AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಪತ್ತಾರ್

Author - TV9 Kannada

shivakumar.pattar@tv9.com

ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕುಟುಂಬಕ್ಕೆ ಸಂಕಷ್ಟ ತಂದಿಟ್ಟ ವೈರಲ್ ವಿಡಿಯೋ: ಕೊಪ್ಪಳ ಗವಿಮಠ ಜಾತ್ರೆಯಲ್ಲಿ ಅವಳಲ್ಲ ಅವನಾದ ಕಥೆ

ಕುಟುಂಬಕ್ಕೆ ಸಂಕಷ್ಟ ತಂದಿಟ್ಟ ವೈರಲ್ ವಿಡಿಯೋ: ಕೊಪ್ಪಳ ಗವಿಮಠ ಜಾತ್ರೆಯಲ್ಲಿ ಅವಳಲ್ಲ ಅವನಾದ ಕಥೆ

ಅಲೆಮಾರಿ ಕುಟುಂಬವೊಂದು ಜಾತ್ರೆ ಜಾತ್ರೆ ಅಲೆದಾಡಿ ಸಾಹಸ ಪ್ರದರ್ಶನಗಳನ್ನ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿತ್ತು.ಸಾಹಸ ಪ್ರದರ್ಶನಕ್ಕೆ ಆ ಕುಟುಂಬ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಳ್ಳುತ್ತಿತ್ತು.10 ವರ್ಷದ ಪುಟ್ಟ ಬಾಲಕಿಯನ್ನ ಬಳಕೆ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿತ್ತು.ಆ ಪುಟ್ಟ ಬಾಲಕಿಯ ಸಾಹಸ ದೃಶ್ಯಗಳನ್ನ ನೋಡಿ ಅದೆಷ್ಟೋ ಜನ ಬೆರಗಾಗಿದ್ರು.ಸಾಮಾಜಿಕ ಜಾಲತಾಣದಲ್ಲಿ ಆ ಪುಟ್ಟ ಬಾಲಕಿ ವಿಡಿಯೋಗೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.ಇದೀಗ ಆ ವಿಡಿಯೋ ಆ ಬಾಲಕಿ ಹಾಗೂ ಕುಟುಂಬಕ್ಕೆ ಸಂಕಷ್ಟ ತಂದಿಟ್ಟಿದೆ.ಆ ವಿಡಿಯೋ ವೈರಲ್ ಬಳಿಕ ವಿಡಿಯೋದಲ್ಲಿರೋದು ಅವಳಲ್ಲ,ಅವನು ಎನ್ನುವ ಸತ್ಯ ಬಯಲಾಗಿದೆ.ಅರೇ ಇದೇನಿದು ಅವಳಲ್ಲ ಅವನಾದ ಕಥೆ ಅಂತೀರಾ ಈ ಸ್ಟೋರಿ ಓದಿ.

ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?

ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?

ತುಂಗಭದ್ರಾ ಜಲಾಶಯದ ಬಹುನಿರೀಕ್ಷಿತ ಗೇಟ್ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. 54 ಕೋಟಿ ರೂ ವೆಚ್ಚದಲ್ಲಿ 33 ಗೇಟ್‌ಗಳ ಬದಲಾವಣೆಗೆ ಮುಂದಾದ ಸರ್ಕಾರ, ಇದೀಗ 18ನೇ ಗೇಟ್ ಯಶಸ್ವಿಯಾಗಿ ಅಳವಡಿಸಲಾಗಿದೆ. ಮೇ ಅಂತ್ಯದೊಳಗೆ ಸಂಪೂರ್ಣ ಕೆಲಸ ಮುಗಿಯುವ ನಿರೀಕ್ಷೆ ಇದೆ.

ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ!

ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ!

ಭಕ್ತರ ಅಚಲ ನಂಬಿಕೆ ಹಾಗೂ ಶ್ರದ್ಧೆ ಹುಲಿಗೆಮ್ಮ ದೇವಿಗೆ ನಿರಂತರವಾಗಿ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರವಾಗಿದೆ. ಹುಂಡಿ ಎಣಿಕೆ ವೇಳೆ ಇದು ತಿಳಿದುಬಂದಿದ್ದು, 90 ಗ್ರಾಂ ಚಿನ್ನ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ದೇವಿಗೆ ಸಮರ್ಪಣೆಯಾಗಿವೆ.

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಮಹಾ ದಾಸೋಹದಲ್ಲಿ ಹೊಸ ದಾಖಲೆ, ಲಕ್ಷಲಕ್ಷ ರೊಟ್ಟಿ ಸಂಗ್ರಹ!

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಮಹಾ ದಾಸೋಹದಲ್ಲಿ ಹೊಸ ದಾಖಲೆ, ಲಕ್ಷಲಕ್ಷ ರೊಟ್ಟಿ ಸಂಗ್ರಹ!

ಗವಿ ಮಠದ ಮಹಾದಾಸೋಹದಲ್ಲಿ ಈಗಾಗಲೇ 6 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವನೆ ಮಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಗವಿ ಮಠಕ್ಕೆ ಆಗಮಿಸುತ್ತಿದ್ದು, ದಾಸೋಹದ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಭಕ್ತರ ಅಪಾರ ಸಹಕಾರ, ದಾನಿಗಳ ಉದಾರ ಮನಸ್ಸು ಹಾಗೂ ಮಠದ ವ್ಯವಸ್ಥಿತ ನಿರ್ವಹಣೆಯಿಂದಾಗಿ ಗವಿ ಮಠದ ದಾಸೋಹ ಈ ಬಾರಿ ದಾಖಲೆ ನಿರ್ಮಿಸಿದ್ದು, ಅನ್ನದಾನವೇ ಮಹಾದಾನ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ.

ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ

ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ

ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ದಾಸೋಹದ ಬಳಿ ಜನಸಂದಣಿ ಹೆಚ್ಚಾಗಿತ್ತು. ಇದನ್ನು ನಿಯಂತ್ರಿಸಲು ಕೊಪ್ಪಳ ಎಸ್ಪಿ ಸ್ವತಃ ಚೇರ್ ಮೇಲೆ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡಿದರು. ದಾಖಲೆಗಳಿಗೆ ಸಹಿ ಹಾಕುತ್ತಾ, ಪೊಲೀಸರೊಂದಿಗೆ ಬ್ಯಾರಿಕೇಡ್ ಬಳಸಿ ಸುವ್ಯವಸ್ಥೆ ಕಾಪಾಡಿದರು.

ಭಕ್ತಿ, ಜನಸಂಖ್ಯೆ, ದಾಸೋಹದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ

ಭಕ್ತಿ, ಜನಸಂಖ್ಯೆ, ದಾಸೋಹದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ

Koppal Gavisiddeshwara Rathtsava: ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಕೊಪ್ಪಳದ ಗವಿಸಿದ್ದೇಶ್ವರ ಮಹೋತ್ಸವ 2026 ಅದ್ದೂರಿಯಾಗಿ ನೆರವೇರಿತು. ಲಕ್ಷಾಂತರ ಭಕ್ತರು, ಮೈಸೂರು ಪಾಕ್ ಪ್ರಸಾದದ ಘಮಲು, 'ಗವಿಸಿದ್ದೇಶ್ವರ ಮಹಾರಾಜ್ ಕೀ ಜೈ' ಘೋಷಣೆಗಳು ಮುಗಿಲುಮುಟ್ಟಿದವು. 25 ಲಕ್ಷ ರೊಟ್ಟಿ, 20 ಲಕ್ಷ ಮೈಸೂರು ಪಾಕ್ ಸಹಿತ ದಾಖಲೆ ದಾಸೋಹ ನಡೆಯಿತು.

ಅದ್ಧೂರಿಯಾಗಿ ನಡೆದ ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ ಭಕ್ತರು

ಅದ್ಧೂರಿಯಾಗಿ ನಡೆದ ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ ಭಕ್ತರು

ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ 2026ರ ಮಹಾರಥೋತ್ಸವಕ್ಕೆ ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಚಾಲನೆ ನೀಡಿದರು. ಐದು ಲಕ್ಷಕ್ಕೂ ಅಧಿಕ ಭಕ್ತರು, ಜನಪ್ರತಿನಿಧಿಗಳು ಮತ್ತು ಎನ್.ಸಿ.ಸಿ. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭವ್ಯ ರಥೋತ್ಸವ ಜರುಗಿತು. ಭಕ್ತರು ಉತ್ತುತ್ತಿ ಎಸೆದು ಭಕ್ತಿ ಸಮರ್ಪಿಸಿದರು, ಇರುವೆಗಳಂತೆ ಭಕ್ತಸಾಗರ ಕಂಗೊಳಿಸಿತು.

ಶಿಷ್ಟಾಚಾರ ಉಲ್ಲಂಘನೆ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ

ಶಿಷ್ಟಾಚಾರ ಉಲ್ಲಂಘನೆ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ

ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಶಿಷ್ಟಾಚಾರ ಪಾಲಿಸದ ಕಾರಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಎದುರೇ ಸಚಿವ ಶಿವರಾಜ್ ತಂಗಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟಿಸಿದ್ದಾರೆ.

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು!

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು!

ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದೆ. ಶಿಷ್ಟಾಚಾರ ಉಲ್ಲಂಘನೆ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಎದುರೇ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 27 ಕೋಟಿ ರೂ. ವೆಚ್ಚದ ಈ ಕಾಮಗಾರಿಯು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಣದಲ್ಲಿ ನಡೆಯಲಿದೆ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

‘ನಾವು ಹೋಗಲು ಬಿಡಲ್ಲ’: ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

‘ನಾವು ಹೋಗಲು ಬಿಡಲ್ಲ’: ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

ಕರ್ನಾಟಕದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ಭಾವುಕ ಪ್ರತಿಭಟನೆ ನಡೆಸಿದ್ದಾರೆ. ಶಾಲಾ ಗೇಟ್‌ ಬಂದ್‌ ಮಾಡಿದ ಮಕ್ಕಳು, ಶಿಕ್ಷಕರನ್ನು ಕಳುಹಿಸಬಾರದೆಂದು ಕಣ್ಣೀರಿಟ್ಟು ಬೇಡಿಕೊಂಡರು. ವೀರಪ್ಪ ಸರ್ ಬೇಕೇ ಬೇಕು ಎಂದು ಪಟ್ಟು ಹಿಡಿದು ನಿಂತಿದ್ದು, ತಮ್ಮ ಗುರುಗಳ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು.

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್!

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್!

ಕೊಪ್ಪಳದಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಯಲಬುರ್ಗಾ ತಾಲೂಕು ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಾಕ್ಷಿ ನಾಶಪಡಿಸಿ ಆರೋಪಿಗಳನ್ನು ರಕ್ಷಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಸಂಗ್ರಹಿಸಿದ್ದ ವಸ್ತುಗಳ ಮೇಲೆ ಸಿಬ್ಬಂದಿಯಿಂದ ಸಹಿ ಮಾಡಿಸಿ, ಡಿಎನ್‌ಎ ಸಾಕ್ಷ್ಯ ಸಿಗದಂತೆ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ.

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ಕೊಪ್ಪಳ ತಾಲೂಕಿನ ಗಿಣಗೇರಾ ಬಳಿ 2025ರ ವರ್ಷದ ಕೊನೆಯ ಸೂರ್ಯಾಸ್ತದ ನಯನ ಮನೋಹರ ದೃಶ್ಯವನ್ನು ಟಿವಿ9 ಕನ್ನಡ ಕ್ಯಾಮೆರಾ ಸೆರೆಹಿಡಿದಿದೆ. ಕ್ಯಾಮೆರಾಮ್ಯಾನ್ ಮಾರುತಿ ಕಟ್ಟೀಮನಿ ಅವರು ಈ ಅದ್ಭುತ ಕ್ಷಣವನ್ನು ತಮ್ಮ ಕ್ಯಾಮೆರಾದಲ್ಲಿ ಅಚ್ಚುಕಟ್ಟಾಗಿ ಸೆರೆ ಹಿಡಿದಿದ್ದಾರೆ. ಈ ದೃಶ್ಯಗಳು ವೀಕ್ಷಕರ ಮನಸೂರೆಗೊಂಡಿವೆ.