2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.
KPSC Scam: ಪರಾರಿಯಾಗಿದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ದಿಢೀರ್ ಪ್ರತ್ಯಕ್ಷ! CID ವಿಚಾರಣೆಗೆ ಹಾಜರು
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕೊನೆಗೂ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ಹಾಗೂ ಸಿಐಡಿ ದಾಳಿಯ ಮುನ್ಸೂಚನೆ ಸಿಗುತ್ತಿದ್ದಂತೆಯೇ ದೆಹಲಿಗೆ ಪರಾರಿಯಾಗಿದ್ದ ಅಧಿಕಾರಿಗೆ ಸಿಐಡಿ ನೋಟಿಸ್ ನೀಡಿತ್ತು. ಸಿಐಡಿ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
- Shivaprasad B
- Updated on: Aug 28, 2026
- 1:07 pm
ಅಮಾಯಕ ಪಶುಗಳ ಸಾವಿಗೆ ಪರೋಕ್ಷ ಪ್ರೇರಣೆ? ನಂದಿನಿ ಪಶು ಆಹಾರ ಖರೀದಿಗೆ ರೈತರ ಮೇಲೆ ಒತ್ತಡದ ಆರೋಪ
ಬಮೂಲ್ ವ್ಯಾಪ್ತಿಯಲ್ಲಿ 1,600ಕ್ಕೂ ಹೆಚ್ಚು ಪಶುಗಳ ಸಾವು, ಕಳಪೆ ಪಶು ಆಹಾರ ಮಾರಾಟ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ನಂದಿನಿ ಪಶು ಆಹಾರ ಖರೀದಿಸಲು ರೈತರ ಮೇಲೆ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಆಹಾರ ಖರೀದಿಸದ ರೈತರಿಂದ ಹಾಲು ಸ್ವೀಕರಿಸದೆ ಒತ್ತಡ ಹೇರಲಾಗುತ್ತಿತ್ತು ಎಂದು ರೈತರು ಆರೋಪಿಸಿದ್ದಾರೆ.
- Shivaprasad B
- Updated on: Aug 27, 2026
- 6:48 am
ಕೆಪಿಎಸ್ಸಿ ನೇಮಕಾತಿಯಲ್ಲಿ ಹಗರಣ: ಪ್ರಶ್ನೆಪತ್ರಿಕೆ, OMR ಶೀಟ್ ಇಡುವ ಕೊಠಡಿ ಸಿಸಿಟಿವಿ ದೃಶ್ಯಗಳೇ ಡಿಲೀಟ್!
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ವೇಳೆ ಸ್ಟ್ರಾಂಗ್ ರೂಂನ 6 ತಿಂಗಳ ಸಿಸಿಟಿವಿ ದೃಶ್ಯಾವಳಿಗಳು ಡಿಲೀಟ್ ಆಗಿರುವುದು ಹಾಗೂ OMR ಸ್ಕ್ಯಾನ್ ಹಾರ್ಡ್ ಡಿಸ್ಕ್ ನಾಪತ್ತೆಯಾಗಿರುವುದು ಬಯಲಾಗಿದೆ. ಯಮದ ಪ್ರಕಾರ ಸ್ಟ್ರಾಂಗ್ ರೂಂನ ಸಿಸಿಟಿವಿ ಡಾಟಾವನ್ನು ಪರೀಕ್ಷೆ ಮುಗಿದ ವರ್ಷದ ತನಕ ಇಟ್ಟಿರಬೇಕು. ಆದರೆ ಇಲ್ಲಿ ಆ ಸಂಬಂಧ ದೃಶ್ಯಾವಳಿಗಳೇ ನಾಪತ್ತೆಯಾಗಿವೆ ಎನ್ನಲಾಗಿದೆ.
- Shivaprasad B
- Updated on: Aug 26, 2026
- 7:45 pm
ಮ್ಯಾಟ್ರಿಮೋನಿಯಲ್ ವೆಬ್ಸೈಟ್ನಲ್ಲಿ ದೋಖಾ: ಕೇರಳದಲ್ಲಿ ಸಿಕ್ಕಿಬಿದ್ರು ತಾಯಿ, ಮಗ!
ಮ್ಯಾಟ್ರಿಮೋನಿಯಲ್ ವೆಬ್ಸೈಟ್ ಮೂಲಕ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಖತರ್ನಾಕ್ ತಾಯಿ-ಮಗನನ್ನು ಆಡುಗೋಡಿ ಪೊಲೀಸರು ಕೇರಳದ ವಯನಾಡಿನಲ್ಲಿ ಬಂಧಿಸಿದ್ದಾರೆ. ಶ್ರೀಮಂತನೆಂದು ಬಿಲ್ಡಪ್ ನೀಡಿ 10ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ಆರೋಪಿ ಪ್ರದೀಪ್ ಜೋಸೆಫ್ ಮತ್ತು ಆತನ ತಾಯಿ ಕಲಾವತಿಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ತನಿಖೆ ಕಾಯ್ದುಕೊಳ್ಳಲಾಗಿದೆ.
- Shivaprasad B
- Updated on: Aug 26, 2026
- 9:22 am
ಮ್ಯಾಟ್ರಿಮೋನಿಯಲ್ಲಿ ನಕಲಿ ಡಾಕ್ಟರ್ ಅವತಾರ: 10ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದ್ದ ತಾಯಿ-ಮಗ ವಯನಾಡಿನಲ್ಲಿ ಅರೆಸ್ಟ್
ಬೆಂಗಳೂರಿನಲ್ಲಿ ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳ ಮೂಲಕ ನಡೆದ ವಂಚನೆಯ ಪ್ರಕರಣವೊಂದರಲ್ಲಿ, ತಾಯಿ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ಡಾಕ್ಟರ್ ಪ್ರೊಫೈಲ್ ಸೃಷ್ಟಿಸಿ 10ಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಗಳನ್ನು ಆಡುಗೋಡಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಈ ವಂಚಕರು ಮದುವೆಯ ಆಸೆ ತೋರಿಸಿ ಚಿನ್ನಾಭರಣ, ಕಾರು ಹಾಗೂ ನಗದುಗಾಗಿ ಬೇಡಿಕೆ ಇಡುತ್ತಿದ್ದರು.
- Shivaprasad B
- Updated on: Aug 24, 2026
- 10:28 pm
ಕೆ.ಆರ್. ಮಾರ್ಕೆಟ್ನಲ್ಲಿ ಹೆಚ್ಚಿದ ಕಳ್ಳತನ: ಎಐ ಆಧಾರಿತ ‘ಫೇಸ್ ರೆಕಗ್ನಿಷನ್’ ಕ್ಯಾಮೆರಾ ಅಳವಡಿಕೆಗೆ ಕಮಿಷನರ್ ಸೂಚನೆ!
ಬೆಂಗಳೂರಿನ ಕೆ.ಆರ್. ಮಾರ್ಕೆಟ್ನಲ್ಲಿ ವರಮಹಾಲಕ್ಷ್ಮಿ ಹಬ್ಬದ ವೇಳೆ 50ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾದ ಹಿನ್ನೆಲೆಯಲ್ಲಿ, ಸೀಮಂತ್ ಕುಮಾರ್ ಸಿಂಗ್ ಎಐ ಆಧಾರಿತ ಫೇಸ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಸಲು ಸೂಚಿಸಿದ್ದಾರೆ. ಮುಂಬರುವ ಗಣೇಶ ಹಬ್ಬ, ದಸರಾ ಮತ್ತು ದೀಪಾವಳಿ ವೇಳೆಗೆ ಕಳ್ಳತನ ತಡೆಯಲು ಹಾಗೂ ಹಳೆಯ ಅಪರಾಧಿಗಳನ್ನು ತಕ್ಷಣ ಪತ್ತೆಹಚ್ಚಲು ಈ ಹೊಸ ತಂತ್ರಜ್ಞಾನ ನೆರವಾಗಲಿದೆ.
- Shivaprasad B
- Updated on: Aug 23, 2026
- 12:39 pm
ಬೆಂಗಳೂರಿನ ನಡು ರಸ್ತೆಯಲ್ಲಿಯೆ ವ್ಯಕ್ತಿಯ ಭೀಕರ ಹತ್ಯೆ: ಪ್ರತೀಕಾರಕ್ಕಾಗಿ ನಡೀತಾ ಕೊಲೆ?
ಬೆಂಗಳೂರಿನ ಮಡಿವಾಳ ಅಂಡರ್ಪಾಸ್ ಬಳಿ ಮೆಡಿಕಲ್ ಶಾಪ್ ಮಾಲೀಕನೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಡಿವಾಳದಿಂದ ಕೊರಮಂಗಲ ಕಡೆ ಹೊರಟಿದ್ದ ಈತನನ್ನು ಮಾರಕಾಸ್ತ್ರಗಳಿಂದ ಜನರೆದುರೇ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಇದು ಜನವರಿ 13ರಂದು ಬಂಡೆಪಾಳ್ಯದಲ್ಲಿ ನಡೆದಿದ್ದ ಶಬ್ಬೀರ್ ಕೊಲೆ ಪ್ರಕರಣಕ್ಕೆ ಪ್ರಥಿಕಾರವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದು, ಪ್ರಕರಣ ಸಂಬಂಧ ಮೂರು ವಿಶೇಷ ತಂಡಗಳ ರಚನೆ ಮಾಡಲಾಗಿದೆ.
- Shivaprasad B
- Updated on: Aug 23, 2026
- 10:26 am
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿದ್ದು ಬಹಿರಂಗವಾಗಿದೆ. ಪೋಷಕರು ಸೇರಿ ಹಲವರೊಂದಿಗೆ ಸಂಪರ್ಕದಲ್ಲಿದ್ದ ಪ್ರಜ್ವಲ್ ಎರಡು ಮೊಬೈಲ್ಗಳನ್ನು ಬಳಸಿದ್ದರು. ಪ್ರತಾಪ್ ರಾಯ್ ಮೂಲಕ ನವೀನ್ ಎಂಬಾತ ಮೊಬೈಲ್ ಪೂರೈಸಿದ್ದು, ಆತನ ಬಂಧನವಾಗಿದೆ. ಡಿಐಜಿ ಜಿನೇಂದ್ರ ಗಣಗಾವಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದ್ದು, ಜೈಲು ಸಿಬ್ಬಂದಿಗೂ ಸಂಕಷ್ಟ ಎದುರಾಗಿದೆ.
- Shivaprasad B
- Updated on: Aug 22, 2026
- 1:28 pm
Fake Medicine Racket: ರಾಮನಗರ ನಕಲಿ ಔಷಧ ಜಾಲ; ಸಂಪೂರ್ಣ ತನಿಖೆಗೆ ಗೃಹ ಇಲಾಖೆ ಮೊರೆ ಹೋದ SIT!
ರಾಮನಗರದ ದೊಡ್ಡೇರಿ ಫಾರ್ಮ್ಹೌಸ್ ನಕಲಿ ಔಷಧ ಜಾಲದ ಪ್ರಕರಣ ದಿನಕ್ಕೊಂದು ಹೊಸ ಮೈಲಿಗಲ್ಲು ತಲುಪುತ್ತಿದೆ. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಸರ್ಕಾರ ಎಸ್ಐಟಿ ನೇಮಿಸಿದೆಯಾದರೂ, ಔಷಧ ಕಾಯ್ದೆಯಡಿ ತನಿಖೆ ನಡೆಸಲು ಇರುವ ಕಾನೂನು ತೊಡಕನ್ನು ನಿವಾರಿಸಲು ಎಸ್ಐಟಿ ಅಧಿಕಾರಿಗಳು ಈಗ ಗೃಹ ಇಲಾಖೆಯ ಮೊರೆ ಹೋಗಿದ್ದಾರೆ.
- Shivaprasad B
- Updated on: Aug 22, 2026
- 11:23 am
KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ದೆಹಲಿಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಕುಟುಂಬದವರ ಸಂಪರ್ಕಕ್ಕೂ ಸಿಗುತ್ತಿಲ್ಲ. ಇ.ಡಿ ದಾಳಿ ಬೆನ್ನಲ್ಲೇ ಈ ಬೆಳವಣಿಗೆ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ.
- Shivaprasad B
- Updated on: Aug 22, 2026
- 10:52 am
Fake Medicine: ರಾಮನಗರ ನಕಲಿ ಔಷಧ ಜಾಲ: ಪೋರ್ಟರ್’ ಆ್ಯಪ್ ಮೂಲಕ ನಡೆಯುತ್ತಿತ್ತು ಸಪ್ಲೈ!
ರಾಮನಗರದ ದೊಡ್ಡೇರಿ ಗ್ರಾಮದ ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ನಕಲಿ ಔಷಧ ತಯಾರಿಕಾ ಜಾಲದ ಸ್ಪೋಟಕ ವಿವರಗಳು ಬಯಲಾಗಿವೆ. ಖಾಸಗಿ 'ಪೋರ್ಟರ್' ಆ್ಯಪ್ ಮೂಲಕ ಪ್ರತಿವಾರ ನೂರಾರು ಬಾಟಲಿ ನಕಲಿ ಔಷಧಗಳನ್ನು ಸರಬರಾಜು ಮಾಡುತ್ತಿದ್ದ ಕಿಂಗ್ಪಿನ್ ಪ್ರಶಾಂತ್ ತಂತ್ರ ಹಾಗೂ ಪೊಲೀಸರ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ.
- Shivaprasad B
- Updated on: Aug 22, 2026
- 10:34 am
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್ ಆಗಬಾರದು: ಹೈಕೋರ್ಟ್ ಖಡಕ್ ಆದೇಶ!
ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕೆಮರಾಗಳು ಒಂದು ನಿಮಿಷವೂ ಬಂದ್ ಆಗಬಾರದು ಎಂದು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ವೈಟ್ಫೀಲ್ಡ್ ಠಾಣೆ ಪ್ರಕರಣದ ವಿಚಾರಣೆ ವೇಳೆ ಪೊಲೀಸರ ಬೇಜವಾಬ್ದಾರಿ ಉತ್ತರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶಿಸಿದೆ.
- Shivaprasad B
- Updated on: Aug 22, 2026
- 10:31 am