ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!
ಆನ್ಲೈನ್ ಜೂಜಿನ ಚಟಕ್ಕೆ ಬಿದ್ದು ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ ಹಾಕಿದ ಬೆಂಗಳೂರಿನ ಕಿಲಾಡಿಯೊಬ್ಬ, ಬರೋಬ್ಬರಿ 35 ಲಕ್ಷ ರೂ. ಮೌಲ್ಯದ ಬೆಳ್ಳಿ ಕದ್ದು ರಾಜಸ್ಥಾನಕ್ಕೆ ಪರಾರಿಯಾಗಿ ಅಲ್ಲಿ ಸ್ನೇಹಿತನ ಜತೆಗೂಡಿ ಆಭರಣಗಳ ಪೈಕಿ ಕೆಲವನ್ನು ಮಾರಾಟ ಮಾಡಿದ್ದಾನೆ. ನಂತರ ಆ ಹಣದಲ್ಲಿ ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ಉಳಿದ ಆಭರಣ ಮಾರಾಟ ಮಾಡಲು ಯತ್ನಿಸುವಾಗ ಸ್ನೇಹಿತನ ಸಮೇತ ರಾಜಸ್ಥಾನದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಘಟನೆಯ ವಿವರ ಇಲ್ಲಿದೆ.
- Shivaprasad B
- Updated on: Mar 18, 2026
- 12:35 pm
ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ
ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ ಆರೋಪವನ್ನೂ ಎದುರಿಸುತ್ತಿರುವ ಸಂಸ್ಥೆಯ ಹಣಕಾಸು ವ್ಯವಹಾರಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
- Shivaprasad B
- Updated on: Mar 16, 2026
- 2:30 pm
ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ
ಆಸ್ತಿ ವಿವಾದ ಹಿನ್ನಲೆ ಹೆತ್ತ ಮಗನೇ ತಾಯಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಪುತ್ರ ವಾಕಿಂಗ್ ಸ್ಟಿಕ್ನಿಂದ ಹಲ್ಲೆ ನಡೆಸಿರುವ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಅಟ ನಡೆಸುತ್ತಿದ್ದಾರೆ.
- Shivaprasad B
- Updated on: Mar 13, 2026
- 5:39 pm
ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!
ಬೆಂಗಳೂರಿನಲ್ಲಿ ಕೊಲೆ ಆರೋಪಿಯೋರ್ವನ ಮೇಲೆ ದಾಳಿ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರೋಬ್ಬರಿ 68 ಬಾರಿ ಮಾರಣಾಂತಿಕವಾಗಿ ಕೊಚ್ಚಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ವ್ಯಕ್ತಿ ಪವಾಡ ಸದೃಶ ಎಂಬಂತೆ ಬದುಕುಳಿದಿದ್ದಾನೆ. ಆರೊಪಿಗಳ ಪೈಕಿ ಓರ್ವನ ಸಹೋದರನ ಹತ್ಯೆಗೆ ಪ್ರತೀಕಾರವಾಗಿ ಅಟ್ಯಾಕ್ ನಡೆದಿದೆ ಎನ್ನಲಾಗಿದ್ದು, ದಾಳಿ ಬಳಿಕ ಡ್ಯಾನ್ಸ್ ಮಾಡಿ ಪುಂಡರು ವಿಕೃತಿಯನ್ನೂ ಮೆರೆದಿದ್ದಾರೆ.
- Shivaprasad B
- Updated on: Mar 11, 2026
- 1:01 pm
ಶೇಷಾದ್ರಿಪುರಂ ರೈಲ್ವೆ ಅಂಡರ್ಪಾಸ್ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್ಪಾಸ್ನಲ್ಲಿ ಬೃಹತ್ ತಗಡಿನ ಶೀಟ್ ಕುಸಿದು ದೊಡ್ಡ ಅನಾಹುತ ತಪ್ಪಿದೆ. ಬಸ್ಸ್ಗೆ ತಗುಲಿ ಕಳಚಿಬಿದ್ದ ಈ ಶೀಟ್, ತುಕ್ಕು ಹಿಡಿದ ಕ್ಲಿಪ್ಗಳಿಂದಾಗಿ ಬೀಳಲು ಸಿದ್ಧವಾಗಿತ್ತು. ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ. ಸಾರ್ವಜನಿಕ ಸುರಕ್ಷತೆಗಾಗಿ ಉಳಿದ ಅಪಾಯಕಾರಿ ಶೀಟ್ಗಳನ್ನು ತೆರವುಗೊಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ, ರೈಲ್ವೆ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ.
- Shivaprasad B
- Updated on: Mar 11, 2026
- 8:31 am
ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ
ಬೆಂಗಳೂರಿನಲ್ಲಿ ಐಟಿ ಅಧಿಕಾರಿಯೊಬ್ಬರಿಗೆ ಗಿಳಿಶಾಸ್ತ್ರದ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ನಡೆದಿದೆ. ವರ್ಗಾವಣೆ ಮತ್ತು ಅಭಿವೃದ್ಧಿ ಆಮಿಷ ಒಡ್ಡಿ 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಶೇಖರ್ ಎಂಬಾತ ಪರಾರಿಯಾಗಿದ್ದಾನೆ. ಒಂದು ವಾರ ಸತಾಯಿಸಿದ ನಂತರ ವಂಚನೆ ಅರಿತ ಅಧಿಕಾರಿ, ಭಾರತಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
- Shivaprasad B
- Updated on: Mar 10, 2026
- 9:09 am
ಕಸ್ಟಮರ್ ಮನೆಯಲ್ಲಿ ಚಿನ್ನ ಕದ್ದ ಕ್ಯಾಬ್ ಚಾಲಕ ಲಾಕ್: ದೋಚಿದ್ದಿದ್ದು ಬರೋಬ್ಬರಿ 25 ಲಕ್ಷ ಮೌಲ್ಯದ ಬಂಗಾರ!
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕ ಅಬ್ದುಲ್ ರೆಹಮಾನ್, ಗ್ರಾಹಕರ ಮನೆಯಿಂದ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಪ್ರಕರಣದಲ್ಲಿ ಹೆಬ್ಬಾಳ ಪೊಲೀಸರಿಂದ ಬಂಧಿತನಾಗಿದ್ದಾನೆ. ಮುಂಬೈಗೆ ಹೊರಟಿದ್ದ ದಂಪತಿ ಕಾರಿನಲ್ಲಿ ಮಾತನಾಡುವುದನ್ನು ಕೇಳಿಸಿಕೊಂಡು ಮನೆಯಲ್ಲಿ ಚಿನ್ನ ಇರಿಸಿರುವ ವಿಷಯ ತಿಳಿದು, ಚಾಲಕ ಕಳ್ಳತನಕ್ಕೆ ಯೋಜನೆ ರೂಪಿಸಿದ್ದ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದ್ದು, ಚಿನ್ನ ವಶಕ್ಕೆ ಪಡೆಯಲಾಗಿದೆ.
- Shivaprasad B
- Updated on: Mar 9, 2026
- 2:12 pm
ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ
ಬೆಂಗಳೂರಿನ ಜಯಮಹಲ್ನಲ್ಲಿ ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸುಮಾರು ಐದಮೀಟರ್ಗಳಷ್ಟು ಎಳೆದು ಹೋಗಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಬೈಕ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
- Shivaprasad B
- Updated on: Mar 8, 2026
- 2:23 pm
ಉದ್ಯಮಿ ಮನೆಯಲ್ಲಿ ದರೋಡೆ ಕೇಸ್ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್
ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ₹20 ಲಕ್ಷ ನಗದು ಮತ್ತು ಚಿನ್ನಾಭರಣ ದೋಚಿದ್ದ ಪ್ರಕರಣದ ಹಿಂದೆ ಉದ್ಯಮಿಯ ಪ್ರಾಣ ಸ್ನೇಹಿತ, ಸ್ಟಾಂಪ್ ವೆಂಡರ್ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಸೈಟ್ ಮಾರಾಟದ ಹಣದ ಮಾಹಿತಿ ತಿಳಿದು, ಜೈಲಿನಿಂದ ಪೆರೋಲ್ ಮೇಲೆ ಬಂದಿದ್ದ ಆರೋಪಿ ಮೂಲಕ ಈತ ದರೋಡೆ ಮಾಡಿಸಿರೋದು ಬಯಲಾಗಿದೆ.
- Shivaprasad B
- Updated on: Mar 8, 2026
- 11:43 am
ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್ಪಾಸ್!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ ದಾಖಲೆಗಳಿಲ್ಲದೆ ವಾಸಿಸುತ್ತಿದ್ದರು ಎಂಬುದು ತಿಳಿದು ಬಂದಿದೆ. ವಶಪಡಿಸಿಕೊಂಡವರನ್ನು FRROಗೆ ಹಸ್ತಾಂತರಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
- Shivaprasad B
- Updated on: Mar 7, 2026
- 9:54 am
ನಾಯಿ ವಾಕಿಂಗ್ ವಿಚಾರಕ್ಕೆ ಹೊಡೆದಾಟ: ಪೊಲೀಸ್ ಠಾಣೆ ಮೆಟ್ಟಿಲೇರಿದ ಶ್ವಾನ ಜಗಳ
ಮನೆಯಲ್ಲಿ ಮುದ್ದಾಗಿ ಸಾಕಿರುವ ನಾಯಿಗಳನ್ನು ಪ್ರತಿನಿತ್ಯ ವಾಕಿಂಗ್ ಕರೆದುಕೊಂಡು ಹೋಗುವುದು, ಅವುಗಳಿಗೆ ಊಟೋಪಚಾರ, ಕಾಳಜಿವಹಿಸುತ್ತಾರೆ. ಅದರಲ್ಲೂ ಮಕ್ಕಳಗಿಂತೂ ಹೆಚ್ಚಾಗಿ ಶ್ವಾನಗಲಿಗೆ ಹೆಚ್ಚನ ಸಮಯ ಕೊಡುತ್ತರೆ. ಆದ್ರೆ ನಾಯಿ ವಿಚಾರಕ್ಕೆ ಬೆಂಗಳೂರಿನಲ್ಲಿ ಹಿರಿಯ ನಾಗರೀಕರ ನಡುವೆ ದೊಡ್ಡ ಗಲಾಟೆಯೇ ಆಗಿದ್ದು, ಇದೀಗ ಈ ನಾಯಿ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹಾಗಾದ್ರೆ, ಏನಿದು ನಾಯಿ ಗಲಾಟೆ ಎನ್ನುವುದನ್ನು ನೋಡಿ.
- Shivaprasad B
- Updated on: Mar 6, 2026
- 9:55 pm
ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು
ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ ಹೂಗಾರ್ ವಿರುದ್ಧ ಲಂಚ ಆರೋಪ ಕೇಳಿಬಂದಿದೆ. ಮೂವರನ್ನು ಅಕ್ರಮ ಬಂಧನದಲ್ಲಿಟ್ಟು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ. ವಕೀಲ ವರ್ಷಿತ್ ರೆಡ್ಡಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
- Shivaprasad B
- Updated on: Mar 5, 2026
- 11:45 am