿದ ಒಂದು ದಿನದ ಹೆಣ್ಣು ಮಗು

ಕೊಪ್ಪಳದ ಹುಲಿಗೆಮ್ಮ ದೇವಾಲಯದ ಬಳಿ ನವಜಾತ ಹೆಣ್ಣು ಮಗುವನ್ನು ಅಮಾನವೀಯವಾಗಿ ಎಸೆದು ಹೋಗಲಾಗಿದೆ. ಮುಳ್ಳಿನ ಪೊದೆಯಲ್ಲಿ ಸಿಕ್ಕಿಬಿದ್ದ ಮಗುವನ್ನು ಹೋಮ್ ಗಾರ್ಡ್ ರಕ್ಷಿಸಿದ್ದಾರೆ. ಹಸಿವು ಮತ್ತು ಹುಳುಗಳಿಂದ ನರಳುತ್ತಿದ್ದ ಶಿಶು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇನ್ನೂ ಇರುವ ತಪ್ಪು ಮನಸ್ಥಿತಿಗೆ ಈ ಘಟನೆ ಸಾಕ್ಷಿ. ಪೋಷಕರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಮಗು ಸುರಕ್ಷಿತವಾಗಿದೆ.

ಝೀರೋ ಟ್ರಾಫಿಕ್​​ನಲ್ಲಿ ಕರೆತಂದರೂ ಬದುಕಲಿಲ್ಲ ಜೀವ: ಚಿಕಿತ್ಸೆ ಫಲಿಸದೆ ಕಂದಮ್ಮ ಕೊನೆಯುಸಿರು

ಝೀರೋ ಟ್ರಾಫಿಕ್​​ನಲ್ಲಿ ಕರೆತಂದರೂ ಬದುಕಲಿಲ್ಲ ಜೀವ: ಚಿಕಿತ್ಸೆ ಫಲಿಸದೆ ಕಂದಮ್ಮ ಕೊನೆಯುಸಿರು

ಕಿಡ್ನಿ ಸಮಸ್ಯೆಯ ಜೊತೆಗೆ ಕರುಳು ಹೊರಬಂದ ರೀತಿಯಲ್ಲಿ ಜನಿಸಿದ್ದ ಮಗು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಮೃತಪಟ್ಟಿದೆ. ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಕಾರಣ ಕೊಪ್ಪಳದಿಂದ ಹುಬ್ಬಳ್ಳಿಗೆ ಶಿಶುವನ್ನು ಝೀರೋ ಟ್ರಾಫಿಕ್​​ನಲ್ಲಿ ಕರೆತರಲಾಗಿತ್ತು. ವೈದ್ಯರ ಸರ್ವ ಪ್ರಯತ್ನದ ಹೊರತಾಗಿಯೂ ಮಗುವಿನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ. ಗಂಡು ಮಗು ಜನಿಸಿದರೂ ಅದನ್ನು ಉಳಿಸಿಕೊಳ್ಳಲಾಗದ ಕಾರಣ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ತಡರಾತ್ರಿ ಜನಿಸಿದ ಮಗುವಿನ ಕರುಳೆಲ್ಲಾ ಹೊರಕ್ಕೆ: ಝೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿಗೆ ರವಾನೆ

ತಡರಾತ್ರಿ ಜನಿಸಿದ ಮಗುವಿನ ಕರುಳೆಲ್ಲಾ ಹೊರಕ್ಕೆ: ಝೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿಗೆ ರವಾನೆ

ಕೊಪ್ಪಳದಲ್ಲಿ ಜನಿಸಿದ ನವಜಾತ ಶಿಶುವೊಂದಕ್ಕೆ ಕರುಳುಗಳು ಹೊರಗೆ ಬಂದಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ. ಮಗುವಿನ ಜೀವ ಉಳಿಸಲು, ಝೀರೋ ಟ್ರಾಫಿಕ್ ಮೂಲಕ ಕೊಪ್ಪಳದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸ್ ಇಲಾಖೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಸಹಕಾರದಿಂದ ಮಗುವನ್ನು ಸಕಾಲದಲ್ಲಿ ತಲುಪಿಸುವ ಪ್ರಯತ್ನ ಮಾಡಲಾಗಿದೆ.

ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ: ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ?

ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ: ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ?

ಕೊಪ್ಪಳದ ಗವಿಮಠ ಜಾತ್ರೆ ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧ. ಜನವರಿ 1 ರಿಂದ 18 ರವರೆಗೆ ನಡೆಯುವ ಮಹಾ ದಾಸೋಹದಲ್ಲಿ ಲಕ್ಷಾಂತರ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ರಾಜ್ಯಪಾಲರ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ. ಈ ಬಾರಿ ಮಹಾ ದಾಸೋಹದಲ್ಲಿ ಏನು ಸ್ಪೆಷಲ್ ಎಂಬ ಮಾಹಿತಿ ಇಲ್ಲಿದೆ.

ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ

ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ

ಹನುಮ ಹುಟ್ಟಿದ ಸ್ಥಳ ಅಂಜನಾದ್ರಿ ಈಗ ವಿವಾದದ ಕೇಂದ್ರವಾಗಿದೆ. ಪೂಜಾ ವಿಚಾರಕ್ಕೆ ಇಬ್ಬರು ಸ್ವಾಮೀಜಿಗಳ ನಡುವೆ ಜಗಳ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಈ ಸಂಬಂಧ ಎರಡು ದಿನಲ್ಲಿ ಒಟ್ಟು ಮೂರು ಪೊಲೀಸ್ ಪ್ರಕರಣಗಳು ದಾಖಲಾಗಿವೆ. ದೀರ್ಘಕಾಲದ ನ್ಯಾಯಾಲಯದ ವ್ಯಾಜ್ಯವೇ ಈ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ.

Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ ವಿಮಾನ ಪ್ರವಾಸ ಆಯೋಜಿಸಿದ್ದಾರೆ. 4ರಿಂದ 8ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗಿದ್ದು, ಎರಡು ದಿನಗಳ ಈ ಶೈಕ್ಷಣಿಕ ಪ್ರವಾಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಅಂಜನಾದ್ರಿ ಆಂಜನೇಯ ಸ್ವಾಮಿ ದೇಗುಲದ ಗರ್ಭಗುಡಿಯೊಳಗೆ ಅರ್ಚಕ ವಿದ್ಯಾದಾಸ ಬಾಬಾ ಮತ್ತು ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ನಡುವೆ ಜಗಳ ನಡೆದಿದೆ. ಪೂಜಾ ವಿಚಾರದಲ್ಲಿ ಅಡ್ಡಿಪಡಿಸಿದ ಆರೋಪದ ಮೇಲೆ ವಾಗ್ವಾದ ತಾರಕಕ್ಕೇರಿ, ಹೊಡೆದಾಟದ ವರೆಗೆ ತಲುಪಿದೆ. ಅಂಜನಾದ್ರಿಯಂತಹ ಪವಿತ್ರ ಕ್ಷೇತ್ರದಲ್ಲಿ ನಡೆದ ಈ ಘಟನೆ ಭಕ್ತರಲ್ಲಿ ತೀವ್ರ ಆಕ್ರೋಶ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ.

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ!

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ!

ಕೊಪ್ಪಳದ ಹಿರೇಅರಳಿಹಳ್ಳಿ ಗ್ರಾಮದ ರೈತರೊಬ್ಬರು ಒಂದು ಕಾಲು ಕಳೆದುಕೊಂಡರೂ ಕೃಷಿಯಲ್ಲಿ ಲಕ್ಷಾಂತರ ರೂ. ಗಳಿಸಿದ್ದಾರೆ. 12 ಎಕರೆಯಲ್ಲಿ ಟೊಮೇಟೊ ಸೇರಿ ತರಕಾರಿ ಹಾಗೂ ಬೀಜೋತ್ಪಾದನೆ ಮಾಡಿ, 9 ಲಕ್ಷ ರೂ. ಆದಾಯ ಗಳಿಸಿದ್ದಾರೆ. ತಮ್ಮ ದೈಹಿಕ ಅಸಮರ್ಥತೆಯನ್ನು ಮೀರಿ ನಿಂತು ಸಾಧನೆ ಮಾಡಿದ್ದಾರೆ.

ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರುದಾರರಿಂದ ಜೆರಾಕ್ಸ್ ಪೇಪರ್‌ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗರಿ ಠಾಣೆಯ ಕಾನ್ಸ್​ಟೇಬಲ್ ಪರಶುರಾಮ್​​ರನ್ನು ಅಮಾನತುಗೊಳಿಸಿ ಎಸ್​ಪಿ ರಾಮ್​ ಅರಸಿದ್ದಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9 ಸುದ್ದಿ ಬಿತ್ತರಿಸಿತ್ತು. ವರದಿ ಹಿನ್ನಲೆ ಕ್ರಮಕೈಗೊಳ್ಳಲಾಗಿದೆ. ವಿಡಿಯೋ ನೋಡಿ.