ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಬಲ್ಡೋಟಾ ಕಾರ್ಖಾನೆ ಕೆರೆ ವಿವಾದ: ರಾತ್ರೋರಾತ್ರಿ ಗೇಟ್ ಮರುನಿರ್ಮಾಣ; ಮತ್ತೆ ಸಿಡಿದೆದ್ದ ರೈತರು
Baldota Factory Lake Dispute: ಕೊಪ್ಪಳದ ಬಲ್ಡೋಟಾ ಕಾರ್ಖಾನೆ ಕೆರೆ ವಿವಾದ ಮತ್ತೆ ತೀವ್ರಗೊಂಡಿದೆ. ರೈತ ಹುತಾತ್ಮ ದಿನಾಚರಣೆ ವೇಳೆ ಧ್ವಂಸಗೊಂಡಿದ್ದ ಕಾರ್ಖಾನೆ ಗೇಟ್ ಮತ್ತು ಕಾಂಪೌಂಡ್ ಅನ್ನು ಆಡಳಿತ ಮಂಡಳಿ ರಾತ್ರೋರಾತ್ರಿ ಮರುನಿರ್ಮಿಸಿದೆ. ಇದರಿಂದ ಆಕ್ರೋಶಗೊಂಡ ರೈತರು, ಕೆರೆಯನ್ನು ಸಾರ್ವಜನಿಕರಿಗೆ ನೀಡದಿದ್ದರೆ ಮತ್ತೆ ಗೇಟ್ ಒಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
- Shivakumar Pattar
- Updated on: Jul 29, 2026
- 4:15 pm
‘ಮುಲ್ಲಾ ಅಂದ್ರೆ ಮುಸ್ಲಿಂ ಅಲ್ಲ ಅಂತಾ ಗೂಗಲ್ನಲ್ಲಿ ನೋಡಿದ್ದೇನೆ’: ಬಂಧನಕ್ಕೆ ಹೆದರಲ್ಲ ಎಂದ ಸಿಟಿ ರವಿ
BJP MLC CT Ravi Controversy: ಸದ್ಯ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಸಿ.ಟಿ ರವಿ ‘ನಾನು ಮುಲ್ಲಾ ಅಂದಿದ್ದೇನೆ, ಮುಲ್ಲಾಗಳು ಅಂತಲ್ಲ’ ಎಂದು ಮತ್ತೊಮ್ಮೆ ಸಮರ್ಥನೆ ನೀಡಿದ್ದಾರೆ.
- Shivakumar Pattar
- Updated on: Jul 27, 2026
- 4:40 pm
ಕೊಪ್ಪಳದಲ್ಲಿ ತೀವ್ರಗೊಂಡ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್ಸಿ
ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ (BJP) ಸಹ ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸಿದೆ. ಅದರಂತೆ ಕೊಪ್ಪಳದಲ್ಲೂ ಸಹ ಬಿಜೆಪಿ, ಕಾಂಗ್ರೆಸ್ (Congress) ನಡೆ ವಿರುದ್ಧ ಪ್ರತಿಭಟನೆ ನಡೆಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ಪ್ರತಿಭಟನೆ ತೀವ್ರಗೊಂಡಿದ್ದು, ಕೊಪ್ಪಳ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿ ನಡೆದಿದೆ. ಈ ವೇಳೆ ಬಿಜೆಪಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯರ್ ಅವರು ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದಿರುವ ಪ್ರಸಂಗ ನಡೆದಿದೆ.
- Shivakumar Pattar
- Updated on: Jul 23, 2026
- 2:49 pm
‘ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ
ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಕೊಪ್ಪಳದ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎರಡು ಸೋಲುಗಳಿಗೆ ಸ್ಥಳೀಯ ಕಾಂಗ್ರೆಸ್ ನಾಯಕರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ನಂಬಿ ಪಕ್ಷದಲ್ಲಿರುವುದಾಗಿ ಸ್ಪಷ್ಟಪಡಿಸಿರುವ ಅನ್ಸಾರಿ, ತಮಗೆ ಕಾಂಗ್ರೆಸ್ನವರನ್ನು ಸೋಲಿಸುವುದು ಎರಡು ಸೆಕೆಂಡ್ಗಳ ಕೆಲಸ ಎಂದು ಹೇಳಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಸೇರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ.
- Shivakumar Pattar
- Updated on: Jul 23, 2026
- 10:05 am
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಕೊಪ್ಪಳದಲ್ಲಿ ಸಿಎಂಗೆ ಪತ್ರ ಬರೆದು ಪತಿ ಏಕಾಂಗಿ ಧರಣಿ
ಕೊಪ್ಪಳದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಸಿಗದ ಕಾರಣ ಪತಿಯೊಬ್ಬರು ಪ್ರತಿಭಟನೆ ನಡೆಸಿದ್ದಾರೆ. ಕುಷ್ಟಗಿಯ ಶರಣಪ್ಪ ಭೋವಿ ಅವರ ಪತ್ನಿ ಶಿಲ್ಪಾ ಅವರಿಗೆ ಮೂರು ವರ್ಷಗಳಿಂದ ತಾಂತ್ರಿಕ ಕಾರಣಗಳಿಂದ ಹಣ ತಲುಪಿಲ್ಲ. ಅರ್ಜಿ ಸಲ್ಲಿಸಲು ಮತ್ತು ದೋಷ ಸರಿಪಡಿಸಲು 25,000 ರೂ. ಖರ್ಚು ಮಾಡಿದ್ದರೂ, ಯೋಜನೆಯ ಲಾಭ ಸಿಗದೇ ಬೇಸತ್ತಿದ್ದಾರೆ. ಜಿಲ್ಲಾಡಳಿತ ಭವನದ ಮುಂದೆ ಏಕಾಂಗಿ ಧರಣಿ ನಡೆಸಿ ಗಮನ ಸೆಳೆದಿದ್ದಾರೆ.
- Shivakumar Pattar
- Updated on: Jul 22, 2026
- 6:29 pm
ತೀವ್ರ ಸ್ವರೂಪ ಪಡೆದ ಬಲ್ಡೋಟಾ ಹೋರಾಟದ ಕಿಚ್ಚು, ಕಬ್ಬಿಣದ ಬಾಗಿಲು ಮುರಿದು ಕಾರ್ಖಾನೆಗೆ ನುಗ್ಗಿದ ರೈತರು
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧರ ರೈತರ ಪ್ರತಿಭಟನೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಹಲವು ದಿನಗಳಿಂದ ಬಲ್ಡೋಟಾ ಕಾರ್ಖಾನೆ ತೆರವುಗೊಳಿಸುವಂತೆ ರೈತರು ಧರಣಿ ನಡೆಸಿದ್ದು, ಇದೀಗ ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.ಹೌದು.. ಬಲ್ಡೋಟಾ ಕಾರ್ಖಾನೆಯೊಳಗಿರುವ ಕೆರೆಯನ್ನು ಸಾರ್ವಜನಿಕ ಮುಕ್ತ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.
- Shivakumar Pattar
- Updated on: Jul 21, 2026
- 5:15 pm
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ: ಬೃಹತ್ ಪ್ರತಿಭಟನೆ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜನರ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಕಾರ್ಖಾನೆಯನ್ನು ಸೀಜ್ ಮಾಡುವಂತೆ ರೈತರು, ಪರಿಸರ ಹೋರಾಟಗಾರರು ಹಾಗೂ ರಾಜಕೀಯ ಸಂಘಟನೆಗಳು ಒತ್ತಾಯಿಸಿವೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಪ್ರತಿಭಟನಾ ಱಲಿ ನಡೆದ ಪರಿಣಾಮ, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನೂ ಕೂಗಿದ್ದಾರೆ.
- Shivakumar Pattar
- Updated on: Jul 21, 2026
- 2:24 pm
ಯಲಬುರ್ಗಾ: ರೈತರ ಮೇಲೆ ಪಿಎಸ್ಐ ಗುರುರಾಜ್ ದೌರ್ಜನ್ಯ ಆರೋಪ, ವಿಡಿಯೋ ವೈರಲ್
Koppal news: ಕೊಪ್ಪಳ ಜಿಲ್ಲೆಯ ಕುದುರಿಮೋತಿ ಗ್ರಾಮದಲ್ಲಿ ಬೇವೂರು ಠಾಣೆ ಪಿಎಸ್ಐ ಗುರುರಾಜ್ ರೈತರೊಂದಿಗೆ ವಾಗ್ವಾದ ನಡೆಸಿದ್ದಲ್ಲದೆ, ರೈತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವಿಡಿಯೋ ವೈರಲ್ ಆಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
- Shivakumar Pattar
- Updated on: Jul 20, 2026
- 12:18 pm
NEET UG 2026: ಕುರಿ ಕಾಯುತ್ತಲೇ ನೀಟ್ನಲ್ಲಿ ಅಪ್ರತಿಮ ಸಾಧನೆ; ದೇಶಕ್ಕೇ 694ನೇ ರ್ಯಾಂಕ್ ಪಡೆದ ಕೊಪ್ಪಳದ ಹಳ್ಳಿ ಹೈದ!
ಬಡತನ ಮತ್ತು ಸೌಲಭ್ಯಗಳ ಕೊರತೆಯ ನಡುವೆಯೂ ಕೊಪ್ಪಳ ಜಿಲ್ಲೆಯ ಯುವಕನೊಬ್ಬ ನೀಟ್ (NEET) ಪರೀಕ್ಷೆಯಲ್ಲಿ ದೇಶಕ್ಕೇ ಎಸ್ ಟಿ ಕೆಟಗೇರಿಯಲ್ಲಿ 694ನೇ ರ್ಯಾಂಕ್ ಪಡೆದಿದ್ದಾನೆ. ಗಂಗಾವತಿಯ ವಿದ್ಯಾನಿಕೇತನ ಕಾಲೇಜಿನಲ್ಲಿ ಪಿಯುಸಿ ಮುಗಿಸಿ, ರಜೆಯ ದಿನಗಳಲ್ಲಿ ಹಗಲಲ್ಲಿ ಕುರಿ ಕಾಯುತ್ತಾ, ಸಗಣಿ ಬಳಿಯುತ್ತಾ ಕಡು ಬಡತನದಲ್ಲೇ ಓದಿದ ಈ ಹಳ್ಳಿ ಹೈದ ಪುಟ್ಟರಾಜು ಇಡೀ ಜಿಲ್ಲೆ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾನೆ. ಈತನ ಕಠಿಣ ಪರಿಶ್ರಮ, ಛಲ ಮತ್ತು ಯಶಸ್ಸು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ.
- Shivakumar Pattar
- Updated on: Jul 18, 2026
- 1:43 pm
ಕೊಪ್ಪಳ: ಕಲ್ಯಾಣಿ ಸ್ಟೀಲ್ಸ್ಗೆ ಷರತ್ತುಬದ್ಧ ಅನುಮತಿ; ಜಿಲ್ಲಾಡಳಿತದ ನಡೆಗೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ!
ಕೊಪ್ಪಳದ ಗಿಣಗೇರಾ ಬಳಿಯ ಕಲ್ಯಾಣಿ ಸ್ಟೀಲ್ಸ್ ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 3 ತಿಂಗಳ ಷರತ್ತುಬದ್ಧ ಅನುಮತಿ ನೀಡಿದೆ. ಮಾಲಿನ್ಯ ನಿಯಮ ಉಲ್ಲಂಘನೆಗಾಗಿ ಜುಲೈ 15 ರಂದು ಜೆಸ್ಕಾಂ ವಿದ್ಯುತ್ ಕಡಿತಗೊಳಿಸಿತ್ತು. ಆದರೆ, ಕೇಂದ್ರದ ಆದೇಶವಿದ್ದರೂ ಕ್ರಮ ಕೈಗೊಳ್ಳಲು ವಿಳಂಬ ಮಾಡಿದ ಜಿಲ್ಲಾಡಳಿತದ ನಡೆ ಹಾಗೂ ಮರುದಿನವೇ ಸಿಕ್ಕ ಅನುಮತಿ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮತ್ತು ಹಲವು ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ.
- Shivakumar Pattar
- Updated on: Jul 18, 2026
- 1:32 pm
Rice Price Hike: ತುಂಗಭದ್ರಾ ನೀರಿನ ಅಭಾವ, ಬರದ ಪರಿಣಾಮ ಕುಸಿದ ಭತ್ತ ಬೆಳೆ; ಅಕ್ಕಿ ಬೆಲೆ ಭಾರೀ ಏರಿಕೆ
Rice Price Hike In Karnataka: ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ, ಮುಂಗಾರು ಮಳೆ ಅಭಾವ ಹಾಗೂ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಗಂಗಾವತಿಯ ಅಕ್ಕಿ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಕಳೆದ 15 ದಿನಗಳಲ್ಲಿ ಸೋನಾ ಮಸೂರಿ ಅಕ್ಕಿಯ ಹೋಲ್ಸೇಲ್ ದರ ಪ್ರತಿ ಕ್ವಿಂಟಾಲ್ಗೆ 200 ರೂ.ನಿಂದ 300 ರೂ.ವರೆಗೆ ಏರಿಕೆಯಾಗಿದೆ.
- Shivakumar Pattar
- Updated on: Jul 17, 2026
- 3:03 pm
72 ಕೋಟಿ ರೂ. ಅಕ್ರಮ ಪ್ರಕರಣ: ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್ಡಿಎಲ್ ಇಂಜಿನಿಯರ್ ಬಂಧನ
ಕೊಪ್ಪಳದಲ್ಲಿ ನಡೆದ ₹72 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ಡಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಮತ್ತು ಗುತ್ತಿಗೆದಾರ ದೇವರಾಜ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಯಾವುದೇ ಕಾಮಗಾರಿ ನಡೆಸದೆ 339 ಯೋಜನೆಗಳ ಬಿಲ್ ಪಾವತಿಸಿ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಗರಣ ಐದು ವರ್ಷಗಳ ಹಿಂದೆ ನಡೆದಿತ್ತು.
- Shivakumar Pattar
- Updated on: Jul 16, 2026
- 11:33 am