AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaprasad B

Shivaprasad B

Author - TV9 Kannada

shivaprasad.basavraj@tv9.com
ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್!

ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್!

ಫೆಬ್ರವರಿ 28ರ ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. 'ಡಾ. ಕನ್ನಡಿಗ' ಎಂಬ ಖಾತೆಯಿಂದ ಹಣಕ್ಕಾಗಿ ಪೇಪರ್ ಮಾರಾಟದ ಸುಳಿವು ನೀಡಲಾಗಿದೆ. ಇಂತಹ ಪೋಸ್ಟ್‌ಗಳು ನಕಲಿ ಅಥವಾ ಹಳೆಯ ಪತ್ರಿಕೆಗಳಾಗಿರಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗದಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಇಂತಹ ವಂಚನೆಗಳಿಂದ ದೂರವಿರುವಂತೆ ಸೂಚಿಸಲಾಗಿದೆ.

ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ

ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ

ಬಾಂಗ್ಲಾ ಅಕ್ರಮ ವಲಸಿಗರೂ ಸೇರಿದಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಬಹುತೇಕರು ವೀಸಾ ಅವಧಿ ಮೀರಿರುವುದು ಅಥವಾ ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿರುವುದು ಪತ್ತೆಯಾಗಿದೆ. ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​​ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಯನ್ನೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ನ್ಯಾಯಾಧೀಶರ ಆದೇಶದ ಅನ್ವಯ ಶಾಸಕರೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ರೌಡಿಶೀಟರ್ ಜೊತೆ ಸೇರಿ ಕೊಲೆ ಕೇಸ್  ಮುಚ್ಚಿಹಾಕಲು ಇನ್​ಸ್ಪೆಕ್ಟರ್ ಪ್ಲಾನ್! ಗಂಭೀರ ಆರೋಪ

ರೌಡಿಶೀಟರ್ ಜೊತೆ ಸೇರಿ ಕೊಲೆ ಕೇಸ್ ಮುಚ್ಚಿಹಾಕಲು ಇನ್​ಸ್ಪೆಕ್ಟರ್ ಪ್ಲಾನ್! ಗಂಭೀರ ಆರೋಪ

ವರ್ತೂರು ಇನ್ಸ್‌ಪೆಕ್ಟರ್ ಯೋಗಾನಂದ್ ರೌಡಿಗಳೊಂದಿಗೆ ಕೈಜೋಡಿಸಿ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣವನ್ನು ಹಳ್ಳ ಹಿಡಿಸುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಚಾರ್ಜ್‌ಶೀಟ್ ಸಲ್ಲಿಸದೆ, ರೌಡಿಶೀಟರ್‌ಗಳಿಗೆ ಜಾಮೀನು ಸಿಗಲು ಕಾರಣರಾದ ಇನ್ಸ್‌ಪೆಕ್ಟರ್, ನ್ಯಾಯಾಲಯದ ಆದೇಶವನ್ನೂ ಉಲ್ಲಂಘಿಸಿ ಆರೋಪಿಗೆ ನೆರವಾಗಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ನಿರಾಕರಿಸಲಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ.

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಡಿ.ವಿ. ನಟೇಶ್‌ ದೂರಿನ ಸಂಬಂಧ ವಿಚಾರಣೆಗಾಗಿ ಕರೆತರಲಾಗಿತ್ತು. ಯಾವುದೇ ಬಂಧನವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರ ವಿಚಾರಣೆ ವೇಳೆ, ನಟೇಶ್‌ರ ಆಡಿಯೋ ಹಾಗೂ ಲೋಕಾಯುಕ್ತಕ್ಕೆ ಹಣ ನೀಡಿದ ಕುರಿತ ದಾಖಲೆಗಳು ನಿಜವೆಂದು ತಿಳಿದುಬಂದಿದೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಬೆಂಗಳೂರಿನ ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್​​: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ

ಬೆಂಗಳೂರಿನ ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್​​: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ

ಬೆಂಗಳೂರಿನಲ್ಲಿ ಮಂಗಳೂರಿನ ಶರ್ಮಿಳಾ ಎನ್ನುವ ಟೆಕ್ಕಿಯೊಬ್ಬಳು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನಿಖೆ ವೇಳೆ ಯುವಕನೊಬ್ಬನಿಂದ ಕೊಲೆಯಾಗಿದ್ದು ಗೊತ್ತಾಗಿತ್ತು. ಕಾಮದ ಆಸೆಗೆ ಬಿದ್ದ ಆತ ಆಕೆಯನ್ನು ಕೊಂದು ಪೊಲೀಸರ ಅತಿಥಿಯಾಗಿದ್ದ. ಪೊಲೀಸರ ವಿಚಾರಣೆ ವೇಳೆ ಮತ್ತಷ್ಟು ಸ್ಪೋಟಕ ಅಂಶಗಳು ಬಯಲಾಗಿದ್ದು, ಯುವಕನ ವಿಕೃತಿ ಬೆಚ್ಚಿಬೀಳಿಸುವಂತಿದೆ.

ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಬ್ಯಾಡರಹಳ್ಳಿ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಕೈದಿಯೇ ಈ ಕೃತ್ಯದ ಸೂತ್ರಧಾರ. ಬಿಇಎಲ್ ಲೇಔಟ್‌ನ ಹೊಂಬಾಳೆಗೌಡರ ಮನೆಯಲ್ಲಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನ ದೋಚಲಾಗಿತ್ತು. ದರೋಡೆ ಮಾಡಿ ಮರುದಿನವೇ ಜೈಲು ಸೇರಿದ್ದ. ಮನೆಯಲ್ಲಿ ದೊಡ್ಡ ಮೊತ್ತದ ಹಣದ ಬಗ್ಗೆ ಕುಟುಂಬದವರಿಗೇ ತಿಳಿದಿದ್ದರಿಂದ, ಅವರ ಮೇಲೂ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಬಾಡಿಗೆ ಮನೆ ಹುಡುಕುವ ನೆಪದಲ್ಲಿ, ಛಾಯಾಗ್ರಾಹಕ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕದ್ದ ಘಟನೆ ನಡೆದಿದೆ. ಮನೆಯ ಬೀಗ ಶೂ ರ್ಯಾಕ್‌ನಲ್ಲಿ ಸಿಕ್ಕ ಹಿನ್ನೆಲೆ ಆರೋಪಿ ಕಳ್ಳತನ ನಡೆಸಿದ್ದು, ಬಳಿಕ ತಪ್ಪಿತಸ್ಥ ಭಾವನೆಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿದ್ದ. ಪೊಲೀಸರು ಆತನ ಜಾಡು ಪತ್ತೆಹಚ್ಚಿ, ದೇಗುಲದಿಂದ ಹಿಂತಿರುಗುತ್ತಿದ್ದಾಗ ಬಂಧಿಸಿದ್ದಾರೆ.

ಸಂತ್ರಸ್ತರ ಗೌಪ್ಯತೆ ಇನ್ನು ಕಡ್ಡಾಯ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹತ್ವದ ಬದಲಾವಣೆ ತಂದ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ

ಸಂತ್ರಸ್ತರ ಗೌಪ್ಯತೆ ಇನ್ನು ಕಡ್ಡಾಯ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹತ್ವದ ಬದಲಾವಣೆ ತಂದ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ

ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಅಪ್ರಾಪ್ತರ ಗುರುತು ರಕ್ಷಣೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ, ಸಂತ್ರಸ್ತರ ಹೆಸರು, ವಿಳಾಸ ಸಾರ್ವಜನಿಕವಾಗಿ ಬಹಿರಂಗಪಡಿಸುವಂತಿಲ್ಲ. ಎಫ್‌ಐಆರ್ ಹಾಗೂ ಎಲ್ಲಾ ದಾಖಲೆಗಳಲ್ಲಿ ಸಾಂಕೇತಿಕ ಹೆಸರನ್ನು ಬಳಸಬೇಕು ಮತ್ತು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಇದು ಸಂತ್ರಸ್ತರ ಸಾಮಾಜಿಕ ಮುಜುಗರ ತಪ್ಪಿಸಿ, ನ್ಯಾಯಾಂಗ ಹೋರಾಟಕ್ಕೆ ನೆರವಾಗಲಿದೆ.

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರಿನಲ್ಲಿ ಮಾದಕದ್ರವ್ಯ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ₹1.5 ಕೋಟಿ ಮೌಲ್ಯದ ಎಂಡಿಎಂಎ, ಎಲ್‌ಎಸ್‌ಡಿ, ಕೊಕೇನ್ ಸೇರಿದಂತೆ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಂಡು, ಸೆನೆಗಲ್ ಮೂಲದ ಪ್ರಜೆಯನ್ನು ಬಂಧಿಸಿದ್ದಾರೆ. ಇದೇ ವೇಳೆ, ಮತ್ತೊಂದು ಕಾರ್ಯಾಚರಣೆಯಲ್ಲಿ ವಿದೇಶಿ ಮಹಿಳೆಯಿಂದ 2.5 ಕೆಜಿ ಮೆಥಾಂಪೆಟಮೈನ್ ಸಹ ವಶಪಡಿಸಿಕೊಳ್ಳಲಾಗಿದೆ.

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು?

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು?

ಕನ್ನಡದ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯೊಬ್ಬರ ಖಾಸಗಿ ವಿಡಿಯೋವನ್ನು ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಕ್ರಿಕೆಟ್ ಟೂರ್ನಿ ವೇಳೆ ವಾಶ್‌ರೂಂನಲ್ಲಿ ಅಪರಿಚಿತ ವ್ಯಕ್ತಿ ಇದನ್ನು ಚಿತ್ರೀಕರಿಸಿದ್ದಾನೆ. ವಿಡಿಯೋ ವೈರಲ್ ಮಾಡದಿರಲು ಹಣಕ್ಕೆ ಬೇಡಿಕೆ ಇಟ್ಟಿದ್ದು, ಸಂತ್ರಸ್ತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ

ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ

ಬೆಂಗಳೂರಿನ ಇಂದಿರಾನಗರದ ದೂಪನಹಳ್ಳಿಯಲ್ಲಿ ಆಸ್ತಿ ವಿವಾದ ಸಂಬಂಧ 70 ವರ್ಷದ ನಿವೃತ್ತ ಕಂಡಕ್ಟರ್ ಮುನಿಕೃಷ್ಣಪ್ಪ ಅವರನ್ನು ಅವರ ಪುತ್ರರೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮುನಿಕೃಷ್ಣಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಮೋಹನ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.