AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaprasad B

Shivaprasad B

Author - TV9 Kannada

shivaprasad.basavraj@tv9.com
ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ:  20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: 20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

ಕಿಟ್ಟಿ ಪಾರ್ಟಿಯಲ್ಲಿ ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ನಂತಹ ಪ್ರಭಾವಿ ನಾಯಕರ ಹೆಸರು ಬಳಸಿ ಗಾಳ ಹಾಕಿತ್ತಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದು, 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಮಂಗಳೂರು ಕುಕ್ಕರ್ ಬಾಂಬ್, ರಾಮೇಶ್ವರಂ ಕೆಫೆ ಸ್ಫೋಟ ಮಾಸ್ಟರ್ ಮೈಂಡ್​ಗೂ ಬಂಧಿತ ಶಂಕಿತರಿಗೂ ಪ್ರಬಲ ನಂಟು!

ಮಂಗಳೂರು ಕುಕ್ಕರ್ ಬಾಂಬ್, ರಾಮೇಶ್ವರಂ ಕೆಫೆ ಸ್ಫೋಟ ಮಾಸ್ಟರ್ ಮೈಂಡ್​ಗೂ ಬಂಧಿತ ಶಂಕಿತರಿಗೂ ಪ್ರಬಲ ನಂಟು!

Bengaluru NIA Raid: ರಾಷ್ಟ್ರೀಯ ತನಿಖಾ ದಳ ಬೆಂಗಳೂರು ಮತ್ತು ಕೋಲಾರದಲ್ಲಿ ದಾಳಿ ನಡೆಸಿ ಉಗ್ರರ ಜತೆ ನಿಕಟ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಮೂವರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಎಎಸ್​ಐ ಮತ್ತು ಶಮಕಿತ ಉಗ್ರನ ತಾಯಿಯನ್ನು ಬಂಧಿಸಲಾಗಿದೆ. ಇವರೆಲ್ಲರೂ ದಕ್ಷಿಣ ಭಾರತದ ಹಲವು ಸ್ಫೋಟಗಳ ಮಾಸ್ಟರ್‌ಮೈಂಡ್ ನಾಸೀರ್‌ ಜೊತೆ ಸಂಪರ್ಕ ಹೊಂದಿದ್ದರು. ಉಗ್ರರ ಜತೆ ಬಂಧಿತರು ಹೊಂದಿದ್ದ ನಂಟಿನ ವಿವರ ಇಲ್ಲಿದೆ.

ಬೆಂಗಳೂರು, ಕೋಲಾರದಲ್ಲಿ NIA ದಾಳಿ:  ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!

ಬೆಂಗಳೂರು, ಕೋಲಾರದಲ್ಲಿ NIA ದಾಳಿ: ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!

ಬೆಂಗಳೂರು, ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್​ಐಎ) ಒಟ್ಟು 5 ಕಡೆ ದಾಳಿ ನಡೆಸಿದ್ದು, ಈ ವೇಳೆ ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಸೇರಿದಂತೆ ಮೂವರನ್ನು ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್​ನಲ್ಲಿ ಅಗ್ನಿ ಅವಘಡ

ವಿಕ್ಟೋರಿಯಾ ಆಸ್ಪತ್ರೆಯ ವಾರ್ಡೊಂದರಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದ ಕೂಡಲೇ ಆ ವಾರ್ಡ್​​ನಲ್ಲಿದ್ದ ರೋಗಿಗಳನ್ನು ಮತ್ತೊಂದು ವಾರ್ಡ್​ಗೆ ಸ್ಥಳಾಂತರಿಸಲಾಯಿತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಸಂಭಾವ್ಯ ಅನಾಹುತ ತಪ್ಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಹಿಳೆಯ ಭಯಾನಕ ಕೊಲೆ: ಶವವನ್ನ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಪರಾರಿ

ಬೆಂಗಳೂರಿನಲ್ಲಿ ಮಹಿಳೆಯ ಭಯಾನಕ ಕೊಲೆ: ಶವವನ್ನ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಪರಾರಿ

ಬೆಂಗಳೂರಿನ ಚನ್ನಮ್ಮನಕೆರೆ ಸಮೀಪ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಆಟೋದಲ್ಲಿ ಶವವನ್ನು ತಂದಿದ್ದ ದುಷ್ಕರ್ಮಿಗಳು ಕಸದ ಲಾರಿಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಚನ್ನಮ್ಮನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಗುರುತು ಪತ್ತೆ ಆಗಿಲ್ಲ.

ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲಿಸಿದ ಗೃಹ ಸಚಿವರು

ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲಿಸಿದ ಗೃಹ ಸಚಿವರು

ಕರ್ನಾಟಕ ರಾಜ್ಯ ಪೊಲೀಸರ ಟೋಪಿ ಬದಲಾವಣೆಗೆ ಪೊಲೀಸ್ ಇಲಾಖೆ ಚಿಂತನೆ ನಡೆಸಿದ್ದು, ಆ ಕುರಿತ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಹೀಗಾಗಿ ಗೃಹ ಸಚಿವರು ಶುಕ್ರವಾರ ಡಿಜಿಪಿ ಕಚೇರಿಯಲ್ಲಿ ವಿವಿಧ ರಾಜ್ಯಗಳ ಪೊಲೀಸರ ಟೋಪಿಗಳ ಪರಿಶೀಲನೆ ನಡೆಸಿದರು. ಶೀಘ್ರದಲ್ಲೇ ಈ ಕುರಿತ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಒಂದು ವೇಳೆ ಅಂತಿಮ ನಿರ್ಧಾರ ಪ್ರಕಟವಾದಲ್ಲಿ ಕರ್ನಾಟಕ ಪೊಲೀಸರ ಟೋಪಿ ಯಾವ ರೀತಿ ಇರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್​ ರೇವಣ್ಣಗೆ ಬಿಗ್ ರಿಲೀಫ್

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್​ ರೇವಣ್ಣಗೆ ಬಿಗ್ ರಿಲೀಫ್

ಜೆಡಿಎಸ್ ನಾಯಕ ಸೂರಜ್ ರೇವಣ್ಣಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೊನೆಗೂ ದೊಡ್ಡ ರಿಲೀಫ್ ದೊರೆತಿದೆ. ದಾಖಲಾಗಿದ್ದ 2 ಪ್ರಕರಣಗಳ ಪೈಕಿ ಒಂದರಲ್ಲಿ ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. 2024 ರ ಜೂನ್​ನಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ.

ಬೆಂಗಳೂರಿನಲ್ಲಿ ಪುಂಡರನ್ನ ಮಟ್ಟ ಹಾಕಲು ವಿಶೇಷ ಗಸ್ತು: ವಾಹನ ಬಿಟ್ಟು ರಸ್ತೆಗಿಳಿಯಲಿರುವ ಪೊಲೀಸ್ರು

ಬೆಂಗಳೂರಿನಲ್ಲಿ ಪುಂಡರನ್ನ ಮಟ್ಟ ಹಾಕಲು ವಿಶೇಷ ಗಸ್ತು: ವಾಹನ ಬಿಟ್ಟು ರಸ್ತೆಗಿಳಿಯಲಿರುವ ಪೊಲೀಸ್ರು

ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಬೆಂಗಳೂರು ನಗರ ಪೊಲೀಸರು ನೂತನ ವ್ಯವಸ್ಥೆಗಳನ್ನು ಜಾರಿಗೆ ತರುತ್ತಿದ್ದಾರೆ. ನಗರದಲ್ಲಿ ಎಐ ಆಧಾರಿತ ಕ್ಯಾಮೆರಾ ಅಳವಡಿಕೆ, ಪೊಲೀಸ್​ ಬೀಟ್​ ಹೆಚ್ಚಿಗೆ ಮಾಡುವುದು ಹೀಗೆ ಹಲವು ಹೊಸ ಹೊಸ ಪ್ರಯೋಗವನ್ನು ಪೊಲೀಸರು ಮಾಡುತ್ತಿದ್ದಾರೆ. ಇದೀಗ, ಬೆಂಗಳೂರು ಪೊಲೀಸರು ವಿನೂತ ಕಾರ್ಯಕ್ಕೆ ಮುಂದಾಗಿದ್ದಾರೆ.

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಕೇಸ್​​​: ಕರ್ನಾಟಕದ 18 ಕಡೆ ಇ.ಡಿ ದಾಳಿ

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಕೇಸ್​​​: ಕರ್ನಾಟಕದ 18 ಕಡೆ ಇ.ಡಿ ದಾಳಿ

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಇ.ಡಿ ಅಧಿಕಾರಿಗಳು ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 18 ಕಡೆ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ದಾಳಿ ಮಾಡಿದ್ದಾರೆ. ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿರುವ ಇ.ಡಿ ಅಧಿಕಾರಿಗಳು ಮಹತ್ವದ ಪರಿಶೀಲನೆ ನಡೆಸಿದ್ದಾರೆ.

ಐಶ್ವರ್ಯಾಗೌಡ ವಂಚನೆ ಕೇಸ್: ಡಿಕೆ ಸುರೇಶ್ ವಿಚಾರಣೆ ನಡೆಸಿದ ಇಡಿ

ಐಶ್ವರ್ಯಾಗೌಡ ವಂಚನೆ ಕೇಸ್: ಡಿಕೆ ಸುರೇಶ್ ವಿಚಾರಣೆ ನಡೆಸಿದ ಇಡಿ

ಐಶ್ವರ್ಯಾ ಗೌಡ ವಂಚನೆ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಸಂಸದ, ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಸೋಮವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾದರು. ಕೇಸ್​ಗೂ ತಮಗೂ ಸಂಬಂಧ ಇಲ್ಲ ಎಂದು ಅವರು ಹೇಳಿದರೆ, ಇಡಿಯನ್ನು ಎದುರಿಸಲು ನಮ್ಮ ಕುಟುಂಬ ಸಿದ್ಧವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಕಾಲ್ತುಳಿತ: ದೂರು ದಾಖಲಿಸಿದ ಟಿ.ಜೆ ಅಬ್ರಹಾಂ, ಆರ್‌ಸಿಬಿ  ವಿರುದ್ಧ ಫಿಕ್ಸಿಂಗ್ ಆರೋಪ

ಬೆಂಗಳೂರು ಕಾಲ್ತುಳಿತ: ದೂರು ದಾಖಲಿಸಿದ ಟಿ.ಜೆ ಅಬ್ರಹಾಂ, ಆರ್‌ಸಿಬಿ ವಿರುದ್ಧ ಫಿಕ್ಸಿಂಗ್ ಆರೋಪ

2025ರ ಐಪಿಎಲ್‌ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಗೆದ್ದು 18 ವರ್ಷಗಳ ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿದೆ. ಆದ್ರೆ ಈ ಖುಷಿ ಒಂದು ದಿನವೂ ಉಳಿಯಲಿಲ್ಲ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದು, ಕಪ್ ಗೆದ್ದ ಖುಷಿ 11 ಜನರ ಸಾವಿನಲ್ಲಿ ಮಾಯವಾಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ದೂರು ನೀಡಿದ್ದಾರೆ. ಅಲ್ಲದೇ ಪರೋಕ್ಷವಾಗಿ ಆರ್​ ಸಿಬಿ ಮ್ಯಾಚ್ ಫಿಕ್ಸ್ ಆರೋಪ ಮಾಡಿದ್ದಾರೆ.

ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಅವರಿಂದ ಹಣ ಪಡೆಯುತ್ತಿದ್ದ ಮಾಜಿ ಹೆಡ್ ಕಾನ್‌ಸ್ಟೇಬಲ್, ಆರೋಪಿ ನಿಗಪ್ಪನನ್ನು ಬಂಧಿಸಲಾಗಿದೆ. ಲೋಕಾಯುಕ್ತ ಪೊಲೀಸರ ವಿಚಾರಣೆ ವೇಳೆ ಆರೋಪಿ ನಿಂಗಪ್ಪ ಸ್ಪೋಟಕ ವಿಚಾರಗಳನ್ನು ಬಾಯಿ ಬಿಟ್ಟಿದ್ದಾನೆ. ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ನಿಂಗಪ್ಪನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.