AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಪತ್ತಾರ್

Author - TV9 Kannada

shivakumar.pattar@tv9.com

ಶಿವಕುಮಾರ್ ಎಸ್ ಪತ್ತಾರ..
ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕರ್ನಾಟಕದಲ್ಲಿ ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ

ಕರ್ನಾಟಕದಲ್ಲಿ ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ

ಕೊಪ್ಪಳ ತಾಲೂಕಿನ ಶಿವಾಪುರ ಕೆರೆ ಬಳಿ ನಡೆದ ಕಲ್ಲು ಗಣಿಗಾರಿಕೆ ವೇಳೆ ಬೃಹತ್ ಬಂಡೆಯೊಂದು ಜೆಸಿಬಿ ಯಂತ್ರದ ಮೇಲೆ ಕುಸಿದಿದೆ. ಅದೃಷ್ಟವಶಾತ್, ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಗಣಿಗಾರಿಕೆ ನಡೆಸಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ರಾಮ ಮಂದಿರ ಹುಂಡಿ ಎಣಿಕೆ ಲೂಟಿ ಮಧ್ಯೆ ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ

ರಾಮ ಮಂದಿರ ಹುಂಡಿ ಎಣಿಕೆ ಲೂಟಿ ಮಧ್ಯೆ ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ

ಕೊಪ್ಪಳದ ಅಂಜನಾದ್ರಿ ಬೆಟ್ಟದ ಹುಂಡಿ ಎಣಿಕೆ ಮಾಹಿತಿ ವಿಳಂಬ ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ. ಜುಲೈ 3ರಂದು ನಡೆದ ಎಣಿಕೆಯಲ್ಲಿ 71.77 ಲಕ್ಷ ರೂ. ನಗದು ಹಾಗೂ ನೇಪಾಳ, ಅಮೆರಿಕಾ ಸೇರಿದಂತೆ ವಿದೇಶಿ ಕರೆನ್ಸಿ ಸಂಗ್ರಹವಾಗಿದೆ. ರಾಮ ಮಂದಿರ ಹುಂಡಿ ವಿವಾದದ ನಡುವೆ ಈ ನಡೆ ಪಾರದರ್ಶಕತೆ ಕೊರತೆಯನ್ನು ಸೂಚಿಸುತ್ತಿದೆ ಎಂದು ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಡಳಿತ ಮಮಡಲಿಯ ಮೌನ ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಶಾಂತನಗರದ‌ ಮನೆ ಒಂದರಲ್ಲಿ ಭೀಕರ ಘಟನೆಯೊಂದು ನಡೆದಿದೆ. ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

CM ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನ ತಗೆದು ಹಾಕಿಲ್ಲ: ಡಿಕೆಶಿ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ

CM ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನ ತಗೆದು ಹಾಕಿಲ್ಲ: ಡಿಕೆಶಿ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ

ಶಾಸಕ ಬಸವರಾಜ ರಾಯರೆಡ್ಡಿಯವರು ಸಿದ್ದರಾಮಯ್ಯನವರ ಆಪ್ತರಾಗಿದ್ದರೂ ಸಹ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಇದರಿಂದ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಆದ್ರೆ, ಇದೀಗ ಡಿಕೆ ಶಿವಕುಮಾರ್, ಎಲ್.ಕೆ.ಅತೀಕ್ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದ್ದಾರೆ. ಇನ್ನು ಈ ಬಗ್ಗೆ ಕೊಪ್ಪಳದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಯರೆಡ್ಡಿ, ಸಿಎಂ ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನನ್ನು ತೆಗೆದು ಹಾಕಿಲ್ಲ. ಸಿಎಂ ಬದಲಾವಣೆ ನಂತರ ಡಿಕೆಶಿ ಮತ್ತೊಬ್ಬರನ್ನು ನೇಮಿಸಿದ್ದಾರೆ. ಅದರಲ್ಲಿ ತಪ್ಪೇನಿದೆ? ಆರ್ಡರ್ ಮಾಡಲೇಬೇಕು, ಹಾಗಾಗಿ ಆರ್ಡರ್ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನನ್ನ ವಿರುದ್ಧವಾಗಿ ಇಲ್ಲ ಎಂದಿದ್ದಾರೆ.

4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಡ್ಯಾಂ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!

4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಡ್ಯಾಂ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!

ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯ ಖಾಲಿ ಖಾಲಿಯಾಗಿದೆ. ಹೀಗಾಗಿ ಮುಂಗಾರು ಬೆಳೆಗಳಿಗೆ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ. ಸರ್ಕಾರದ ಆದೇಶದಂತೆ ಸದ್ಯ ಲಭ್ಯವಿರುವ ನೀರನ್ನು ಕೇವಲ ಕುಡಿಯಲು ಮಾತ್ರ ಬಳಸಲಾಗುವುದು. ರೈತರು ಸಹಕರಿಸಬೇಕು ಹಾಗೂ ಮುಂದೆ ಜಲಾಶಯ ಭರ್ತಿಯಾದರೆ ನೀರು ಹರಿಸುವ ಬಗ್ಗೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದೆ. ಇದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ.

ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ

ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ

Rahul Dravid: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಜೊತೆ ಕೊಪ್ಪಳದ ಪ್ರಸಿದ್ಧ ಹನುಮನ ದೇಗುಲ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, 575 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ದೇಗುಲದ ವತಿಯಿಂದ ದ್ರಾವಿಡ್​​ ದಂಪತಿಯನ್ನು ಸನ್ಮಾನಿಸಲಾಗಿದೆ.

ಕೊಪ್ಪಳದಲ್ಲಿ ಮಳೆಗಾಗಿ ವಿಭಿನ್ನ ಹರಕೆ: ಊಡಚಮ್ಮ ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ

ಕೊಪ್ಪಳದಲ್ಲಿ ಮಳೆಗಾಗಿ ವಿಭಿನ್ನ ಹರಕೆ: ಊಡಚಮ್ಮ ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ

Koppal News: ಕೊಪ್ಪಳ ಜಿಲ್ಲೆಯಲ್ಲಿ ಮಳೆಗಾಗಿ ವಿಶಿಷ್ಟ ಹರಕೆಯನ್ನು ಗ್ರಾಮಸ್ಥರು ಪೂರೈಸಿದ್ದಾರೆ. ಬರಗಾಲದ ಆತಂಕದಲ್ಲಿರುವ ತಳಬಾಳು ಗ್ರಾಮದ ಜನತೆ ಅರಕೇರಾ ಗ್ರಾಮದ ಊಡಚಮ್ಮ ದೇವಿ ದೇಗುಲಕ್ಕೆ ಪಾದಯಾತ್ರೆ ಕೈಗೊಂಡು, ರಾತ್ರಿಪೂರ್ತಿ ಭಜನೆ ನಡೆಸಿದ್ದಾರೆ. ತಲೆಮಾರುಗಳಿಂದ ನಡೆದುಕೊಂಡು ಬಂದ ಈ ಪದ್ಧತಿಯಿಂದ ಮಳೆಯಾಗುತ್ತದೆ ಎಂಬ ಅಚಲ ನಂಬಿಕೆ ಇಲ್ಲಿನವರಲ್ಲಿದೆ.

ರೈತರಿಗೆ ಬ್ಯಾಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ

ರೈತರಿಗೆ ಬ್ಯಾಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ

ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕೊಪ್ಪಳದ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವುದನ್ನು ಅಧಿಕಾರಿಗಳು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಮುಂಗಾರು ಬೆಳೆಯನ್ನು ನಂಬಿದ್ದ ನಾಲ್ಕು ಜಿಲ್ಲೆಗಳ ಲಕ್ಷಾಂತರ ರೈತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಈ ವರ್ಷ ಈವರೆಗೆ ವಾಡಿಕೆಗಿಂತ ಶೇ 42 ರಷ್ಟು ಮುಂಗಾರು ಮಳೆ ಕೊರತೆ ದಾಖಲಾಗಿದೆ.

ಸರ್ಕಾರ ಅಂದ್ಮೇಲೆ ನ್ಯೂನತೆ ಸಾಕಷ್ಟಿರುತ್ತೆ, 2 ಲಕ್ಷ ಜನರಿಗೆ ಗೃಹಲಕ್ಷ್ಮಿ ಕೊಡ್ತಾ ಇಲ್ಲ: ಲೋಪ ಒಪ್ಪಿಕೊಂಡ ಬಸವರಾಜ್ ರಾಯರೆಡ್ಡಿ

ಸರ್ಕಾರ ಅಂದ್ಮೇಲೆ ನ್ಯೂನತೆ ಸಾಕಷ್ಟಿರುತ್ತೆ, 2 ಲಕ್ಷ ಜನರಿಗೆ ಗೃಹಲಕ್ಷ್ಮಿ ಕೊಡ್ತಾ ಇಲ್ಲ: ಲೋಪ ಒಪ್ಪಿಕೊಂಡ ಬಸವರಾಜ್ ರಾಯರೆಡ್ಡಿ

‘‘ಸರ್ಕಾರ ಅಂದಮೇಲೆ ನ್ಯೂನತೆಗಳು ಸಾಕಷ್ಟಿರುತ್ತವೆ’’ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ತಮ್ಮದೇ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿನ ಲೋಪಗಳನ್ನು ಬಹಿರಂಗಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದಲ್ಲಿ ಸದ್ಯ 2 ಲಕ್ಷ ಮಹಿಳೆಯರಿಗೆ ಹಣ ತಲುಪುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ನಿವೃತ್ತರಾದ ದೈಹಿಕ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!

ನಿವೃತ್ತರಾದ ದೈಹಿಕ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!

ಶಿಕ್ಷಣ ನೀಡಿ ಭವಿಷ್ಯ ರೂಪಿಸಿದ ತಮ್ಮ ನೆಚ್ಚಿನ ಗುರುವಿಗೆ ಹಳೆಯ ವಿದ್ಯಾರ್ಥಿಗಳು ಅಪೂರ್ವ 'ಗುರು ಕಾಣಿಕೆ' ನೀಡಿದ ಹೃದಯಸ್ಪರ್ಶಿ ಘಟನೆ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಜೆ.ಎಂ. ನದಾಫ್ ಅವರು ಇತ್ತೀಚೆಗೆ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ ನೆಚ್ಚಿನ ಶಿಕ್ಷಕರ ನಿವೃತ್ತಿ ಸನ್ಮಾನದ ನೆನಪಿಗಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ, ಪ್ರೀತಿಯಿಂದ ಹೊಸ ಬೈಕ್ ಒಂದನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಗುರುಭಕ್ತಿಯನ್ನು ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ಅಪೂರ್ವ ಕೊಡುಗೆಗೆ ಶಿಕ್ಷಕರು ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಕೊಪ್ಪಳ: ಭಾನಾಪೂರ ಬಳಿ ಭೀಕರ ಅಪಘಾತ, ನಾಲ್ವರು ಸಾವು

ಕೊಪ್ಪಳ: ಭಾನಾಪೂರ ಬಳಿ ಭೀಕರ ಅಪಘಾತ, ನಾಲ್ವರು ಸಾವು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಶೋಕ್ ಲೇಲ್ಯಾಂಡ್ ವಾಹನವೊಂದು ಡಿವೈಡರ್ ದಾಟಿಕೊಂಡು ಬಂದು ಓಮಿನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಂತ್ರಾಲಯಕ್ಕೆ ಹೊರಟಿದ್ದ ಹಾವೇರಿ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಬರಿದಾದ ಮೂರು ರಾಜ್ಯಗಳ ಜೀವನಾಡಿ: ಹೊಸ ಕ್ರಸ್ಟ್​​ಗೇಟ್​​ಗಳನ್ನು ಕಂಡ ತುಂಗಭದ್ರಾ ಜಲಾಶಯವೀಗ ಭಣಭಣ

ಬರಿದಾದ ಮೂರು ರಾಜ್ಯಗಳ ಜೀವನಾಡಿ: ಹೊಸ ಕ್ರಸ್ಟ್​​ಗೇಟ್​​ಗಳನ್ನು ಕಂಡ ತುಂಗಭದ್ರಾ ಜಲಾಶಯವೀಗ ಭಣಭಣ

Tungabhadra Dam: ಕಳೆದ ವರ್ಷಕ್ಕೆ ಹೋಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಬರೋಬ್ಬರಿ 41 ಟಿಎಂಸಿ ನೀರು ಕಡಿಮೆಯಾಗಿದ್ದು, ಮೂರು ರಾಜ್ಯಗಳ ಜನರಲ್ಲಿ ಆತಂಕ ಮೂಡಿಸಿದೆ. ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಹಿನ್ನೆಲೆ ಸಂತಸ ಪಡಬೇಕೋ, ನೀರಿಲ್ಲ ಎಂದು ದುಃಖಪಡಬೇಕೋ ಎನ್ನುವ ಸ್ಥಿತಿಯಲ್ಲಿ ಇದೇ ಡ್ಯಾಂ ನಂಬಿಕೊಂಡ ಲಕ್ಷಾಂತರ ಜನರಿದ್ದಾರೆ. ಬಿತ್ತನೆ ಕಾರ್ಯ ಆರಂಭಿಸಬೇಕಾದ ಈ ಸಂದರ್ಭದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ನಡುವೆ, ಜಲಾಶಯವೂ ಬರಿದಾಗಿರೋದು ಅನ್ನದಾತರ ಚಿಂತೆಗೂ ಕಾರಣವಾಗಿದೆ.