AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaprasad B

Shivaprasad B

Author - TV9 Kannada

shivaprasad.basavraj@tv9.com
ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ತಡರಾತ್ರಿ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ

ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ತಡರಾತ್ರಿ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ

ಬೆಂಗಳೂರಿನ ವಿಧಾನಸೌಧದ ಮುಖ್ಯ ರಸ್ತೆಯಲ್ಲಿ ತಡರಾತ್ರಿ ವ್ಹೀಲಿಂಗ್​​ ನಡೆಸಿ ಯುವಕರು ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಜೊತೆಗೆ ರಾಶ್ ಡ್ರೈವಿಂಗ್ ಮಾಡಲಾಗಿದ್ದು, ಬೈಕ್​ಗಳಿಗೆ ಕರ್ಕಶ ಸೈಲೆನ್ಸರ್​ಗಳನ್ನು ಅಳವಡಿಸಿ ಸಂಚರಿಸುವ ಮೂಲಕ ಕಾನೂನು ಉಲ್ಲಂಘನೆ ನಡೆಸಲಾಗಿದೆ. ಟಿವಿ9 ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆಯಾಗಿದೆ.

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ 1 ಲಕ್ಷ ರೂಪಾಯಿ ಈಗಾಗಲೇ ಪಡೆದುಕೊಂಡಿದ್ದ ಇನ್ಸ್‌ಪೆಕ್ಟರ್, ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದಾರೆ. ಧನರಾಜ್ ಎಂಬುವವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸ್‌ಪೆಕ್ಟರ್ ಗೋವಿಂದರಾಜು ವಿರುದ್ಧ ತನಿಖೆ ಮುಂದುವರಿದಿದೆ.

ಹೋಂವರ್ಕ್​ ಮಾಡಿಲ್ಲ ಎಂದು ಬಾಲಕನ ಮೇಲೆ ಹಲ್ಲೆ! ‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ ಎಂದ ಶಿಕ್ಷಕಿ

ಹೋಂವರ್ಕ್​ ಮಾಡಿಲ್ಲ ಎಂದು ಬಾಲಕನ ಮೇಲೆ ಹಲ್ಲೆ! ‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ ಎಂದ ಶಿಕ್ಷಕಿ

ಬೆಂಗಳೂರಿನ ನಂದಿನಿ ಲೇಔಟ್‌ನ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡದ 4ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಆಂಗ್ಲಿನ್ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಗುವಿನ ದೇಹದ ಮೇಲೆ ಬಾಸುಂಡೆ ಗುರುತುಗಳನ್ನು ಕಂಡು ಆಘಾತಕ್ಕೊಳಗಾದ ತಾಯಿ ಲಕ್ಷ್ಮೀ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ

ಚಾಮರಾಜನಗರ ಜಿಲ್ಲೆಯಲ್ಲೊಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಮದುವೆ ಆರತಕ್ಷತೆಗೆಂದು ತೆರಳುತ್ತಿದ್ದ ವರನ ಕಾರನ್ನು ಗ್ಯಾಂಗ್​​ವೊಂದು ಸಿನಿಮೀಯ ರೀತಿಯಲ್ಲಿ ಅಡ್ಡಿಗಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟದಲ್ಲಿ ಆಯೋಜಿಸಲಾಗಿದ್ದ ಮದುವೆ ಆರತಕ್ಷತೆ ಕಾರ್ಯಕ್ಕೆ ಹೋಗುತ್ತಿದ್ದ ವೇಳೆ ವರನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರು: 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್, ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ

ಬೆಂಗಳೂರು: 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್, ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ

ಯುವ ಸಮುದಾಯಕ್ಕೆ ಮಾರಕವಾಗಿರುವ ಮಾದಕ ವಸ್ತುವಿನ ಹಾವಳಿ ಬೆಂಗಳೂರಿನಲ್ಲಿ ಅವ್ಯಾಹತವಾಗಿದೆ. ಹಿಂದೆಲ್ಲ ಕೇವಲ ಹೊಸ ವರ್ಷ ಸಂಭ್ರಮಾಚರಣೆ ಸಂದರ್ಭ ಮಾತ್ರ ಪತ್ತೆಯಾಗುತ್ತಿದ್ದ ಕೋಟಿ ಕೋಟಿ ರೂ. ಮೌಲ್ಯದ ಡ್ರಗ್ ಸಾಮಾನ್ಯ ದಿನಗಳಲ್ಲೂ ಪತ್ತೆಯಾಗುತ್ತಿದೆ. ಸದ್ಯ ಪೊಲೀಸರು ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಡ್ರಗ್ ವಶಪಡಿಸಿಕೊಂಡು 10 ಮಂದಿ ಡ್ರಗ್ ಪೆಡ್ಲರ್​​ಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ

ಅಮೃತಹಳ್ಳಿ ಪೊಲೀಸರು ಭರ್ಜರಿ ಕಾರ್ಯಚರಣೆ ಮಾಡುವ ಮೂಲಕ ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕೇರಳ ಮೂಲದ ಏಳ್ವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಡ್ರಗ್ಸ್ ಜಾಲವನ್ನು ಭೇದಿಸುವಲ್ಲಿ ಇದು ಪ್ರಮುಖ ಕಾರ್ಯಾಚರಣೆಯಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರಲ್ಲಿದ್ದ ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ರಾಯಭಾರ ಕಚೇರಿಯಿಂದಲೇ ಬಂತು ದೂರು!

ಬೆಂಗಳೂರಲ್ಲಿದ್ದ ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ರಾಯಭಾರ ಕಚೇರಿಯಿಂದಲೇ ಬಂತು ದೂರು!

ಬೆಂಗಳೂರಿನಲ್ಲಿ ನೆಲೆಸಿದ್ದ ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ರಾಯಭಾರ ಕಚೇರಿಯಿಂದಲೇ ನೇರವಾಗಿ ಡಿಜಿ, ಐಜಿಪಿಗೆ ದೂರು ಹೋಗಿರುವ ಪ್ರಸಂಗ ನಡೆದಿದೆ. ದಂಪತಿ ಮನೆಯಲ್ಲಿ ಕೆಲಸಗಾರನೇ ವಜ್ರ, ಚಿನ್ನಾಭರಣ ಸೇರಿ 600 ಡಾಲರ್ ಕಳವು ಮಾಡಿದ್ದ. ಈ ಬಗ್ಗೆ ಎಂಬಸಿಗೆ ಮಾಹಿತಿ ನೀಡಲಾಗಿತ್ತು ಎನ್ನಲಾಗಿದೆ. ಇನ್ನು ದೂರಿನ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಬೆಂಗಳೂರಿನಲ್ಲಿ ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಬೆಂಗಳೂರು ಸಂಚಾರಿ ಪೊಲೀಸರು ಇಂದು ಬೆಳಗ್ಗೆ ಶಾಲಾ ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದರು. ನಗರಾದ್ಯಂತ 5110 ಶಾಲಾ ಬಸ್ ಚಾಲಕರನ್ನು ತಪಾಸಣೆ ಮಾಡಿದ್ದು, ಈ ಪೈಕಿ 26 ಚಾಲಕರು ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಇವರ ಡಿಎಲ್ ರದ್ದುಪಡಿಸಲು ಆರ್.ಟಿ.ಓ ಗೆ ವರದಿ ಸಲ್ಲಿಕೆಯಾಗಿದ್ದು, ಭಾರತೀಯ ಮೋಟಾರ್ ವಾಹನ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

Bangalore Traffic: ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಆದರೆ ಇದೀಗ ಸಿಲಿಕಾನ್ ಸಿಟಿ ಸಂಚಾರ ದಟ್ಟಣೆಯ ಕಾರಣಕ್ಕಾಗಿ ವಿಶ್ವಮಟ್ಟದಲ್ಲಿ ಮತ್ತೆ ಸದ್ದು ಮಾಡಿದೆ. ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ವಿಶ್ವದಲ್ಲೇ ಟಾಪ್ 2 ನಗರವಾಗಿ ಹೊರಹೊಮ್ಮಿದೆ. ಪುಣೆ, ಮುಂಬೈ ಕೂಡ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ.

ಹಲವು ಯುವತಿಯರಿಗೆ ವಂಚನೆ, ಮಾಜಿ ಸಂಸದನ ಆಪ್ತನೆಂದುಕೊಂಡು ಉಂಡೆ ನಾಮ! ಬಯಲಾಯ್ತು ಮ್ಯಾಟ್ರಿಮೋನಿ ವಂಚಕನ ಕರ್ಮಕಾಂಡ

ಹಲವು ಯುವತಿಯರಿಗೆ ವಂಚನೆ, ಮಾಜಿ ಸಂಸದನ ಆಪ್ತನೆಂದುಕೊಂಡು ಉಂಡೆ ನಾಮ! ಬಯಲಾಯ್ತು ಮ್ಯಾಟ್ರಿಮೋನಿ ವಂಚಕನ ಕರ್ಮಕಾಂಡ

ಆತ ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿಕೊಂಡು, ಮ್ಯಾಟ್ರಿಮೋನಿಯಲ್ಲಿ ಪರಿಚಯ ಆಗುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಆಸಾಮಿ. ಲಕ್ಷ ಲಕ್ಷ ವಂಚಿಸಿದ್ದವ ಇತ್ತೀಚಗೆ ಪೊಲೀಸ್ ಬಲೆಗೆ ಬಿದ್ದಿದ್ದ. ಆತನ ವಿಚಾರಣೆ ಮಾಡಿದ ಪೊಲೀಸರಿಗೆ ಅನೇಕ ಅಘಾತಕಾರಿ ವಿಚಾರಗಳು ಗೊತ್ತಾಗಿವೆ. ಆತನ ವಿರುದ್ಧ ಒಂದೆರಡಲ್ಲ, ಬೇರೆ ಬೇರೆ ಜಿಲ್ಲೆಗಳಲ್ಲಿ ಐದಾರು ಕೇಸ್​ಗಳು ದಾಖಲಾಗಿರುವುದೂ ಗೊತ್ತಾಗಿದೆ.

Bengaluru: ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ; ಪತ್ನಿಯಿಂದಲೇ ಪತಿ ಹತ್ಯೆ

Bengaluru: ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ; ಪತ್ನಿಯಿಂದಲೇ ಪತಿ ಹತ್ಯೆ

ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ನಿತ್ಯ ಕಿರುಕುಳ ನೀಡುತ್ತಿದ್ದ ಕಾರಣ ಪತ್ನಿಯೇ ಪತಿಯನ್ನು ಭೀಕರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಜನವರಿ 20ರಂದು ರಾತ್ರಿ ನಡೆದ ಜಗಳದಲ್ಲಿ ಪತ್ನಿ ಚಾಕುವಿನಿಂದ ಇರಿದು ಪತಿಯನ್ನು ಕೊಂದು, ಆತ್ಮಹತ್ಯೆಯ ಕಥೆ ಕಟ್ಟಿದ್ದಳು. ಪೊಲೀಸರ ತನಿಖೆಯಿಂದ ಸತ್ಯ ಬಯಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ: ಹರಿಯಾಣ ವ್ಯಕ್ತಿ ಅರೆಸ್ಟ್​​

ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ: ಹರಿಯಾಣ ವ್ಯಕ್ತಿ ಅರೆಸ್ಟ್​​

ಬೆಂಗಳೂರಿನ ಫಿಟ್ನೆಸ್ ಇನ್ಫ್ಲುಯೆನ್ಸರ್ ಮತ್ತು ಜಿಮ್ ಟ್ರೈನರ್ ಒಬ್ಬರಿಗೆ ಹರಿಯಾಣ ಮೂಲದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಮತ್ತು ಫಿಟ್ನೆಸ್ ಬಗ್ಗೆ ಮಾಹಿತಿ ನೀಡುತ್ತಿದ್ದ ಯುವತಿಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪಿ ಹಿಂಬಾಲಿಸುತ್ತಿದ್ದ. ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಯುವತಿಗೆ ಚಿತ್ರಹಿಂಸೆ ನೀಡಿದ್ದಲ್ಲದೆ, ಆಕೆ ಹುಡುಕಿಕೊಂಡು ಬೆಂಗಲೂರಿಗೂ ಬಂದಿದ್ದ.