ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಮಾನವೀಯತೆ ಮರೆತ್ರಾ ವೈದ್ಯರು?: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಚಿಕ್ಕಬೊಮ್ಮನಾಳದ ಹುಲಿಗೆಮ್ಮ ಎಂಬ ಗಾಯಗೊಂಡ ಮಹಿಳೆಯನ್ನು ರಾತ್ರಿ 11 ಗಂಟೆಗೆ ಕರೆತಂದರೂ, ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಚಿಕಿತ್ಸೆಗಾಗಿ ಕಾದ ಮಹಿಳೆ ಸ್ಟ್ರೆಚರ್ ಮೇಲೆ ರಾತ್ರಿಯಿಡೀ ಮಲಗಿದ್ದರು. ಬೆಳಗ್ಗೆ 9 ಗಂಟೆಯವರೆಗೂ ಯಾವುದೇ ಆರೈಕೆ ಸಿಕ್ಕಿಲ್ಲವೆಂದು ಸಂಬಂಧಿಕರು ಆರೋಪಿಸಿದ್ದಾರೆ.
- Shivakumar Pattar
- Updated on: Mar 5, 2026
- 12:36 pm
ಹೋಳಿ ಹುಣ್ಣಿಮೆಯಂದೇ ಸ್ಮಶಾನ ಮೌನವಾದ ಗ್ರಾಮ: ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹೋಳಿ ಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯವಾಗಿದೆ. ಗಂಗಾವತಿಯಲ್ಲಿ ಇಬ್ಬರು ಯುವಕರು, ಅಭಿಷೇಕ್ ಮತ್ತು ಸೂರ್ಯ, ಹೋಳಿ ಬಣ್ಣ ತೊಳೆದುಕೊಳ್ಳಲು ಸಣಾಪುರ ಕೆರೆಗೆ ಇಳಿದು ನೀರುಪಾಲಾಗಿದ್ದಾರೆ. ನೀರಿನ ಆಳ ತಿಳಿಯದೆ ಸಂಭವಿಸಿದ ಈ ದುರ್ಘಟನೆ ಇಡೀ ಗಾಂಧಿನಗರವನ್ನು ಆಘಾತಕ್ಕೆ ದೂಡಿದೆ. ಮೃತದೇಹಗಳಿಗಾಗಿ ಶೋಧ ಮುಂದುವರಿದಿದ್ದು, ಪೊಲೀಸ್ ತನಿಖೆ ಜಾರಿಯಲ್ಲಿದೆ.
- Shivakumar Pattar
- Updated on: Mar 4, 2026
- 7:56 pm
ನಾನು ಗಂಡಸಾಗಿ ಹುಟ್ಟಿರುವುದೇ ತಪ್ಪಾ? ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಕೊಪ್ಪಳದ ಕುಕನೂರ ತಾಲೂಕಿನ ಕೋಮಲಾಪುರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ತಮ್ಮ ಪತ್ನಿಯಿಂದ ತಾವು ಹಿಂಸೆಗೆ ಒಳಗಾಗಿದ್ದು, ಶಾಲೆಯಲ್ಲಿ ಪ್ರತಿದಿನ ಗಲಾಟೆ ಸೃಷ್ಟಿಸಿ ತಮ್ಮ ವೃತ್ತಿ ಬದುಕಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮನ್ನು ಒತ್ತೆಯಾಳು ರೀತಿ ಇಟ್ಟುಕೊಂಡು, ಹಲ್ಲೆ ನಡೆಸಲಾಗುತ್ತಿದೆ ಹಾಗೂ ಸಾರ್ವಜನಿಕವಾಗಿ ಮಾನಹಾನಿ ಮಾಡಲಾಗುತ್ತಿದೆ ಎಂದು ಶೆಟ್ಟರ್ ಹೇಳಿದ್ದಾರೆ.
- Shivakumar Pattar
- Updated on: Mar 4, 2026
- 4:51 pm
ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಗಂಡ ಹೆಂಡ್ತಿ ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು... ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Shivakumar Pattar
- Updated on: Mar 4, 2026
- 4:05 pm
ಪತಿ ಮನೆಗೆ ಬಾರದ್ದಕ್ಕೆ ಸಿಟ್ಟು: ಶಾಲೆಗೆ ಬಂದು ಮುಖ್ಯ ಶಿಕ್ಷಕನ 2ನೇ ಪತ್ನಿಯ ಹೈಡ್ರಾಮಾ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ದೊಡ್ಡ ಗಲಾಟೆ ಸೃಷ್ಟಿಸಿದ್ದಾರೆ. ಪತಿ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ ಶಾಲೆಗೇ ಬಂದು ಹೈಡ್ರಾಮಾ ನಡೆಸಿದ್ದು, ಈ ಘಟನೆ ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ.
- Shivakumar Pattar
- Updated on: Mar 4, 2026
- 3:41 pm
ಶಾಲೆ ಮುಂದೆ ಮುಖ್ಯ ಶಿಕ್ಷಕನ ಎರಡನೇ ಪತ್ನಿಯ ಹೈಡ್ರಾಮಾ: ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳು ಹೈರಾಣು
ಕೊಪ್ಪಳದ ಕೋಮಲಾಪೂರ ಹಿರಿಯ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ಪ್ರತಿದಿನ ಶಾಲೆಗೆ ಬಂದು ಜಗಳವಾಡಿ ಪಾಠ ಪ್ರವಚನಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಈ ಕೌಟುಂಬಿಕ ಕಲಹ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಗ್ರಾಮಸ್ಥರು ಶಿಕ್ಷಣ ಇಲಾಖೆ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
- Shivakumar Pattar
- Updated on: Mar 4, 2026
- 2:50 pm
ಕಾರ್ಖಾನೆಗಳು ವಾಯುಮಾಲಿನ್ಯ ಕಡಿಮೆ ಮಾಡಬೇಕು: ಇಲ್ಲಾಂದ್ರೆ ಬಂದ್ ನಿಶ್ಚಿತ; ಶಾಸಕ ಎಚ್ಚರಿಕೆ
ಭೋಪಾಲ್ಕೊಪ್ಪಳದ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳಿಂದ ಉಂಟಾಗುತ್ತಿರುವ ಧೂಳು ಮತ್ತು ಹೊಗೆ ಮಾಲಿನ್ಯದ ಬಗ್ಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಮಾಜಿ ಸಂಸದ ಕರಡಿ ಸಂಗಣ್ಣ ಅವರ ಎದುರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮಹಿಳೆಯರು ಗ್ರಾಮ ಸ್ಥಳಾಂತರಕ್ಕೆ ಆಗ್ರಹಿಸಿದರೆ, ಶಾಸಕರು ಮಾಲಿನ್ಯ ನಿಯಂತ್ರಿಸುವ ಭರವಸೆ ನೀಡಿದ್ದಾರೆ.
- Shivakumar Pattar
- Updated on: Mar 4, 2026
- 10:56 am
ಖಮೇನಿ ಹತ್ಯೆ ಬಗ್ಗೆ ಸ್ಟೇಟಸ್: ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ: ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಕೆ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ್ದೇ ಹಲ್ಲೆಗೆ ಕಾರಣ ಎಂದು ಆರೋಪಿಸಲಾಗಿದೆ. ಹಲ್ಲೆ ಮಾಡಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಲಾಗಿದೆ ಎನ್ನಲಾಗುತ್ತಿದೆ.
- Shivakumar Pattar
- Updated on: Mar 4, 2026
- 8:25 am
ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಟಿವಿ9 ವರದಿಯ ಪ್ರಭಾವದಿಂದ ಕೊಪ್ಪಳ ಜಿಲ್ಲಾಡಳಿತವು ಅಕ್ರಮ ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೊಪ್ಪಳ ತಾಲೂಕಿನಲ್ಲಿ 49 ಮತ್ತು ಗಂಗಾವತಿಯಲ್ಲಿ 87 ಅನಧಿಕೃತ ರೆಸಾರ್ಟ್ ಹಾಗೂ ಹೋಮ್ ಸ್ಟೇಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿದ್ದ 5 ರೆಸಾರ್ಟ್ಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
- Shivakumar Pattar
- Updated on: Feb 28, 2026
- 11:39 am
ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ!
ಕೊಪ್ಪಳ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ರೆಸಿಡೆನ್ಶಿಯಲ್ ಸ್ಕೂಲ್ಗಳಲ್ಲಿನ ಸುರಕ್ಷತೆ ಬಗ್ಗೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಆರೋಪಿಯ ಬಂಧನವಾಗಿದೆ. ವಸತಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೇಳಿಬಂದಿದ್ದು, ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.
- Shivakumar Pattar
- Updated on: Feb 25, 2026
- 9:51 am
ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು: ಸರ್ಕಾರದ ಶವಯಾತ್ರೆ, ಜನಪ್ರತಿನಿಧಿಗಳಿಗೆ ತರಾಟೆ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಗವಿಮಠದಿಂದ ಮೆರವಣಿಗೆ ಆರಂಭಗೊಂಡಿದ್ದು, ಕಾರ್ಖಾನೆಯ ಹೊಗೆ ಮತ್ತು ಧೂಳಿನಿಂದ ತಮ್ಮ ಬೆಳೆಗಳು ಸಂಪೂರ್ಣವಾಗಿ ಹಾಳಾಗಿವೆ ಎಂದು ಅನ್ನದಾತರು ಆರೋಪಿಸಿದ್ದಾರೆ. ಸ್ಥಳಕ್ಕೆ ಬಂದ ಜನಪ್ರತಿನಿಧಿಗಳನ್ನು ರೈತರು ತರಾಟೆಗೆ ಪಡೆದ ಪ್ರಸಂಗವೂ ನಡೆದಿದೆ.
- Shivakumar Pattar
- Updated on: Feb 24, 2026
- 1:20 pm
ನಾಳೆ ಕೊಪ್ಪಳ ಬಂದ್ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನಾಳೆ ಕೊಪ್ಪಳ ಬಂದ್ಗೆ ಕರೆ ನೀಡಲಾಗಿದೆ. ಈ ಸ್ವಯಂಪ್ರೇರಿತ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾರ್ಖಾನೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಈ ಬಂದ್ ನಡೆಸಲಾಗುತ್ತಿದೆ.
- Shivakumar Pattar
- Updated on: Feb 23, 2026
- 6:02 pm