ಬೆಂಗಳೂರು: ಅಕ್ಷಯನಗರ ಸ್ಕ್ರಾಪ್ ಗೋಡೌನ್ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರಿನ ಅಕ್ಷಯನಗರದಲ್ಲಿರುವ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಸದ್ಯ ಬೇಗೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Shivaprasad B
- Updated on: Jan 15, 2026
- 6:57 am
ಮಕರ ಸಂಕ್ರಾಂತಿ ಹಬ್ಬ: ಕೆಆರ್ ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ ಮುಂಜಾನೆಯೇ ಭಾರಿ ಟ್ರಾಫಿಕ್ ಜಾಮ್
ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಈಗಾಗಲೇ ಆರಂಭಗೊಂಡಿದ್ದು, ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಅಪಾರ ಜನಸಂದಣಿ ಕಂಡುಬಂದಿದೆ. ಕಬ್ಬು, ಎಳ್ಳು, ಬೆಲ್ಲ, ಹೂವು ಹಾಗೂ ಹಣ್ಣುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಬೆಲೆ ಏರಿಕೆಯಾದರೂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಜ್ಜಾಗಿರುವ ಗ್ರಾಹಕರಿಂದ ಅವೆನ್ಯೂ ರಸ್ತೆ ತುಂಬಿ ತುಳುಕುತ್ತಿದೆ. ವ್ಯಾಪಾರಿಗಳಿಗೂ ಇದು ಲಾಭದಾಯಕ ಸಮಯವಾಗಿದೆ.
- Shivaprasad B
- Updated on: Jan 14, 2026
- 7:15 am
ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ: ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತ್ನಿಗೆ ವಂಚಿಸಿ ಪ್ರೇಯಸಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಜೆಡ್ರೆಲಾ ಜಾಕೋಬ್ ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪತ್ನಿ ನೀಡಿದ ದೂರಿನನ್ವಯ ಶೋಧ ನಡೆಸಿದ ಪೊಲೀಸರಿಗೆ ಜಾಕೋಬ್ ಪ್ರೇಯಸಿ ಜತೆ ಪಿಜಿಯೊಂದರಲ್ಲಿ ಸಿಕ್ಕಿಬಿದ್ದಿದ್ದಾನೆ. ಪತ್ನಿ ಮೇಲೆ ಜಾತಿನಿಂದನೆ ಮತ್ತು ಹಲ್ಲೆ ನಡೆಸಿ ಗರ್ಭಪಾತಕ್ಕೆ ಕಾರಣನಾಗಿದ್ದ ಆರೋಪಿ, ಪರಸ್ತ್ರೀಯೊಂದಿಗೆ ರೀಲ್ಸ್ ಕೂಡ ಮಾಡಿದ್ದ.
- Shivaprasad B
- Updated on: Jan 13, 2026
- 7:47 am
ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ಪತಿ ಮಂಜುನಾಥ್ ಮಾಡಿದ ಆರೋಪಗಳಿಗೆ ಪತ್ನಿ ಮೇಘಶ್ರೀ ತಿರುಗೇಟು ನೀಡಿದ್ದಾರೆ. ತಮ್ಮ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಮಂಜುನಾಥ್ಗೆ ಸಂಪೂರ್ಣ ಮಾಹಿತಿ ಇತ್ತು ಎಂದಿರುವ ಅವರು, ಹಣ ಹಾಗೂ ಚಿನ್ನದ ಬಗ್ಗೆ ಪತಿಯ ಆರೋಪಗಳನ್ನು ಸುಳ್ಳು ಎಂದಿದ್ದಾರೆ. ತಾವು ಮಂಜುನಾಥ್ಗೆ ಹಣ ಮತ್ತು ಚಿನ್ನ ನೀಡಿದ ಬಗ್ಗೆ ದಾಖಲೆಗಳಿರುವದಾಗಿ ತಿಳಿಸಿ, ಕಾನೂನು ಹೋರಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ
- Shivaprasad B
- Updated on: Jan 11, 2026
- 1:05 pm
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ
ಸ್ಯಾಂಡಲ್ವುಡ್ ನಟಿ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನಟಿಗೆ ಉದ್ಯಮಿ ಲಕ್ಷಾಂತರ ಮೌಲ್ಯದ ಕಾರು, ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದರು ಎಂಬ ಸಾಕ್ಷಿಗಳು ಲಭ್ಯವಾಗಿವೆ. ಇವರಿಬ್ಬರೂ ಲಿವಿನ್ ರಿಲೇಶನ್ಶಿಪ್ನಲ್ಲಿದ್ದರು ಎನ್ನುವ ವಿಷಯವೂ ಬಹಿರಂಗಗೊಂಡಿದೆ.
- Shivaprasad B
- Updated on: Jan 11, 2026
- 11:44 am
Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ!
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ನಾಲ್ಕನೇ ಕ್ರಾಸ್ನಲ್ಲಿ ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿದೆ. ಚಾಲಕ ಮತ್ತು ಪ್ರಯಾಣಿಕ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
- Shivaprasad B
- Updated on: Jan 11, 2026
- 11:21 am
ಪತಿ ಸೈಕೋ ವರ್ತನೆ ಆರೋಪ ಕೇಸ್ಗೆ ಭರ್ಜರಿ ಟ್ವಿಸ್ಟ್: ಮಹಿಳೆಯಾಗಿದ್ದು ಮೂರು ಮದುವೆ?
ಪತಿ ಸೈಕೋನಂತೆ ವರ್ತಿಸ್ತಾನೆಂದು ಪತ್ನಿ ಆರೋಪಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪತಿ ಮಂಜುನಾಥ್, ತನ್ನ ವಿರುದ್ಧ ಆರೋಪ ಮಾಡಿರುವ ಪತ್ನಿ ಮೇಘಶ್ರೀಗೆ ಈಗಾಗಲೇ ಮೂರು ಮದುವೆಗಳಾಗಿವೆ ಎಂದು ಪ್ರತ್ಯಾರೋಪಿಸಿದ್ದಾರೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಮದುವೆ ನಾಟಕವಾಡುತ್ತಿದ್ದಾಳೆಂದೂ ಆಪಾದಿಸಿದ್ದಾರೆ. ಬೆಂಗಳೂರಿನ ಈ ಕೌಟುಂಬಿಕ ಕಲಹ ಪ್ರಕರಣ ಇದೀಗ ಮತ್ತಷ್ಟು ಕುತೂಹಲ ಕೆರಳಿಸಿದೆ.
- Shivaprasad B
- Updated on: Jan 11, 2026
- 10:46 am
KMFನಲ್ಲಿ ಉದ್ಯೋಗದ ಆಮಿಷ: ಲಕ್ಷ ಲಕ್ಷ ಹಣ ಕೊಟ್ಟು ಯಾಮಾರಿದ ಹಲವರು!
ಕರ್ನಾಟಕ ಹಾಲು ಒಕ್ಕೂಟದಲ್ಲಿ (KMF) ಉದ್ಯೋಗ ಕೊಡಿಸುವ ಆಸೆ ತೋರಿಸಿ ಉದ್ಯೋಗಾಕಾಂಕ್ಷಿಗಳಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. KAS ಅಧಿಕಾರಿಯೆಂದು ನಂಬಿಸಿ 10ಕ್ಕೂ ಹೆಚ್ಚು ಜನರಿಗೆ ಮೋಸ ಮಾಡಲಾಗಿದೆ. ಒಂದೊಂದು ಹುದ್ದೆಗೆ 10 ಲಕ್ಷ ರೂಪಾಯಿವರೆಗೂ ಹಣ ಪಡೆದು, ನಂತರ ಸಂಪರ್ಕಕ್ಕೆ ಸಿಗದೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Shivaprasad B
- Updated on: Jan 8, 2026
- 6:31 pm
20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು
ಬೆಂಗಳೂರಿನ ಬಸವೇಶ್ವರನಗರದಲ್ಲಿ ಮಗಳ ಮದುವೆಗೆ ನಿರಾಕರಿಸಿದ್ದಕ್ಕೆ ತಾಯಿ ಗೀತಾ ಮೇಲೆ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಗೀತಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 20 ದಿನ ಸಾವು ನೋವಿನೊಂದಿಗಿನ ಹೋರಾಟದ ನಂತರ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮುತ್ತುವನ್ನು ಬಂಧಿಸಲಾಗಿದ್ದು, ಕೊಲೆಯತ್ನ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ಮಾರ್ಪಟ್ಟಿದೆ.
- Shivaprasad B
- Updated on: Jan 7, 2026
- 11:27 am
ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಬಳ್ಳಾರಿಯಲ್ಲಿ ಮೃತಪಟ್ಟ ರಾಜಶೇಖರ್ ಕುಟುಂಬಕ್ಕೆ ಜಮೀರ್ 25 ಲಕ್ಷ ರೂಪಾಯಿ ನಗದು ಪರಿಹಾರ ನೀಡಿದ್ದರು. ಇದು ಆರ್.ಬಿ.ಐ. ನಿಯಮಗಳ ಉಲ್ಲಂಘನೆಯಾಗಿದ್ದು, ಹಣದ ಮೂಲದ ಬಗ್ಗೆ ತನಿಖೆಗೆ ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ದೂರು ನೀಡಿದ್ದಾರೆ.
- Shivaprasad B
- Updated on: Jan 6, 2026
- 10:09 pm
Bengaluru: ಡ್ರಗ್ಸ್ ದಂಧೆಕೋರರಿಗೆ ಶಾಕ್; 3 ಕೆ.ಜಿ. MDMA ಸೀಜ್, ಇಬ್ಬರು ಅರೆಸ್ಟ್
ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 3 ಕೆ.ಜಿ. 169 ಗ್ರಾಂ ತೂಕದ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಪೂರೈಕೆಯಾದ ಬಗ್ಗೆ ಮಾಹಿತಿ ಲಭ್ಯವಾಗಿದೆ.
- Shivaprasad B
- Updated on: Jan 6, 2026
- 2:38 pm
ಕಳ್ಳರ ಕೈ ಹಿಡಿಯಲಿಲ್ಲ ಮಂಜುನಾಥ: ಉದ್ಯಮಿ ಮನೆಯಲ್ಲಿ ಕದ್ದು ಸಿಕ್ಕಿಬಿದ್ದ ಗ್ಯಾಂಗ್
ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಉದ್ಯಮಿ ಮನೆಯಲ್ಲಿ ಬಂಗಾರ, ಬೆಳ್ಳಿ, ನಗದು ಕಳ್ಳತನ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಕ್ರಿಸ್ಮಸ್ ರಜೆಯಲ್ಲಿ ಮಾಲೀಕರು ಪ್ರವಾಸಕ್ಕೆ ಹೋದಾಗ, ಮೂರು ತಿಂಗಳ ಯೋಜನೆ ರೂಪಿಸಿದ್ದ ಮನೆಗೆಲಸದವರು ಈ ಕೃತ್ಯ ಎಸಗಿದ್ದರು. ಪೊಲೀಸರು 550 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿ ಮತ್ತು 3 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿಂದ ಕಳ್ಳತನ ಬಯಲಾಗಿದೆ.
- Shivaprasad B
- Updated on: Jan 6, 2026
- 12:11 pm