ಇಂದಿನಿಂದ ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ರಾಜ್ಯದಲ್ಲಿ (Karnataka) ಇಂದಿನಿಂದ ಜನಗಣತಿ (Census) ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದ್ದು, ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಇನ್ನು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಏನೆಲ್ಲಾ ಮಾಡಬೇಕು ಎನ್ನುವುದನ್ನು ವಿವರಿಸಿದ್ದಾರೆ ಕೇಳಿ
- Shivaraj
- Updated on: Apr 1, 2026
- 4:21 pm
IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್ ಹೇಳಿದ್ದಿಷ್ಟು
ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಮಾತನಾಡಿದ್ದು, ಟಿಕೆಟ್ ಇದ್ದವರು ಮಾತ್ರ ಆಗಮಿಸಬೇಕು, ರಸ್ತೆಯಲ್ಲಿ ನಿಲ್ಲುವಂತಿಲ್ಲ. ಪಾರ್ಕಿಂಗ್ ಅವಕಾಶವಿಲ್ಲ, ಮೂರು ಹಂತದ ಭದ್ರತೆ ಇರಲಿದೆ. ಆಫ್ಲೈನ್ ಟಿಕೆಟ್ ಸಿಗುವುದಿಲ್ಲ. ಟಿಕೆಟ್ ಇಲ್ಲದವರು ಮನೆಯಲ್ಲಿಯೇ ವೀಕ್ಷಿಸುವಂತೆ ಹೇಳಿದ್ದಾರೆ.
- Shivaraj
- Updated on: Mar 27, 2026
- 7:54 pm
ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್
ಹಾಲು ಉತ್ಪಾದಕರಿಗೆ ಈಗಾಗಲೇ ಸರ್ಕಾರ 5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಈ ಬೆನ್ನಲ್ಲೇ ಇದೀಗ ಕೆಎಂಎಫ್ ಅಂಗಸಂಸ್ಥೆಯಾದ ಬಮೂಲ್ ಕೂಡ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬಕ್ಕೆ ಭರ್ಜರಿ ಉಡುಗೊರೆ ಸಿಕ್ಕಿದೆ.
- Shivaraj
- Updated on: Mar 12, 2026
- 2:57 pm
ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್
ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮತ್ತು ಸರ್ಕಾರಿ ವೈದ್ಯರು ಏಕಕಾಲದಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ 37,000 ಕೋಟಿ ರೂಪಾಯಿ ಬಿಲ್ ಪಾವತಿಗೆ ಗುತ್ತಿಗೆದಾರರು ಆಗ್ರಹಿಸಿದ್ದರೆ, ಔಷಧಗಳ ಸಮರ್ಪಕ ಪೂರೈಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾರ್ಚ್ 11ರಿಂದ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಘೋಷಿಸಿದ್ದಾರೆ.
- Shivaraj
- Updated on: Feb 25, 2026
- 8:49 am
ಬೆಂಗಳೂರಿನ ಈ ಕೆರೆಗಳಲ್ಲಿ ಇನ್ನು ಬೋಟಿಂಗ್ ಮಾಡಬಹುದು! ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್
ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ನಗರದ 183 ಕೆರೆಗಳ ಪೈಕಿ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆ ಜಾರಿಗೆ ತರಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದೊಂದಿಗೆ ಜಿಬಿಎ ಜಿಬಿಎ ಕೈಜೋಡಿಸಿದೆ.
- Shivaraj
- Updated on: Feb 13, 2026
- 2:02 pm
Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಬಿಡಿಎಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ, ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆಯುಕ್ತರ ಆದೇಶವನ್ನು ಪ್ರಶ್ನಿಸಿ ಎಂಜಿನಿಯರ್ ಅಶೋಕ್ ಬಾಗಿ ಜೊತೆ ಗಲಾಟೆ ನಡೆಸಿದ್ದಾರೆ. ಭೂಗಳ್ಳರ ಪರ ನಿಂತಿರುವ ಆರೋಪದ ಮೇಲೆ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಶೋಕಾಸ್ ನೋಟಿಸ್ ಜಾರಿಗೊಳಿಸಿ ಕ್ರಮಕ್ಕೆ ಆದೇಶಿಸಿದ್ದಾರೆ.
- Shivaraj
- Updated on: Feb 12, 2026
- 1:01 pm
ಮೆಟ್ರೋ ಟಿಕೆಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಏರಿಕೆಯಾಗುತ್ತಾ ಕಾವೇರಿ ನೀರಿನ ದರ? ಜಲಮಂಡಳಿ ಅಧ್ಯಕ್ಷರಿಂದ ಸ್ಪಷ್ಟನೆ
Bangalore Water Price: ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೆ ನೀರಿನ ದರವೂ ಹೆಚ್ಚಳವಾಗುತ್ತದೆ ಎಂಬ ವದಂತಿ ಹರಡಿದೆ. ಕಾವೇರಿ ನೀರಿದ ದರ ಏರಿಕೆ ಈ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸ್ಪಷ್ಟನೆ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಇಲ್ಲಿದೆ.
- Shivaraj
- Updated on: Feb 5, 2026
- 1:11 pm
ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಮಾಡಿದ್ದು ಟೀಕೆಗೊಳಗಾದ ಬೆನ್ನಲ್ಲೇ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆಶ್ರಯ ಯೋಜನೆ ಅಡಿ ಮನೆ ನೀಡುವುದಾಗಿ ಸರ್ಕಾರ ಹೇಳಿತ್ತು. ಅದರಂತೆ, ಜನವರಿ 2ಕ್ಕೆ ಮನೆ ಹಂಚಿಕೆ ಆಗಲಿದೆ ಎಂದೂ ಹೇಳಲಾಗಿತ್ತು. ಆದರೆ, ಮನೆ ಹಂಚಿಕೆಗೆ ಈಗ ದೊಡ್ಡ ತೊಡಕು ಎದುರಾಗಿದೆ. ಏನದು? ಇಲ್ಲಿದೆ ಮಾಹಿತಿ.
- Shivaraj
- Updated on: Jan 2, 2026
- 7:53 am
5 ಪಾಲಿಕೆಗಳಿಂದ ಜಿಬಿಎ ಆರ್ಥಿಕ ದಿವಾಳಿ! ಅಂಕಿಅಂಶ ಸಹಿತ ಕಾರಣ ಬಿಚ್ಚಿಟ್ಟ ಬಿಜೆಪಿ ಮುಖಂಡ, ಸಿಎಂಗೆ ಪತ್ರ
5 ಹೊಸ ಬೆಂಗಳೂರು ಮಹಾನಗರ ಪಾಲಿಕೆಗಳ ರಚನೆಯಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಭಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿವಾಳಿಯಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. ಹೆಚ್ಚಿದ ಸಿಬ್ಬಂದಿ ವೇತನ ಮತ್ತು ನಿರ್ವಹಣಾ ವೆಚ್ಚಗಳು ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತೆ ಮಾಡಿ, ಬೆಂಗಳೂರಿನ ಭವಿಷ್ಯಕ್ಕೆ ದೊಡ್ಡ ಸವಾಲಾಗಲಿದೆ ಎಂದು ಅವರು ಹೇಳಿದ್ದಾರೆ.
- Shivaraj
- Updated on: Dec 1, 2025
- 12:01 pm
ಉಗ್ರರು ನೆತ್ತರು ಹರಿಸಿದ್ದ ಪಹಲ್ಗಾಮ್ ಕಣಿವೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ
ಕಣಿವೆ ನಾಡಿನಲ್ಲಿ ಕನ್ನಡದ ಬಾವುಟ ರಾರಾಜಿಸಿದೆ. ಉಗ್ರರು ಅಟ್ಟಹಾಸದ ಜಾಗದಲ್ಲಿ ‘ಕನ್ನಡ ಡಿಂಡಿಮ’ ಮೊಳಗಿದೆ. ಪಹಲ್ಗಾಮ್ನಲ್ಲಿ ಐತಿಹಾಸಿಕ ಕನ್ನಡ ರಾಜ್ಯೋತ್ಸವ ನಡೆದಿದೆ. ಜಿಬಿಎ ಮತ್ತು ನೌಕರರ ಸಂಘದಿಂದ ರಾಜ್ಯೋತ್ಸವ ನಡೆದಿದೆ. ಪ್ರವಾಸಿಗರ ತಾಣದಲ್ಲಿ ಕನ್ನಡಿಗರ ಕಲರವ ಮೂಡಿದೆ. ಕಾಶ್ಮೀರದ ಕೊರೆಯೋ ಚಳಿಯಲ್ಲಿ ಕನ್ನಡ ಡಿಂಡಿಮ ಮೊಳಗಿದೆ. ಕರ್ನಾಟಕದಿಂದ 400ಕ್ಕೂ ಹೆಚ್ಚು ನೌಕರರು ಭಾಗಿಯಾಗಿದ್ದಾರೆ.
- Shivaraj
- Updated on: Nov 22, 2025
- 9:48 pm
ಹಿಂದುಳಿದ ಜಾತಿಯ ಸೌಲಭ್ಯ ಪಡೆದಿಲ್ಲ: ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ನಾರಾಯಣ ಮೂರ್ತಿ, ಸುಧಾಮೂರ್ತಿ ಕೊಟ್ಟ ಕಾರಣವಿದು
ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಭಾಗವಹಿಸಲು ನಿರಾಕರಿಸಿದ್ದಾರೆ. ಕೆಲವು ವೈಯಕ್ತಿಕ ಕಾರಣಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆಯುವ ಮೂಲಕ ಉತ್ತರಿಸಿದ್ದಾರೆ.
- Shivaraj
- Updated on: Oct 16, 2025
- 11:27 am
ಕನ್ನಡ ಬಿಗ್ ಬಾಸ್ ಬಂದ್ ಮಾಡುವಂತೆ ನೋಟಿಸ್: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಶಾಕ್
‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಆರಂಭದಲ್ಲೇ ಒಂದು ವಿಘ್ನ ಎದುರಾಗಿದೆ. ಸರಿಯಾದ ರೀತಿಯಲ್ಲಿ ತಾಜ್ಯ ವಿಲೇವಾರಿ ಮಾಡದ ಕಾರಣದಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ಜಾರಿ ಮಾಡಲಾಗಿದೆ.
- Shivaraj
- Updated on: Oct 6, 2025
- 7:47 pm