AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaprasad B

Shivaprasad B

Author - TV9 Kannada

shivaprasad.basavraj@tv9.com
ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ

ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ

ಕಾಯಿಲೆಯಿಂದ ಕಂಗಾಲಾಗಿರುವ ರೋಗಿಗಳ ಅಸಹಾಯಕತೆಯನ್ನೇ ವಂಚಕರ ಗ್ಯಾಂಗ್ ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ವಂಚಕರು ಕೇವಲ ಒಂದು ಲೋಟ ಜೀರಿಗೆ ಕಷಾಯ ಕುಡಿಸಿ ಬರೋಬ್ಬರಿ 70 ಸಾವಿರ ರೂ ಹಣ ಪಡೆದು ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ!

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ!

ಬೆಂಗಳೂರಿನ ನಗರತ್ ಪೇಟೆಯ ಜ್ಯುವೆಲ್ಲರಿ ಶಾಪ್‌ನ ಶೌಚಾಲಯದ ಕಿಟಕಿ ಮೂಲಕ ನುಗ್ಗಿ ಚಿನ್ನದ ಗಟ್ಟಿ ಕದ್ದಿದ್ದ ಮೂವರು ಖದೀಮರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜ್ಯುವೆಲ್ಲರಿಗಳ ಕೊಳಚೆ ನೀರಿನಲ್ಲಿ ವೇಸ್ಟೇಜ್ ಚಿನ್ನದ ಕಣಗಳನ್ನು ಹುಡುಕುವ ಶೌಚಾಲಯ ಕ್ಲೀನರ್‌ಗಳಾಗಿದ್ದು, ಒಂದೇ ರಾತ್ರಿಯಲ್ಲಿ ಶ್ರೀಮಂತರಾಗಲು ರೌಡಿ ಶೀಟರ್ ಆರ್ ಎಕ್ಸ್ ನಾಗನೊಂದಿಗೆ ಸೇರಿ 12 ಲಕ್ಷ ಮೌಲ್ಯದ 84 ಗ್ರಾಂ ಚಿನ್ನದ ಗಟ್ಟಿ ಕದ್ದಿರುವುದು ಬೆಳಕಿಗೆ ಬಂದಿದೆ.

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ: ವಿಡಿಯೋ ನೋಡಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ: ವಿಡಿಯೋ ನೋಡಿ

ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ, ಲೋಕಭವನದ ಮುಂದೆ ನೆರೆದಿದ್ದ ಕಾರ್ಯಕರ್ತರತ್ತ ಕಾರಿನಿಂದ ಕೈ ಬೀಸಿ, ಫ್ಲೈಯಿಂಗ್ ಕಿಸ್ ನೀಡಿದರು. ಕೆ.ಸಿ.ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆಯವರೂ ಈ ಸಂದರ್ಭದಲ್ಲಿ ಹಾಜರಿದ್ದರು. ರಾಹುಲ್ ಗಾಂಧಿಯವರನ್ನು ನೋಡಿದ ಅಭಿಮಾನಿಗಳು ಸರ್ ವೇವ್ ಯುವರ್ ಹ್ಯಾಂಡ್ ಎಂದು ಪದೇ ಪದೇ ಕೂಗುತ್ತಾ ಸಂಭ್ರಮಿಸಿದರು.

ಡಿಕೆ ಶಿವಕುಮಾರ್​ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು

ಡಿಕೆ ಶಿವಕುಮಾರ್​ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ (ಜೂನ್ 03) ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದೇಶ-ರಾಜ್ಯದ ಹಲವು ಗಣ್ಯರು, ವಿಐಪಿಗಳು ಆಗಮಿಸುತ್ತಿರುವ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು ಬಿಗಿ ಭದ್ರತೆ ಹಾಗೂ ವಿಶೇಷ ಸಂಚಾರ ವ್ಯವಸ್ಥೆ ಜಾರಿಗೊಳಿಸಿದ್ದಾರೆ. ಇದರ ಜೊತೆಗೆ ಈ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕೆಲವು ಸಲಹೆ-ಸೂಚನೆಗಳನ್ನ ನೀಡಲಾಗಿದೆ.

ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು: ಲ್ಯಾಂಡಿಂಗ್​​ ಸಾಧ್ಯವಾಗದೆ ಆಗಸದಲ್ಲೇ ಸುತ್ತಿದ ವಿಮಾನ!

ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು: ಲ್ಯಾಂಡಿಂಗ್​​ ಸಾಧ್ಯವಾಗದೆ ಆಗಸದಲ್ಲೇ ಸುತ್ತಿದ ವಿಮಾನ!

ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು ರಸ್ತೆಗಳು ಜಲಾವೃತಗೊಂಡಿವೆ. ಪರಿಣಾಮ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದು, ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಅತ್ತ ಮಳೆಯ ತೀವ್ರತೆಗೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​​ ಸಾಧ್ಯವಾಗದೆ ನವದೆಹಲಿಯಿಂದ ಆಗಮಿಸಿದ್ದ ಇಂಡಿಗೋ ಫ್ಲೈಟ್ ಕೆಲ ಕಾಲ ಆಕಾಶದಲ್ಲೇ ಸುತ್ತಾಡಿದ ಪ್ರಸಂಗವೂ ನಡೆದಿದೆ.

ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್

ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್

ಬೆಂಗಳೂರಿನ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್ ಮೇಲೆ ಇಡಿ ದಾಳಿ ಕೇಸ್​ಗೆ ಸಂಬಂಧಿಸಿದಂತೆ 1.27 ಕೋಟಿ ನಗದು ಮತ್ತು ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ 18 ಕೋಟಿ ರೂ ಹಣವನ್ನು ಫ್ರೀಜ್ ಮಾಡಿದ್ದಾರೆ. ಎಸ್‍ಬಿಐ ಸೇರಿದಂತೆ ಬ್ಯಾಂಕ್‌ಗಳಿಗೆ 899 ಕೋಟಿ ರೂ ವಂಚಿಸಿದ ಆರೋಪ ಕೇಳಿಬಂದಿದೆ.

ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಗಳ್ಳತನ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಕೋಟ್ಯಂತರ ರೂ ಮೌಲ್ಯದ ಬಿಡಿಎ ಆಸ್ತಿಗಳನ್ನು ನಕಲಿ ದಾಖಲೆ ಮೂಲಕ ಕಬಳಿಸಲು ಯತ್ನಿಸಿದ ವ್ಯಕ್ತಿಯನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಶೇಷಾದ್ರಿಪುರಂ ಪೊಲೀಸ್​​ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದೆ.

ಮಾಜಿ ಪ್ರೇಯಸಿ ಕರೆದಳೆಂದು ಹೋದ ಪ್ರಿಯಕರ ದುರಂತ ಸಾವು: ಆಗಿದ್ದೇನು?

ಮಾಜಿ ಪ್ರೇಯಸಿ ಕರೆದಳೆಂದು ಹೋದ ಪ್ರಿಯಕರ ದುರಂತ ಸಾವು: ಆಗಿದ್ದೇನು?

ಬೆಂಗಳೂರಿನ ಬ್ಯಾಟರಾಯನಪುರದ ಶ್ಯಾಮಣ್ಣ ಗಾರ್ಡನ್‌ನಲ್ಲಿ ಮಾಜಿ ಪ್ರೇಯಸಿ ಕರೆ ಮೇರೆಗೆ ಆಕೆಯ ಮನೆಗೆ ಹೋಗಿದ್ದ ಯುವಕ ಹತ್ಯೆಗೀಡಾಗಿರುವಂತಹ ಘಟನೆ ನಡೆದಿದೆ. ಪ್ರೇಯಸಿ ಪತಿ ಹಾಗೂ ಆತನ ಮನೆಯವರು ಯುವಕನಿಗೆ ಹಲ್ಲೆ ಮಾಡಿದ್ದರಿಂದ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಸದ್ಯ ಬ್ಯಾಟರಯನಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ: ಡೆತ್​​​ನೋಟ್​​​ನಲ್ಲಿ ಸ್ನೇಹಿತನ ಅಸಲಿ ಮುಖ ಬಯಲು

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ: ಡೆತ್​​​ನೋಟ್​​​ನಲ್ಲಿ ಸ್ನೇಹಿತನ ಅಸಲಿ ಮುಖ ಬಯಲು

ಬೆಂಗಳೂರಿನ ಮಾನ್ಯತಾ ಟೆಕ್​ಪಾರ್ಕ್ ಬಳಿಯ ಅಪಾರ್ಟ್​ಮೆಂಟ್​ ಫ್ಲ್ಯಾಟ್​ನಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಿಯಕರನ ಹೆಸರು ಉಲ್ಲೇಖಿಸಿದ್ದಾರೆ. ಸದ್ಯ ನಗರದ ಅಮೃತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಯೊಬ್ಬರಿಂದ ಕೋಟಿ ಕೋಟಿ ರೂ. ಸುಲಿಗೆ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಈ ಬೃಹತ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಹಣ ವರ್ಗಾವಣೆ ಹೆಸರಲ್ಲಿ ಭಯ ಹುಟ್ಟಿಸಿದ್ದ ಖದೀಮರು, ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಒಟ್ಟು 24 ಕೋಟಿ ರೂಪಾಯಿ ಹಣವನ್ನು ಅವರಿಂದ ಪೀಕಿದ್ದಾರೆ.

ಬೆಂಗಳೂರಲ್ಲಿ ಉಬರ್ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್​​! ಯುವತಿ ಎದುರೇ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರಲ್ಲಿ ಉಬರ್ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್​​! ಯುವತಿ ಎದುರೇ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರಿನ ಕೆ.ಹೆಚ್. ರಸ್ತೆಯಲ್ಲಿ ಉಬರ್ ಕ್ಯಾಬ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಕಾರು ಅಡ್ಡಗಟ್ಟಿ, ಚಾಲಕನನ್ನು ಹೊರಗೆಳೆದು ಥಳಿಸಿದ ವಿಡಿಯೋ ವೈರಲ್ ಆಗಿದೆ. ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯಲ್ಲಿ ಮೇ 22ರಂದು ನಡೆದ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

Bengaluru Rain: ಬೆಂಗಳೂರಿನ ಹಲವೆಡೆ ಸುರಿದ ಮಳೆಯು ಬಿಸಿಲ ಬೇಗೆಯಿಂದ ಬಳಲಿದ ರಾಜಧಾನಿಯ ಜನರಿಗೆ ತಂಪೆರೆದಿದೆ. ನಗರದ ವಿವಿಧೆಡೆ ಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಮುಂಜಾಗ್ರತಾ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ.