AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಪ್ರಸಾದ್​ ಬಿ.

ಶಿವಪ್ರಸಾದ್​ ಬಿ.

ಹಿರಿಯ ವರದಿಗಾರ - TV9 Kannada

shivaprasad.basavraj@tv9.com

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!

ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಮೂಲದವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಇಂಧನ ಪೂರೈಸಲು ಬಂದಿದ್ದ ಡೆಲಿವರಿ ಬಾಯ್ ಮುಖಕ್ಕೆ ತೀವ್ರವಾಗಿ ಪಂಚ್ ಮಾಡಿ ರಕ್ತಸ್ರಾವ ಗೊಳಿಸಿದ್ದಾರೆ. ಈ ಅಮಾನವೀಯ ಘಟನೆಯ ಸಂಪೂರ್ಣ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮಾಫಿ ಸಾಕ್ಷಿ ಭೀತಿ; ಜೈಲಿನಲ್ಲಿ ಊಟ, ನಿದ್ರೆಯಿಲ್ಲದೆ ಕಳೆದ ನಟ ದರ್ಶನ್‌

ಮಾಫಿ ಸಾಕ್ಷಿ ಭೀತಿ; ಜೈಲಿನಲ್ಲಿ ಊಟ, ನಿದ್ರೆಯಿಲ್ಲದೆ ಕಳೆದ ನಟ ದರ್ಶನ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಆಪ್ತ ಪ್ರದೂಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವುದು ತೀವ್ರ ಆತಂಕ ತಂದೊಡ್ಡಿದೆ. ಇದರಿಂದಾಗಿ ರಾತ್ರಿಯಿಡೀ ನಿದ್ರೆಯಿಲ್ಲದೆ ಊಟವನ್ನೂ ತೊರೆದ ದರ್ಶನ್, ಪ್ರಕರಣದ ಭವಿಷ್ಯ ಹಾಗೂ ಎದುರಾಗಲಿರುವ ಸಂಕಷ್ಟಗಳ ಕುರಿತು ಜೈಲಿನಲ್ಲಿ ತೀವ್ರ ಚಿಂತಾಕ್ರಾಂತರಾಗಿ ಮೌನಕ್ಕೆ ಶರಣಾಗಿದ್ದಾರೆ.

ದರ್ಶನ್​​ಗೆ ಶಾಕ್ ಮೇಲೆ ಶಾಕ್; ಪ್ರದೋಷ್ ಬಳಿಕ ಮತ್ತಿಬ್ಬರು ಮಾಫಿ ಸಾಕ್ಷಿ ಅರ್ಜಿ

ದರ್ಶನ್​​ಗೆ ಶಾಕ್ ಮೇಲೆ ಶಾಕ್; ಪ್ರದೋಷ್ ಬಳಿಕ ಮತ್ತಿಬ್ಬರು ಮಾಫಿ ಸಾಕ್ಷಿ ಅರ್ಜಿ

Darshan Thoogudeepa News: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿಯಾಗಲು ಎ14 ಪ್ರದೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡುವೆಯೇ, ಎ8 ರವಿಶಂಕರ್ ಹಾಗೂ ಎ10 ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಫುಡ್ ಡೆಲಿವರಿ ಬಾಯ್ಸ್​ನ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ!

ಫುಡ್ ಡೆಲಿವರಿ ಬಾಯ್ಸ್​ನ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ!

ಬೆಂಗಳೂರಿನಲ್ಲಿ ತಡರಾತ್ರಿ ವೇಳೆ ಫುಡ್ ಡೆಲಿವರಿ ಬಾಯ್‌ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 30ರ ರಾತ್ರಿ ಕಗ್ಗದಾಸಪುರ ಬಳಿ ಡೆಲಿವರಿ ಬಾಯ್‌ ತಡೆದು ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳಿಂದ 1.30 ಲಕ್ಷ ರೂ. ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಮತ್ತಷ್ಟು ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯಿದ್ದು ತನಿಖೆ ಮುಂದುವರಿದಿದೆ.

ಬೆಂಗಳೂರು ಪೊಲೀಸ್‌ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: 5 ಹೊಸ ಕಮಿಷನರೇಟ್‌, 6,633 ಹೊಸ ಹುದ್ದೆ ಸೃಷ್ಟಿಗೆ ಪ್ರಸ್ತಾವನೆ

ಬೆಂಗಳೂರು ಪೊಲೀಸ್‌ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: 5 ಹೊಸ ಕಮಿಷನರೇಟ್‌, 6,633 ಹೊಸ ಹುದ್ದೆ ಸೃಷ್ಟಿಗೆ ಪ್ರಸ್ತಾವನೆ

ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಭೌಗೋಳಿಕ ವಿಸ್ತರಣೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯವಸ್ಥೆಯಲ್ಲಿ ಬೃಹತ್ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಪ್ರಸ್ತುತ ಇರುವ ಕಮಿಷನರೇಟ್ ಅನ್ನು 5 ಪ್ರತ್ಯೇಕ ವಲಯಗಳಾಗಿ ವಿಂಗಡಿಸಿ, ಹುದ್ದೆಯನ್ನು ಸೃಷ್ಟಿಸಲು ನಗರ ಪೊಲೀಸ್ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕೆಎಂಎಫ್ ಪಶು ಆಹಾರ ಘಟಕದಲ್ಲಿ ಗೋಲ್ಮಾಲ್: ಕಳಪೆ ಆಹಾರದಿಂದ 1,600 ಹಸುಗಳ ಸಾವಿನ ಶಂಕೆ!

ಕೆಎಂಎಫ್ ಪಶು ಆಹಾರ ಘಟಕದಲ್ಲಿ ಗೋಲ್ಮಾಲ್: ಕಳಪೆ ಆಹಾರದಿಂದ 1,600 ಹಸುಗಳ ಸಾವಿನ ಶಂಕೆ!

ರಾಜಾನುಕುಂಟೆಯ ಕೆಎಂಎಫ್ ಪಶು ಆಹಾರ ಘಟಕದಲ್ಲಿ ಕಳಪೆ ಕಚ್ಚಾ ವಸ್ತುಗಳನ್ನು ಬಳಸಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಕಳಪೆ 'ನಂದಿನಿ ಪಶು ಆಹಾರ' ಸೇವನೆಯಿಂದ ಕಳೆದ ಎರಡು ತಿಂಗಳಲ್ಲಿ 1,600 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿದ್ದು, ಜಾನುವಾರುಗಳ ಹಾಲಿನ ಇಳುವರಿ ಕುಸಿದಿದೆ. ಇದರಿಂದ ಬೆಂಗಳೂರು ಸುತ್ತಮುತ್ತಲಿನ ಹೈನುಗಾರರು ತೀವ್ರ ಆತಂಕಗೊಂಡಿದ್ದು, ಟನ್‌ಗಟ್ಟಲೆ ಆಹಾರವನ್ನು ಘಟಕಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ.

ಪೂಜೆ ಹೆಸರಿನಲ್ಲಿ ಆಂಧ್ರದ ಮಹಿಳೆಗೆ ₹2.5 ಕೋಟಿ ವಂಚನೆ: ದುಷ್ಟಶಕ್ತಿ ನೆಪದಲ್ಲಿ ಹಣ ಪಡೆದು ಎಸ್ಕೇಪ್!

ಪೂಜೆ ಹೆಸರಿನಲ್ಲಿ ಆಂಧ್ರದ ಮಹಿಳೆಗೆ ₹2.5 ಕೋಟಿ ವಂಚನೆ: ದುಷ್ಟಶಕ್ತಿ ನೆಪದಲ್ಲಿ ಹಣ ಪಡೆದು ಎಸ್ಕೇಪ್!

ದುಷ್ಟಶಕ್ತಿ ನಿವಾರಣೆ ಮತ್ತು ಪೂಜೆಯ ನೆಪದಲ್ಲಿ ಚಾಮರಾಜಪೇಟೆಯಲ್ಲಿ ವಾಸವಿದ್ದ ಆಂಧ್ರ ಪ್ರದೇಶ ಮೂಲದ ಮಹಿಳೆಯೊಬ್ಬರಿಂದ 2.5 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. 10 ಕೋಟಿ ರೂ. ನೀಡುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ಮೂವರ ವಿರುದ್ಧ ಸಿಸಿಬಿ ತನಿಖೆ ಆರಂಭಿಸಿದೆ.

ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!

ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!

ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಸರಣಿ ವಂಚನೆ ಎಸಗುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.74 ಕೋಟಿ ರೂಪಾಯಿ ಮೌಲ್ಯದ ಫಾರ್ಚೂನರ್, ವೋಲ್ವೋ ಸೇರಿದಂತೆ 7 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರುಗಳನ್ನು ಸರಣಿಯಾಗಿ ಅಡಮಾನವಿಟ್ಟು ವಂಚಿಸುತ್ತಿದ್ದ ಈ ಜಾಲದಿಂದ ಮೂಲ ಮಾಲೀಕರನ್ನು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿದೆ.

ಫೇಸ್​​ಬುಕ್​​ ಗೆಳೆಯನ ವಂಚನೆ ಜಾಲಕ್ಕೆ ಸಿಲುಕಿ 1.7 ಕೋಟಿ ರೂಪಾಯಿ ಕಳೆದುಕೊಂಡ ವಿಚ್ಛೇದಿತ ಮಹಿಳೆ

ಫೇಸ್​​ಬುಕ್​​ ಗೆಳೆಯನ ವಂಚನೆ ಜಾಲಕ್ಕೆ ಸಿಲುಕಿ 1.7 ಕೋಟಿ ರೂಪಾಯಿ ಕಳೆದುಕೊಂಡ ವಿಚ್ಛೇದಿತ ಮಹಿಳೆ

ಬೆಂಗಳೂರಿನ ಯಶವಂತಪುರದಲ್ಲಿ ವಿಚ್ಛೇದಿತ ಮಹಿಳೆಯೊಬ್ಬರಿಗೆ ಯುಕೆ ಉದ್ಯೋಗಿ ಸೋಗಿನಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿ, ಗಿಫ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸೈಬರ್ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿಯಲ್ಲಿ ಕಸ್ಟಮ್ಸ್​​ನಲ್ಲಿ ಗಿಫ್ಟ್ ಗಳಿದ್ದು, ಅವುಗಳನ್ನು ರಿಲೀಸ್ ಮಾಡಲು ಹಣಪಾವತಿ ಮಾಡಬೇಕು. ಆದರೆ ತನ್ನ ಬಳಿ ಇಂಡಿಯನ್‌ ಕರೆನ್ಸಿ ಇಲ್ಲ. ಹೀಗಾಗಿ ಭಾರತಕ್ಕೆ ಬಂದ ಮೇಲೆ ಹಣ ನೀಡುತ್ತೇನೆ ಎಂದು ಮಹಿಳೆಗೆ ಆರೋಪಿ ತಿಳಿಸಿದ್ದ ಎನ್ನಲಾಗಿದೆ.

ವಿಡಿಯೋ ಕಾಲ್ ಮಾಡಿದ್ದ ಅಪರಿಚಿತ ಮಹಿಳೆ ಹೇಳಿದ್ದಕ್ಕೆ ಬಟ್ಟೆಬಿಚ್ಚಿ ಲಕ್ಷಾಂತರ ರೂ. ಕಳೆದುಕೊಂಡ ಯುವ ಕ್ರಿಕೆಟಿಗ!

ವಿಡಿಯೋ ಕಾಲ್ ಮಾಡಿದ್ದ ಅಪರಿಚಿತ ಮಹಿಳೆ ಹೇಳಿದ್ದಕ್ಕೆ ಬಟ್ಟೆಬಿಚ್ಚಿ ಲಕ್ಷಾಂತರ ರೂ. ಕಳೆದುಕೊಂಡ ಯುವ ಕ್ರಿಕೆಟಿಗ!

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬಳು ವಿಡಿಯೋ ಕಾಲ್ ಮಾಡಿ ಯುವ ಕ್ರಿಕೆಟಿಗನನ್ನು ಬಟ್ಟೆಬಿಚ್ಚುವಂತೆ ಮಾಡಿದ್ದು, ನಂತರ ಆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಪುಣ್ಯೇಶ್ ಬಂಧನ, ಮುಂದುವರಿದ ತನಿಖೆ

BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಪುಣ್ಯೇಶ್ ಬಂಧನ, ಮುಂದುವರಿದ ತನಿಖೆ

ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣ್ಯೇಶ್ ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯವೇ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ನಿನ್ನೆ ಬಿಜೆಪಿಗರಿಂದ ಕಾಂಗ್ರೆಸ್​​ ಕಚೇರಿ ಮುತ್ತಿಗೆ ಯತ್ನದ ವೇಳೆ ಭಾರಿ ಹೈಡ್ರಾಮಾ ನಡೆದಿತ್ತು.

ದೆಹಲಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಪ್ರತಿಭಟನೆ ಕಾವು: ವಕೀಲರ ಸಂಘದಿಂದ ಭಾರೀ ಪ್ರತಿಭಟನೆ

ದೆಹಲಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಪ್ರತಿಭಟನೆ ಕಾವು: ವಕೀಲರ ಸಂಘದಿಂದ ಭಾರೀ ಪ್ರತಿಭಟನೆ

ಬೆಂಗಳೂರು ವಕೀಲರ ಸಂಘವು ಬುಧವಾರ ಕರ್ನಾಟಕ ಹೈಕೋರ್ಟ್‌ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಮೂಲಭೂತ ಸೌಕರ್ಯಗಳ ಕೊರತೆ, ನ್ಯಾಯಾಂಗದಲ್ಲಿ ಖಾಲಿ ಹುದ್ದೆಗಳು ಮತ್ತು ಕೆಲವು ನ್ಯಾಯಮೂರ್ತಿಗಳ ಅಗೌರವಯುತ ವರ್ತನೆಯಿಂದ ವಕೀಲರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ನಿಷ್ಕ್ರಿಯತೆ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಗಿದೆ.