ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್ಗಾಗಿ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ. ಸದ್ಯ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆಯಿದೆ.
- Shivaprasad B
- Updated on: Dec 20, 2025
- 6:53 pm
ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಭೀತಿ; ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ರೇಸ್ಗಳಿಗೆ ತಾತ್ಕಾಲಿಕ ಬ್ರೇಕ್
ಹೈದರಾಬಾದ್ನಲ್ಲಿ ಮಾರಣಾಂತಿಕ ಗ್ಲಾಂಡರ್ಸ್ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ, ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಮುನ್ನೆಚ್ಚರಿಕೆ ಕ್ರಮವಾಗಿ ರೇಸ್ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 700ಕ್ಕೂ ಹೆಚ್ಚು ಕುದುರೆಗಳನ್ನು ಪರೀಕ್ಷಿಸಲಾಗಿದ್ದು, ಒಂದು ಕುದುರೆಯಲ್ಲಿ ಸೋಂಕು ದೃಢಪಟ್ಟಿದೆ. ಮನುಷ್ಯರಿಗೂ ಹರಡುವ ಸಾಧ್ಯತೆಯಿರುವ ಈ ರೋಗದ ಬಗ್ಗೆ ಬಿಟಿಸಿ ಗಂಭೀರ ಕ್ರಮ ಕೈಗೊಂಡಿದ್ದು, ಎಲ್ಲಾ ಕುದುರೆಗಳು ಮೂರು ಬಾರಿ ಪರೀಕ್ಷೆಯಲ್ಲಿ ಪಾಸ್ ಆದ ನಂತರವೇ ರೇಸ್ಗಳು ಪುನರಾರಂಭಗೊಳ್ಳಲಿವೆ ಎಂದು ಹೇಳಿದೆ.
- Shivaprasad B
- Updated on: Dec 20, 2025
- 10:11 am
ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ
ದರ್ಶನ್ ಮತ್ತು ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸಿಕ್ಕಿಕೊಳ್ಳುವುದಕ್ಕೂ ಮುನ್ನ ಬಹಳ ಆಪ್ತವಾಗಿದ್ದರು. ಈ ಪ್ರಕರಣದ ಟ್ರಯಲ್ ಆರಂಭ ಆಗಿದೆ. ಈ ಸಂದರ್ಭದಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಈಗ ಪವಿತ್ರಾ ಗೌಡ ಅವರನ್ನು ಭೇಟಿಯಾಗಲು ದರ್ಶನ್ ಒಪ್ಪುತ್ತಿಲ್ಲ. ಪವಿತ್ರಾ ಗೌಡ ಬೇಡಿಕೆಯನ್ನು ದರ್ಶನ್ ತಿರಸ್ಕರಿಸಿದ್ದಾರೆ.
- Shivaprasad B
- Updated on: Dec 19, 2025
- 3:47 pm
ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ
ಮನೆಮುಂದೆ ತನ್ನ ಪಾಡಿಗೆ ತಾನು ಆಟವಾಡಿಕೊಂಡಿದ್ದ ಬಾಲಕನ ಮೇಲೆ ದುಷ್ಟನೊಬ್ಬ ವಿಕೃತಿ ಮೆರೆದಿದ್ದಾನೆ. ಹಿಂಬದಿಯಿಂದ ಬಂದು ಬಾಲಕನ ಬೆನ್ನಿಗೆ ಬಿದ್ದ ಕಾರಣ, ಆತ ಮುಗ್ಗರಿಸಿ ಬಿದ್ದಿದ್ದಾನೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆ ಸಂಬಂಧ ಬಾಲಕನ ತಾಯಿ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.
- Shivaprasad B
- Updated on: Dec 19, 2025
- 11:56 am
ಕಳ್ಳರ ಕರಾಮತ್ತಿಗೆ ಸ್ವಂತ ಸೂರಿನ ಕನಸು ಕಂಡಿದ್ದ ಕುಟುಂಬ ಕಂಗಾಲು: ಮನೆ ಬಾಗಿಲು ಮುರಿದು ಚಿನ್ನ, ಹಣ ದರೋಡೆ
ಹಾಡ ಹಗಲೇ ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಬೋರ್ಟ್ ಲಾಕ್ ಕೂಡ ಬ್ರೇಕ್ ಮಾಡಿ ಲಕ್ಷ ಲಕ್ಷ ಹಣ ಮತ್ತು ಬಂಗಾರವನ್ನು ಕಳುವು ಮಾಡಿರುವ ಘಟನೆ ಬೆಂಗಳೂರಿನ ಭಾರತ್ ನಗರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡೇ ಕಳುವು ಮಾಡಲಾಗಿದ್ದು, ಸ್ವಂತ ಮನೆ ಖರೀದಿಗೆಂದು ಹಣ ಕೂಡಿಸಿಟ್ಟಿದ್ದ ಕುಟುಂಬ ಕಂಗಾಲಾಗಿದೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Shivaprasad B
- Updated on: Dec 16, 2025
- 5:01 pm
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ, ವಿಡಿಯೋ ನೋಡಿ
ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ವಾಸ್ಕೋ-ಡಿ-ಗಾಮಾ ರೈಲಿನ ಚೈನ್ ಎಳೆದು ಕೆಲ ಪುಂಡರು ಪುಂಡಾಟ ಮೇರೆದಿದ್ದಾರೆ. ಅಷ್ಟೇ ಅಲ್ಲದೆ ಪ್ರಶ್ನೆ ಮಾಡಿದಕ್ಕೆ ಆರ್ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎಫ್ಐಆರ್ ದಾಖಲಾಗಿದೆ. ವಿಡಿಯೋ ನೋಡಿ.
- Shivaprasad B
- Updated on: Dec 15, 2025
- 9:07 pm
‘ಮೊದಲು ನೀವು ಕಾನೂನು ಪಾಲಿಸಿ’: ಸಂಚಾರಿ ಆರಕ್ಷಕರಿಗೆ ಜಂಟಿ ಪೊಲೀಸ್ ಆಯುಕ್ತರ ಪಾಠ
ಬೆಂಗಳೂರು ಸಂಚಾರ ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರು ಸಂಚಾರ ನಿಯಮ ಉಲ್ಲಂಘಿಸುವ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೀಟ್ಬೆಲ್ಟ್, ಮೊಬೈಲ್ ಬಳಕೆ ಸೇರಿದಂತೆ ನಿಯಮ ಉಲ್ಲಂಘಿಸಿದರೆ ಐಎಂವಿ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು. ಪೊಲೀಸರು ನಿಯಮ ಪಾಲಿಸದಿದ್ದರೆ ಸಾರ್ವಜನಿಕರನ್ನ ಪ್ರಶ್ನಿಸುವ ನೈತಿಕತೆ ಇರುವುದಿಲ್ಲ. ಟೀಕೆಗೂ ಒಳಗಾಗಬೇಕಾಗುತ್ತದೆ ಎಂದು ವಾರ್ನ್ ಮಾಡಿದ್ದಾರೆ.
- Shivaprasad B
- Updated on: Dec 15, 2025
- 5:40 pm
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಅಪರಿಚಿತ ವ್ಯಕ್ತಿ ಕಾಟಕ್ಕೆ ಬೇಸತ್ತ ವೈದ್ಯೆ
ಬೆಂಗಳೂರಿನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ವೈದ್ಯೆಯೊಬ್ಬರಿಗೆ ಸೈಕೋ ಕಾಟ ನೀಡುತ್ತಿದ್ದಾನೆ. ಕಳೆದ ಮೂರು ತಿಂಗಳಿನಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ. ಇದರಿಂದ ಬೇಸತ್ತ ವೈದ್ಯೆ 112ಗೆ ಕರೆ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಕೋರಮಂಗಲ ಪೊಲೀಸರು ಸೈಕೋಗಾಗಿ ಹುಡುಕಾಟ ನಡೆಸಿದ್ದಾರೆ. ವಿಡಿಯೋ ನೋಡಿ.
- Shivaprasad B
- Updated on: Dec 14, 2025
- 4:39 pm
Bengaluru: ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕಾರ
ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್ ಅವರನ್ನ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನುಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ನೇಮಿಸಲಾಗಿದ್ದು, ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ.
- Shivaprasad B
- Updated on: Dec 11, 2025
- 12:32 pm
ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ; ಲೋಕಾಯುಕ್ತಕ್ಕೆ ಸಿಕ್ತು ದಾಖಲೆ
ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನಡೆದ 3-4 ಕೋಟಿ ರೂಪಾಯಿ ಅವ್ಯವಹಾರ ಆರೋಪದ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. 2020-2023ರ ಅವಧಿಯಲ್ಲಿ ನಕಲಿ ದಾಖಲೆಗಳ ಮೂಲಕ ಸಾಲ ವಿತರಣೆ ಮಾಡಿ ಅಕ್ರಮ ಎಸಗಲಾಗಿತ್ತು. 8 ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದ್ದು, ಅವರ ಮನೆಗಳು ಹಾಗೂ ನಿಗಮ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
- Shivaprasad B
- Updated on: Dec 9, 2025
- 2:52 pm
ಡ್ರಗ್ ಪ್ರಕರಣದಲ್ಲಿ ನಟಿ ಹೇಮಾಗೆ ಬಿಗ್ ರಿಲೀಫ್; ಕೇಸ್ ರದ್ದು ಮಾಡಿದ ಹೈಕೋರ್ಟ್
ಕಳೆದ ವರ್ಷದ ಬೆಂಗಳೂರು ರೇವ್ ಪಾರ್ಟಿ ಡ್ರಗ್ಸ್ ಪ್ರಕರಣದಲ್ಲಿ ನಟಿ ಹೇಮಾಗೆ ಹೈಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ವೈದ್ಯಕೀಯ ಪರೀಕ್ಷೆಯ ಮಾನದಂಡಗಳ ಕೊರತೆ ಹಿನ್ನೆಲೆ ನಟಿ ವಿರುದ್ಧದ ಡ್ರಗ್ಸ್ ಸೇವನೆ ಆರೋಪವನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಾಲಯದಲ್ಲಿ ಅಂತಹ ಪರೀಕ್ಷೆಗಳು ವಿಶ್ವಾಸಾರ್ಹವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಪ್ರಕರಣ ಮುಂದುವರಿಸಲು ಕಾನೂನು ಆಧಾರವಿಲ್ಲ ಎಂದಿದೆ.
- Shivaprasad B
- Updated on: Dec 9, 2025
- 10:48 am
ಬೆಂಗಳೂರು: ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆ; ತಾಯಿ, ಮಗ ಸಾವು
ಬೆಂಗಳೂರು ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲನಗರದ ಮನೆಯೊಂದರಲ್ಲಿ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿ ನಾಲ್ಕು ವರ್ಷದ ಮಗ ಸೇರಿ ತಾಯಿ ಕೂಡ ಸಾವನ್ನಪ್ಪಿರುವಂತಹ ಘಟನೆ ಸೋಮವಾರ ರಾತ್ರಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Shivaprasad B
- Updated on: Dec 8, 2025
- 10:47 pm