Shivaprasad

Shivaprasad

Author - TV9 Kannada

shivaprasad.basavraj@tv9.com
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು

New Year 2025: ಕರ್ನಾಟಕದಾದ್ಯಂತ ಹೊಸ ವರ್ಷದ ಸಂಭ್ರಮ ಜೋರಾಗಿದೆ. ಇತ್ತ ಬೆಂಗಳೂರಿನಲ್ಲಿ ಕೂಡ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿತ್ತು. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯುವತಿಯೊಂದಿಗೆ ವ್ಯಕ್ತಿ ಓರ್ವ ಅಸಭ್ಯವಾಗಿ ವರ್ತಿಸಿದ್ದ. ಕೋರಮಂಗಲದ ಹೆಚ್​ಡಿಎಫ್​ಸಿ ಜಂಕ್ಷನ್ ಬಳಿ ಘಟನೆ ನಡೆದಿದ್ದುಮೌ, ಅಸಭ್ಯವಾಗಿ ವರ್ತಿಸಿದವನಿಗೆ ವ್ಯಕ್ತಿಗೆ ಜನರು ಅಟ್ಟಾಡಿಸಿ ಗೂಸಾ ನೀಡಿದ್ದಾರೆ.

New Year: 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ, ಮೇಲ್ಸೇತುವೆಗಳು ಬಂದ್​

New Year: 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ, ಮೇಲ್ಸೇತುವೆಗಳು ಬಂದ್​

ಹೊಸ ವರ್ಷಾಚರಣೆ 2025: ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂವರು ವಿದೇಶಿ ಡ್ರಗ್ ಪೆಡ್ಲರ್‌ಗಳು ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ ಮತ್ತು ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ರಾತ್ರಿ 1 ಗಂಟೆ ಒಳಗಾಗಿ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಪಬ್‌ಗಳು ಮುಚ್ಚಬೇಕು ಎಂದು ಸೂಚಿಸಲಾಗಿದೆ. ನಗರದ ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಪೊಲೀಸ್​ ಆಯುಕ್ತ ಬಿ. ದಯಾನಂದ್​ ತಿಳಿಸಿದರು.

ಮುನಿರತ್ನಗೆ ಮತ್ತೊಂದು ಶಾಕ್: ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಸ್ಪೀಕರ್​ಗೆ SIT ಮನವಿ

ಮುನಿರತ್ನಗೆ ಮತ್ತೊಂದು ಶಾಕ್: ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಸ್ಪೀಕರ್​ಗೆ SIT ಮನವಿ

ಬೆಂಗಳೂರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಇದು ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಹೀಗಿರುವಾಗ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್​ಗೆ ಎಸ್​ಐಟಿ ಸ್ಪೀಕರ್​ಗೆ ಮನವಿ ಮಾಡಿದೆ. ಆ ಮೂಲಕ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್.. ಚೇಸ್ ಮಾಡಿಕೊಂಡು ಬಂದು ವ್ಯಕ್ತಿಯ ಕೈ ಕತ್ತರಿಸಿ ಪರಾರಿ..!

ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್.. ಚೇಸ್ ಮಾಡಿಕೊಂಡು ಬಂದು ವ್ಯಕ್ತಿಯ ಕೈ ಕತ್ತರಿಸಿ ಪರಾರಿ..!

ಇಂದು(ಡಿಸೆಂಬರ್ 24) ಮಟ, ಮಟ ಮಧ್ಯಾಹ್ನ 12 ಗಂಟೆಗೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡೆಡ್ಲಿ ಅಟ್ಯಾಕ್ ನಡೆದಿದೆ. ಹೋಟೆಲ್​ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳು ಏಕಾಏಕಿ ನುಗ್ಗಿ ಲಾಂಗ್​ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಮಚ್ಚಿನಿಂದ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮತ್ತೊಂದೆಡೆ ಬೆಳಗಾವಿಯಲ್ಲೂ ಸಹ ಹಾಡುಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನ ಹತ್ಯೆ ಯತ್ನ ನಡೆದಿದೆ.

ಬೆಂಗಳೂರು ಹೊಸ ವರ್ಷಾಚರಣೆ: ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗಿಲ್ಲ ನಿರ್ಬಂಧ, ಪರಮೇಶ್ವರ್

ಬೆಂಗಳೂರು ಹೊಸ ವರ್ಷಾಚರಣೆ: ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗಿಲ್ಲ ನಿರ್ಬಂಧ, ಪರಮೇಶ್ವರ್

ಬೆಂಗಳೂರಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆ ದಿನ ಯಾವುದೇ ಅಹಿತಕರ ಘಟನೆ ಆಗಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಪೊಲೀಸರು ಮತ್ತು ಪಾಲಿಕೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಸುಗಮ ಆಚರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.

ಮೊಬೈಲ್​​ ಕದ್ದು ಪರಾರಿ: ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್​​ಗೆ​ ಮಚ್ಚು ತೋರಿಸಿದ ಕಳ್ಳರು

ಮೊಬೈಲ್​​ ಕದ್ದು ಪರಾರಿ: ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್​​ಗೆ​ ಮಚ್ಚು ತೋರಿಸಿದ ಕಳ್ಳರು

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನದ ಘಟನೆ ನಡೆದಿದ್ದು, ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಕಳ್ಳರನ್ನು ಬೆನ್ನಟ್ಟಿ ಹಿಡಿಯಲು ಯತ್ನಿಸಿದ್ದಾರೆ. ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳ್ಳರು ಲಾಂಗ್ ತೋರಿಸಿ ಬೆದರಿಸಿ ತಪ್ಪಿಸಿಕೊಂಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಇನ್ನೂ ದೂರು ದಾಖಲಾಗಿಲ್ಲ. ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.

ಅತುಲ್ ಆತ್ಮಹತ್ಯೆ ಕೇಸ್‌: ಬೆಂಗಳೂರು ಪೊಲೀಸ್​ ಮೂವರು ಆರೋಪಿಗಳನ್ನು ಖೆಡ್ಡಾಕ್ಕೆ ಬೀಳಿಸಿದ್ದೇ ರೋಚಕ

ಅತುಲ್ ಆತ್ಮಹತ್ಯೆ ಕೇಸ್‌: ಬೆಂಗಳೂರು ಪೊಲೀಸ್​ ಮೂವರು ಆರೋಪಿಗಳನ್ನು ಖೆಡ್ಡಾಕ್ಕೆ ಬೀಳಿಸಿದ್ದೇ ರೋಚಕ

ಕೊನೆಗೂ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅತುಲ್‌ ಪತ್ನಿ ನಿಖಿತಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾ ಬಂಧಿಸಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದೇ ಒಂದು ರಣರೋಚಕ ಕಥೆ.  

ಅತುಲ್​ ಸುಭಾಷ್​ ಆತ್ಮಹತ್ಯೆ: ಟೆಕ್ಕಿಯ ಪತ್ನಿ, ಅತ್ತೆ ಮತ್ತು ಭಾಮೈದ ಅರೆಸ್ಟ್​

ಅತುಲ್​ ಸುಭಾಷ್​ ಆತ್ಮಹತ್ಯೆ: ಟೆಕ್ಕಿಯ ಪತ್ನಿ, ಅತ್ತೆ ಮತ್ತು ಭಾಮೈದ ಅರೆಸ್ಟ್​

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಅತುಲ್ ಪತ್ನಿ ನಿಖಿತಾ, ಅತ್ತೆ ನಿಶಾ ಮತ್ತು ಭಾಮೈದ ಅನುರಾಗ್​ನನ್ನು ಬಂಧಿಸಿದ್ದಾರೆ. ಅತುಲ್ 15 ದಿನಗಳಿಂದ ಆತ್ಮಹತ್ಯೆಗೆ ಯೋಜಿಸಿದ್ದರು ಮತ್ತು ಡೆತ್ ನೋಟ್ ಬರೆದಿದ್ದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಪತ್ನಿ ಮತ್ತು ಸಂಬಂಧಿಕರಿಂದ ಕಿರುಕುಳಕ್ಕೆ ಒಳಗಾಗಿದ್ದ ಅತುಲ್, ಆತ್ಮಹತ್ಯೆಗೆ ಮುನ್ನ 90 ನಿಮಿಷಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ದರ್ಶನ್​ಗೆ ಆಗಿರೋ ಸಮಸ್ಯೆಗಳೇನು? ಆಪರೇಷನ್ ಇಲ್ಲ ಎಂದರೆ ಮುಂದೇನು? 

ದರ್ಶನ್​ಗೆ ಆಗಿರೋ ಸಮಸ್ಯೆಗಳೇನು? ಆಪರೇಷನ್ ಇಲ್ಲ ಎಂದರೆ ಮುಂದೇನು? 

ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಪೂರ್ಣ ಪ್ರಮಾಣದ ಜಾಮೀನು ನೀಡಿದೆ. ಮಧ್ಯಂತರ ಜಾಮೀನಿನಲ್ಲಿದ್ದ ಅವರು ಈಗ ಯಾವುದೇ ಹೆಚ್ಚಿನ ಚಿಂತೆಯಿಲ್ಲದೆ ಚಿಕಿತ್ಸೆ ಪಡೆಯಬಹುದು. ಬೆನ್ನು ನೋವಿಗೆ ಸದ್ಯ ಕನ್ಸರ್ವೇಟಿವ್ ಟ್ರೀಟ್‌ಮೆಂಟ್ ಮತ್ತು ಫಿಸಿಯೋಥೆರಪಿ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಮುಂದೂಡುವ ಸಾಧ್ಯತೆ ಹೆಚ್ಚಿದೆ. ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ.

ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ

ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ

ಇಷ್ಟು ದಿನಗಳ ಕಾಲ ಪವಿತ್ರಾ ಗೌಡ ಅವರ ತಾಯಿ ಆತಂಕದಲ್ಲೇ ಇರುತ್ತಿದ್ದರು. ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡುತ್ತಿರುಲಿಲ್ಲ. ಆದರೆ ಮಗಳಿಗೆ ಇಂದು (ಡಿ.13) ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ‘ಖುಷಿಯಾಗಿದೆ’ ಎಂದು ಹೇಳುವ ಮೂಲಕ ಅವರು ಸಂತಸ ಹಂಚಿಕೊಂಡಿದ್ದಾರೆ.

ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಿ ಎಂದಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್

ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಿ ಎಂದಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್

ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ದಾಖಲಾದ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಕೆಪಿಸಿಸಿ ಕಾರ್ಯದರ್ಶಿ ವಿರುದ್ದ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಶಾಲೆ ಶಿಕ್ಷಕಿಯಿಂದ ದೂರು

ಕೆಪಿಸಿಸಿ ಕಾರ್ಯದರ್ಶಿ ವಿರುದ್ದ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಶಾಲೆ ಶಿಕ್ಷಕಿಯಿಂದ ದೂರು

ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ತಮ್ಮ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುವ ಕೆಲ ಶಿಕ್ಷಕಿಯರು, ಸಿಬ್ಬಂದಿಗೂ ಕಿರುಕುಳ ನೀಡಲಾಗಿದ್ದು, ಛೇಂಬರ್‌ಗೆ ಕರೆದು ತನ್ನ ಜತೆ ಸಹಕರಿಸುವಂತೆ ಕೈಹಿಡಿದು ಎಳೆದಾಡಿ ಕೆಟ್ಟ ಪದಗಳಿಂದ ಗುರಪ್ಪನಾಯ್ಡು ನಿಂದಿಸಿರುವುದಾಗಿ ಆರೋಪ ಮಾಡಲಾಗಿದೆ.

ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ