ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ
Bengaluru Rain: ಬೆಂಗಳೂರಿನ ಹಲವೆಡೆ ಸುರಿದ ಮಳೆಯು ಬಿಸಿಲ ಬೇಗೆಯಿಂದ ಬಳಲಿದ ರಾಜಧಾನಿಯ ಜನರಿಗೆ ತಂಪೆರೆದಿದೆ. ನಗರದ ವಿವಿಧೆಡೆ ಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಮುಂಜಾಗ್ರತಾ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ.
- Shivaprasad B
- Updated on: May 18, 2026
- 4:47 pm
ಲೀಸ್ ಮನೆ ಕೊಡಿಸುವುದಾಗಿ ನಂಬಿಸಿ 200 ಕೋಟಿ ರೂ. ವಂಚನೆ: ಜಾನ್ಸ್ ಅಸೆಟ್ ಕಂಪನಿ ಮಾಲೀಕ ಎಸ್ಕೇಪ್!
ಮನೆಗಳನ್ನು ಲೀಸ್ಗೆ ಕೊಡಿಸುವುದಾಗಿ ನಂಬಿಸಿ ಸುಮಾರು 300 ಗ್ರಾಹಕರಿಗೆ 200 ಕೋಟಿಗೂ ಅಧಿಕ ಹಣ ವಂಚಿಸಿರುವ ಜಾನ್ಸ್ ಅಸೆಟ್ ಕಂಪನಿಯ ಹಗರಣ ಬೆಳಕಿಗೆ ಬಂದಿದೆ. ಲೀಸ್ ಹಣವನ್ನು ಇನ್ವೆಸ್ಟ್ಮೆಂಟ್ ಆಗಿ ಬದಲಾಯಿಸಿ ವಂಚಿಸಿರುವ ಮಾಲೀಕ ಸ್ಟೀಫನ್ ಅರ್ಥರ್ ಕಚೇರಿ ಮುಚ್ಚಿ ಎಸ್ಕೇಪ್ ಆಗಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Shivaprasad B
- Updated on: May 18, 2026
- 10:23 am
ಕಿಟಕಿ ಸರಳು ಮುರಿದು ಉಗಾಂಡದ ನಾಲ್ವರು ಮಹಿಳೆಯರು ಎಸ್ಕೇಪ್; ಮತ್ತೆ ಡ್ರಗ್ಸ್ ದಂಧೆಗೆ ಇಳಿಯುವ ಆತಂಕ!
ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿದ್ದ ಉಗಾಂಡ ಮೂಲದ ನಾಲ್ವರು ಮಹಿಳೆಯರು ಕೊತ್ತನೂರಿನ ನಿರಾಶ್ರಿತರ ಕೇಂದ್ರದ ಕಿಟಕಿ ಸರಳು ಮುರಿದು ಪರಾರಿಯಾಗಿದ್ದಾರೆ. ಈಗಾಗಲೇ ಮಾದಕ ದ್ರವ್ಯ ಜಾಲದಲ್ಲಿ ಗುರುತಿಸಿಕೊಂಡಿರುವ ಇವರು, ಮತ್ತೆ ಡ್ರಗ್ಸ್ ಹಾಗೂ ಗಾಂಜಾ ಸ್ಮಗ್ಲಿಂಗ್ ದಂಧೆಯಲ್ಲಿ ಸಕ್ರಿಯರಾಗುವ ದಟ್ಟ ಆತಂಕ ಎದುರಾಗಿದೆ. ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
- Shivaprasad B
- Updated on: May 18, 2026
- 8:43 am
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ತನಿಖೆ ವೇಳೆ ಅಚ್ಚರಿಯ ಅಂಶ ಬಯಲಿಗೆ
ಪ್ರಧಾನಿ ಮೋದಿ ಸಾಗಿದ ಮಾರ್ಗದಲ್ಲಿ ಪತ್ತೆಯಾದದ್ದು ಜಿಲೆಟಿನ್ ಕಡ್ಡಿಗಳಲ್ಲ, ಅಮೋನಿಯಂ ನೈಟ್ರೇಟ್ ಜೆಲ್ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಪ್ರಧಾನಿ ಭೇಟಿಯನ್ನು ತಡೆಯುವ ಉದ್ದೇಶದಿಂದ ಭಯದ ವಾತಾವರಣ ಸೃಷ್ಟಿಸಲು ಈ ಕೃತ್ಯ ನಡೆದಿದೆ. 11 ಗಂಟೆಗಳ ಕಾಲ ಪೊಲೀಸರು ಇಲ್ಲದ ಸಮಯದಲ್ಲಿ ಸ್ಫೋಟಕ ಇಡಲಾಗಿದ್ದು, ಸಿಸಿಟಿವಿ ಇಲ್ಲದೆ ತಾಂತ್ರಿಕ ವಿಶ್ಲೇಷಣೆ ಆಧಾರದ ಮೇಲೆ ತನಿಖೆ ಮುಂದುವರಿದಿದೆ.
- Shivaprasad B
- Updated on: May 16, 2026
- 10:31 am
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಮತ್ತಷ್ಟು ಡಿವೈಎಸ್ಪಿ-ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ನಡೆದಿದೆ. ಮೊನ್ನೆ ಅಷ್ಟೇ 293 ಇನ್ಸ್ಪೆಕ್ಟರ್ಗಳು ಹಾಗೂ 74 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಇನ್ನಷ್ಟು ಅಂದರೆ 12 ಡಿವೈಎಸ್ಪಿ, 87 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ. ಹಲವು ದಿನಗಳಿಂದ ಸ್ಥಳ ನಿರೀಕ್ಷಣೆಯಲ್ಲಿದ್ದ ಅಧಿಕಾರಿಗಳಿಗೆ ಹೊಸ ಪೋಸ್ಟಿಂಗ್ ನೀಡಲಾಗಿದೆ. ಜೊತೆಗೆ ಈ ಹಿಂದೆ ಮಾಡಲಾಗಿದ್ದ ಕೆಲವರ ವರ್ಗಾವಣೆ ಆದೇಶಗಳನ್ನು ಮಾರ್ಪಡಿಸಿ, ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ.
- Shivaprasad B
- Updated on: May 13, 2026
- 7:26 pm
ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ
ಬೆಂಗಳೂರಿನ ಅಮೃತಹಳ್ಳಿ ವ್ಯಾಪ್ತಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ ರಾಮ್ ಕುಮಾರ್ (25) ಅವರ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ತೀವ್ರವಾಗಿ ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮ ವಿವಾಹಕ್ಕೆ ಪೋಷಕರ ವಿರೋಧವೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
- Shivaprasad B
- Updated on: May 13, 2026
- 7:26 pm
ಬೆಚ್ಚಿಬೀಳಿಸುವ ಘಟನೆ: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ದಾರುಣ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಚಾರ್ಜ್ ಮಾಡುತ್ತಿದ್ದಾಗ ಬ್ಯಾಟರಿ ಸ್ಫೋಟಗೊಂಡ ದುರಂತದಲ್ಲಿ 62 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಮನೆಯ ಹಾಲ್ನಲ್ಲಿ ಚಾರ್ಜ್ಗೆ ಹಾಕಿದ್ದ ಇ-ಬೈಕ್ ಬ್ಯಾಟರಿ ಸ್ಫೋಟಿಸಿ ಬೆಂಕಿ ಹೊತ್ತಿಕೊಂಡಿದೆ. ಇದು ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಮೂಡಿಸಿದೆ. ಓವರ್ಚಾರ್ಜಿಂಗ್ ಅಥವಾ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದೆಂದು ಪೊಲೀಸರು ತನಿಖೆ ನಡೆಸುತ್ತಿದ್ದು, ಇಂತಹ ಘಟನೆಗಳನ್ನು ತಪ್ಪಿಸಲು ಸುರಕ್ಷತಾ ಕ್ರಮಗಳು ಅತ್ಯಗತ್ಯ.
- Shivaprasad B
- Updated on: May 12, 2026
- 7:50 pm
ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ: ಹಳೆಯ ಜಿಲೆಟಿನ್ ಕಡ್ಡಿಗಳ ಹಿಂದೆ ಇರುವ ಜಾಲ ಯಾವುದು? ಎಫ್ಎಸ್ಎಲ್ ವರದಿ ನೀಡಿದ ಆತಂಕದ ಮಾಹಿತಿ
ಬೆಂಗಳೂರಿನ ಹಲಸೂರು ಠಾಣೆ ವ್ಯಾಪ್ತಿಯ ಮರ್ಸಿ ಟೌನ್ನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು 62 ವರ್ಷದ ಲೂಥ್ ನಾಥನ್ ಮೃತಪಟ್ಟಿದ್ದಾರೆ. ಮನೆಯೊಳಗೆ ಚಾರ್ಜ್ಗೆ ಹಾಕಿದ್ದ ಬೈಕ್ನ ಬ್ಯಾಟರಿ ತಡರಾತ್ರಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಗಂಭೀರವಾಗಿ ಗಾಯಗೊಂಡ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಂತ್ರಿಕ ದೋಷ ಅಥವಾ ಓವರ್ ಚಾರ್ಜಿಂಗ್ ಸ್ಫೋಟಕ್ಕೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹಲಸೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
- Shivaprasad B
- Updated on: May 12, 2026
- 7:16 pm
ಬಿಟ್ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್ಗೂ ಎದುರಾಗುತ್ತಾ ಸಂಕಷ್ಟ?
ಬಿಟ್ಕಾಯಿನ್ ಹಗರಣದ ಕಿಂಗ್ಪಿನ್ ಶ್ರೀಕಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಇದರೊಂದಿಗೆ ಮೊಹಮ್ಮದ್ ನಲಪಾಡ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್ಸೈಟ್ ಹ್ಯಾಕ್ ಮತ್ತು 4.5 ಕೋಟಿ ರೂ. ಅಕ್ರಮ ವಹಿವಾಟಿನ ಹಳೆಯ ನಂಟಿನ ಬಗ್ಗೆ ಇಡಿ ತನಿಖೆ ಚುರುಕುಗೊಳಿಸಿದೆ. ಈ ಹಿಂದೆ ಎಸ್ಐಟಿ ವಿಚಾರಣೆ ಎದುರಿಸಿದ್ದ ನಲಪಾಡ್ ವಿರುದ್ಧ ಈಗ ಹೆಚ್ಚಿನ ದಾಖಲೆಗಳನ್ನು ಇಡಿ ಕಲೆಹಾಕುತ್ತಿದೆ.
- Shivaprasad B
- Updated on: May 9, 2026
- 11:17 am
ಚಿನ್ನ ಅಡವಿಟ್ಟ ಗ್ರಾಹಕರಿಗೆ ‘ಮಕ್ಮಲ್ ಟೋಪಿ’! ಕೋಟ್ಯಾಂತರ ರೂ. ವಂಚಿಸಿ ಜ್ಯುವೆಲರಿ ಶಾಪ್ ಮಾಲೀಕ ಪರಾರಿ
ಬೆಂಗಳೂರಿನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರನ್ನು ಗುರಿಯಾಗಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ರಾಘವೇಂದ್ರ ಜ್ಯುವಲರಿ ಮಾಲೀಕ ನಾಪತ್ತೆಯಾಗಿದ್ದಾನೆ. ಕಡಿಮೆ ಬಡ್ಡಿಯ ಆಸೆ ತೋರಿಸಿ 50 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಬಗ್ಗೆ ಮಹಿಳೆಯೊಬ್ಬರು ಕೊಡಿಗೇಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ಎಫ್ಐಆರ್ ದಾಖಲಿಸಿರುವ ಪೊಲೀಸರು ವಂಚಕನಿಗಾಗಿ ಶೋಧ ನಡೆಸುತ್ತಿದ್ದಾರೆ.
- Shivaprasad B
- Updated on: May 9, 2026
- 10:17 am
ಬೆಂಗಳೂರು: ನಾಗರಬಾವಿ ಹೋಟೆಲ್ನಲ್ಲಿ ಭೀಕರ ಅಗ್ನಿ ಅವಘಡ, ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರಿನ ನಾಗರಬಾವಿಯ ಹೋಟೆಲೊಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 45 ವರ್ಷದ ರಾಜಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಬೆಂಕಿಯಿಂದ ಆವರಿಸಿದ ದಟ್ಟಹೊಗೆಯಿಂದಾಗಿ ಉಸಿರುಗಟ್ಟಿ ಈ ಸಾವು ಸಂಭವಿಸಿದ್ದು, ಗಾಯಗೊಂಡಿರುವ ಉಳಿದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ ಎಂಬುದು ತಿಳಿದುಬಂದಿದೆ.
- Shivaprasad B
- Updated on: May 9, 2026
- 9:19 am
ಬೆಂಗಳೂರಿನ ಅಮೃತಹಳ್ಳಿಯಲ್ಲಿ ಪೊಲೀಸರ ಮೇಲೆಯೇ ಕಿಡಿಗೇಡಿಗಳಿಂದ ಹಲ್ಲೆ! ಇಬ್ಬರ ಬಂಧನ
ಬೆಂಗಳೂರಿನ ಅಮೃತಹಳ್ಳಿಯಲ್ಲಿ ತಡರಾತ್ರಿ ಮದ್ಯಪಾನ ಮಾಡುವುದನ್ನು ಪ್ರಶ್ನಿಸಿದ ಇಬ್ಬರು ಪೊಲೀಸರ ಮೇಲೆ ಸಾಫ್ಟ್ವೇರ್ ಇಂಜಿನಿಯರ್ ಮತ್ತು ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯು ನಗರದಲ್ಲಿ ಪೊಲೀಸರಿಗೂ ರಕ್ಷಣೆ ಇಲ್ಲದಂಥ ಸ್ಥಿತಿ ನಿರ್ಮಾಣವಾಯಿತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.
- Shivaprasad B
- Updated on: May 7, 2026
- 7:34 am