ಮೆಟ್ರೋ ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವು ಕೇಸ್: ಮೂವರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರಿನ ಯಲಹಂಕದಲ್ಲಿ ಮೆಟ್ರೋ ನಿರ್ಮಾಣದ ವೇಳೆ ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವನ್ನಪ್ಪಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಮೃತ ಆಟೋ ಚಾಲಕನ ಮಾವ ನೀಡಿದ ದೂರು ಆಧರಿಸಿ ಮೂವರ ವಿರುದ್ಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆ ಬಗ್ಗೆ ಬಿಎಂಆರ್ಸಿಎಲ್ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದೆ.
- Shivaprasad
- Updated on: Apr 17, 2025
- 12:09 pm
ಬೆಂಗಳೂರು: ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಪ್ರಶ್ನಿಸಿದವರ ಮೇಲೆ ಹಲ್ಲೆ ಮಾಡಿ ಕಾಮುಕ ಪರಾರಿ
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಕಾಮುಕನೊಬ್ಬ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿ, ಪತಿ ಮತ್ತು ಸ್ಥಳೀಯರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಆರೋಪಿ ಕಾರ್ತಿಕ್ ಪರಾರಿಯಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. ಈ ಘಟನೆಯಿಂದ ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿದೆ.
- Shivaprasad
- Updated on: Apr 16, 2025
- 2:03 pm
ಬೆಂಗಳೂರಿನ ವೈಟ್ ಫೀಲ್ಡ್ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪುಂಡರು ಕಾರನ್ನು ಅಡ್ಡಗಟ್ಟಿ ಚಾಲಕನಿಗೆ ಧಮ್ಕಿ ಹಾಕಿದ ಘಟನೆ ನಡೆದಿದೆ. ಘಟನೆ ಸಂಬಂಧಿತ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.
- Shivaprasad
- Updated on: Apr 16, 2025
- 8:58 am
ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರು ನಗರದಲ್ಲಿ ಚುರುಕಿನ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಿದ್ದು, ಒಟ್ಟಾರೆಯಾಗಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ನಗರದ ಹಲವು ಕಾಲೇಜುಗಳಿಗೆ ಪೂರೈಕೆ ಮಾಡಲು ಡ್ರಗ್ಸ್ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
- Shivaprasad
- Updated on: Apr 15, 2025
- 2:56 pm
ದರ್ಶನ್ಗೆ ಸಂಕಷ್ಟ? ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿ ಜೊತೆಯೇ ಸಿನಿಮಾ ವೀಕ್ಷಿಸಿದ ದಾಸ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್, ಸಾಕ್ಷಿ ಜೊತೆ 'ವಾಮನ' ಸಿನಿಮಾ ವೀಕ್ಷಿಸಿದ್ದಾರೆ. ಇದು ದೊಡ್ಡ ವಿವಾದಕ್ಕೆ ಕಾರಣವಾಗಬಹುದು. ಜಾಮೀನಿನ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಬಹುದು. ಪೊಲೀಸರು ಈ ಘಟನೆಯನ್ನು ದರ್ಶನ್ ವಿರುದ್ಧ ಬಳಸುವ ಸಾಧ್ಯತೆಯಿದೆ. ಈ ವಿಚಾರದಲ್ಲಿ ಮತ್ತೆ ಇವರು ಸಮಸ್ಯೆ ಎದುರಿಸೋ ಸಾಧ್ಯತೆ ಹೆಚ್ಚಿದೆ.
- Shivaprasad
- Updated on: Apr 10, 2025
- 9:11 am
ಪತ್ನಿ ಸುರ ಸುಂದರಿಯಾಗಿದ್ರೂ ಪರ ಯುವತಿಯೊಂದಿಗೆ ಪತಿ ಲವ್ವಿಡವ್ವಿ: ಪ್ರಾಣ ಬಿಟ್ಟ ಹೆಂಡ್ತಿ!
ಇತ್ತೀಚಿನ ದಿನಗಳಲ್ಲಿ ಸಣ್ಣ-ಪುಟ್ಟ ಸಾಂಸಾರಿಕ ಜಗಳಗಳು ಸಾವಿನಲ್ಲಿ ಅಂತ್ಯವಾಗುತ್ತಿವೆ. ಇಲ್ಲೊಬ್ಬ ವ್ಯಕ್ತಿಯ ಹೆಂಡತಿ ಪರಮ ಸುಂದರಿ ಆಗಿದ್ದರೂ ಆತನಿಗೆ ಪರ ಯುವತಿಯ ಮೇಲೆ ಭಾರೀ ವ್ಯಾಮೋಹವಿತ್ತು. ಇದರಿಂದ ಮನನೊಂದು ಹೆಂಡತಿ ಸಾವಿಗೆ ಶರಣಾಗಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಅಸ್ಮಾ ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಸಾವಿನ ಹಾದಿ ಹಿಡಿದಿದ್ದಾಳೆ.
- Shivaprasad
- Updated on: Apr 8, 2025
- 4:52 pm
ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು
ನಟಿ ಸಂಜನಾ ಗಲ್ರಾನಿ ಅವರು ರಾಹುಲ್ ತೋನ್ಸೆ ವಿರುದ್ಧ ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ರಾಹುಲ್ಗೆ 61.50 ಲಕ್ಷ ರೂಪಾಯಿ ದಂಡ ಮತ್ತು 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2018-19ರಲ್ಲಿ ನಡೆದ ಈ ಘಟನೆಯಲ್ಲಿ ರಾಹುಲ್ ಹೂಡಿಕೆ ಆಮಿಷದ ಮೂಲಕ ಸಂಜನಾರನ್ನು ವಂಚಿಸಿದ್ದ.
- Shivaprasad
- Updated on: Apr 7, 2025
- 7:05 am
ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ಪೆಕ್ಟರ್ಗೆ ಲೋಕಾ ಶಾಕ್: ಬಂಧನದ ಭೀತಿಯಲ್ಲಿ ಪಿಐ ಎಸ್ಕೇಪ್
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲೋಕಾಯುಕ್ತ ದಾಳಿಯಿಂದ ಪರಾರಿಯಾಗಿದ್ದಾರೆ. 4 ಕೋಟಿ ರೂ. ಮೌಲ್ಯದ ಮನೆ ಮಾರಾಟದಲ್ಲಿ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿದಾಗ ಇನ್ಸ್ಪೆಕ್ಟರ್ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ ಐವರನ್ನು ಬಂಧಿಸಲಾಗಿದೆ.
- Shivaprasad
- Updated on: Apr 2, 2025
- 11:00 am
ರನ್ಯಾ ಪೊಲೀಸ್ ಪ್ರೋಟೋಕಾಲ್ ಬಳಸುತ್ತಿದ್ದು ಮಲತಂದೆ ಡಿಜಿಪಿ ರಾಮಚಂದ್ರಗೆ ಗೊತ್ತಿತ್ತಾ? ವರದಿಯಲ್ಲಿ ಸ್ಫೋಟಕ ಅಂಶ ಬಯಲು
ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಪೊಲೀಸ್ ಶಿಷ್ಟಾಚಾರ ದುರುಪಯೋಗ ಆರೋಪದ ಕುರಿತು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರು ಸರ್ಕಾರಕ್ಕೆ 230 ಪುಟಗಳ ವರದಿ ಸಲ್ಲಿಸಿದ್ದಾರೆ. ವರದಿಯಲ್ಲಿ ಡಿಜಿಪಿ ರಾಮಚಂದ್ರರಾವ್ ಅವರ ಪಾತ್ರದ ಬಗ್ಗೆಯೂ ವಿವರಗಳಿವೆ. ರನ್ಯಾ ರಾವ್ ತಂದೆಯ ಪಾತ್ರವನ್ನೂ ತನಿಖೆ ಮಾಡಲಾಗಿದೆ. ಈ ವರದಿಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಭದ್ರತಾ ಕ್ರಮಗಳನ್ನು ಪ್ರಶ್ನಿಸಿದೆ.
- Shivaprasad
- Updated on: Mar 30, 2025
- 4:57 pm
ಪತ್ನಿ ಕೊಂದು ಟ್ರ್ಯಾಲಿ ಬ್ಯಾಗ್ಗೆ ತುಂಬಿದ್ದ ಗಂಡನಿಗೆ 14 ದಿನ ನ್ಯಾಯಾಂಗ ಬಂಧನ
ಟೆಕ್ಕಿ ರಾಕೇಶ್ ಕಡೇಕರ್ ತನ್ನ ಪತ್ನಿಯನ್ನು ಕೊಂದು, ಶವವನ್ನು ಸೂಟ್ಕೇಸ್ನಲ್ಲಿಟ್ಟು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹುಳಿಮಾವು ಪೊಲೀಸರು ಬೆಂಗಳೂರಿಗೆ ಕರೆತಂದ ಆರೋಪಿಯನ್ನು ಕೋರಮಂಗಲ NGV ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
- Shivaprasad
- Updated on: Mar 30, 2025
- 12:51 pm
ಬೆಂಗಳೂರಿನ ಆ ಸ್ಥಳದಲ್ಲಿ ಸ್ಫೋಟಕ ಇಡಲು ಪ್ಲಾನ್: ಬಾಯ್ಬಿಟ್ಟ ಅಬ್ದುಲ್ ರೆಹಮಾನ್
ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಸ್ಫೋಟಕಗಳ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಬ್ದುಲ್ ರೆಹಮಾನ್ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾರೆ. ಪ್ಯಾಲೇಸ್ ಗ್ರೌಂಡ್ ಬಳಿ ಅನಾಮಿಕ ವ್ಯಕ್ತಿಯಿಂದ ಸ್ಫೋಟಕಗಳನ್ನು ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಹೇಳಿಕೆ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
- Shivaprasad
- Updated on: Mar 30, 2025
- 10:45 am
ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟ ಪತಿ
ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಕಟ್ಟಿಕೊಂಡ ಹೆಂಡತಿಯನ್ನು ಕೊಂದು ದೇಹವನ್ನು ಪೀಸ್ ಪೀಸ್ ಮಾಡಿ ಸೂಟ್ ಕೇಸ್ನಲ್ಲಿ ತುಂಬಿರುವ ಆಘಾತಕಾರಿ ಘಟನೆ ಬೆಳಕಿಗ ಬಂದಿದೆ. ಈ ರೀತಿ ಘಟನೆಗಳು ರಾಜಸ್ಥಾನ, ಬಿಹಾರ್ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ನಡೆದಿದ್ದನ್ನು ಕೇಳಿದ್ದೇವೆ. ಆದ್ರೆ, ಇದೀಗ ರಾಜಧಾನಿ ಬೆಂಗಳೂರಿನಲ್ಲೇ ಈ ರೀತಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಜನರು ಬೆಚ್ಚಿಬಿದ್ದಿದ್ದಾರೆ.
- Shivaprasad
- Updated on: Mar 27, 2025
- 9:50 pm