ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ: ಕ್ಷಣಮಾತ್ರದಲ್ಲಿ ಕದ್ದು ಎಸ್ಕೇಪ್
ಬೆಂಗಳೂರಿನ ಆರ್ಪಿಸಿ ಲೇಔಟ್ನಲ್ಲಿ ನಕಲಿ ನಾಗಸಾಧುಗಳ ಸೋಗಿನಲ್ಲಿ ಬಂದ ವಂಚಕರು ಅರುಣ್ ಶ್ರೀಪಾದ್ ಎಂಬುವವರಿಗೆ ಮೋಸ ಮಾಡಿದ್ದಾರೆ. ಕಾಶಿ ಮತ್ತು ಗಂಗಾ ಸ್ನಾನದ ಬಗ್ಗೆ ಮಾತನಾಡಿ ನಂಬಿಕೆ ಗಳಿಸಿದ ಈ ವೇಷಧಾರಿಗಳು, ಆಶೀರ್ವಾದ ಮಾಡುವ ನೆಪದಲ್ಲಿ ಅವರ ಕೈಲಿದ್ದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ವಿಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
- Shivaprasad B
- Updated on: Jun 22, 2026
- 11:32 am
ಒಂದೇ ಬೈಕ್ ಮೇಲೆ 100 ಕೇಸ್: ರಿಯಾಯಿತಿ ಬಳಸಿ 27,500 ರೂ. ಟ್ರಾಫಿಕ್ ಫೈನ್ ಪಾವತಿಸಿದ ಸವಾರ
ಬೆಂಗಳೂರಿನಲ್ಲಿ ಒಂದೇ ಬೈಕ್ ಮೇಲಿದ್ದ ಬರೋಬ್ಬರಿ 100 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡವನ್ನು ಬೈಕ್ ಸವಾರರೊಬ್ಬರು ಶೇ 50 ರ ರಿಯಾಯಿತಿ ದರದಲ್ಲಿ ಪಾವತಿಸಿದ್ದಾರೆ. ಮತ್ತೊಂದೆಡೆ, ಬೆಂಗಳೂರು ಸಂಚಾರ ಪೊಲೀಸರು ನಗರದಾದ್ಯಂತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಾಚರಣೆಯಲ್ಲಿ ನೂರಾರು ಡ್ರಂಕ್ ಅಂಡ್ ಡ್ರೈವ್ ಹಾಗೂ ಅತಿವೇಗದ ಚಾಲನೆ ಪ್ರಕರಣಗಳು ದಾಖಲಾಗಿವೆ.
- Shivaprasad B
- Updated on: Jun 22, 2026
- 9:33 am
ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿಯ ಮತ್ತಷ್ಟು ಕರ್ಮಕಾಂಡ ಬಯಲು: ಅಧಿವೇಶನಕ್ಕೆ ತಪ್ಪು ಮಾಹಿತಿ ನೀಡಿದ್ದ ಆರೋಪಿ
ರಾಬರಿ ಪ್ರಕರಣದಲ್ಲಿ ಬಂಧಿತ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿಯ ಮತ್ತಷ್ಟು ಕರ್ಮಕಾಂಡಗಳು ಬಯಲಾಗಿವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಜಾಗ ಒತ್ತುವರಿ ಮಾಡಲು ಭೂಗಳ್ಳರಿಗೆ ಸಹಕರಿಸಿದ್ದಾರೆ. ಕೋಟ್ಯಂತರ ರೂ ಹಣ ನೀಡಿ ಖರೀದಿಸಿದ್ದ ಪೆಟ್ರೋಲ್ ಬಂಕ್ ನಿರ್ಮಾಣ ಜಾಗ ಒತ್ತುವರಿಯಲ್ಲಿ ಮಾಜಿ ಕಾರ್ಪೊರೇಟರ್ ಜೊತೆ ಕೈಜೋಡಿಸಿರುವ ಆರೋಪವಿದೆ.
- Shivaprasad B
- Updated on: Jun 21, 2026
- 3:14 pm
ನಟಿ ರುಕ್ಮಿಣಿ ವಸಂತ ಡೀಪ್ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್!
ಬೆಂಗಳೂರು ಸೈಬರ್ ಪೊಲೀಸರು ನಟಿ ರುಕ್ಮಿಣಿ ವಸಂತ್ ಅವರ AI ಡೀಪ್ಫೇಕ್ ಫೋಟೋ-ವಿಡಿಯೋ ಸೃಷ್ಟಿಸಿದ ಮೂವರು ಸುಶಿಕ್ಷಿತ ಆರೋಪಿಗಳನ್ನು ಬಂಧಿಸಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್, ನರ್ಸಿಂಗ್ ಪದವೀಧರ, CA ಕಂಪನಿ ಉದ್ಯೋಗಿಗಳಾದ ಇವರು ಹಣ, ವೀಕ್ಷಣೆ ಅಥವಾ ವಿಕೃತ ಸಂತೋಷಕ್ಕಾಗಿ ಈ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಇಂತಹ ಸೈಬರ್ ಅಪರಾಧದಲ್ಲಿ ಸುಶಿಕ್ಷಿತರು ಭಾಗಿಯಾಗಿರುವುದು ಸಮಾಜದಲ್ಲಿ ಆತಂಕ ಮೂಡಿಸಿದೆ.
- Shivaprasad B
- Updated on: Jun 20, 2026
- 12:04 pm
ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರಿನಲ್ಲಿ ಮಾದಕ ದ್ರವ್ಯ ನಿಗ್ರಹ ದಳ ಮತ್ತು ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ವಶಪಡಿಸಿಕೊಂಡಿದ್ದಾರೆ. ಹೆಬ್ಬಾಳ, ಕೆಂಪೇಗೌಡ ಅಂತರರಾಜ್ಯ ವಿಮಾನ ನಿಲ್ದಾಣ ಹಾಗೂ ಚಿಕ್ಕಬಾಣಾವರದಲ್ಲಿ ನಡೆದ ಈ ಕಾರ್ಯಾಚರಣೆಗಳಲ್ಲಿ ವಿದೇಶಿ ಮಹಿಳೆ ಸೇರಿ ಪ್ರಮುಖ ಪೆಡ್ಲರ್ಗಳನ್ನು ಬಂಧಿಸಲಾಗಿದೆ.
- Shivaprasad B
- Updated on: Jun 16, 2026
- 12:21 pm
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ಮಾಲೀಕನ ವಿರುದ್ಧ ಪ್ರತಿಭಟನೆ
ಬಸವೇಶ್ವರ ನಗರದ ಅಂಜನಾದ್ರಿ ಪಿಜಿಯಲ್ಲಿ ಊಟದಲ್ಲಿ ಹುಳ ಪತ್ತೆಯಾಗಿದ್ದರಿಂದ ಯುವತಿಯರು ಪ್ರತಿಭಟನೆ ನಡೆಸಿದ್ದಾರೆ. ಕಳಪೆ ಆಹಾರದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಪಿಜಿ ಮಾಲೀಕರು ಯುವತಿಯರಿಗೆ ಪಿಜಿ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಪದೇ ಪದೇ ಇಂತಹ ಘಟನೆಗಳು ಸಂಭವಿಸುತ್ತಿದ್ದರೂ, ಮಾಲೀಕರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಯುವತಿಯರು ಆರೋಪಿಸಿದ್ದಾರೆ. ರಾತ್ರೋರಾತ್ರಿ ಪಿಜಿಯಿಂದ ಹೊರಬಂದು ಧರಣಿ ಕುಳಿತ ಯುವತಿಯರು, ಆಹಾರದ ಗುಣಮಟ್ಟ ಸುಧಾರಣೆಗೆ ಆಗ್ರಹಿಸಿದ್ದಾರೆ.
- Shivaprasad B
- Updated on: Jun 12, 2026
- 11:51 am
ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ
ಕಾಯಿಲೆಯಿಂದ ಕಂಗಾಲಾಗಿರುವ ರೋಗಿಗಳ ಅಸಹಾಯಕತೆಯನ್ನೇ ವಂಚಕರ ಗ್ಯಾಂಗ್ ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ವಂಚಕರು ಕೇವಲ ಒಂದು ಲೋಟ ಜೀರಿಗೆ ಕಷಾಯ ಕುಡಿಸಿ ಬರೋಬ್ಬರಿ 70 ಸಾವಿರ ರೂ ಹಣ ಪಡೆದು ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
- Shivaprasad B
- Updated on: Jun 5, 2026
- 10:27 pm
ಟಾಯ್ಲೆಟ್ ಕ್ಲೀನರ್ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ!
ಬೆಂಗಳೂರಿನ ನಗರತ್ ಪೇಟೆಯ ಜ್ಯುವೆಲ್ಲರಿ ಶಾಪ್ನ ಶೌಚಾಲಯದ ಕಿಟಕಿ ಮೂಲಕ ನುಗ್ಗಿ ಚಿನ್ನದ ಗಟ್ಟಿ ಕದ್ದಿದ್ದ ಮೂವರು ಖದೀಮರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜ್ಯುವೆಲ್ಲರಿಗಳ ಕೊಳಚೆ ನೀರಿನಲ್ಲಿ ವೇಸ್ಟೇಜ್ ಚಿನ್ನದ ಕಣಗಳನ್ನು ಹುಡುಕುವ ಶೌಚಾಲಯ ಕ್ಲೀನರ್ಗಳಾಗಿದ್ದು, ಒಂದೇ ರಾತ್ರಿಯಲ್ಲಿ ಶ್ರೀಮಂತರಾಗಲು ರೌಡಿ ಶೀಟರ್ ಆರ್ ಎಕ್ಸ್ ನಾಗನೊಂದಿಗೆ ಸೇರಿ 12 ಲಕ್ಷ ಮೌಲ್ಯದ 84 ಗ್ರಾಂ ಚಿನ್ನದ ಗಟ್ಟಿ ಕದ್ದಿರುವುದು ಬೆಳಕಿಗೆ ಬಂದಿದೆ.
- Shivaprasad B
- Updated on: Jun 5, 2026
- 10:46 am
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ: ವಿಡಿಯೋ ನೋಡಿ
ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ, ಲೋಕಭವನದ ಮುಂದೆ ನೆರೆದಿದ್ದ ಕಾರ್ಯಕರ್ತರತ್ತ ಕಾರಿನಿಂದ ಕೈ ಬೀಸಿ, ಫ್ಲೈಯಿಂಗ್ ಕಿಸ್ ನೀಡಿದರು. ಕೆ.ಸಿ.ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆಯವರೂ ಈ ಸಂದರ್ಭದಲ್ಲಿ ಹಾಜರಿದ್ದರು. ರಾಹುಲ್ ಗಾಂಧಿಯವರನ್ನು ನೋಡಿದ ಅಭಿಮಾನಿಗಳು ಸರ್ ವೇವ್ ಯುವರ್ ಹ್ಯಾಂಡ್ ಎಂದು ಪದೇ ಪದೇ ಕೂಗುತ್ತಾ ಸಂಭ್ರಮಿಸಿದರು.
- Shivaprasad B
- Updated on: Jun 3, 2026
- 4:16 pm
ಡಿಕೆ ಶಿವಕುಮಾರ್ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ (ಜೂನ್ 03) ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದೇಶ-ರಾಜ್ಯದ ಹಲವು ಗಣ್ಯರು, ವಿಐಪಿಗಳು ಆಗಮಿಸುತ್ತಿರುವ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು ಬಿಗಿ ಭದ್ರತೆ ಹಾಗೂ ವಿಶೇಷ ಸಂಚಾರ ವ್ಯವಸ್ಥೆ ಜಾರಿಗೊಳಿಸಿದ್ದಾರೆ. ಇದರ ಜೊತೆಗೆ ಈ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕೆಲವು ಸಲಹೆ-ಸೂಚನೆಗಳನ್ನ ನೀಡಲಾಗಿದೆ.
- Shivaprasad B
- Updated on: Jun 2, 2026
- 10:24 pm
ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು: ಲ್ಯಾಂಡಿಂಗ್ ಸಾಧ್ಯವಾಗದೆ ಆಗಸದಲ್ಲೇ ಸುತ್ತಿದ ವಿಮಾನ!
ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು ರಸ್ತೆಗಳು ಜಲಾವೃತಗೊಂಡಿವೆ. ಪರಿಣಾಮ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದು, ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಅತ್ತ ಮಳೆಯ ತೀವ್ರತೆಗೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಾಧ್ಯವಾಗದೆ ನವದೆಹಲಿಯಿಂದ ಆಗಮಿಸಿದ್ದ ಇಂಡಿಗೋ ಫ್ಲೈಟ್ ಕೆಲ ಕಾಲ ಆಕಾಶದಲ್ಲೇ ಸುತ್ತಾಡಿದ ಪ್ರಸಂಗವೂ ನಡೆದಿದೆ.
- Shivaprasad B
- Updated on: Jun 2, 2026
- 7:27 pm
ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್
ಬೆಂಗಳೂರಿನ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್ ಮೇಲೆ ಇಡಿ ದಾಳಿ ಕೇಸ್ಗೆ ಸಂಬಂಧಿಸಿದಂತೆ 1.27 ಕೋಟಿ ನಗದು ಮತ್ತು ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ 18 ಕೋಟಿ ರೂ ಹಣವನ್ನು ಫ್ರೀಜ್ ಮಾಡಿದ್ದಾರೆ. ಎಸ್ಬಿಐ ಸೇರಿದಂತೆ ಬ್ಯಾಂಕ್ಗಳಿಗೆ 899 ಕೋಟಿ ರೂ ವಂಚಿಸಿದ ಆರೋಪ ಕೇಳಿಬಂದಿದೆ.
- Shivaprasad B
- Updated on: Jun 1, 2026
- 10:11 pm