ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ
ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತೆ ಕರೆ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಆದ್ಯತೆ ನೀಡಿ, ಯೋಜನೆಗಳನ್ನು ಜಾರಿಗೆ ತರುವಂತೆ ಸಲಹೆ ನೀಡಿರುವ ಅವರು, ಎಸ್.ಎಂ. ಕೃಷ್ಣ ಅವರಂತೆ ದಕ್ಷ ಆಡಳಿತ ನಡೆಸಿ, ಬೆಂಗಳೂರನ್ನು ಮತ್ತೊಮ್ಮೆ ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಲು ಶ್ರಮಿಸುವಂತೆ ಒತ್ತಾಯಿಸಿದ್ದಾರೆ. ಬಿಬಿಎಂಪಿ ಚುನಾವಣೆ ಮತ್ತು ಇವಿಎಂ ಬಳಕೆಯ ಬಗ್ಗೆಯೂ ಪೈ ಮಾತನಾಡಿದ್ದಾರೆ.
- Shivaraj
- Updated on: Jun 16, 2026
- 12:50 pm
ಭಾರಿ ಮಳೆಗೆ ಬೆಂಗಳೂರಲ್ಲಿ ರಸ್ತೆಯಲ್ಲೇ ಹರಿದ ನೀರು: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರು ಮಹಾನಗರದ ಹಲವೆಡೆ ಸಂಜೆ ಮಳೆ ಸುರಿದಿದೆ. ವಿಧಾನಸೌಧ, ಮೆಜೆಸ್ಟಿಕ್, ಕೋರಮಂಗಲ, ಶಿವಾಜಿನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು, ದ್ವಿಚಕ್ರ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಯಿತು. ಸಂಚಾರ ದಟ್ಟಣೆ ಉಂಟಾಗಿ ಜನಜೀವನಕ್ಕೆ ತೊಂದರೆಯಾಗಿದೆ.
- Shivaraj
- Updated on: Jun 12, 2026
- 7:06 pm
Bangalore Rain: ಬಿರು ಬಿಸಿಲ ಮಧ್ಯೆ ಬೆಂಗಳೂರಿನೆಲ್ಲೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಜನರು ಪರದಾಟ
ಬೆಂಗಳೂರು ಮಳೆ ಹವಾಮಾನ: ಕೆಲ ದಿನಗಳಿಂದ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನ ಜನತೆಗೆ ವರುಣ ಶಾಕ್ ನೀಡಿದ್ದಾನೆ. ಸಂಜೆ ಆಗುತ್ತಿದ್ದಂತೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದೆ. ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
- Shivaraj
- Updated on: Apr 29, 2026
- 6:02 pm
ಇಂದಿನಿಂದ ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ರಾಜ್ಯದಲ್ಲಿ (Karnataka) ಇಂದಿನಿಂದ ಜನಗಣತಿ (Census) ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದ್ದು, ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಇನ್ನು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಏನೆಲ್ಲಾ ಮಾಡಬೇಕು ಎನ್ನುವುದನ್ನು ವಿವರಿಸಿದ್ದಾರೆ ಕೇಳಿ
- Shivaraj
- Updated on: Apr 1, 2026
- 4:21 pm
IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್ ಹೇಳಿದ್ದಿಷ್ಟು
ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಮಾತನಾಡಿದ್ದು, ಟಿಕೆಟ್ ಇದ್ದವರು ಮಾತ್ರ ಆಗಮಿಸಬೇಕು, ರಸ್ತೆಯಲ್ಲಿ ನಿಲ್ಲುವಂತಿಲ್ಲ. ಪಾರ್ಕಿಂಗ್ ಅವಕಾಶವಿಲ್ಲ, ಮೂರು ಹಂತದ ಭದ್ರತೆ ಇರಲಿದೆ. ಆಫ್ಲೈನ್ ಟಿಕೆಟ್ ಸಿಗುವುದಿಲ್ಲ. ಟಿಕೆಟ್ ಇಲ್ಲದವರು ಮನೆಯಲ್ಲಿಯೇ ವೀಕ್ಷಿಸುವಂತೆ ಹೇಳಿದ್ದಾರೆ.
- Shivaraj
- Updated on: Mar 27, 2026
- 7:54 pm
ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್
ಹಾಲು ಉತ್ಪಾದಕರಿಗೆ ಈಗಾಗಲೇ ಸರ್ಕಾರ 5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಈ ಬೆನ್ನಲ್ಲೇ ಇದೀಗ ಕೆಎಂಎಫ್ ಅಂಗಸಂಸ್ಥೆಯಾದ ಬಮೂಲ್ ಕೂಡ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬಕ್ಕೆ ಭರ್ಜರಿ ಉಡುಗೊರೆ ಸಿಕ್ಕಿದೆ.
- Shivaraj
- Updated on: Mar 12, 2026
- 2:57 pm
ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್
ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮತ್ತು ಸರ್ಕಾರಿ ವೈದ್ಯರು ಏಕಕಾಲದಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ 37,000 ಕೋಟಿ ರೂಪಾಯಿ ಬಿಲ್ ಪಾವತಿಗೆ ಗುತ್ತಿಗೆದಾರರು ಆಗ್ರಹಿಸಿದ್ದರೆ, ಔಷಧಗಳ ಸಮರ್ಪಕ ಪೂರೈಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾರ್ಚ್ 11ರಿಂದ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಘೋಷಿಸಿದ್ದಾರೆ.
- Shivaraj
- Updated on: Feb 25, 2026
- 8:49 am
ಬೆಂಗಳೂರಿನ ಈ ಕೆರೆಗಳಲ್ಲಿ ಇನ್ನು ಬೋಟಿಂಗ್ ಮಾಡಬಹುದು! ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್
ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ನಗರದ 183 ಕೆರೆಗಳ ಪೈಕಿ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆ ಜಾರಿಗೆ ತರಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದೊಂದಿಗೆ ಜಿಬಿಎ ಜಿಬಿಎ ಕೈಜೋಡಿಸಿದೆ.
- Shivaraj
- Updated on: Feb 13, 2026
- 2:02 pm
Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಬಿಡಿಎಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ, ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆಯುಕ್ತರ ಆದೇಶವನ್ನು ಪ್ರಶ್ನಿಸಿ ಎಂಜಿನಿಯರ್ ಅಶೋಕ್ ಬಾಗಿ ಜೊತೆ ಗಲಾಟೆ ನಡೆಸಿದ್ದಾರೆ. ಭೂಗಳ್ಳರ ಪರ ನಿಂತಿರುವ ಆರೋಪದ ಮೇಲೆ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಶೋಕಾಸ್ ನೋಟಿಸ್ ಜಾರಿಗೊಳಿಸಿ ಕ್ರಮಕ್ಕೆ ಆದೇಶಿಸಿದ್ದಾರೆ.
- Shivaraj
- Updated on: Feb 12, 2026
- 1:01 pm
ಮೆಟ್ರೋ ಟಿಕೆಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಏರಿಕೆಯಾಗುತ್ತಾ ಕಾವೇರಿ ನೀರಿನ ದರ? ಜಲಮಂಡಳಿ ಅಧ್ಯಕ್ಷರಿಂದ ಸ್ಪಷ್ಟನೆ
Bangalore Water Price: ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೆ ನೀರಿನ ದರವೂ ಹೆಚ್ಚಳವಾಗುತ್ತದೆ ಎಂಬ ವದಂತಿ ಹರಡಿದೆ. ಕಾವೇರಿ ನೀರಿದ ದರ ಏರಿಕೆ ಈ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸ್ಪಷ್ಟನೆ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಇಲ್ಲಿದೆ.
- Shivaraj
- Updated on: Feb 5, 2026
- 1:11 pm
ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಮಾಡಿದ್ದು ಟೀಕೆಗೊಳಗಾದ ಬೆನ್ನಲ್ಲೇ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆಶ್ರಯ ಯೋಜನೆ ಅಡಿ ಮನೆ ನೀಡುವುದಾಗಿ ಸರ್ಕಾರ ಹೇಳಿತ್ತು. ಅದರಂತೆ, ಜನವರಿ 2ಕ್ಕೆ ಮನೆ ಹಂಚಿಕೆ ಆಗಲಿದೆ ಎಂದೂ ಹೇಳಲಾಗಿತ್ತು. ಆದರೆ, ಮನೆ ಹಂಚಿಕೆಗೆ ಈಗ ದೊಡ್ಡ ತೊಡಕು ಎದುರಾಗಿದೆ. ಏನದು? ಇಲ್ಲಿದೆ ಮಾಹಿತಿ.
- Shivaraj
- Updated on: Jan 2, 2026
- 7:53 am
5 ಪಾಲಿಕೆಗಳಿಂದ ಜಿಬಿಎ ಆರ್ಥಿಕ ದಿವಾಳಿ! ಅಂಕಿಅಂಶ ಸಹಿತ ಕಾರಣ ಬಿಚ್ಚಿಟ್ಟ ಬಿಜೆಪಿ ಮುಖಂಡ, ಸಿಎಂಗೆ ಪತ್ರ
5 ಹೊಸ ಬೆಂಗಳೂರು ಮಹಾನಗರ ಪಾಲಿಕೆಗಳ ರಚನೆಯಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಭಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿವಾಳಿಯಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. ಹೆಚ್ಚಿದ ಸಿಬ್ಬಂದಿ ವೇತನ ಮತ್ತು ನಿರ್ವಹಣಾ ವೆಚ್ಚಗಳು ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತೆ ಮಾಡಿ, ಬೆಂಗಳೂರಿನ ಭವಿಷ್ಯಕ್ಕೆ ದೊಡ್ಡ ಸವಾಲಾಗಲಿದೆ ಎಂದು ಅವರು ಹೇಳಿದ್ದಾರೆ.
- Shivaraj
- Updated on: Dec 1, 2025
- 12:01 pm