ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಅಪರಿಚಿತ ವ್ಯಕ್ತಿ ಕಾಟಕ್ಕೆ ಬೇಸತ್ತ ವೈದ್ಯೆ
ಬೆಂಗಳೂರಿನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ವೈದ್ಯೆಯೊಬ್ಬರಿಗೆ ಸೈಕೋ ಕಾಟ ನೀಡುತ್ತಿದ್ದಾನೆ. ಕಳೆದ ಮೂರು ತಿಂಗಳಿನಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ. ಇದರಿಂದ ಬೇಸತ್ತ ವೈದ್ಯೆ 112ಗೆ ಕರೆ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಕೋರಮಂಗಲ ಪೊಲೀಸರು ಸೈಕೋಗಾಗಿ ಹುಡುಕಾಟ ನಡೆಸಿದ್ದಾರೆ. ವಿಡಿಯೋ ನೋಡಿ.
- Shivaprasad B
- Updated on: Dec 14, 2025
- 4:39 pm
Bengaluru: ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕಾರ
ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್ ಅವರನ್ನ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನುಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ನೇಮಿಸಲಾಗಿದ್ದು, ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ.
- Shivaprasad B
- Updated on: Dec 11, 2025
- 12:32 pm
ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ; ಲೋಕಾಯುಕ್ತಕ್ಕೆ ಸಿಕ್ತು ದಾಖಲೆ
ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನಡೆದ 3-4 ಕೋಟಿ ರೂಪಾಯಿ ಅವ್ಯವಹಾರ ಆರೋಪದ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. 2020-2023ರ ಅವಧಿಯಲ್ಲಿ ನಕಲಿ ದಾಖಲೆಗಳ ಮೂಲಕ ಸಾಲ ವಿತರಣೆ ಮಾಡಿ ಅಕ್ರಮ ಎಸಗಲಾಗಿತ್ತು. 8 ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದ್ದು, ಅವರ ಮನೆಗಳು ಹಾಗೂ ನಿಗಮ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
- Shivaprasad B
- Updated on: Dec 9, 2025
- 2:52 pm
ಡ್ರಗ್ ಪ್ರಕರಣದಲ್ಲಿ ನಟಿ ಹೇಮಾಗೆ ಬಿಗ್ ರಿಲೀಫ್; ಕೇಸ್ ರದ್ದು ಮಾಡಿದ ಹೈಕೋರ್ಟ್
ಕಳೆದ ವರ್ಷದ ಬೆಂಗಳೂರು ರೇವ್ ಪಾರ್ಟಿ ಡ್ರಗ್ಸ್ ಪ್ರಕರಣದಲ್ಲಿ ನಟಿ ಹೇಮಾಗೆ ಹೈಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ವೈದ್ಯಕೀಯ ಪರೀಕ್ಷೆಯ ಮಾನದಂಡಗಳ ಕೊರತೆ ಹಿನ್ನೆಲೆ ನಟಿ ವಿರುದ್ಧದ ಡ್ರಗ್ಸ್ ಸೇವನೆ ಆರೋಪವನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಾಲಯದಲ್ಲಿ ಅಂತಹ ಪರೀಕ್ಷೆಗಳು ವಿಶ್ವಾಸಾರ್ಹವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಪ್ರಕರಣ ಮುಂದುವರಿಸಲು ಕಾನೂನು ಆಧಾರವಿಲ್ಲ ಎಂದಿದೆ.
- Shivaprasad B
- Updated on: Dec 9, 2025
- 10:48 am
ಬೆಂಗಳೂರು: ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆ; ತಾಯಿ, ಮಗ ಸಾವು
ಬೆಂಗಳೂರು ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲನಗರದ ಮನೆಯೊಂದರಲ್ಲಿ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿ ನಾಲ್ಕು ವರ್ಷದ ಮಗ ಸೇರಿ ತಾಯಿ ಕೂಡ ಸಾವನ್ನಪ್ಪಿರುವಂತಹ ಘಟನೆ ಸೋಮವಾರ ರಾತ್ರಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Shivaprasad B
- Updated on: Dec 8, 2025
- 10:47 pm
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸಂಕಷ್ಟಕ್ಕೆ ಕಾರಣ ಆಯ್ತು ಪ್ರದೋಷ್ ಹೇಳಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ವಶಪಡಿಸಿಕೊಳ್ಳಲಾದ ಹಣದ ಬಗ್ಗೆ ಪ್ರದೋಷ್ ಹೇಳಿಕೆ ನೀಡಿದ್ದಾರೆ. ದರ್ಶನ್ ಆಪ್ತನ ಈ ಹೇಳಿಕೆ ಗೊಂದಲಮಯವಾಗಿದೆ. ಇದರಿಂದಾಗಿ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಲಿದೆ. ಮತ್ತೆ ದರ್ಶನ್ ಅವರನ್ನು ವಿಚಾರಣೆಗೆ ಒಳಪಡಿಸಲು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
- Shivaprasad B
- Updated on: Dec 7, 2025
- 11:30 am
ಎರಡು ವಾರದಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಟೆಕ್ಕಿಯ ಶವ
ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಟೆಕ್ಕಿಯ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳಿಂದ ಶವ ಕೊಳೆತು ನಾರುತ್ತಿತ್ತು. ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Shivaprasad B
- Updated on: Dec 5, 2025
- 6:30 pm
‘ಧುರಂಧರ್’ ರಿಲೀಸ್ಗೂ ಮೊದಲೇ ರಣವೀರ್ಗೆ ಬೆಂಗಳೂರಲ್ಲಿ ಎದುರಾಯ್ತು ದೊಡ್ಡ ಸಂಕಷ್ಟ
ನಟ ರಣವೀರ್ ಸಿಂಗ್, 'ದೈವ'ವನ್ನು 'ಹೆಣ್ಣು ದೆವ್ವ' ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ವಕೀಲ ಪ್ರಶಾಂತ್ ಮೇತಲ್ ಅವರು ದೂರು ದಾಖಲಿಸಿ, ಎಫ್ಐಆರ್ ದಾಖಲಿಸಲು ಆಗ್ರಹಿಸಿದ್ದಾರೆ. ಕ್ಷಮೆ ಕೇಳಿದ್ದರೂ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅವರ ಹೊಸ ಸಿನಿಮಾ 'ಧುರಂಧರ್' ಬಿಡುಗಡೆಗೂ ಮುನ್ನವೇ ಈ ವಿವಾದ ಚಿತ್ರದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.
- Shivaprasad B
- Updated on: Dec 4, 2025
- 8:20 am
ಬೆಂಗಳೂರು: ಬರೋಬ್ಬರಿ 17 ಮನೆಗೆ ಕನ್ನ, ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನಗದು ಕದ್ದವ ಕೊನೆಗೂ ಪೊಲೀಸ್ ಬಲೆಗೆ
ಬೆಂಗಳೂರಿನ ಕೆ.ಆರ್. ಪುರಂ ಪೊಲೀಸರನ್ನು ಆ ಮನೆಗಳ್ಳತನದ ಆರೋಪಿ ಬಿಟ್ಟೂ ಬಿಡದಂತೆ ಕಾಡಿದ್ದ. ಬರೋಬ್ಬರಿ 17 ಮನೆ ಕಳ್ಳತನ ಮಾಡಿ ಪರಾರಿ ಆಗಿದ್ದವನನ್ನು ಕೊನೆಗೂ ಪೊಲೀಸರು ಮಾಲ್ ಸಮೇತ ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಹಲವೆಡೆ ಮೊಬೈಲ್ ಫೋನ್ಗಳನ್ನು ಎಗರಿಸಿದ್ದ ಖತರ್ನಾಕ್ ಚೋರರ ಬಂಧನವಾಗಿದೆ.
- Shivaprasad B
- Updated on: Dec 4, 2025
- 8:05 am
ಗಂಡ ಸತ್ತ ಬಳಿಕ ಆಸರೆಗಾಗಿ ಬಂದವಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಗಂಡ ಸಾವನ್ನಪ್ಪಿದ ಬಳಿಕ ಮತ್ತೋರ್ವ ವ್ಯಕ್ತಿ ಜೊತೆಗಿದ್ದ ಮಹಿಳೆ ದುರಂತ ಅಂತ್ಯ ಕಂಡಿದ್ದಾಳೆ. 49 ವರ್ಷದ ಲಲಿತಾ ಎನ್ನುವ ಮಹಿಳೆ ಗಂಡನಿಂದ ದೂರವಾಗಿ 51 ವರ್ಷದ ಲಕ್ಷ್ಮೀನಾರಾಯಣ ಎನ್ನುವ ವ್ಯಕ್ತಿ ಜೊತೆ ಲಿವಿಂಗ್ ಲಿವಿಂಗ್ ರಿಲೇಶನ್ ಶಿಪ್ನಲ್ಲಿ ಇದ್ದಳು. ಇದೀಗ ಏಕಾಏಕಿ ಲಕ್ಷ್ಮೀ ನಾರಾಯಣ ಲಲಿತಾಳನ್ನು ಕೊಂದು ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ನೆಡೆದಿದ್ದೆಲ್ಲಿ, ಹೇಗೆ? ಎನ್ನುವ ವಿವರ ಈ ಕೆಳಗಿನಂತಿದೆ.
- Shivaprasad B
- Updated on: Dec 2, 2025
- 3:09 pm
ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ತಡೆಗೆ ದಿಟ್ಟ ನಿರ್ಧಾರ; ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ IPS ಅಧಿಕಾರಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನದ ವೀಡಿಯೋ ವೈರಲ್ ಆದ ನಂತರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಸೆಂಟರ್ ಜೈಲು ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿ ನೇಮಕ ಮಾಡಲಿದೆ. ಸಿಸಿಟಿವಿ, ಜಾಮರ್ ಅಳವಡಿಕೆ, ಪ್ರತಿದಿನ ಮೂರು ಬಾರಿ ತಪಾಸಣೆ, ಹಾಗೂ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲು ಯೋಚಿಸಿದೆ.
- Shivaprasad B
- Updated on: Nov 28, 2025
- 8:29 am
ಸಿಎಂ ಕುರ್ಚಿ ಕದನದ ನಡುವೆ ಬೆಂಗಳೂರಿನಲ್ಲಿ ಸಚಿವರ ಆಪ್ತರ ಮೇಲೆ ಇಡಿ ದಾಳಿ
ನವೆಂಬರ್ 20 ಕಳೆದಿದ್ದೇ ಕಳಿದಿದ್ದು ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಮತ್ತು ಡಿಕೆ ನಡುವಿನ ಪವರ್ ಶೇರಿಂಗ್ ಜಟಾಪಟಿ ಹೊಸ ತಿರುವಿಗೆ ಸಾಕ್ಷಿಯಾಗಿದೆ. ಯಾಕಂದ್ರೆ, ಸಿಎಂ ಆಗಲೇ ಬೇಕು ಎಂದು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಹೀಗಾಗಿ ಸಿಎಂ-ಡಿಸಿಎಂ ಬಣ ಬಡಿದಾಟ ಜೋರಾಗಿದೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಮಧ್ಯೆ ಬೆಂಗಳೂರಿನಲ್ಲಿ ಕೆಲ ಸಚಿವರ ಆಪ್ತರ ನಿವಾಸಗಳ ಮೇಲೆ ಇಡಿ ದಾಳಿ ನಡೆದಿದೆ.
- Shivaprasad B
- Updated on: Nov 26, 2025
- 10:22 pm