ಹಳೆ ಕೇಸ್ನಲ್ಲಿ ವಾಟಾಳ್ ನಾಗರಾಜ್ ಅರೆಸ್ಟ್, ಆಟೋದಲ್ಲಿ ಕೋರ್ಟ್ಗೆ ಕರೆದೊಯ್ದ ಪೊಲೀಸ್ರು
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆ, ಬಸವೇಶ್ವರನಗರ ಪೊಲೀಸರು ಅವರನ್ನು ಬಂಧಿಸಿ ಆಟೋದಲ್ಲಿ ಕೋರ್ಟ್ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು, ಈ ಸಂಬಂಧ ದೂರು ದಾಖಲಾಗಿತ್ತು. ಆದ್ರೆ,ಈ ಪ್ರಕರಣದಲ್ಲಿ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅದರಂತೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ.
- Shivaprasad B
- Updated on: Apr 8, 2026
- 5:59 pm
ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಉದ್ಯಮಿ ಅರೆಸ್ಟ್
ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್ಮೇಲ್ ಆರೋಪದಡಿ ಉದ್ಯಮಿಯೋರ್ವನನ್ನುಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮದುವೆಯ ಆಮಿಷವೊಡ್ಡಿ ಪರಿಚಯ ಬೆಳೆಸಿದ್ದ ಆರೋಪಿ ಅತ್ಯಾಚಾರ ಎಸಗಿ, ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎನ್ನಲಾಗಿದೆ. ಈತನ ಮೇಲೆ ಹಿಂದೆಯೂ ಹಲವು ಆರೋಪಗಳಿದ್ದು, ಇತರ ಅಧಿಕಾರಿಗಳಿಗೂ ಅನ್ಯಾಯ ಮಾಡಿರುವ ಶಂಕೆ ಇದೆ. ಹೀಗಾಗಿ ನೊಂದವರು ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
- Shivaprasad B
- Updated on: Apr 5, 2026
- 7:26 am
ಮಸ್ತಾನ್ಸಾಬ್ ದರ್ಗಾದಲ್ಲಿ ಕರಗಕ್ಕೆ ಸಲ್ಲಿಸೋ ಪೂಜೆ ಹೇಗಿರುತ್ತೆ? ಮುಜಾವರ್ ಹೇಳಿದ್ದೇನು ನೋಡಿ
ಬೆಂಗಳೂರಿನ ವಿಶ್ವವಿಖ್ಯಾತ ಕರಗ ಮಹೋತ್ಸವವು ಕಾಟನ್ಪೇಟೆಯ ಮಸ್ತಾನ್ಸಾಬ್ ದರ್ಗಾಗೆ ಭೇಟಿ ನೀಡುವ ಮೂಲಕ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ಸಾರುತ್ತದೆ. ಹಲವು ವರ್ಷಗಳಿಂದ ನಡೆದುಕೊಂಡು ಬಂದ ಈ ಸಂಪ್ರದಾಯದಲ್ಲಿ, ಕರಗವು ದರ್ಗಾವನ್ನು ಮೂರು ಬಾರಿ ಪ್ರದಕ್ಷಿಣೆ ಹಾಕುತ್ತದೆ. ಮುಜಾವರ್ ಫರೋಜ ಮೋಶ್ರಫ್ ಅವರ ಪ್ರಕಾರ, ಹೂವುಗಳನ್ನು ಅರ್ಪಿಸಿ, ಅಂಜನ ಹಚ್ಚಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಗುತ್ತದೆ. ಈ ಆಚರಣೆಯಲ್ಲಿ ಎರಡೂ ಸಮುದಾಯದವರು ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ.
- Shivaprasad B
- Updated on: Apr 2, 2026
- 9:46 am
ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್ಪೆಕ್ಟರ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದರಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಮಗಳು ದೂರು ನೀಡಿದ ಬಳಿಕ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
- Shivaprasad B
- Updated on: Mar 30, 2026
- 10:41 pm
ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!
ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 59 ಶಾಲಾ ಬಸ್ ಚಾಲಕರು ಮತ್ತು 14 ನೀರಿನ ಟ್ಯಾಂಕರ್ ಚಾಲಕರು ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದಿದ್ದಾರೆ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಈ ಕುಡುಕ ಚಾಲಕರ ಪರವಾನಗಿ ರದ್ದುಗೊಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆದಾಗ್ಯೂ, ಪೋಷಕರಲ್ಲಿ ಆತಂಕ ಮೂಡಿಸಿದೆ.
- Shivaprasad B
- Updated on: Mar 28, 2026
- 7:34 am
ಗೂಗಲ್ ಮ್ಯಾಪ್ ತಂದ ಆಪತ್ತು! ಕಬ್ಬಿಣದ ಸರಳುಗಳಿಂದ ತುಂಬಿದ್ದ ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು
ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಗೂಗಲ್ ಮ್ಯಾಪ್ ನೋಡಿಕೊಂಡು ಕಿರಿದಾದ ಇಳಿಜಾರು ಮಾರ್ಗದಲ್ಲಿ ಬಂದ ಕಬ್ಬಿಣದ ಸರಳುಗಳ ತುಂಬಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಕ್ಯಾಬ್ಗೆ ಡಿಕ್ಕಿಯಾಗಿ ಭೀಕರ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ 23 ವರ್ಷದ ಕ್ಯಾಬ್ ಚಾಲಕ ಅಂಬಾದಾಸ್ ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು, ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
- Shivaprasad B
- Updated on: Mar 27, 2026
- 11:22 am
RCB ಅಭಿಮಾನಿಗಳೇ ಗಮನಿಸಿ: ಉದ್ಘಾಟನಾ ಪಂದ್ಯ ವೀಕ್ಷಿಸಲು ತೆರಳುವವರು ಈ ನಿಯಮ ಪಾಲಿಸಲೇ ಬೇಕು!
ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಂದು ನಡೆಯಲಿರುವ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಭದ್ರತಾ ಸಂಬಂಧಿತ ಸಿದ್ಧತೆಗಳನ್ನು ತೀವ್ರಗೊಳಿಸಿದ್ದಾರೆ. ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಇಂದು ಎನ್ಎಸ್ಜಿ ಪಡೆ ಜೊತೆ ಮಾಕ್ಡ್ರಿಲ್ ನಡೆಯಲಿದೆ. ಪ್ರೇಕ್ಷಕರ ಸುರಕ್ಷತೆಗಾಗಿ ನಿರ್ಬಂಧಿತ ವಸ್ತುಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
- Shivaprasad B
- Updated on: Mar 26, 2026
- 12:18 pm
ಪೊಲೀಸ್ ಇನ್ಸ್ಪೆಕ್ಟರ್ನಿಂದ ಲೇಡಿ ರೌಡಿಶೀಟರ್ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!
ಬೆಂಗಳೂರಿನ ಕೋಣನಕುಂಟೆ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್ ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದಾರೆ. ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಅದಕ್ಕೆ ವಿರೋಧಿಸಿದಾಗ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆಯು ವಾಟ್ಸಾಪ್ ಚಾಟ್ ಮತ್ತು ಆಡಿಯೋ ಸಾಕ್ಷ್ಯಗಳೊಂದಿಗೆ ಪೊಲೀಸ್ ಕಮಿಷನರ್ಗೆ ದೂರು ಸಲ್ಲಿಸಿದ್ದು, ಪ್ರಕರಣದ ಪೂರ್ಣ ವಿವರ ಇಲ್ಲಿದೆ.
- Shivaprasad B
- Updated on: Mar 25, 2026
- 9:06 am
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಮ್ಯಾಚ್, ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್
Bangalore Traffic Advisory: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ನಡೆಯಲಿರುವ ಆರ್ಸಿಬಿ ಪಂದ್ಯಕ್ಕೆ ಸಂಚಾರಿ ಪೊಲೀಸರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ. ಎಂಜಿ ರಸ್ತೆ, ಕ್ವೀನ್ಸ್ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದ್ದು, ಪಾರ್ಕಿಂಗ್ ಮತ್ತು ಮೆಟ್ರೋ ಸಂಚಾರದ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ. ಪಂದ್ಯಕ್ಕೆ ಹೋಗುವ ಮುನ್ನ ಈ ರೂಟ್ ಮ್ಯಾಪ್ ಗಮನಿಸಿ.
- Shivaprasad B
- Updated on: Mar 25, 2026
- 7:07 am
ಐಪಿಎಲ್ ಅಭಿಮಾನಿಗಳೇ ಗಮನಿಸಿ! ಪಂದ್ಯದ ದಿನ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳು ಬಂದ್!
ಬೆಂಗಳೂರಿನಲ್ಲಿ ಮಾರ್ಚ್ 28 ರಂದು ನಡೆಯಲಿರುವ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ನಿರ್ಬಂಧಗಳನ್ನು ವಿಧಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಿ, ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಪಂದ್ಯದ ವೀಕ್ಷಕರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ, ಕ್ರೀಡಾಂಗಣ ಪ್ರವೇಶ-ನಿರ್ಗಮನ ದ್ವಾರಗಳ ಕುರಿತು ಪ್ರಮುಖ ಮಾಹಿತಿ ಇಲ್ಲಿದೆ. ಸುರಕ್ಷಿತವಾಗಿ ಪಂದ್ಯ ವೀಕ್ಷಿಸಲು ಈ ನಿಯಮಗಳನ್ನು ಪಾಲಿಸಿ.
- Shivaprasad B
- Updated on: Mar 24, 2026
- 5:03 pm
ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!
ಬೆಂಗಳೂರಿನಲ್ಲಿ ಶ್ರೀಮಂತರನ್ನು ಯಾರು ಪ್ರಶ್ನಿಸುವುದೇ ಇಲ್ಲ ಎಂಬಂತಾಗಿದೆ. ಮಧ್ಯರಾತ್ರಿ ಆದ್ರೆ ಸಾಕು ಐಷಾರಾಮಿ ಕಾರುಗಳ ದರ್ಬಾರ್ ಹೆಚ್ಚಾಗುತ್ತಿದೆ. ಜನನಿಬಿಡ ಪ್ರದೇಶದಲ್ಲಿ ಐಷಾರಾಮಿ ಕಾರುಗಳ ಡ್ರಿಫ್ಟಿಂಗ್ ಪ್ರಕರಣ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರು ನಗರದ ಮಧ್ಯಭಾಗದಲ್ಲಿ ಐಷರಾಮಿ ಲ್ಯಾಬೋರ್ಗಿನಿ ಕಾರು ಕಾರಿನಿಂದ ಡ್ರಿಫ್ಟಿಂಗ್ ನಡೆಸಿರುವ ಪ್ರಕರಣ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ನೋಟಿಸ್ ಜಾರಿ ಮಾಡುತ್ತಿದ್ದಂತೆಯೇ ಮಾಜಿ ಭೂಗತ ದೊರೆ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕೋರ್ಟ್ನಿಂದ ಜಾಮೀನು ಪಡೆದುಕೊಂಡಿದ್ದಾರೆ.
- Shivaprasad B
- Updated on: Mar 23, 2026
- 4:46 pm
ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಕೊಲೆ; ಹತ್ಯೆಯಾದವನ ಮೇಲಿವೆ 10ಕ್ಕೂ ಹೆಚ್ಚು ಕೇಸ್ಗಳು!
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಭಾನುವಾರ ಮುಂಜಾನೆ ಆಟೋ ಚಾಲಕ ಕಿರಣ್ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ಪರಿಶೀಲಿಸುತ್ತಿದ್ದು, ಕೊಲೆಗೆ ನಿಖರ ಕಾರಣವೇನೆಂಬುದು ಸಧ್ಯಕ್ಕೆ ತಿಳಿದುಬಂದಿಲ್ಲ.
- Shivaprasad B
- Updated on: Mar 22, 2026
- 1:48 pm