ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್ ಮುಖಂಡನ ಪೈಶಾಚಿಕ ಕೃತ್ಯ: ಕಬ್ಬಿಣದ ರಾಡ್ನಿಂದ ಏಟು; ಪೊಕ್ಸೋ ಅಡಿಯಲ್ಲಿ ಕೇಸ್!
ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಅಪ್ರಾಪ್ತ ಮಕ್ಕಳ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಕ್ಸೋ ಕೇಸ್ ದಾಖಲಾಗಿದೆ. ಅಲ್ಲದೆ ಸಂಬಂಧ ಹೊಂದಿದ್ದ ಮಹಿಳೆಯ ಪತಿಯ ಆಸ್ತಿ ಕಬಳಿಕೆ ಮಾಡಿದ ಆರೋಪವೂ ಕೇಳಿಬಂದಿದೆ.
- Shivaprasad B
- Updated on: Apr 28, 2026
- 2:09 pm
ಬೆಂಗಳೂರು: ಯುವತಿಯ ಬೆತ್ತಲೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮನೆ ಮಾಲಕಿ ಸ್ಫೋಟಕ ಹೇಳಿಕೆ
ಬೆಂಗಳೂರಿನ ಆಡುಗೋಡಿಯ ಮನೆಯೊಂದರಲ್ಲಿ ಜಾರ್ಖಂಡ್ ಮೂಲದ ಯುವತಿಯ ಅರೆಕೊಳೆತ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ. ಯುವತಿಯನ್ನು ಭೇಟಿ ಮಾಡಲು ಬರುತ್ತಿದ್ದ ಯುವಕನೊಂದಿಗೆ ಆಕೆ ಸದಾ ಜಗಳವಾಡುತ್ತಿದ್ದಳು ಎಂದು ಮನೆ ಮಾಲೀಕರು ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವರಗಳು ಇಲ್ಲಿದೆ.
- Shivaprasad B
- Updated on: Apr 28, 2026
- 8:59 am
ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಉದ್ಯೋಗಿ ಪೂಜಾ ದತ್ತ ಅನುಮಾನಾಸ್ಪದ ಸಾವು; ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!
ಬೆಂಗಳೂರಿನ ಆಡುಗೋಡಿಯಲ್ಲಿ 34 ವರ್ಷದ ಖಾಸಗಿ ಕಂಪೆನಿ ಉದ್ಯೋಗಿ ಪೂಜಾ ದತ್ತ ಅವರ ಮೃತದೇಹ ಬಾಡಿಗೆ ಮನೆಯಲ್ಲಿ ಬೆತ್ತಲೆ ಮತ್ತು ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನವಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.
- Shivaprasad B
- Updated on: Apr 27, 2026
- 10:27 pm
ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್: ನಂಬಿಕೆಯ ಬ್ಯಾಂಕ್ ಹೀಗೆ ಮಾಡಿದ್ರೆ ಹೇಗೆ?
ಇಂಡಿಯನ್ ಬ್ಯಾಂಕ್ನ ಗಿರಿನಗರ ಶಾಖೆಯಲ್ಲಿ 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದೆ. ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ವಿರುದ್ಧ ಆರೋಪಿಸಲಾಗಿದ್ದು, ಗ್ರಾಹಕರು ಇಟ್ಟ ಚಿನ್ನ ಮಾಯವಾಗಿದೆ. ಬ್ಯಾಂಕ್ ಪೂರ್ಣ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಹೇಳಿದ್ದರೂ, ಮೂರು ತಿಂಗಳಾದರೂ ಗ್ರಾಹಕರಿಗೆ ನ್ಯಾಯ ಸಿಕ್ಕಿಲ್ಲ. ಎಫ್ಐಆರ್ ದಾಖಲಾಗಿದ್ದರೂ, ವಂಚನೆಯ ಬದಲು ನಿರ್ಲಕ್ಷ್ಯದ ಆರೋಪ ಮಾಡಲಾಗಿದೆ.
- Shivaprasad B
- Updated on: Apr 24, 2026
- 11:05 pm
ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ
ಬೆಂಗಳೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಕೂಡಲೇ ಸ್ಥಳಕ್ಕೆ ಆರ್ ಟಿ ನಗರ ಪೊಲೀಸರು ಹಾಗೂ ಸೊಕೊ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಗಂಡ ಹೆಂಡತಿ ಸಾವಿನ ಹಿಂದೆ ಹಲವು ಗೊಂದಲಗಳು ಉದ್ಭವಿಸಿವೆ. ಪತ್ನಿಯನ್ನು ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
- Shivaprasad B
- Updated on: Apr 22, 2026
- 10:02 pm
ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ಗೆ ಜಾಮೀನು
Ranya Rao Bail: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ಗೆ ಜಾಮೀನು ಮಂಜೂರಾಗಿದೆ. ಆ ಮೂಲಕ ಕನ್ನಡದ ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
- Shivaprasad B
- Updated on: Apr 22, 2026
- 3:42 pm
‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’: ಪ್ರಿಯಕರನ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿದ ಯುವತಿ ಬಿಚ್ಚಿಟ್ಟಳು ಹಲವು ರಹಸ್ಯ!
ಬೆಂಗಳೂರಿನ ಬ್ಯಾಡರಹಳ್ಳಿಯ ಕಿರಣ್ ಕೊಲೆ ಪ್ರಕರಣದ ಆರೋಪಿ ಪ್ರೇಮಾ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಮದುವೆಗೆ ನಿರಾಕರಿಸಿ ಅಂತರ ಕಾಯ್ದುಕೊಂಡಿದ್ದಕ್ಕೆ ಪ್ರಿಯಕರನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವುದಾಗಿ ಆಕೆ ಸ್ಫೋಟಕ ಹೇಳಿಕೆ ನೀಡಿದ್ದಾಳೆ. ಆಕೆ ತಪ್ಪೊಪ್ಪಿಗೆಯಲ್ಲಿ ಇನ್ನೂ ಏನೇನು ತಿಳಿಸಿದ್ದಾಳೆ ಎಂಬ ಮಾಹಿತಿ ಇಲ್ಲಿದೆ.
- Shivaprasad B
- Updated on: Apr 22, 2026
- 8:56 am
ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ?
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣದಲ್ಲಿ ಸದ್ಯ ಬಂಧಿತಳಾಗಿರುವ ಆತನ ಪ್ರಿಯತಮೆ ಪ್ರೇಮಾ ಪೊಲೀಸರ ಮುಂದೆ ಹಲವು ಸ್ಫೋಟಕ ವಿಚಾರಗಳನ್ನು ತಿಳಿಸಿದ್ದಾಳೆ. ಪ್ರಿಯಕರನನ್ನು ಕೊಂದ ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ಲಾನ್ ಆಕೆ ಮಾಡಿದ್ದಳು ಎಂಬುದು ಗೊತ್ತಾಗಿದೆ. ಪೊಲೀಸ್ ವಿಚಾರಣೆ ವೇಳೆ ಹಲವು ಆಘಾತಕಾರಿ ವಿಚಾರಗಳು ತಿಳಿದುಬಂದಿದ್ದು, ವಿವರ ಇಲ್ಲಿದೆ.
- Shivaprasad B
- Updated on: Apr 22, 2026
- 9:00 am
ಫಾರಿನ್ ಸ್ಟೈಲಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಕರೆದು ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರೇಯಸಿಯೊಬ್ಬರು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಕರೆಯಿಸಿಕೊಂಡು ಪ್ರಿಯಕರನಿಗೆ (Lover) ಬೆಂಕಿ ಹಚ್ಚಿಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಅಂಜನಾನಗರದಲ್ಲಿ ನಡೆದಿದೆ. ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಪ್ರಿಯಕರನನ್ನು ಮನೆಗೆ ಕರೆಯಿಸಿ ಬಳಿಕ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿದ್ದಾಳೆ.
- Shivaprasad B
- Updated on: Apr 21, 2026
- 10:22 pm
‘ಫಾರಿನ್ ಸ್ಟೈಲ್’ ಪ್ರಪೋಸ್ ಮಾಡ್ತೀನಿ ಅಂತ ಕೈ-ಕಾಲು ಕಟ್ಟಿ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ! ಕಣ್ಣೆದುರೇ ಸುಟ್ಟು ಕರಕಲಾದ ಯುವಕ
ಬೆಂಗಳೂರಿನಲ್ಲಿ ಪ್ರಿಯತಮೆಯೊಬ್ಬಳು 'ಫಾರಿನ್ ಸ್ಟೈಲ್' ಪ್ರಪೋಸ್ ಮಾಡುವ ನೆಪದಲ್ಲಿ ತನ್ನ ಪ್ರಿಯಕರನ ಕೈ-ಕಾಲು ಕಟ್ಟಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾಳೆ. ಕಿರಣ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರೋಪಿ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರೀತಿ ಹೆಸರಲ್ಲಿ ನಡೆದ ಈ ಘಟನೆ ತೀವ್ರ ಆಘಾತ ಮೂಡಿಸಿದ್ದು, ಹತ್ಯೆಯ ಹಿಂದಿನ ನಿಖರ ಕಾರಣಕ್ಕಾಗಿ ತನಿಖೆ ಮುಂದುವರಿದಿದೆ.
- Shivaprasad B
- Updated on: Apr 21, 2026
- 6:24 pm
ಮರ್ಯಾದಾ ಹತ್ಯೆ ಭೀತಿ; ತಂದೆಯಿಂದ ರಕ್ಷಣೆ ಕೋರಿ ಮಗಳಿಂದಲೇ ಹೈಕೋರ್ಟ್ಗೆ ಅರ್ಜಿ!
ಬೆಂಗಳೂರಿನ ಯುವತಿಯೊಬ್ಬಳು ಮರ್ಯಾದಾ ಹತ್ಯೆ ಭೀತಿಯಿಂದ ತಂದೆಯ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ತಂದೆಯ ಒಪ್ಪಿಗೆಯಿಲ್ಲದೆ ನಿಶ್ಚಯಿಸಿದ ಮದುವೆಯನ್ನು ವಿರೋಧಿಸಿದ್ದಕ್ಕೆ ಮರ್ಯಾದಾ ಹತ್ಯೆಯ ಭೀತಿ ಎದುರಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ. ಅರ್ಜಿ ವಿಚಾರಣೆಯ ನಂತರ ಹೈಕೋರ್ಟ್ ವೈಟ್ಫೀಲ್ಡ್ ಪೊಲೀಸರಿಗೆ ಕಾಜಲ್ಗೆ ಸೂಕ್ತ ಭದ್ರತೆ ನೀಡಲು ಆದೇಶಿಸಿದೆ.
- Shivaprasad B
- Updated on: Apr 21, 2026
- 12:21 pm
RCB vs DC: ಬೆಂಗಳೂರಿನಲ್ಲಿ ಐಪಿಎಲ್, ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಪಾರ್ಕಿಂಗ್ ಮಾಹಿತಿ ಇಲ್ಲಿದೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್ 18) ನಡೆಯಲಿರುವ ಐಪಿಎಲ್ ಪಂದ್ಯಕ್ಕಾಗಿ ಸಂಚಾರ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಸ್ಟೇಡಿಯಂ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದ್ದು, ಭದ್ರತೆಗಾಗಿ 2000 ಪೊಲೀಸರು ಮತ್ತು ಬ್ಲ್ಯಾಕ್ ಟಿಕೆಟ್ ತಡೆಗೆ 7 ತಂಡಗಳನ್ನು ನಿಯೋಜಿಸಲಾಗಿದೆ. ಎಲ್ಲೆಲ್ಲಿ ಪಾರ್ಕಿಂಗ್, ಸಂಚಾರ ನಿಷೇಧ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
- Shivaprasad B
- Updated on: Apr 18, 2026
- 8:53 am